AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ; ಪೇಟಿಎಂ ಗ್ರಾಹಕರಿಗೆ ತೊಂದರೆಯಾ?

RBI cancels licence of Paytm Payments Bank: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸಂಸ್ಥೆಗೆ ನೀಡಿದ್ದ ಬ್ಯಾಂಕಿಂಗ್ ಲೈಸೆನ್ಸ್ ಅನ್ನು ಆರ್​​ಬಿಐ ಅಧಿಕೃತವಾಗಿ ಹಿಂಪಡೆದಿದೆ. 2022ರಿಂದಲೂ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ವಿವಿಧ ನಿರ್ಬಂಧಗಳನ್ನು ಎದುರಿಸುತ್ತಿದೆ. ಈಗ ತತ್​ಕ್ಷಣವೇ ಜಾರಿಯಾಗುವಂತೆ ಲೈಸೆನ್ಸ್ ರದ್ದಾಗಿದೆ. ಇನ್ಮುಂದೆ ಈ ಸಂಸ್ಥೆ ಯಾವುದೇ ಬ್ಯಾಂಕಿಂಗ್ ಚಟುವಟಿಕೆ ನಡೆಸುವಂತಿಲ್ಲ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ; ಪೇಟಿಎಂ ಗ್ರಾಹಕರಿಗೆ ತೊಂದರೆಯಾ?
ಪೇಟಿಎಂImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 24, 2026 | 10:44 PM

Share

ನವದೆಹಲಿ, ಏಪ್ರಿಲ್ 24: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ಶುಕ್ರವಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್​ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು (Licence) ಅಧಿಕೃತವಾಗಿ ರದ್ದುಗೊಳಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಪಿಪಿಬಿಎಲ್​ಗೆ ಆರ್​ಬಿಐ ವಿವಿಧ ನಿರ್ಬಂಧಗಳನ್ನು ವಿಧಿಸಿತ್ತು. ಈಗ ಈ ಸಂಸ್ಥೆಯು ಇನ್ಮುಂದೆ ಯಾವುದೇ ಬ್ಯಾಂಕಿಂಗ್ ಚಟುವಟಿಕೆ ನಡೆಸುವಂತಿಲ್ಲ. ತತ್​ಕ್ಷಣದಿಂದಲೇ ಜಾರಿಯಾಗುವಂತೆ ಲೈಸೆನ್ಸ್ ಅನ್ನು ಹಿಂಪಡೆಯಲಾಗಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪರವಾನಗಿ ರದ್ದತಿಗೆ ಕಾರಣ

ಆರ್‌ಬಿಐ ಪ್ರಕಾರ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ತನ್ನ ವ್ಯವಹಾರಗಳನ್ನು ನಡೆಸುತ್ತಿದ್ದ ರೀತಿ ಠೇವಣಿದಾರರು ಹಾಗು ಬ್ಯಾಂಕ್​ನ ಹಿತಾಸಕ್ತಿಗೆ ಮಾರಕವಾಗಿತ್ತು. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ರ ಸೆಕ್ಷನ್ 22(4) ರ ಅಡಿಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಂಪನಿಯು ಬ್ಯಾಂಕಿಂಗ್ ನಿಯಮಗಳನ್ನು ಪದೇ ಪದೇ ಉಲ್ಲಂಘಿಸಿರುವುದು ಮತ್ತು ಆಡಳಿತಾತ್ಮಕ ವೈಫಲ್ಯಗಳೇ ಈ ಕಠಿಣ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ.

ಇಂದಿನಿಂದ (ಏಪ್ರಿಲ್ 24) ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ರೀತಿಯ ಬ್ಯಾಂಕಿಂಗ್ ವ್ಯವಹಾರಗಳನ್ನು ಅಥವಾ ಹಣಕಾಸು ಚಟುವಟಿಕೆಗಳನ್ನು ನಡೆಸುವಂತಿಲ್ಲ. ಬ್ಯಾಂಕನ್ನು ಮುಚ್ಚುವ ಪ್ರಕ್ರಿಯೆಯನ್ನು (Winding up) ಪ್ರಾರಂಭಿಸಲು ಆರ್‌ಬಿಐ ಶೀಘ್ರದಲ್ಲೇ ಹೈಕೋರ್ಟ್ ಮೊರೆ ಹೋಗಲಿದೆ.

ಇದನ್ನೂ ಓದಿ: ರುಪಾಯಿ ಮೌಲ್ಯ ಕುಸಿತ; ಆತಂಕ ಪಡಬೇಕಿಲ್ಲ; ದೀರ್ಘಾವಧಿ ಹೂಡಿಕೆಗೆ ಒಳ್ಳೆಯ ಅವಕಾಶ: ಸಿಇಎ ಅನಂತನಾಗೇಶ್ವರನ್

ಗ್ರಾಹಕರ ಹಣ ಸುರಕ್ಷಿತವೇ?

ಪೇಟಿಎಂ ಬ್ಯಾಂಕ್‌ನಲ್ಲಿ ಹಣ ಇಟ್ಟಿರುವ ಗ್ರಾಹಕರಿಗೆ ಆರ್‌ಬಿಐ ಅಭಯ ನೀಡಿದೆ. ಠೇವಣಿದಾರರಿಗೆ ನೀಡಬೇಕಾದ ಪೂರ್ಣ ಹಣವನ್ನು ಹಿಂತಿರುಗಿಸಲು ಬ್ಯಾಂಕ್ ಬಳಿ ಸಾಕಷ್ಟು ನಗದು ಹಣ (Liquidity) ಲಭ್ಯವಿದೆ ಎಂದು ಕೇಂದ್ರ ಬ್ಯಾಂಕ್ ತಿಳಿಸಿದೆ. ಆದ್ದರಿಂದ ಗ್ರಾಹಕರು ಆತಂಕಪಡುವ ಅಗತ್ಯವಿಲ್ಲ.

ಪೇಟಿಎಂ ಕಂಪನಿಗೆ 2015ರಲ್ಲಿ ಬ್ಯಾಂಕಿಂಗ್ ಲೈಸೆನ್ಸ್ ಸಿಕ್ಕಿತ್ತು. 2017ರಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಆರಂಭವಾಯಿತು. ಬಹಳ ಬೇಗ ಅದು ಜನಪ್ರಿಯವಾಗಿತ್ತು. 3 ಕೋಟಿ ಬ್ಯಾಂಕ್ ಅಕೌಂಟ್​ಗಳು; 10 ಕೋಟಿ ಕೆವೈಸಿಯುಕ್ತ ಗ್ರಾಹಕರು; ಮತ್ತು 30 ಕೋಟಿ ವ್ಯಾಲಟ್ ಬಳಕೆದಾರರನ್ನು ಅದು ಹೊಂದಿತ್ತು. ಹಾಗೆಯೇ, 80 ಲಕ್ಷ ಫಾಸ್​ಟ್ಯಾಗ್ ಗ್ರಾಹಕರ ಬಳಗವೂ ಅದಕ್ಕಿತ್ತು.

ಆದರೆ, ಕೆವೈಸಿ ಸರಿಯಾಗಿ ಪಡೆಯದೆಯೇ ಅಕೌಂಟ್​ಗಳನ್ನು ನೀಡಲಾಗಿದೆ ಎಂಬಿತ್ಯಾದಿ ಹಲವು ನಿಯಮಗಳ ಉಲ್ಲಂಘನೆ ಆಗಿರುವ ಆರೋಪ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ಕೇಳಿಬಂದಿತು. ಈ ಸಂಬಂಧ ಆರ್​ಬಿಐ ಹಲವು ಬಾರಿ ಆ ಸಂಸ್ಥೆಗೆ ನೋಟೀಸ್ ಕೊಟ್ಟಿತ್ತು. ಆದರೂ ಉಲ್ಲಂಘನೆ ಮುಂದುವರಿದಿತ್ತು. 2022ರಲ್ಲಿ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳದಂತೆ ಪೇಮೆಂಟ್ಸ್ ಬ್ಯಾಂಕ್​ಗೆ ಆರ್​ಬಿಐ ನಿರ್ಬಂಧ ವಿಧಿಸಿತು.

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ?

2024ರಲ್ಲಿ ಇರುವ ಗ್ರಾಹಕರಿಂದಲೇ ಹೊಸ ಡೆಪಾಸಿಟ್, ಕ್ರೆಡಿಟ್ ಟ್ರಾನ್ಸಾಕ್ಷನ್ಸ್, ಟಾಪಪ್, ವ್ಯಾಲಟ್ಸ್, ಫಾಸ್​ಟ್ಯಾಗ್ ಇತ್ಯಾದಿಯನ್ನು ಪಡೆಯದಂತೆಯೂ ನಿರ್ಬಂಧಿಸಲಾಯಿತು.

ಈಗ ಅಂತಿಮವಾಗಿ ಪರವಾನಗಿಯನ್ನೇ ರದ್ದುಗೊಳಿಸುವ ಮೂಲಕ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಬ್ಯಾಂಕಿಂಗ್ ಅಧ್ಯಾಯ ಕೊನೆಗೊಂಡಂತಾಗಿದೆ. ಆದರೆ, ಪೇಟಿಎಂನ ಇತರ ಯುಪಿಐ (UPI) ಮತ್ತು ಪೇಮೆಂಟ್ ಅಗ್ರಿಗೇಟರ್ ಸೇವೆಗಳು ಸಾಮಾನ್ಯದಂತೆ ಮುಂದುವರಿಯಲಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ