ನಾಳೆಯಿಂದ 4 ದಿನ ಬಂದ್ ಆಗಿರಲಿದೆ ಪಾಸ್​ಪೋರ್ಟ್ ಸೇವಾ ಪೋರ್ಟಲ್; ಮುಂಗಡ ಬುಕಿಂಗ್ ಸ್ಥಗಿತ; ತಾಂತ್ರಿಕ ನಿರ್ವಹಣೆ ಕಾರಣ

Passport Seva portal technical maintenance: ಪಾಸ್​ಪೋರ್ಟ್ ಸೇವಾ ಪೋರ್ಟಲ್ ಆಗಸ್ಟ್ 29, ಗುರುವಾರ ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಬಂದ್ ಆಗಿರುತ್ತದೆ. ಟೆಕ್ನಿಕಲ್ ಮೈಂಟೆನೆನ್ಸ್ ಕಾರಣಕ್ಕೆ ಪೋರ್ಟಲ್ ಸುಮಾರು ನಾಲ್ಕು ದಿನ ಸಾರ್ವಜನಿಕರಿಗೆ ಅಲಭ್ಯ ಇರುತ್ತದೆ. ಆಗಸ್ಟ್ 30ಕ್ಕೆ ಪಾಸ್​ಪೋರ್ಟ್ ಸೇವಾ ಕೇಂದ್ರಗಳೂ ಕಾರ್ಯ ನಿರ್ವಹಿಸುವುದಿಲ್ಲ. ಅಂದಿಗೆ ಇರುವ ಅಪಾಯಿಂಟ್ಮೆಂಟ್​ಗಳನ್ನು ಬೇರೆ ದಿನಕ್ಕೆ ಮುಂದೂಡುವ ನಿರೀಕ್ಷೆ ಇದೆ.

ನಾಳೆಯಿಂದ 4 ದಿನ ಬಂದ್ ಆಗಿರಲಿದೆ ಪಾಸ್​ಪೋರ್ಟ್ ಸೇವಾ ಪೋರ್ಟಲ್; ಮುಂಗಡ ಬುಕಿಂಗ್ ಸ್ಥಗಿತ; ತಾಂತ್ರಿಕ ನಿರ್ವಹಣೆ ಕಾರಣ
ಪಾಸ್​ಪೋರ್ಟ್ ಸೇವಾ ಪೋರ್ಟಲ್
Follow us
|

Updated on: Aug 28, 2024 | 1:02 PM

ನವದೆಹಲಿ, ಆಗಸ್ಟ್ 28: ಪಾಸ್​ಪೋರ್ಟ್ ಸೇವಾ ಕೇಂದ್ರದ ಜಾಲತಾಣ ನಾಲ್ಕು ದಿನ ಬಂದ್ ಆಗಿರಲಿದೆ. ನಾಳೆ ಗುರುವಾರ ಸಂಜೆ 8ರಿಂದ (ಆಗಸ್ಟ್ 29) ಈ ಪೋರ್ಟಲ್​ನ ಟೆಕ್ನಿಕಲ್ ಮೈಂಟೆನೆನ್ಸ್ ಕಾರ್ಯ ನಡೆಯುತ್ತಿರುವುದರಿಂದ ಅದು ಸಾರ್ವಜನಿಕ ಬಳಕೆಗೆ ಲಭ್ಯ ಇರುವುದಿಲ್ಲ. ಸೆಪ್ಟಂಬರ್ 2ರ ಬೆಳಗ್ಗೆ 6ಗಂಟೆಯವರೆಗೂ ಈ ಪೋರ್ಟಲ್​ನಲ್ಲಿ ಯಾವ ಸರ್ವಿಸ್ ಇರುವುದಿಲ್ಲ. ಸದ್ಯ ಆಗಸ್ಟ್ 30ರಂದು ನೀಡಲಾಗಿರುವ ಎಲ್ಲಾ ಅಪಾಯಿಂಟ್ಮೆಂಟ್​ಗಳನ್ನು ರದ್ದು ಮಾಡಲಾಗಿದೆ. ಅಪಾಯಿಂಟ್ಮೆಂಟ್ ಪಡೆದಿರುವ ಅಭ್ಯರ್ಥಿಗಳಿಗೆ ಮುಂದಿನ ದಾರಿಗಳ ಬಗ್ಗೆ ಎಸ್ಸೆಮ್ಮೆಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಪಾಸ್​ಪೋರ್ಟ್ ಇಲಾಖೆ ಹೇಳಿದೆ.

ಪಾಸ್​ಪೋರ್ಟ್ ಸೇವಾ ಪೋರ್ಟಲ್ ಮಾತ್ರವಲ್ಲ, ವಿವಿಧೆಡೆ ಇರುವ ಪಾಸ್​ಪೋರ್ಟ್ ಸೇವಾ ಕೇಂದ್ರಗಳೂ ಆಗಸ್ಟ್ 30ರಂದು ಬಂದ್ ಆಗಿರುತ್ತವೆ. ಹೀಗಾಗಿ, ಶುಕ್ರವಾರಕ್ಕೆ ಅಪಾಯಿಂಟ್ಮೆಂಟ್ ಪಡೆದಿರುವ ಅರ್ಜಿದಾರರಿಗೆ ಬೇರೆ ದಿನ ಅಪಾಯಿಂಟ್ಮೆಂಟ್ ಕೊಡಲಾಗುತ್ತಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಪಾಸ್​ಪೋರ್ಟ್ ಸೇವಾ ವಿಭಾಗ ಈ ಬಗ್ಗೆ ಇತ್ತೀಚೆಗೆ ಮಾಹಿತಿ ನೀಡಿತ್ತು.

ಇದನ್ನೂ ಓದಿ: ಎಂಟು ಸಿಬ್ಬಂದಿ ಇರುವ ಕಂಪನಿ ಐಪಿಒನಲ್ಲಿ ಕೇಳಿದ್ದು 12 ಕೋಟಿ ರೂ, ಜನರು ಕೊಡಲು ಮುಂದಾಗಿದ್ದು 4,800 ಕೋಟಿ ರೂ; ಇದೇನು ಕಥೆ..!

‘2024ರ ಆಗಸ್ಟ್ 29, ಗುರುವಾರ ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2 ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಟೆಕ್ನಿಕಲ್ ಮೈಂಟೆನೆನ್ಸ್​ನಿಂದಾಗಿ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್ ಆಗಿರುತ್ತದೆ. ಈ ಅವಧಿಯಲ್ಲಿ ನಾಗರಿಕರಿಗೆ ಹಾಗೂ ಎಲ್ಲಾ ಎಂಇಎ, ಆರ್​ಪಿಒ, ಬಿಒಐ, ಡಿಒಪಿ, ಪೊಲೀಸ್ ಪ್ರಾಧಿಕಾರಗಳಿಗೆ ಸಿಸ್ಟಂ ಲಭ್ಯ ಇರುವುದಿಲ್ಲ. ಆಗಸ್ಟ್ 30ಕ್ಕೆ ಬುಕ್ ಆಗಿರುವ ಅಪಾಯಿಂಟ್​ಗಳನ್ನು ಬೇರೆ ದಿನಕ್ಕೆ ನಿಗದಿ ಮಾಡಿ, ಅರ್ಜಿದಾರರಿಗೆ ಅದರ ಮಾಹಿತಿ ಅಪ್​ಡೇಟ್ ಮಾಡಲಾಗುತ್ತದೆ,’ ಎಂದು ಅಡ್ವೈಸರಿ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ