AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm Wallet Transit Card: ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಆ್ಯಕ್ಟಿವೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಪೇಟಿಎಂ ಆ್ಯಪ್ ಮೂಲಕ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಆ್ಯಕ್ಟಿವೇಟ್ ಮಾಡುವ ವಿಧಾನವನ್ನು ಹಂತ ಹಂತವಾಗಿ ಇಲ್ಲಿ ನೀಡಲಾಗಿದೆ.

Paytm Wallet Transit Card: ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಆ್ಯಕ್ಟಿವೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on: Dec 21, 2022 | 2:55 PM

Share

ಡಿಜಿಟಲ್ ಇಂಡಿಯಾ (Digital India) ಮತ್ತು ‘ಒಂದು ದೇಶ ಒಂದು ಕಾರ್ಡ್’ (One Nation, One Card) ಅಭಿಯಾನದ ಅಂಗವಾಗಿ ಬಹು ಉಪಯೋಗಿ ಉದ್ದೇಶದೊಂದಿಗೆ ‘ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್’ (Paytm Wallet Transit Card) ಅನ್ನು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (Paytm Payments Bank) ಪರಿಚಯಿಸಿದೆ. ಪೇಟಿಎಂ ವಾಲೆಟ್ ಜತೆ ಲಿಂಕ್ ಆಗಿರುವ ಈ ಕಾರ್ಡ್​​ ಅನ್ನು ದೇಶದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಹಣಕಾಸು ವಹಿವಾಟಿಗೆ ಬಳಸಬಹುದಾಗಿದೆ. ಬಹು ಉಪಯೋಗಿ ಕಾರ್ಡ್ ಇದಾಗಿರುವುದರಿಂದ ಸಾರ್ವಜನಿಕ ಸಾರಿಗೆಗಳಾದ ಬಸ್, ರೈಲು ಹಾಗೂ ಮೆಟ್ರೋಗಳಲ್ಲಿ ಹಣಕಾಸು ವ್ಯವಹಾರಗಳಿಗೆ ಬಳಸಬಹುದಾಗಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಇಲ್ಲದಿದ್ದರೆ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಅನ್ನು ಆ್ಯಕ್ಟಿವೇಟ್ ಮಾಡಲಾಗದು ಎಂದು ಪೇಟಿಎಂ ತಿಳಿಸಿದೆ. ಹಾಗೆಂದು ಖಾತೆ ಇರುವ ಗ್ರಾಹಕರು ಕಾರ್ಡ್​ಗಾಗಿ ಹೆಚ್ಚುವರಿ ಖಾತೆ ತೆರೆಯಬೇಕಾಗಿಲ್ಲ. ಬದಲಿಗೆ ವಾಲೆಟ್ ಅನ್ನು ಟಾಪ್ ಅಪ್ ಮಾಡಿದರೆ ಸಾಕು. ಕಾರ್ಡ್ ನೇರವಾಗಿ ವಾಲೆಟ್ ಜತೆ ಲಿಂಕ್ ಆಗಿರುವುದರಿಂದ ವಾಲೆಟ್​ಗೆ ಟಾಪ್ ಅಪ್ ಮಾಡುವುದು ಅಗತ್ಯ.

ಪೇಟಿಎಂ ಆ್ಯಪ್ ಮೂಲಕ ಕಾರ್ಡ್​​ಗೆ ಅಪ್ಲೈ ಮಾಡುವುದು ಹೇಗೆ?

ಪೇಟಿಎಂ ಆ್ಯಪ್ ಮೂಲಕ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಆ್ಯಕ್ಟಿವೇಟ್ ಮಾಡುವ ವಿಧಾನವನ್ನು ಹಂತ ಹಂತವಾಗಿ ಇಲ್ಲಿ ನೀಡಲಾಗಿದೆ.

  1. ಸ್ಮಾರ್ಟ್​​ಫೋನ್​ನಲ್ಲಿ ಪೇಟಿಎಂ ಆ್ಯಪ್ ಓಪನ್ ಮಾಡಿ.
  2. ಪೇಟಿಎಂ ವಾಲೆಟ್​ನಲ್ಲಿರುವ Icon.S ಆಯ್ಕೆ ಮೇಲೆ ಕ್ಲಿಕ್ ಮಾಡಿ.
  3. ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಟ್ಯಾಬ್ ಕಾಣುವ ವರೆಗೆ ಸ್ಕ್ರಾಲ್​ಡೌನ್ ಮಾಡಿ. ನಂತರ ‘ಆ್ಯಕ್ಟಿವೇಟ್ ನೌ’ ಬಟನ್ ಕ್ಲಿಕ್ ಮಾಡಿ.
  4. ಹೊಸ ಸ್ಕ್ರೀನ್​ ಪಾಪ್-ಅಪ್ ಆಗುತ್ತದೆ. ಸ್ಕ್ರೀನ್​ನ ಕೆಳಭಾಗದ ವರೆಗೆ ಸ್ಕ್ರಾಲ್ ಮಾಡಿ ‘ಆ್ಯಕ್ಟಿವೇಟ್’ ಬಟನ್ ಪ್ರೆಸ್ ಮಾಡಿ.
  5. ಈಗ ನಿಮ್ಮ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪಾಸ್​ಕೋಡ್ ಅನ್ನು ನಮೂದಿಸಿ.
  6. ‘ಆ್ಯಕ್ಟಿವೇಟ್ ನೌ’ ಆಯ್ಕೆಯನ್ನು ಟ್ಯಾಪ್ ಮಾಡಿ.
  7. ಈಗ ನಿಮ್ಮ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಆ್ಯಕ್ಟಿವೇಟ್ ಆಗಿರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ