AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Compensation: ರಾಜ್ಯಗಳಿಗೆ ಬಾಕಿ ಇರುವ ಜಿಎಸ್​ಟಿ ಪರಿಹಾರ ಶೀಘ್ರ ಬಿಡುಗಡೆ; ನಿರ್ಮಲಾ ಸೀತಾರಾಮನ್

ಅಕೌಂಟೆಂಟ್ ಜನರಲ್​ಗಳು ರಾಜ್ಯಗಳ ಪರಿಹಾರ ಬೇಡಿಕೆಯನ್ನು ದೃಢೀಕರಿಸದಿದ್ದಲ್ಲಿ ಅವರು ಆ ಕೆಲಸವನ್ನು ತ್ವರಿತಗೊಳಿಸಬೇಕು. ಪ್ರಮಾಣಪತ್ರ ದೊರೆತ ಕೂಡಲೇ ಅದನ್ನು ಪರಿಶೀಲಿಸಿ ಅನುಮೋದನೆ ನೀಡಲು ನಾನು ಸಿದ್ಧವಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

GST Compensation: ರಾಜ್ಯಗಳಿಗೆ ಬಾಕಿ ಇರುವ ಜಿಎಸ್​ಟಿ ಪರಿಹಾರ ಶೀಘ್ರ ಬಿಡುಗಡೆ; ನಿರ್ಮಲಾ ಸೀತಾರಾಮನ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us
TV9 Web
| Updated By: Ganapathi Sharma

Updated on: Dec 13, 2022 | 10:56 AM

ನವದೆಹಲಿ: ರಾಜ್ಯಗಳಿಗೆ ಬಾಕಿ ಇರುವ ಜಿಎಸ್​ಟಿ ಪರಿಹಾರವನ್ನು (GST Compensation) ಅಕೌಂಟೆಂಟ್ ಜನರಲ್ ದೃಢೀಕರಿಸಿದ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಿಳಿಸಿದ್ದಾರೆ. ಅಕೌಂಟೆಂಟ್ ಜನರಲ್ ದೃಢೀಕರಿಸಿದ ಪ್ರಮಾಣಪತ್ರವನ್ನು ರಾಜ್ಯಗಳು ಸಲ್ಲಿಸದೇ ಹೋದಲ್ಲಿ ಅಥವಾ ವಿಳಂಬ ಮಾಡಿದಲ್ಲಿ ಪರಿಹಾರ ಬಿಡುಗಡೆ ವಿಳಂಬವಾಗಲಿದೆ ಎಂದು ಅವರು ಹೇಳಿದ್ದಾರೆ. ಲೋಕಸಭೆಯಲ್ಲಿ (Lok Sabha) ಪ್ರಶ್ನೋತ್ತರ ವೇಳೆಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಅಕೌಂಟೆಂಟ್ ಜನರಲ್​ಗಳು ರಾಜ್ಯಗಳ ಪರಿಹಾರ ಬೇಡಿಕೆಯನ್ನು ದೃಢೀಕರಿಸದಿದ್ದಲ್ಲಿ ಅವರು ಆ ಕೆಲಸವನ್ನು ತ್ವರಿತಗೊಳಿಸಬೇಕು. ಪ್ರಮಾಣಪತ್ರ ದೊರೆತ ಕೂಡಲೇ ಅದನ್ನು ಪರಿಶೀಲಿಸಿ ಅನುಮೋದನೆ ನೀಡಲು ನಾನು ಸಿದ್ಧವಿದ್ದೇನೆ. 2022ರ ಜೂನ್​ವರೆಗೆ ರಾಜ್ಯಗಳಿಗೆ ಐದು ವರ್ಷಗಳ ಅವಧಿಯ ಜಿಎಸ್​ಟಿ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಜೂನ್​ನ ಅರ್ಧದಷ್ಟು ಪರಿಹಾರವನ್ನು ಕಳೆದ ತಿಂಗಳು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Union Budget 2023-24: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಸಾಧ್ಯತೆ; ವರದಿ

ಬಾಕಿ ಮೊತ್ತಕ್ಕಾಗಿ ಕೇಂದ್ರವು ಕಾಯುತ್ತಿದೆ. ಪರಿಹಾರ ಸೆಸ್​ನಿಂದ ಅದನ್ನು ನೀಡಲಾಗುವುದರಿಂದ ಅದರ ಸಂಗ್ರಹಣೆಗಾಗಿ ಕಾಯಲಾಗುತ್ತಿದೆ. ಇದು ಹೊರತುಪಡಿಸಿ ನಮ್ಮ ಕಡೆಯಿಂದ ಯಾವುದೂ ವಿಳಂಬವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ನವೆಂಬರ್ 25ರಂದು ಬಿಡುಗಡೆ ಮಾಡಿತ್ತು. 2022ರ ಏಪ್ರಿಲ್‌ನಿಂದ ಜೂನ್ 24ರ ಅವಧಿಯ 75 ಸಾವಿರ ಕೋಟಿ ಪರಿಹಾರ ಬಿಡುಗಡೆಗೊಳಿಸಲಾಗಿತ್ತು. ಇದರಲ್ಲಿ ಕರ್ನಾಟಕಕ್ಕೆ 1,915 ಕೋಟಿ ರೂಪಾಯಿ ಜಿಎಸ್​ಟಿ ಪರಿಹಾರ ಹಣ ಸಿಕ್ಕಿತ್ತು. ಒಟ್ಟಾರೆಯಾಗಿ 2022-23ರ ಸಾಲಿನಲ್ಲಿ ಕೇಂದ್ರ ಸರ್ಕಾರ 1,15,662 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇದರಲ್ಲಿ ಈ ಬಾರಿಯ ಜಿಎಸ್​ಟಿ ಸಂಗ್ರಹದಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರಕ್ಕೆ 2081 ಕೋಟಿ ರೂ, ಸಿಕ್ಕಿದ್ದರೆ, ನಂತರ ಸ್ಥಾನದಲ್ಲಿರುವ ರ್ನಾಟಕಕ್ಕೆ 1,915 ಕೋಟಿ ರೂ. ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್