AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ 21 ದಿನದೊಳಗೆ ಪರಿಹಾರ: ವಿವಿಧ ಇಲಾಖೆಗಳಿಗೆ ಚುರುಕು ಮುಟ್ಟಿಸಿದ ಸರ್ಕಾರ

Redressal of pensioners grievances: ಪಿಂಚಣಿ ಬರುವುದು ವಿಳಂಬವಾಗುತ್ತಿದೆ, ಪಿಂಚಣಿ ನಿಂತು ಹೋಗಿದೆ ಹೀಗೆ ವಿವಿಧ ರೀತಿಯ ಪಿಂಚಣಿ ಸಂಬಂಧಿತ ದೂರುಗಳು ಎಲ್ಲಾ ಸರ್ಕಾರಿ ಇಲಾಖೆಗಳು ಸಾಕಷ್ಟು ಸಂಖ್ಯೆಯಲ್ಲಿ ಸಲ್ಲಿಕೆ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಇಂಥ ಪಿಂಚಣಿ ದೂರುಗಳನ್ನು ಆದಷ್ಟೂ ಬೇಗ ವಿಲೇವಾರಿ ಮಾಡಲಾಗುವಂತೆ ಕ್ರಮ ತೆಗೆದುಕೊಂಡಿದೆ. ದೂರುಗಳನ್ನು 21 ದಿನದೊಳಗೆ ಇತ್ಯರ್ಥಪಡಿಸಿ ವರದಿ ಸಲ್ಲಿಸಬೇಕು ಎಂದು ಎಲ್ಲಾ ಇಲಾಖೆಗಳಿಗೂ ಆದೇಶಿಸಿದೆ.

ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ 21 ದಿನದೊಳಗೆ ಪರಿಹಾರ: ವಿವಿಧ ಇಲಾಖೆಗಳಿಗೆ ಚುರುಕು ಮುಟ್ಟಿಸಿದ ಸರ್ಕಾರ
ಪಿಂಚಣಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 18, 2024 | 2:23 PM

ನವದೆಹಲಿ, ಅಕ್ಟೋಬರ್ 18: ಕೇಂದ್ರ ಸರ್ಕಾರ ತನ್ನ ಎಲ್ಲಾ ಇಲಾಖೆಗಳ ಪಿಂಚಣಿದಾರರ ದೂರುಗಳಿಗೆ ಶೀಘ್ರ ಪರಿಹಾರ ನೀಡುವ ನಿರ್ಧಾರ ಕೈಗೊಂಡಿದೆ. 21 ದಿನದೊಳಗೆ ಪಿಂಚಣಿದಾರರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಎಲ್ಲಾ ಇಲಾಖೆಗಳಿಗೂ ಸರ್ಕಾರ ಸೂಚಿಸಿದೆ. ಒಂದು ವೇಳೆ ಈ ಮೂರು ವಾರದೊಳಗೆ ದೂರುಗಳನ್ನು ಇತ್ಯರ್ಥಪಡಿಸಲು ಆಗುವುದಿಲ್ಲ. ಇನ್ನಷ್ಟು ಕಾಲಾವಕಾಶ ಬೇಕು ಎನಿಸಿದರೆ ತತ್​ಕ್ಷಣಕ್ಕೆ ಮಧ್ಯಂತರ ಸ್ಪಂದನೆಯನ್ನಾದರೂ ಒದಗಿಸಬೇಕು ಎಂದು ಮೊನ್ನೆ ಬುಧವಾರ (ಅ. 16) ನೀಡಲಾದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೇಂದ್ರೀಕೃತ ಪಿಂಚಣಿ ದೂರು ಪರಿಹಾರ ಮತ್ತು ಮೇಲ್ವಿಚಾರಣೆ ವ್ಯವಸ್ಥೆಯ ಪೋರ್ಟಲ್ ಅನ್ನು ಸರ್ಕಾರ ಪರಾಮರ್ಶಿಸಿದೆ. ಅದಾದ ಬಳಿಕ ವಿವಿಧ ಇಲಾಖೆಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸರಿಯಾಗಿ ಇತ್ಯರ್ಥಪಡಿಸದೇ ಪ್ರಕರಣಗಳನ್ನು ವಜಾಗೊಳಿಸಬಾರದು ಎಂಬುದು ಸಿಬ್ಬಂದಿ ಸಚಿವಾಲಯದಿಂದ ಹೊರಡಿಸಲಾದ ಹೊಸ ಫರ್ಮಾನಾಗಿದೆ.

ಇದನ್ನೂ ಓದಿ: ರತನ್ ಟಾಟಾ ವೈಯಕ್ತಿಕ ಆಸ್ತಿ ಯಾರಿಗೆ? ಅವರ ಕೊನೆಯಾಸೆ ಈಡೇರಿಸುವ ಜವಾಬ್ದಾರಿ ನಾಲ್ವರಿಗೆ ವಹಿಸಿದ್ದ ಟಾಟಾ

ಪಿಂಚಣಿದಾರರ ದೂರು ಅರ್ಜಿ ಸರಿಯಾಗಿ ಇತ್ಯರ್ಥ ಆಗಬೇಕು. ಆ ಅರ್ಜಿ ಸಂಬಂಧ ಏನೇನು ಕ್ರಮ ತೆಗೆದುಕೊಳ್ಳಲಾಯಿತು ಎಂಬ ವರದಿಯನ್ನು ತುಂಬಬೇಕು. ಜೊತೆಗೆ ಸಂಬಂಧಿತ ಮಾಹಿತಿ ಮತ್ತು ದಾಖಲೆಗಳನ್ನೂ ಸಲ್ಲಿಸಬೇಕಾಗುತ್ತದೆ ಎಂದು ಸಿಬ್ಬಂದಿ ಸಚಿವಾಲಯ ಬಹಳ ಸ್ಪಷ್ಟವಾಗಿ ಹೇಳಿದೆ.

‘ಸಚಿವಾಲಯಗಳು ಅಥವಾ ಇಲಾಖೆಗಳು ಪೋರ್ಟಲ್​ನಲ್ಲಿ ಬಾಕಿ ಉಳಿದಿರುವ ಪಿಂಚಣಿ ಸಂಬಂಧಿತ ದೂರುಗಳನ್ನು ಪ್ರತೀ ತಿಂಗಳು ಪರಾಮರ್ಶಿಸಬೇಕು. ಅವರುಗಳು ನಿಗದಿತ ಗಡುವಿನೊಳಗೆ ಇತ್ಯರ್ಥ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು,’ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಗಮನಿಸಿ, ಮುಂಗಡ ರೈಲು ಟಿಕೆಟ್ ಬುಕಿಂಗ್ ಅವಧಿ ಈಗ 60 ದಿನ ಮಾತ್ರ; ಮೂರು ತಿಂಗಳ ಮುಂಚೆ ಬುಕಿಂಗ್ ಅಸಾಧ್ಯ

ಒಂದು ವೇಳೆ ದೂರುದಾರರಿಗೆ ತಮ್ಮ ಅರ್ಜಿ ಸರಿಯಾಗಿ ಇತ್ಯರ್ಥ ಆಗದೇ ಸಮಾಪ್ತಿಗೊಳಿಸಲಾಗಿದೆ ಎಂದನಿಸಿದಲ್ಲಿ, ಅದಾಗಿ 30 ದಿನದೊಳಗೆ ಅವರು ಮನವಿ ಸಲ್ಲಿಸಬಹುದು. ಇದರ ಸಂಬಂಧಿತ ಮೇಲ್ಮನವಿ ಪ್ರಾಧಿಕಾರವು (ಅಪೆಲ್ಲೇಟ್ ಅಥಾರಿಟಿ) 30 ದಿನದೊಳಗೆ ಈ ಮನವಿಯನ್ನು ಪರಿಶೀಲಿಸಿ ಇತ್ಯರ್ಥಪಡಿಸಲಿದೆ ಎನ್ನುವ ಅಂಶವೂ ಸಿಬ್ಬಂದಿ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳಲ್ಲಿ ಇದೆ.

ಪಿಂಚಣಿ ವಿಳಂಬವಾಗಿ ಬರುತ್ತಿದೆ ಎಂಬಿತ್ಯಾದಿ ಸಾಕಷ್ಟು ದೂರುಗಳು ಬರುತ್ತಿದ್ದ ಕಾರಣ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್