3,500 ಪೇಟಿಎಂ ಉದ್ಯೋಗಿಗಳ ಲೇ ಆಫ್; ಬೇರೆಡೆ ಕೆಲಸ ಕೊಡಿಸಲು ಕಂಪನಿಯಿಂದಲೇ ನೆರವು

Paytm Layoffs news: ನಷ್ಟದ ಹೊರೆ ಹೆಚ್ಚಿಸಿಕೊಳ್ಳುತ್ತಿರುವ ಪೇಟಿಎಂ ಸಂಸ್ಥೆ ಇದೀಗ 3,500 ಮಂದಿ ಉದ್ಯೋಗಿಗಳನ್ನು ಲೇ ಆಫ್ ಮಾಡಿರುವ ಸುದ್ದಿ ಬಂದಿದೆ. ನಷ್ಟದ ಹೊರೆ ಕಡಿಮೆ ಮಾಡಿಕೊಳ್ಳಲು ಕಂಪನಿ ಈ ನಿರ್ಧಾರ ತೆಗೆದುಕೊಂಡಿದೆ. ಕೆಲಸ ಕಳೆದುಕೊಂಡಿರುವ ಉದ್ಯೋಗಿಗಳಿಗೆ ಬೇರೆಡೆ ಕೆಲಸ ಕೊಡಿಸಲು ಕಂಪನಿಯ ಎಚ್ಆರ್ ತಂಡಗಳು ಪ್ರಯತ್ನಿಸುತ್ತಿವೆ.

3,500 ಪೇಟಿಎಂ ಉದ್ಯೋಗಿಗಳ ಲೇ ಆಫ್; ಬೇರೆಡೆ ಕೆಲಸ ಕೊಡಿಸಲು ಕಂಪನಿಯಿಂದಲೇ ನೆರವು
ಪೇಟಿಎಂ
Follow us
|

Updated on: Jun 10, 2024 | 6:19 PM

ನವದೆಹಲಿ, ಜೂನ್ 10: ಸಂಕಷ್ಟಗಳ ಸರಮಾಲೆಗಳ ಮಧ್ಯೆ ಲಾಭದ ಹಳಿಗೆ ಬರಲು ಹತಾಶೆಯ ಪ್ರಯತ್ನದಲ್ಲಿರುವ ಪೇಟಿಎಂ ಸಂಸ್ಥೆ (Paytm) ಈಗ ಆ ನಿಟ್ಟಿನಲ್ಲಿ ಮತ್ತೊಂದು ಸುತ್ತಿನ ಲೇ ಆಫ್ ಕ್ರಮ ಜರುಗಿಸಿದೆ. ಲೇ ಆಫ್ ಮಾಡಲಾಗಿರುವುದನ್ನು ಒನ್97 ಕಮ್ಯೂನಿಕೇಶನ್ಸ್ ಸಂಸ್ಥೆ ಖಚಿತಪಡಿಸಿದೆ. ಕೆಲಸ ಕಳೆದುಕೊಂಡ ಉದ್ಯೋಗಿಗಳಿಗೆ ಬೇರೆಡೆ ಕೆಲಸ ಸಿಗಲು ನೆರವನ್ನೂ ಕೂಡ ಸಂಸ್ಥೆ ಒದಗಿಸುತ್ತಿದೆ. ಆದರೆ, ಎಷ್ಟು ಮಂದಿಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ನಿರ್ದಿಷ್ಟವಾಗಿ ಸಂಸ್ಥೆ ಹೇಳಿಲ್ಲ. ವರದಿಗಳ ಪ್ರಕಾರ 3,500ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಕೆಲಸ ಹೋಗಿದೆ ಎಂದು ಹೇಳಲಾಗುತ್ತಿದೆ.

ಪೇಟಿಎಂನಲ್ಲಿ 40,000ಕ್ಕೂ ಹೆಚ್ಚು ಉದ್ಯೋಗಿಗಳಿದ್ದು, ಈಗ 3,500 ಮಂದಿಯ ಲೇ ಆಫ್ ಆದರೆ ಅದರ ಸಿಬ್ಬಂದಿ ವರ್ಗದ ಸಂಖ್ಯೆ 36,521ಕ್ಕೆ ಇಳಿಯಬಹುದು. ಲೇ ಆಫ್ ಆದವರಲ್ಲಿ ಸೇಲ್ಸ್ ವಿಭಾಗದವರು ಹೆಚ್ಚು ಎನ್ನಲಾಗಿದೆ.

ಲೇ ಆಫ್​ಗೆ ಏನು ಕಾರಣ?

ಆರ್​ಬಿಐನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ನಿರ್ಬಂಧ ಬಿದ್ದದ್ದು ಒನ್97 ಕಮ್ಯೂನಿಕೇಶನ್ಸ್​ನ ವಿವಿಧ ಬಿಸಿನೆಸ್​ಗಳಿಗೆ ಹೊಡೆತ ಬಿದ್ದಂತಾಗಿದೆ. ನಷ್ಟದ ಪ್ರಮಾಣವೂ ಹೆಚ್ಚುತ್ತಿದೆ. ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಪೇಟಿಎಂಗೆ ಆದ ನಷ್ಟ 550 ಕೋಟಿ ರೂ. ಈ ನಷ್ಟವನ್ನು ಕಡಿಮೆ ಮಾಡಬೇಕೆಂದರೆ ಸಂಸ್ಥೆಯ ಸಿಬ್ಬಂದಿ ವರ್ಗದ ಮರುರಚನೆ ಮಾಡಬೇಕಾಗುತ್ತದೆ. ಉದ್ಯೋಗಿಗಳ ಸಂಖ್ಯೆ ಮೊಟಕುಗೊಳಿಸುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: ಇವರಿಲ್ಲದೇ ಏನೂ ಇಲ್ಲ… ಭಾರತ ಮೂಲದ ಟೆಕ್ಕಿ ಅಶೋಕ್ ಎಲ್ಲುಸಾಮಿಯನ್ನು ಹಾಡಿಹೊಗಳಿದ ಇಲಾನ್ ಮಸ್ಕ್

ಕೆಲಸ ಕಳೆದುಕೊಂಡ ಉದ್ಯೋಗಿಗಳಿಗೆ ಬೇರೆಡೆ ಕೆಲಸ ಕೊಡಿಸಲು ಕಂಪನಿ ಸಹಾಯವಾಗಿದೆ. ಅದರ ಮಾನವ ಸಂಪನ್ಮೂಲ ತಂಡಗಳು ಬೇರೆ ಬೇರೆ ಕಂಪನಿಗಳ ಜೊತೆ ಸಂಪರ್ಕದಲ್ಲಿದ್ದು, ಉದ್ಯೋಗಿಗಳಿಗೆ ಕೆಲಸ ಕೊಡಿಸಲು ಪ್ರಯತ್ನಿಸುತ್ತಿವೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್