AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಬ್ಯಾಂಕಿಂಗ್ ಲೈಸೆನ್ಸ್ ರದ್ದಾಗುವ ಸಾಧ್ಯತೆ; ಆಡಳಿತಗಾರರ ನೇಮಕಕ್ಕೆ ಆರ್​ಬಿಐ ಯೋಜನೆ

Paytm Payments Bank updates: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ನೀಡಲಾಗಿದ್ದ ಬ್ಯಾಂಕಿಂಗ್ ಲೈಸೆನ್ಸ್ ಅನ್ನು ಆರ್​ಬಿಐ ಹಿಂಪಡೆಯುವ ಸಾಧ್ಯತೆ ಇದೆ ಎಂದು ಪತ್ರಿಕೆಯೊಂದರಲ್ಲಿ ವರದಿಯಾಗಿದೆ. ಕಳೆದ 20 ವರ್ಷದಲ್ಲಿ ಯಾವ ಬ್ಯಾಂಕಿಗೂ ಲೈಸೆನ್ಸ್ ರದ್ದು ಮಾಡಿದ್ದಿಲ್ಲ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನ ನಿತ್ಯದ ಕಾರ್ಯಾಚರಣೆಯನ್ನು ನೋಡಿಕೊಳ್ಳಲು ಆರ್​ಬಿಐನಿಂದ ಆಡಳಿತಗಾರರೊಬ್ಬರ ನೇಮಕವಾಗಬಹುದು ಎನ್ನಲಾಗಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಬ್ಯಾಂಕಿಂಗ್ ಲೈಸೆನ್ಸ್ ರದ್ದಾಗುವ ಸಾಧ್ಯತೆ; ಆಡಳಿತಗಾರರ ನೇಮಕಕ್ಕೆ ಆರ್​ಬಿಐ ಯೋಜನೆ
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 04, 2024 | 4:48 PM

Share

ನವದೆಹಲಿ, ಮಾರ್ಚ್ 4: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಆರ್​ಬಿಐ ನೀಡಿದ್ದ ಬ್ಯಾಂಕಿಂಗ್ ಪರವಾನಿಗೆಯನ್ನು (Banking license) ರದ್ದುಗೊಳಿಸುವ ಸಾಧ್ಯತೆ ಇದೆ. ಹಿಂದೂ ಬಿಸಿನೆಸ್ ಲೈನ್ ಪತ್ರಿಕೆಯಲ್ಲಿ ಈ ಬಗ್ಗೆ ವರದಿಯೊಂದು ಪ್ರಕಟವಾಗಿದ್ದು ಅದರ ಪ್ರಕಾರ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್ ಕಳೆದುಕೊಳ್ಳಬಹುದು. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನ ಚಟುವಟಿಕೆಯನ್ನು ನಿರ್ಬಂಧಿಸಿದ್ದಾಗಲೇ ಬ್ಯಾಂಕಿಂಗ್ ಲೈಸೆನ್ಸ್ ಹಿಂಪಡೆಯಬಹುದು ಎಂದು ಸುದ್ದಿಗಳು ಇದ್ದವು. ಈಗ ಆ ಸುದ್ದಿಯನ್ನು ಇನ್ನಷ್ಟು ಬಲಗೊಳಿಸಿದೆ. ಒಂದು ವೇಳೆ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್ ಕಳೆದುಕೊಂಡರೆ, ಕಳೆದ 20 ವರ್ಷದಲ್ಲಿ ಇಂಥದ್ದು ಇದೇ ಮೊದಲು ಎಂಬಂತಾಗುತ್ತದೆ. ಲೈಸೆನ್ಸ್ ರದ್ದು ಮಾಡುವುದು ಅಷ್ಟೇ ಅಲ್ಲ, ಪೇಮೆಂಟ್ಸ್ ಬ್ಯಾಂಕ್​ನ ನಿತ್ಯದ ಕಾರ್ಯಗಳ ಮೇಲೆ ನಿಗಾ ಇಡಲು ಆರ್​ಬಿಐ ಒಬ್ಬ ಆಡಳಿತಗಾರರನ್ನು ನೇಮಿಸುವ ಸಾಧ್ಯತೆ ಇದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ಆರ್​ಬಿಐ ನಿರ್ಬಂಧಿಸಲು ಕೆಲ ಪ್ರಬಲ ಕಾರಣಗಳಿವೆ. ಆ ಬ್ಯಾಂಕ್ ತನ್ನ ಗ್ರಾಹಕರಿಗೆ ಖಾತೆ ನೀಡುವಾಗ ಸರಿಯಾಗಿ ಕೆವೈಸಿ ಪಡೆದಿಲ್ಲ ಎನ್ನುವುದು ಪ್ರಮುಖ ಆರೋಪ. ಪೇಮೆಂಟ್ಸ್ ಬ್ಯಾಂಕ್ ಮತ್ತು ಒನ್97 ಕಮ್ಯೂನಿಕೇಶನ್ಸ್​ನ ಇತರ ಸಂಸ್ಥೆಗಳ ನಡುವೆ ಒಪ್ಪಂದ ಇದೆ. ಬ್ಯಾಂಕಿಂಗ್ ನಿಯಮದ ಪ್ರಕಾರ ಪೇಮೆಂಟ್ಸ್ ಬ್ಯಾಂಕ್ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಪೇಟಿಎಂ ಮತ್ತು ಪೇಮೆಂಟ್ಸ್ ಬ್ಯಾಂಕ್ ಎರಡಕ್ಕೂ ಒಬ್ಬರೇ ಮುಖ್ಯಸ್ಥರಿದ್ದಾರೆ ಎಂಬುದು ಇನ್ನೊಂದು ಪ್ರಮುಖ ಆರೋಪ. ಈ ಕಾರಣಕ್ಕೆ ಬ್ಯಾಂಕಿಂಗ್ ಲೈಸೆನ್ಸ್ ರದ್ದುಗೊಳಿಸಲು ಆರ್​ಬಿಐ ಮುಂದಾಗಿರಬಹುದು.

ಇದನ್ನೂ ಓದಿ: ಮಹಿಳೆಗೆ ಮಾಸಿಕ 1,000 ರೂ ಧನಸಹಾಯ; ಶಿಕ್ಷಣ ಕ್ಷೇತ್ರಕ್ಕೆ ಶೇ. 21ಕ್ಕಿಂತ ಹೆಚ್ಚು ಹಣ; ದೆಹಲಿ ಸರ್ಕಾರದ ಬಜೆಟ್ ಧಮಾಕ

ಪೇಟಿಎಂನ ಯುಪಿಐ ಮತ್ತಿತರ ಕಡೆ ಪೇಮೆಂಟ್ಸ್ ಬ್ಯಾಂಕ್ ಜೋಡಿತವಾಗಿದೆ. ಅದೆಲ್ಲವನ್ನೂ ಈಗ ಕಡಿದುಕೊಳ್ಳಬೇಕಾಗುತ್ತದೆ. ಪೇಟಿಎಂ ಮತ್ತು ಪೇಮೆಂಟ್ಸ್ ಬ್ಯಾಂಕ್ ನಡುವಿನ ಎಲ್ಲಾ ಒಪ್ಪಂದಗಳನ್ನು ಈಗ ಮುರಿದುಕೊಳ್ಳಲಾಗಿದೆ. ಪೇಮೆಂಟ್ಸ್ ಬ್ಯಾಂಕ್ ಬದಲು ಇತರ ಬ್ಯಾಂಕುಗಳೊಂದಿಗೆ ಪೇಟಿಎಂ ಒಪ್ಪಂದ ಮಾಡಿಕೊಳ್ಳಲು ಯತ್ನಿಸುತ್ತಿದೆ.

ಇದೇ ವೇಳೆ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅನ್ನು ಪಡೆದುಕೊಳ್ಳಲು ಕೆಲ ಪ್ರಮುಖ ಬ್ಯಾಂಕುಗಳು ತಯಾರಾಗಿವೆ. ಆದರೆ, ಲಕ್ಷಾಂತರ ಇರುವ ಖಾತೆಗಳಲ್ಲಿ ಹೊಸದಾಗಿ ಕೆವೈಸಿ ಪಡೆಯುವುದು ಸವಾಲಿನ ಕೆಲಸವಾಗಿದೆ. ಹೀಗಾಗಿ, ಈ ಪ್ರಯತ್ನ ಇನ್ನೂ ಕೈಗೂಡಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?