AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm Wallet Transit Card: ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಆ್ಯಕ್ಟಿವೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಪೇಟಿಎಂ ಆ್ಯಪ್ ಮೂಲಕ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಆ್ಯಕ್ಟಿವೇಟ್ ಮಾಡುವ ವಿಧಾನವನ್ನು ಹಂತ ಹಂತವಾಗಿ ಇಲ್ಲಿ ನೀಡಲಾಗಿದೆ.

Paytm Wallet Transit Card: ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಆ್ಯಕ್ಟಿವೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Dec 21, 2022 | 2:55 PM

ಡಿಜಿಟಲ್ ಇಂಡಿಯಾ (Digital India) ಮತ್ತು ‘ಒಂದು ದೇಶ ಒಂದು ಕಾರ್ಡ್’ (One Nation, One Card) ಅಭಿಯಾನದ ಅಂಗವಾಗಿ ಬಹು ಉಪಯೋಗಿ ಉದ್ದೇಶದೊಂದಿಗೆ ‘ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್’ (Paytm Wallet Transit Card) ಅನ್ನು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (Paytm Payments Bank) ಪರಿಚಯಿಸಿದೆ. ಪೇಟಿಎಂ ವಾಲೆಟ್ ಜತೆ ಲಿಂಕ್ ಆಗಿರುವ ಈ ಕಾರ್ಡ್​​ ಅನ್ನು ದೇಶದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಹಣಕಾಸು ವಹಿವಾಟಿಗೆ ಬಳಸಬಹುದಾಗಿದೆ. ಬಹು ಉಪಯೋಗಿ ಕಾರ್ಡ್ ಇದಾಗಿರುವುದರಿಂದ ಸಾರ್ವಜನಿಕ ಸಾರಿಗೆಗಳಾದ ಬಸ್, ರೈಲು ಹಾಗೂ ಮೆಟ್ರೋಗಳಲ್ಲಿ ಹಣಕಾಸು ವ್ಯವಹಾರಗಳಿಗೆ ಬಳಸಬಹುದಾಗಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಇಲ್ಲದಿದ್ದರೆ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಅನ್ನು ಆ್ಯಕ್ಟಿವೇಟ್ ಮಾಡಲಾಗದು ಎಂದು ಪೇಟಿಎಂ ತಿಳಿಸಿದೆ. ಹಾಗೆಂದು ಖಾತೆ ಇರುವ ಗ್ರಾಹಕರು ಕಾರ್ಡ್​ಗಾಗಿ ಹೆಚ್ಚುವರಿ ಖಾತೆ ತೆರೆಯಬೇಕಾಗಿಲ್ಲ. ಬದಲಿಗೆ ವಾಲೆಟ್ ಅನ್ನು ಟಾಪ್ ಅಪ್ ಮಾಡಿದರೆ ಸಾಕು. ಕಾರ್ಡ್ ನೇರವಾಗಿ ವಾಲೆಟ್ ಜತೆ ಲಿಂಕ್ ಆಗಿರುವುದರಿಂದ ವಾಲೆಟ್​ಗೆ ಟಾಪ್ ಅಪ್ ಮಾಡುವುದು ಅಗತ್ಯ.

ಪೇಟಿಎಂ ಆ್ಯಪ್ ಮೂಲಕ ಕಾರ್ಡ್​​ಗೆ ಅಪ್ಲೈ ಮಾಡುವುದು ಹೇಗೆ?

ಪೇಟಿಎಂ ಆ್ಯಪ್ ಮೂಲಕ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಆ್ಯಕ್ಟಿವೇಟ್ ಮಾಡುವ ವಿಧಾನವನ್ನು ಹಂತ ಹಂತವಾಗಿ ಇಲ್ಲಿ ನೀಡಲಾಗಿದೆ.

  1. ಸ್ಮಾರ್ಟ್​​ಫೋನ್​ನಲ್ಲಿ ಪೇಟಿಎಂ ಆ್ಯಪ್ ಓಪನ್ ಮಾಡಿ.
  2. ಪೇಟಿಎಂ ವಾಲೆಟ್​ನಲ್ಲಿರುವ Icon.S ಆಯ್ಕೆ ಮೇಲೆ ಕ್ಲಿಕ್ ಮಾಡಿ.
  3. ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಟ್ಯಾಬ್ ಕಾಣುವ ವರೆಗೆ ಸ್ಕ್ರಾಲ್​ಡೌನ್ ಮಾಡಿ. ನಂತರ ‘ಆ್ಯಕ್ಟಿವೇಟ್ ನೌ’ ಬಟನ್ ಕ್ಲಿಕ್ ಮಾಡಿ.
  4. ಹೊಸ ಸ್ಕ್ರೀನ್​ ಪಾಪ್-ಅಪ್ ಆಗುತ್ತದೆ. ಸ್ಕ್ರೀನ್​ನ ಕೆಳಭಾಗದ ವರೆಗೆ ಸ್ಕ್ರಾಲ್ ಮಾಡಿ ‘ಆ್ಯಕ್ಟಿವೇಟ್’ ಬಟನ್ ಪ್ರೆಸ್ ಮಾಡಿ.
  5. ಈಗ ನಿಮ್ಮ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪಾಸ್​ಕೋಡ್ ಅನ್ನು ನಮೂದಿಸಿ.
  6. ‘ಆ್ಯಕ್ಟಿವೇಟ್ ನೌ’ ಆಯ್ಕೆಯನ್ನು ಟ್ಯಾಪ್ ಮಾಡಿ.
  7. ಈಗ ನಿಮ್ಮ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಆ್ಯಕ್ಟಿವೇಟ್ ಆಗಿರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ