AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ 4 ದಿನ ಬಂದ್ ಆಗಿರಲಿದೆ ಪಾಸ್​ಪೋರ್ಟ್ ಸೇವಾ ಪೋರ್ಟಲ್; ಮುಂಗಡ ಬುಕಿಂಗ್ ಸ್ಥಗಿತ; ತಾಂತ್ರಿಕ ನಿರ್ವಹಣೆ ಕಾರಣ

Passport Seva portal technical maintenance: ಪಾಸ್​ಪೋರ್ಟ್ ಸೇವಾ ಪೋರ್ಟಲ್ ಆಗಸ್ಟ್ 29, ಗುರುವಾರ ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಬಂದ್ ಆಗಿರುತ್ತದೆ. ಟೆಕ್ನಿಕಲ್ ಮೈಂಟೆನೆನ್ಸ್ ಕಾರಣಕ್ಕೆ ಪೋರ್ಟಲ್ ಸುಮಾರು ನಾಲ್ಕು ದಿನ ಸಾರ್ವಜನಿಕರಿಗೆ ಅಲಭ್ಯ ಇರುತ್ತದೆ. ಆಗಸ್ಟ್ 30ಕ್ಕೆ ಪಾಸ್​ಪೋರ್ಟ್ ಸೇವಾ ಕೇಂದ್ರಗಳೂ ಕಾರ್ಯ ನಿರ್ವಹಿಸುವುದಿಲ್ಲ. ಅಂದಿಗೆ ಇರುವ ಅಪಾಯಿಂಟ್ಮೆಂಟ್​ಗಳನ್ನು ಬೇರೆ ದಿನಕ್ಕೆ ಮುಂದೂಡುವ ನಿರೀಕ್ಷೆ ಇದೆ.

ನಾಳೆಯಿಂದ 4 ದಿನ ಬಂದ್ ಆಗಿರಲಿದೆ ಪಾಸ್​ಪೋರ್ಟ್ ಸೇವಾ ಪೋರ್ಟಲ್; ಮುಂಗಡ ಬುಕಿಂಗ್ ಸ್ಥಗಿತ; ತಾಂತ್ರಿಕ ನಿರ್ವಹಣೆ ಕಾರಣ
ಪಾಸ್​ಪೋರ್ಟ್ ಸೇವಾ ಪೋರ್ಟಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 28, 2024 | 1:02 PM

Share

ನವದೆಹಲಿ, ಆಗಸ್ಟ್ 28: ಪಾಸ್​ಪೋರ್ಟ್ ಸೇವಾ ಕೇಂದ್ರದ ಜಾಲತಾಣ ನಾಲ್ಕು ದಿನ ಬಂದ್ ಆಗಿರಲಿದೆ. ನಾಳೆ ಗುರುವಾರ ಸಂಜೆ 8ರಿಂದ (ಆಗಸ್ಟ್ 29) ಈ ಪೋರ್ಟಲ್​ನ ಟೆಕ್ನಿಕಲ್ ಮೈಂಟೆನೆನ್ಸ್ ಕಾರ್ಯ ನಡೆಯುತ್ತಿರುವುದರಿಂದ ಅದು ಸಾರ್ವಜನಿಕ ಬಳಕೆಗೆ ಲಭ್ಯ ಇರುವುದಿಲ್ಲ. ಸೆಪ್ಟಂಬರ್ 2ರ ಬೆಳಗ್ಗೆ 6ಗಂಟೆಯವರೆಗೂ ಈ ಪೋರ್ಟಲ್​ನಲ್ಲಿ ಯಾವ ಸರ್ವಿಸ್ ಇರುವುದಿಲ್ಲ. ಸದ್ಯ ಆಗಸ್ಟ್ 30ರಂದು ನೀಡಲಾಗಿರುವ ಎಲ್ಲಾ ಅಪಾಯಿಂಟ್ಮೆಂಟ್​ಗಳನ್ನು ರದ್ದು ಮಾಡಲಾಗಿದೆ. ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಮುಂದಿನ ದಾರಿಗಳ ಬಗ್ಗೆ ಎಸ್ಸೆಮ್ಮೆಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್​ಪೋರ್ಟ್ ಇಲಾಖೆ ಹೇಳಿದೆ.

ಪಾಸ್​ಪೋರ್ಟ್ ಸೇವಾ ಪೋರ್ಟಲ್ ಮಾತ್ರವಲ್ಲ, ವಿವಿಧೆಡೆ ಇರುವ ಪಾಸ್​ಪೋರ್ಟ್ ಸೇವಾ ಕೇಂದ್ರಗಳೂ ಆಗಸ್ಟ್ 30ರಂದು ಬಂದ್ ಆಗಿರುತ್ತವೆ. ಹೀಗಾಗಿ, ಶುಕ್ರವಾರಕ್ಕೆ ಅಪಾಯಿಂಟ್ಮೆಂಟ್ ಪಡೆದಿರುವ ಅರ್ಜಿದಾರರಿಗೆ ಬೇರೆ ದಿನ ಅಪಾಯಿಂಟ್ಮೆಂಟ್ ಕೊಡಲಾಗುತ್ತಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಪಾಸ್​ಪೋರ್ಟ್ ಸೇವಾ ವಿಭಾಗ ಈ ಬಗ್ಗೆ ಇತ್ತೀಚೆಗೆ ಮಾಹಿತಿ ನೀಡಿತ್ತು.

ಇದನ್ನೂ ಓದಿ: ಎಂಟು ಸಿಬ್ಬಂದಿ ಇರುವ ಕಂಪನಿ ಐಪಿಒನಲ್ಲಿ ಕೇಳಿದ್ದು 12 ಕೋಟಿ ರೂ, ಜನರು ಕೊಡಲು ಮುಂದಾಗಿದ್ದು 4,800 ಕೋಟಿ ರೂ; ಇದೇನು ಕಥೆ..!

‘2024ರ ಆಗಸ್ಟ್ 29, ಗುರುವಾರ ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2 ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಟೆಕ್ನಿಕಲ್ ಮೈಂಟೆನೆನ್ಸ್​ನಿಂದಾಗಿ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ. ಈ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್​ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ. ಆಗಸ್ಟ್ 30ಕ್ಕೆ ಬುಕ್ ಆಗಿರುವ ಅಪಾಯಿಂಟ್​ಗಳನ್ನು ಬೇರೆ ದಿನಕ್ಕೆ ನಿಗದಿ ಮಾಡಿ, ಅರ್ಜಿದಾರರಿಗೆ ಅದರ ಮಾಹಿತಿ ಅಪ್​ಡೇಟ್ ಮಾಡಲಾಗುತ್ತದೆ,’ ಎಂದು ಅಡ್ವೈಸರಿ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ