AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Passport Rules: ಪಾಸ್​ಪೋರ್ಟ್ ವೆರಿಫಿಕೇಶನ್​ಗೆ ಡಿಜಿಲಾಕರ್ ಕಡ್ಡಾಯ; ಏನಿದು ಹೊಸ ನಿಯಮ, ಇಲ್ಲಿದೆ ಡೀಟೇಲ್ಸ್

Digilocker and Passport: ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸುವವರು ತಮ್ಮ ದಾಖಲೆಗಳ ವೆರಿಫಿಕೇಶನ್​ಗೆ ಡಿಜಿಲಾಕರ್ ಉಪಯೋಗಿಸುವುದನ್ನು ಕಡ್ಡಾಯ ಮಾಡಲಾಗಿದೆ. ಅರ್ಜಿದಾರರು ಅಗತ್ಯ ದಾಖಲೆಗಳನ್ನು ಮೊದಲು ಡಿಜಿಲಾಕರ್​ಗೆ ಹಾಕಿ ಬಳಿಕ ಅರ್ಜಿ ಸಲ್ಲಿಸಬೇಕು.

New Passport Rules: ಪಾಸ್​ಪೋರ್ಟ್ ವೆರಿಫಿಕೇಶನ್​ಗೆ ಡಿಜಿಲಾಕರ್ ಕಡ್ಡಾಯ; ಏನಿದು ಹೊಸ ನಿಯಮ, ಇಲ್ಲಿದೆ ಡೀಟೇಲ್ಸ್
ಪಾಸ್​ಪೋರ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 16, 2023 | 6:49 PM

Share

ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಸುದ್ದಿ. ನೀವು ಪಾಸ್​ಪಾರ್ಟ್​ಗೆ ಅರ್ಜಿ ಸಲ್ಲಿಸುವಾಗ ಡಿಜಿಲಾಕರ್ ಅಕೌಂಟ್ (Digi locker account) ರಚಿಸಬೇಕಾಗುತ್ತದೆ. ಅದರಲ್ಲೂ ವೆರಿಫಿಕೇಶನ್​ಗಳಿಗೆ ಆಧಾರ್ ಅನ್ನು ಬಳಸುವ ಪಾಸ್​ಪೋರ್ಟ್ ಅರ್ಜಿದಾರರು ಡಿಜಿಲಾಕರ್ ಖಾತೆ ಹೊಂದಿರುವುದು ಕಡ್ಡಾಯವಾಗಿದೆ. ವರದಿಗಳ ಪ್ರಕಾರ ಪಾಸ್​ಪೋರ್ಟ್ ಅರ್ಜಿ ಸಲ್ಲಿಕೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಮೊದಲು ಡಿಜಿಲಾಕರ್​ಗೆ ಅಪ್​ಲೋಡ್ ಮಾಡಬೇಕು. ಆ ಬಳಿಕವಷ್ಟೇ ಪಾಸ್​ಪೋರ್ಟ್ ವೆಬ್​ಸೈಟ್​ಗೆ ಹೋಗಿ ಅರ್ಜಿ ಸಲ್ಲಿಸಬೇಕು.

ಡಿಜಿಲಾಕರ್​ಗೆ ದಾಖಲೆಗಳನ್ನು ಅಪ್​ಲೋಡ್ ಮಾಡಿದವರು, ಅದರ ಹಾರ್ಡ್ ಕಾಪಿಗಳನ್ನು ತೆಗೆದುಕೊಂಡು ಹೋಗುವ ಅವಶ್ಯಕತೆ ಇರುವುದಿಲ್ಲ. ಇದರಿಂದ ಪಾಸ್​ಪೋರ್ಟ್ ಅರ್ಜಿ ಪ್ರಕ್ರಿಯೆ ಬಹಳ ಸುಗಮವಾಗಿ ನಡೆಯುತ್ತದೆ. ಸಮಯವೂ ಬಹಳ ಮಿಗುತ್ತದೆ.

ಕಾಗದ ರೂಪದ ಭೌತಿಕ ದಾಖಲೆಗಳ ವೆರಿಫಿಕೇಶನ್ ಕಾರ್ಯವನ್ನು ಸಾಧ್ಯವಾದಷ್ಟೂ ತಗ್ಗಿಸುವ ಉದ್ದೇಶದಿಂದ ಪಾಸ್​ಪೋರ್ಟ್ ಸೇವಾ ಕೇಂದ್ರಗಳು ಹಾಗೂ ಅಂಚೆ ಕಚೇರಿ ಪಾಸ್​ಪೋರ್ಟ್ ಸೇವಾ ಕೇಂದ್ರಗಳನ್ನು (POPSK) ಜಾರಿಗೆ ತರಲಾಗಿದೆ.

ಇದನ್ನೂ ಓದಿ: ಹೆಚ್ಚುವರಿ ಸೂಪರ್ ಕಂಪ್ಯೂಟರ್​ಗಳ ಸ್ಥಾಪನೆಯಿಂದ ಹಿಡಿದು ಹಲವು ಮಹತ್ವದ ಸುಧಾರಣೆಗಳು; ಡಿಜಿಟಲ್ ಇಂಡಿಯಾ ಯೋಜನೆ ವಿಸ್ತರಣೆಗೆ ಸಂಪುಟ ಒಪ್ಪಿಗೆ

ಡಿಜಿಲಾಕರ್ ಎಂದರೇನು?

ಇದು ಒಂದು ರೀತಿಯಲ್ಲಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಇಟ್ಟುಕೊಳ್ಳುವುದು. ಆಧಾರ್ ಕಅರ್ಡ್, ಡಿಎಲ್, ಆರ್​ಸಿ ಇತ್ಯಾದಿ ಸರ್ಕಾರದಿಂದ ನೀಡಲಾಗುವ ಬಹುತೇಕ ಪ್ರಮುಖ ದಾಖಲೆಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಡಿಜಿಲಾಕರ್​ನಲ್ಲಿ ಕ್ಷೇಮವಾಗಿ ಇಟ್ಟುಕೊಳ್ಳಬಹುದು. ಹಾರ್ಡ್ ಕಾಪಿ ಇಟ್ಟುಕೊಳ್ಳುವ ಅವಶ್ಯಕತೆ ಇರುವುದಿಲ್ಲ.

ಡಿಜಿಲಾಕರ್ ಖಾತೆಯನ್ನು ಆಧಾರ್ ಹೊಂದಿರುವ ಯಾರು ಬೇಕಾದರೂ ಅರಂಭಿಸಬಹುದು. ಆಧಾರ್​ಗೆ ಜೋಡಿತವಾಗಿರುವ ಮೊಬೈಲ್ ನಂಬರ್​ಗೆ ಒಟಿಪಿ ಪಡೆದು ಆ ಮೂಲಕ ಡಿಜಿಲಾಕರ್ ಖಾತೆಗೆ ಲಾಗಿನ್ ಆಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ