AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ 21 ದಿನದೊಳಗೆ ಪರಿಹಾರ: ವಿವಿಧ ಇಲಾಖೆಗಳಿಗೆ ಚುರುಕು ಮುಟ್ಟಿಸಿದ ಸರ್ಕಾರ

Redressal of pensioners grievances: ಪಿಂಚಣಿ ಬರುವುದು ವಿಳಂಬವಾಗುತ್ತಿದೆ, ಪಿಂಚಣಿ ನಿಂತು ಹೋಗಿದೆ ಹೀಗೆ ವಿವಿಧ ರೀತಿಯ ಪಿಂಚಣಿ ಸಂಬಂಧಿತ ದೂರುಗಳು ಎಲ್ಲಾ ಸರ್ಕಾರಿ ಇಲಾಖೆಗಳು ಸಾಕಷ್ಟು ಸಂಖ್ಯೆಯಲ್ಲಿ ಸಲ್ಲಿಕೆ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಇಂಥ ಪಿಂಚಣಿ ದೂರುಗಳನ್ನು ಆದಷ್ಟೂ ಬೇಗ ವಿಲೇವಾರಿ ಮಾಡಲಾಗುವಂತೆ ಕ್ರಮ ತೆಗೆದುಕೊಂಡಿದೆ. ದೂರುಗಳನ್ನು 21 ದಿನದೊಳಗೆ ಇತ್ಯರ್ಥಪಡಿಸಿ ವರದಿ ಸಲ್ಲಿಸಬೇಕು ಎಂದು ಎಲ್ಲಾ ಇಲಾಖೆಗಳಿಗೂ ಆದೇಶಿಸಿದೆ.

ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ 21 ದಿನದೊಳಗೆ ಪರಿಹಾರ: ವಿವಿಧ ಇಲಾಖೆಗಳಿಗೆ ಚುರುಕು ಮುಟ್ಟಿಸಿದ ಸರ್ಕಾರ
ಪಿಂಚಣಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 18, 2024 | 2:23 PM

Share

ನವದೆಹಲಿ, ಅಕ್ಟೋಬರ್ 18: ಕೇಂದ್ರ ಸರ್ಕಾರ ತನ್ನ ಎಲ್ಲಾ ಇಲಾಖೆಗಳ ಪಿಂಚಣಿದಾರರ ದೂರುಗಳಿಗೆ ಶೀಘ್ರ ಪರಿಹಾರ ನೀಡುವ ನಿರ್ಧಾರ ಕೈಗೊಂಡಿದೆ. 21 ದಿನದೊಳಗೆ ಪಿಂಚಣಿದಾರರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಎಲ್ಲಾ ಇಲಾಖೆಗಳಿಗೂ ಸರ್ಕಾರ ಸೂಚಿಸಿದೆ. ಒಂದು ವೇಳೆ ಈ ಮೂರು ವಾರದೊಳಗೆ ದೂರುಗಳನ್ನು ಇತ್ಯರ್ಥಪಡಿಸಲು ಆಗುವುದಿಲ್ಲ. ಇನ್ನಷ್ಟು ಕಾಲಾವಕಾಶ ಬೇಕು ಎನಿಸಿದರೆ ತತ್​ಕ್ಷಣಕ್ಕೆ ಮಧ್ಯಂತರ ಸ್ಪಂದನೆಯನ್ನಾದರೂ ಒದಗಿಸಬೇಕು ಎಂದು ಮೊನ್ನೆ ಬುಧವಾರ (ಅ. 16) ನೀಡಲಾದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೇಂದ್ರೀಕೃತ ಪಿಂಚಣಿ ದೂರು ಪರಿಹಾರ ಮತ್ತು ಮೇಲ್ವಿಚಾರಣೆ ವ್ಯವಸ್ಥೆಯ ಪೋರ್ಟಲ್ ಅನ್ನು ಸರ್ಕಾರ ಪರಾಮರ್ಶಿಸಿದೆ. ಅದಾದ ಬಳಿಕ ವಿವಿಧ ಇಲಾಖೆಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸರಿಯಾಗಿ ಇತ್ಯರ್ಥಪಡಿಸದೇ ಪ್ರಕರಣಗಳನ್ನು ವಜಾಗೊಳಿಸಬಾರದು ಎಂಬುದು ಸಿಬ್ಬಂದಿ ಸಚಿವಾಲಯದಿಂದ ಹೊರಡಿಸಲಾದ ಹೊಸ ಫರ್ಮಾನಾಗಿದೆ.

ಇದನ್ನೂ ಓದಿ: ರತನ್ ಟಾಟಾ ವೈಯಕ್ತಿಕ ಆಸ್ತಿ ಯಾರಿಗೆ? ಅವರ ಕೊನೆಯಾಸೆ ಈಡೇರಿಸುವ ಜವಾಬ್ದಾರಿ ನಾಲ್ವರಿಗೆ ವಹಿಸಿದ್ದ ಟಾಟಾ

ಪಿಂಚಣಿದಾರರ ದೂರು ಅರ್ಜಿ ಸರಿಯಾಗಿ ಇತ್ಯರ್ಥ ಆಗಬೇಕು. ಆ ಅರ್ಜಿ ಸಂಬಂಧ ಏನೇನು ಕ್ರಮ ತೆಗೆದುಕೊಳ್ಳಲಾಯಿತು ಎಂಬ ವರದಿಯನ್ನು ತುಂಬಬೇಕು. ಜೊತೆಗೆ ಸಂಬಂಧಿತ ಮಾಹಿತಿ ಮತ್ತು ದಾಖಲೆಗಳನ್ನೂ ಸಲ್ಲಿಸಬೇಕಾಗುತ್ತದೆ ಎಂದು ಸಿಬ್ಬಂದಿ ಸಚಿವಾಲಯ ಬಹಳ ಸ್ಪಷ್ಟವಾಗಿ ಹೇಳಿದೆ.

‘ಸಚಿವಾಲಯಗಳು ಅಥವಾ ಇಲಾಖೆಗಳು ಪೋರ್ಟಲ್​ನಲ್ಲಿ ಬಾಕಿ ಉಳಿದಿರುವ ಪಿಂಚಣಿ ಸಂಬಂಧಿತ ದೂರುಗಳನ್ನು ಪ್ರತೀ ತಿಂಗಳು ಪರಾಮರ್ಶಿಸಬೇಕು. ಅವರುಗಳು ನಿಗದಿತ ಗಡುವಿನೊಳಗೆ ಇತ್ಯರ್ಥ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು,’ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಗಮನಿಸಿ, ಮುಂಗಡ ರೈಲು ಟಿಕೆಟ್ ಬುಕಿಂಗ್ ಅವಧಿ ಈಗ 60 ದಿನ ಮಾತ್ರ; ಮೂರು ತಿಂಗಳ ಮುಂಚೆ ಬುಕಿಂಗ್ ಅಸಾಧ್ಯ

ಒಂದು ವೇಳೆ ದೂರುದಾರರಿಗೆ ತಮ್ಮ ಅರ್ಜಿ ಸರಿಯಾಗಿ ಇತ್ಯರ್ಥ ಆಗದೇ ಸಮಾಪ್ತಿಗೊಳಿಸಲಾಗಿದೆ ಎಂದನಿಸಿದಲ್ಲಿ, ಅದಾಗಿ 30 ದಿನದೊಳಗೆ ಅವರು ಮನವಿ ಸಲ್ಲಿಸಬಹುದು. ಇದರ ಸಂಬಂಧಿತ ಮೇಲ್ಮನವಿ ಪ್ರಾಧಿಕಾರವು (ಅಪೆಲ್ಲೇಟ್ ಅಥಾರಿಟಿ) 30 ದಿನದೊಳಗೆ ಈ ಮನವಿಯನ್ನು ಪರಿಶೀಲಿಸಿ ಇತ್ಯರ್ಥಪಡಿಸಲಿದೆ ಎನ್ನುವ ಅಂಶವೂ ಸಿಬ್ಬಂದಿ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳಲ್ಲಿ ಇದೆ.

ಪಿಂಚಣಿ ವಿಳಂಬವಾಗಿ ಬರುತ್ತಿದೆ ಎಂಬಿತ್ಯಾದಿ ಸಾಕಷ್ಟು ದೂರುಗಳು ಬರುತ್ತಿದ್ದ ಕಾರಣ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ