AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm Wallet Transit Card: ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಆ್ಯಕ್ಟಿವೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಪೇಟಿಎಂ ಆ್ಯಪ್ ಮೂಲಕ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಆ್ಯಕ್ಟಿವೇಟ್ ಮಾಡುವ ವಿಧಾನವನ್ನು ಹಂತ ಹಂತವಾಗಿ ಇಲ್ಲಿ ನೀಡಲಾಗಿದೆ.

Paytm Wallet Transit Card: ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಆ್ಯಕ್ಟಿವೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 21, 2022 | 2:55 PM

Share

ಡಿಜಿಟಲ್ ಇಂಡಿಯಾ (Digital India) ಮತ್ತು ‘ಒಂದು ದೇಶ ಒಂದು ಕಾರ್ಡ್’ (One Nation, One Card) ಅಭಿಯಾನದ ಅಂಗವಾಗಿ ಬಹು ಉಪಯೋಗಿ ಉದ್ದೇಶದೊಂದಿಗೆ ‘ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್’ (Paytm Wallet Transit Card) ಅನ್ನು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (Paytm Payments Bank) ಪರಿಚಯಿಸಿದೆ. ಪೇಟಿಎಂ ವಾಲೆಟ್ ಜತೆ ಲಿಂಕ್ ಆಗಿರುವ ಈ ಕಾರ್ಡ್​​ ಅನ್ನು ದೇಶದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಹಣಕಾಸು ವಹಿವಾಟಿಗೆ ಬಳಸಬಹುದಾಗಿದೆ. ಬಹು ಉಪಯೋಗಿ ಕಾರ್ಡ್ ಇದಾಗಿರುವುದರಿಂದ ಸಾರ್ವಜನಿಕ ಸಾರಿಗೆಗಳಾದ ಬಸ್, ರೈಲು ಹಾಗೂ ಮೆಟ್ರೋಗಳಲ್ಲಿ ಹಣಕಾಸು ವ್ಯವಹಾರಗಳಿಗೆ ಬಳಸಬಹುದಾಗಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಇಲ್ಲದಿದ್ದರೆ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಅನ್ನು ಆ್ಯಕ್ಟಿವೇಟ್ ಮಾಡಲಾಗದು ಎಂದು ಪೇಟಿಎಂ ತಿಳಿಸಿದೆ. ಹಾಗೆಂದು ಖಾತೆ ಇರುವ ಗ್ರಾಹಕರು ಕಾರ್ಡ್​ಗಾಗಿ ಹೆಚ್ಚುವರಿ ಖಾತೆ ತೆರೆಯಬೇಕಾಗಿಲ್ಲ. ಬದಲಿಗೆ ವಾಲೆಟ್ ಅನ್ನು ಟಾಪ್ ಅಪ್ ಮಾಡಿದರೆ ಸಾಕು. ಕಾರ್ಡ್ ನೇರವಾಗಿ ವಾಲೆಟ್ ಜತೆ ಲಿಂಕ್ ಆಗಿರುವುದರಿಂದ ವಾಲೆಟ್​ಗೆ ಟಾಪ್ ಅಪ್ ಮಾಡುವುದು ಅಗತ್ಯ.

ಪೇಟಿಎಂ ಆ್ಯಪ್ ಮೂಲಕ ಕಾರ್ಡ್​​ಗೆ ಅಪ್ಲೈ ಮಾಡುವುದು ಹೇಗೆ?

ಪೇಟಿಎಂ ಆ್ಯಪ್ ಮೂಲಕ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಆ್ಯಕ್ಟಿವೇಟ್ ಮಾಡುವ ವಿಧಾನವನ್ನು ಹಂತ ಹಂತವಾಗಿ ಇಲ್ಲಿ ನೀಡಲಾಗಿದೆ.

  1. ಸ್ಮಾರ್ಟ್​​ಫೋನ್​ನಲ್ಲಿ ಪೇಟಿಎಂ ಆ್ಯಪ್ ಓಪನ್ ಮಾಡಿ.
  2. ಪೇಟಿಎಂ ವಾಲೆಟ್​ನಲ್ಲಿರುವ Icon.S ಆಯ್ಕೆ ಮೇಲೆ ಕ್ಲಿಕ್ ಮಾಡಿ.
  3. ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್​ ಟ್ಯಾಬ್ ಕಾಣುವ ವರೆಗೆ ಸ್ಕ್ರಾಲ್​ಡೌನ್ ಮಾಡಿ. ನಂತರ ‘ಆ್ಯಕ್ಟಿವೇಟ್ ನೌ’ ಬಟನ್ ಕ್ಲಿಕ್ ಮಾಡಿ.
  4. ಹೊಸ ಸ್ಕ್ರೀನ್​ ಪಾಪ್-ಅಪ್ ಆಗುತ್ತದೆ. ಸ್ಕ್ರೀನ್​ನ ಕೆಳಭಾಗದ ವರೆಗೆ ಸ್ಕ್ರಾಲ್ ಮಾಡಿ ‘ಆ್ಯಕ್ಟಿವೇಟ್’ ಬಟನ್ ಪ್ರೆಸ್ ಮಾಡಿ.
  5. ಈಗ ನಿಮ್ಮ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪಾಸ್​ಕೋಡ್ ಅನ್ನು ನಮೂದಿಸಿ.
  6. ‘ಆ್ಯಕ್ಟಿವೇಟ್ ನೌ’ ಆಯ್ಕೆಯನ್ನು ಟ್ಯಾಪ್ ಮಾಡಿ.
  7. ಈಗ ನಿಮ್ಮ ಪೇಟಿಎಂ ವಾಲೆಟ್ ಟ್ರಾನ್ಸಿಟ್ ಕಾರ್ಡ್ ಆ್ಯಕ್ಟಿವೇಟ್ ಆಗಿರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ