AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3,500 ಪೇಟಿಎಂ ಉದ್ಯೋಗಿಗಳ ಲೇ ಆಫ್; ಬೇರೆಡೆ ಕೆಲಸ ಕೊಡಿಸಲು ಕಂಪನಿಯಿಂದಲೇ ನೆರವು

Paytm Layoffs news: ನಷ್ಟದ ಹೊರೆ ಹೆಚ್ಚಿಸಿಕೊಳ್ಳುತ್ತಿರುವ ಪೇಟಿಎಂ ಸಂಸ್ಥೆ ಇದೀಗ 3,500 ಮಂದಿ ಉದ್ಯೋಗಿಗಳನ್ನು ಲೇ ಆಫ್ ಮಾಡಿರುವ ಸುದ್ದಿ ಬಂದಿದೆ. ನಷ್ಟದ ಹೊರೆ ಕಡಿಮೆ ಮಾಡಿಕೊಳ್ಳಲು ಕಂಪನಿ ಈ ನಿರ್ಧಾರ ತೆಗೆದುಕೊಂಡಿದೆ. ಕೆಲಸ ಕಳೆದುಕೊಂಡಿರುವ ಉದ್ಯೋಗಿಗಳಿಗೆ ಬೇರೆಡೆ ಕೆಲಸ ಕೊಡಿಸಲು ಕಂಪನಿಯ ಎಚ್ಆರ್ ತಂಡಗಳು ಪ್ರಯತ್ನಿಸುತ್ತಿವೆ.

3,500 ಪೇಟಿಎಂ ಉದ್ಯೋಗಿಗಳ ಲೇ ಆಫ್; ಬೇರೆಡೆ ಕೆಲಸ ಕೊಡಿಸಲು ಕಂಪನಿಯಿಂದಲೇ ನೆರವು
ಪೇಟಿಎಂ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 10, 2024 | 6:19 PM

Share

ನವದೆಹಲಿ, ಜೂನ್ 10: ಸಂಕಷ್ಟಗಳ ಸರಮಾಲೆಗಳ ಮಧ್ಯೆ ಲಾಭದ ಹಳಿಗೆ ಬರಲು ಹತಾಶೆಯ ಪ್ರಯತ್ನದಲ್ಲಿರುವ ಪೇಟಿಎಂ ಸಂಸ್ಥೆ (Paytm) ಈಗ ಆ ನಿಟ್ಟಿನಲ್ಲಿ ಮತ್ತೊಂದು ಸುತ್ತಿನ ಲೇ ಆಫ್ ಕ್ರಮ ಜರುಗಿಸಿದೆ. ಲೇ ಆಫ್ ಮಾಡಲಾಗಿರುವುದನ್ನು ಒನ್97 ಕಮ್ಯೂನಿಕೇಶನ್ಸ್ ಸಂಸ್ಥೆ ಖಚಿತಪಡಿಸಿದೆ. ಕೆಲಸ ಕಳೆದುಕೊಂಡ ಉದ್ಯೋಗಿಗಳಿಗೆ ಬೇರೆಡೆ ಕೆಲಸ ಸಿಗಲು ನೆರವನ್ನೂ ಕೂಡ ಸಂಸ್ಥೆ ಒದಗಿಸುತ್ತಿದೆ. ಆದರೆ, ಎಷ್ಟು ಮಂದಿಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ನಿರ್ದಿಷ್ಟವಾಗಿ ಸಂಸ್ಥೆ ಹೇಳಿಲ್ಲ. ವರದಿಗಳ ಪ್ರಕಾರ 3,500ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಕೆಲಸ ಹೋಗಿದೆ ಎಂದು ಹೇಳಲಾಗುತ್ತಿದೆ.

ಪೇಟಿಎಂನಲ್ಲಿ 40,000ಕ್ಕೂ ಹೆಚ್ಚು ಉದ್ಯೋಗಿಗಳಿದ್ದು, ಈಗ 3,500 ಮಂದಿಯ ಲೇ ಆಫ್ ಆದರೆ ಅದರ ಸಿಬ್ಬಂದಿ ವರ್ಗದ ಸಂಖ್ಯೆ 36,521ಕ್ಕೆ ಇಳಿಯಬಹುದು. ಲೇ ಆಫ್ ಆದವರಲ್ಲಿ ಸೇಲ್ಸ್ ವಿಭಾಗದವರು ಹೆಚ್ಚು ಎನ್ನಲಾಗಿದೆ.

ಲೇ ಆಫ್​ಗೆ ಏನು ಕಾರಣ?

ಆರ್​ಬಿಐನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ನಿರ್ಬಂಧ ಬಿದ್ದದ್ದು ಒನ್97 ಕಮ್ಯೂನಿಕೇಶನ್ಸ್​ನ ವಿವಿಧ ಬಿಸಿನೆಸ್​ಗಳಿಗೆ ಹೊಡೆತ ಬಿದ್ದಂತಾಗಿದೆ. ನಷ್ಟದ ಪ್ರಮಾಣವೂ ಹೆಚ್ಚುತ್ತಿದೆ. ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಪೇಟಿಎಂಗೆ ಆದ ನಷ್ಟ 550 ಕೋಟಿ ರೂ. ಈ ನಷ್ಟವನ್ನು ಕಡಿಮೆ ಮಾಡಬೇಕೆಂದರೆ ಸಂಸ್ಥೆಯ ಸಿಬ್ಬಂದಿ ವರ್ಗದ ಮರುರಚನೆ ಮಾಡಬೇಕಾಗುತ್ತದೆ. ಉದ್ಯೋಗಿಗಳ ಸಂಖ್ಯೆ ಮೊಟಕುಗೊಳಿಸುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: ಇವರಿಲ್ಲದೇ ಏನೂ ಇಲ್ಲ… ಭಾರತ ಮೂಲದ ಟೆಕ್ಕಿ ಅಶೋಕ್ ಎಲ್ಲುಸಾಮಿಯನ್ನು ಹಾಡಿಹೊಗಳಿದ ಇಲಾನ್ ಮಸ್ಕ್

ಕೆಲಸ ಕಳೆದುಕೊಂಡ ಉದ್ಯೋಗಿಗಳಿಗೆ ಬೇರೆಡೆ ಕೆಲಸ ಕೊಡಿಸಲು ಕಂಪನಿ ಸಹಾಯವಾಗಿದೆ. ಅದರ ಮಾನವ ಸಂಪನ್ಮೂಲ ತಂಡಗಳು ಬೇರೆ ಬೇರೆ ಕಂಪನಿಗಳ ಜೊತೆ ಸಂಪರ್ಕದಲ್ಲಿದ್ದು, ಉದ್ಯೋಗಿಗಳಿಗೆ ಕೆಲಸ ಕೊಡಿಸಲು ಪ್ರಯತ್ನಿಸುತ್ತಿವೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!