AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PayNow-UPI: ಸಿಂಗಾಪುರದ ಪೇನೌ ಜೊತೆ ಯುಪಿಐ ಲಿಂಕ್; ಭಾರತೀಯರಿಗೆ ಹಣ ವರ್ಗಾವಣೆ ಇನ್ನಷ್ಟು ಸರಾಗ

Indians Can Receive Remittance From Singapore: ಪೇನೌ ಮತ್ತು ಯುಪಿಐ ಲಿಂಕ್ ಮಾಡಿರುವುದರಿಂದ ಸಿಂಗಾಪುರದಿಂದ ಭಾರತೀಯ ಸಮುದಾಯದವರು ತಮ್ಮ ಊರಿಗೆ ರೆಮಿಟನ್ಸ್ ಮಾಡುವ ಪ್ರಕ್ರಿಯೆ ಸುಲಭಗೊಂಡಿದೆ. ಕಳೆದ ವರ್ಷದ ಯುಪಿಐ ಮತ್ತು ಪೇ ನೌ ನಡುವೆ ಕ್ರಾಸ್ ಬಾರ್ಡರ್ ಕನೆಕ್ಟಿವಿಟಿ ಯೋಜನೆಯನ್ನು ಸಿಂಗಾಪುರ ಪ್ರಧಾನಿ ಲೀ ಸಿಯೆನ್ ಲೂಂಗ್ ಮತ್ತು ನರೇಂದ್ರ ಮೋದಿ ಆರಂಭಿಸಿದ್ದರು. ಸದ್ಯಕ್ಕೆ ಭೀಮ್ (BHIM), ಪೇಟಿಎಂ ಮತ್ತು ಫೋನ್​ಪೇ ಪ್ಲಾಟ್​ಫಾರ್ಮ್​ಗಳಲ್ಲಿ ಈ ಸೌಲಭ್ಯ ಇದೆ. ಕೆಲ ಬ್ಯಾಂಕುಗಳ ಆಪ್ಯ್​ಗಳಲ್ಲೂ ಈ ಫೆಸಿಲಿಟಿ ಇದೆ.

PayNow-UPI: ಸಿಂಗಾಪುರದ ಪೇನೌ ಜೊತೆ ಯುಪಿಐ ಲಿಂಕ್; ಭಾರತೀಯರಿಗೆ ಹಣ ವರ್ಗಾವಣೆ ಇನ್ನಷ್ಟು ಸರಾಗ
ಯುಪಿಐ-ಪೇನೌ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 11, 2024 | 3:43 PM

Share

ನವದೆಹಲಿ, ಜನವರಿ 11: ಸಿಂಗಾಪುರದಿಂದ ಭಾರತೀಯ ಸಮುದಾಯದವರು ತಮ್ಮ ಊರಿನ ಮಂದಿಗೆ ಹಣ ಕಳುಹಿಸುವ ಕಾರ್ಯ ಈಗ ಸುಗಮಗೊಂಡಿದೆ. ಭಾರತದ ಯುಪಿಐ ಮತ್ತು ಸಿಂಗಾಪುರದ ಪೇನೌ (PayNow) ಪ್ಲಾಟ್​ಫಾರ್ಮ್ ಅನ್ನು ಲಿಂಕ್ ಮಾಡಿದ್ದು, ಸಿಂಗಾಪುರದಿಂದ ಭಾರತೀಯರು ಹಣ ಸ್ವೀಕರಿಸಬಹುದಾಗಿದೆ. ಕಳೆದ ವರ್ಷದ ಫೆಬ್ರುವರಿಯಲ್ಲಿ (2023) ಯುಪಿಐ ಮತ್ತು ಪೇ ನೌ ನಡುವೆ ಕ್ರಾಸ್ ಬಾರ್ಡರ್ ಕನೆಕ್ಟಿವಿಟಿ ಯೋಜನೆಯನ್ನು ಸಿಂಗಾಪುರ ಪ್ರಧಾನಿ ಲೀ ಸಿಯೆನ್ ಲೂಂಗ್ ಮತ್ತು ನರೇಂದ್ರ ಮೋದಿ ಆರಂಭಿಸಿದ್ದರು. ಇದು ಈಗ ಸಾಕಾರಗೊಂಡಿದೆ.

ಸದ್ಯಕ್ಕೆ ಭೀಮ್ (BHIM), ಪೇಟಿಎಂ ಮತ್ತು ಫೋನ್​ಪೇ ಪ್ಲಾಟ್​ಫಾರ್ಮ್​ಗಳಲ್ಲಿ ಈ ಸೌಲಭ್ಯ ಇದೆ. ಇನ್ನಷ್ಟು ಥರ್ಡ್ ಪಾರ್ಟಿ ಆ್ಯಪ್​ಗಳಲ್ಲೂ ಈ ಸೌಲಭ್ಯ ವಿಸ್ತರಣೆ ಆಗಬಹುದು.

ಎಕ್ಸಿಸ್ ಬ್ಯಾಂಕ್, ಡಿಬಿಎಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್​ಸೀಸ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳ ಆ್ಯಪ್​ಗಳಲ್ಲೂ ಈ ಸೌಲಭ್ಯ ಇದೆ ಎಂದು ನ್ಯಾಷನಲ್ ಪೇಮೆಂಟ್ ಕಾರ್ಪೊರೇಶನ್ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Powerful Passports: ವಿಶ್ವದ ಅತ್ಯಂತ ಪ್ರಬಲ ಪಾಸ್​ಪೋರ್ಟ್​ಗಳ ದೇಶಗಳ್ಯಾವುವು? ಭಾರತದ ಪಾಸ್​ಪೋರ್ಟ್ ಪ್ರಭಾವ ಎಷ್ಟು?

ಹಾಗೆಯೇ, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಫೆಡರಲ್ ಬ್ಯಾಂಕ್, ಎಚ್​ಡಿಎಫ್​ಸಿ ಬ್ಯಾಂಕ್, ಐಡಿಎಫ್​ಸಿ ಫಸ್ಟ್ ಬ್ಯಾಂಕ್, ಇಂಡಸ್​ಇಂಡ್ ಬ್ಯಾಂಕ್, ಕರೂರ್ ವೈಶ್ಯ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸೌತ್ ಇಂಡಿಯನ್ ಬ್ಯಾಂಕ್, ಯುಕೋ ಬ್ಯಾಂಕ್​ಗಳೂ ಕೂಡ ಪೇನೌಗೆ ಖಾತೆಗಳನ್ನು ಲಿಂಕ್ ಮಾಡಬಹುದು.

ಯುಪಿಐ ಬಳಕೆದಾರರ ನಡುವೆ ರಿಯಲ್ ಟೈಮ್​ನಲ್ಲಿ ಹಣ ವರ್ಗಾವಣೆ ಆಗುತ್ತದೆ. ಹಾಗೆಯೇ, ಯುಪಿಐ ಮತ್ತು ಪೇನೌ ಮೂಲಕ ನಡೆಯುವ ಹಣ ವರ್ಗಾವಣೆ ಕೆಲವೇ ಕ್ಷಣಗಳಲ್ಲಿ ಪೂರ್ಣಗೊಳ್ಳುತ್ತದೆ. ಈ ಹೈಬ್ರಿಡ್ ಪ್ಲಾಟ್​ಫಾರ್ಮ್​ನಲ್ಲಿ ಬಿಗಿಭದ್ರತೆ ವ್ಯವಸ್ಥೆ ಇದ್ದು, ಹಣ ವರ್ಗಾವಣೆ ಬಹಳ ಸುರಕ್ಷಿತವಾಗಿ ಆಗುತ್ತದೆ.

ಇದನ್ನೂ ಓದಿ: Layoffs: ಗೂಗಲ್​ನಿಂದ ಮತ್ತೆ ನೂರಾರು ಮಂದಿಯ ಲೇ ಆಫ್; ಫಿಟ್​ಬಿಟ್​ನ ಇಬ್ಬರು ಸಹಸಂಸ್ಥಾಪಕರೂ ಔಟ್

ವಿದೇಶಗಳಿಂದ ಭಾರತಕ್ಕೆ ಹಣ ಕಳುಹಿಸಲು ಸಾಕಷ್ಟು ರೆಮಿಟನ್ಸ್ ಶುಲ್ಕಗಳನ್ನು ಪಾವತಿಸಬೇಕಾಗುತ್ತದೆ. ಯುಪಿಐ ಮತ್ತು ಪೇನೌ ಲಿಂಕ್​ನಿಂದ ಈ ವೆಚ್ಚ ಗಣನೀಯವಾಗಿ ಕಡಿಮೆ ಆಗುತ್ತದೆ. ಟ್ರಾನ್ಸಾಕ್ಷನ್ ಶುಲ್ಕ ಹೆಚ್ಚಿರುವುದಿಲ್ಲ. ದಿನದ ಯಾವ ಹೊತ್ತಿನಲ್ಲೂ ರೆಮಿಟನ್ಸ್ ಮಾಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!