AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ 21 ದಿನದೊಳಗೆ ಪರಿಹಾರ: ವಿವಿಧ ಇಲಾಖೆಗಳಿಗೆ ಚುರುಕು ಮುಟ್ಟಿಸಿದ ಸರ್ಕಾರ

Redressal of pensioners grievances: ಪಿಂಚಣಿ ಬರುವುದು ವಿಳಂಬವಾಗುತ್ತಿದೆ, ಪಿಂಚಣಿ ನಿಂತು ಹೋಗಿದೆ ಹೀಗೆ ವಿವಿಧ ರೀತಿಯ ಪಿಂಚಣಿ ಸಂಬಂಧಿತ ದೂರುಗಳು ಎಲ್ಲಾ ಸರ್ಕಾರಿ ಇಲಾಖೆಗಳು ಸಾಕಷ್ಟು ಸಂಖ್ಯೆಯಲ್ಲಿ ಸಲ್ಲಿಕೆ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಇಂಥ ಪಿಂಚಣಿ ದೂರುಗಳನ್ನು ಆದಷ್ಟೂ ಬೇಗ ವಿಲೇವಾರಿ ಮಾಡಲಾಗುವಂತೆ ಕ್ರಮ ತೆಗೆದುಕೊಂಡಿದೆ. ದೂರುಗಳನ್ನು 21 ದಿನದೊಳಗೆ ಇತ್ಯರ್ಥಪಡಿಸಿ ವರದಿ ಸಲ್ಲಿಸಬೇಕು ಎಂದು ಎಲ್ಲಾ ಇಲಾಖೆಗಳಿಗೂ ಆದೇಶಿಸಿದೆ.

ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ 21 ದಿನದೊಳಗೆ ಪರಿಹಾರ: ವಿವಿಧ ಇಲಾಖೆಗಳಿಗೆ ಚುರುಕು ಮುಟ್ಟಿಸಿದ ಸರ್ಕಾರ
ಪಿಂಚಣಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 18, 2024 | 2:23 PM

Share

ನವದೆಹಲಿ, ಅಕ್ಟೋಬರ್ 18: ಕೇಂದ್ರ ಸರ್ಕಾರ ತನ್ನ ಎಲ್ಲಾ ಇಲಾಖೆಗಳ ಪಿಂಚಣಿದಾರರ ದೂರುಗಳಿಗೆ ಶೀಘ್ರ ಪರಿಹಾರ ನೀಡುವ ನಿರ್ಧಾರ ಕೈಗೊಂಡಿದೆ. 21 ದಿನದೊಳಗೆ ಪಿಂಚಣಿದಾರರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಎಲ್ಲಾ ಇಲಾಖೆಗಳಿಗೂ ಸರ್ಕಾರ ಸೂಚಿಸಿದೆ. ಒಂದು ವೇಳೆ ಈ ಮೂರು ವಾರದೊಳಗೆ ದೂರುಗಳನ್ನು ಇತ್ಯರ್ಥಪಡಿಸಲು ಆಗುವುದಿಲ್ಲ. ಇನ್ನಷ್ಟು ಕಾಲಾವಕಾಶ ಬೇಕು ಎನಿಸಿದರೆ ತತ್​ಕ್ಷಣಕ್ಕೆ ಮಧ್ಯಂತರ ಸ್ಪಂದನೆಯನ್ನಾದರೂ ಒದಗಿಸಬೇಕು ಎಂದು ಮೊನ್ನೆ ಬುಧವಾರ (ಅ. 16) ನೀಡಲಾದ ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೇಂದ್ರೀಕೃತ ಪಿಂಚಣಿ ದೂರು ಪರಿಹಾರ ಮತ್ತು ಮೇಲ್ವಿಚಾರಣೆ ವ್ಯವಸ್ಥೆಯ ಪೋರ್ಟಲ್ ಅನ್ನು ಸರ್ಕಾರ ಪರಾಮರ್ಶಿಸಿದೆ. ಅದಾದ ಬಳಿಕ ವಿವಿಧ ಇಲಾಖೆಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸರಿಯಾಗಿ ಇತ್ಯರ್ಥಪಡಿಸದೇ ಪ್ರಕರಣಗಳನ್ನು ವಜಾಗೊಳಿಸಬಾರದು ಎಂಬುದು ಸಿಬ್ಬಂದಿ ಸಚಿವಾಲಯದಿಂದ ಹೊರಡಿಸಲಾದ ಹೊಸ ಫರ್ಮಾನಾಗಿದೆ.

ಇದನ್ನೂ ಓದಿ: ರತನ್ ಟಾಟಾ ವೈಯಕ್ತಿಕ ಆಸ್ತಿ ಯಾರಿಗೆ? ಅವರ ಕೊನೆಯಾಸೆ ಈಡೇರಿಸುವ ಜವಾಬ್ದಾರಿ ನಾಲ್ವರಿಗೆ ವಹಿಸಿದ್ದ ಟಾಟಾ

ಪಿಂಚಣಿದಾರರ ದೂರು ಅರ್ಜಿ ಸರಿಯಾಗಿ ಇತ್ಯರ್ಥ ಆಗಬೇಕು. ಆ ಅರ್ಜಿ ಸಂಬಂಧ ಏನೇನು ಕ್ರಮ ತೆಗೆದುಕೊಳ್ಳಲಾಯಿತು ಎಂಬ ವರದಿಯನ್ನು ತುಂಬಬೇಕು. ಜೊತೆಗೆ ಸಂಬಂಧಿತ ಮಾಹಿತಿ ಮತ್ತು ದಾಖಲೆಗಳನ್ನೂ ಸಲ್ಲಿಸಬೇಕಾಗುತ್ತದೆ ಎಂದು ಸಿಬ್ಬಂದಿ ಸಚಿವಾಲಯ ಬಹಳ ಸ್ಪಷ್ಟವಾಗಿ ಹೇಳಿದೆ.

‘ಸಚಿವಾಲಯಗಳು ಅಥವಾ ಇಲಾಖೆಗಳು ಪೋರ್ಟಲ್​ನಲ್ಲಿ ಬಾಕಿ ಉಳಿದಿರುವ ಪಿಂಚಣಿ ಸಂಬಂಧಿತ ದೂರುಗಳನ್ನು ಪ್ರತೀ ತಿಂಗಳು ಪರಾಮರ್ಶಿಸಬೇಕು. ಅವರುಗಳು ನಿಗದಿತ ಗಡುವಿನೊಳಗೆ ಇತ್ಯರ್ಥ ಆಗಿರುವುದನ್ನು ಖಚಿತಪಡಿಸಿಕೊಳ್ಳಬೇಕು,’ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಗಮನಿಸಿ, ಮುಂಗಡ ರೈಲು ಟಿಕೆಟ್ ಬುಕಿಂಗ್ ಅವಧಿ ಈಗ 60 ದಿನ ಮಾತ್ರ; ಮೂರು ತಿಂಗಳ ಮುಂಚೆ ಬುಕಿಂಗ್ ಅಸಾಧ್ಯ

ಒಂದು ವೇಳೆ ದೂರುದಾರರಿಗೆ ತಮ್ಮ ಅರ್ಜಿ ಸರಿಯಾಗಿ ಇತ್ಯರ್ಥ ಆಗದೇ ಸಮಾಪ್ತಿಗೊಳಿಸಲಾಗಿದೆ ಎಂದನಿಸಿದಲ್ಲಿ, ಅದಾಗಿ 30 ದಿನದೊಳಗೆ ಅವರು ಮನವಿ ಸಲ್ಲಿಸಬಹುದು. ಇದರ ಸಂಬಂಧಿತ ಮೇಲ್ಮನವಿ ಪ್ರಾಧಿಕಾರವು (ಅಪೆಲ್ಲೇಟ್ ಅಥಾರಿಟಿ) 30 ದಿನದೊಳಗೆ ಈ ಮನವಿಯನ್ನು ಪರಿಶೀಲಿಸಿ ಇತ್ಯರ್ಥಪಡಿಸಲಿದೆ ಎನ್ನುವ ಅಂಶವೂ ಸಿಬ್ಬಂದಿ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳಲ್ಲಿ ಇದೆ.

ಪಿಂಚಣಿ ವಿಳಂಬವಾಗಿ ಬರುತ್ತಿದೆ ಎಂಬಿತ್ಯಾದಿ ಸಾಕಷ್ಟು ದೂರುಗಳು ಬರುತ್ತಿದ್ದ ಕಾರಣ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು