AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar PAN Linking: ಆಧಾರ್ ಮತ್ತು ಪ್ಯಾನ್​ನಲ್ಲಿ ಹೆಸರು ಇತ್ಯಾದಿ ಮ್ಯಾಚ್ ಆಗದೇ ಲಿಂಕ್ ಆಗುತ್ತಿಲ್ಲವಾ? ಐಟಿ ಇಲಾಖೆ ಕೊಟ್ಟ ಸಲಹೆಗಳಿವು

How To Update Aadhaar and PAN Card Data: ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್​ನಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಇತ್ಯಾದಿ ಡೆಮೋಗ್ರಾಫಿಕ್ ಮಾಹಿತಿಗಳು ಸರಿಹೊಂದದೇ, ಅವೆರಡೂ ಲಿಂಕ್ ಆಗುತ್ತಿಲ್ಲ ಎಂಬ ದೂರುಗಳಿವೆ. ಇಂಥ ಸಂದರ್ಭದಲ್ಲಿ ಏನು ಮಾಡಬೇಕು ಎಂದು ಐಟಿ ಇಲಾಖೆ ಕೆಲ ಸಲಹೆ ಕೊಟ್ಟಿದೆ...

Aadhaar PAN Linking: ಆಧಾರ್ ಮತ್ತು ಪ್ಯಾನ್​ನಲ್ಲಿ ಹೆಸರು ಇತ್ಯಾದಿ ಮ್ಯಾಚ್ ಆಗದೇ ಲಿಂಕ್ ಆಗುತ್ತಿಲ್ಲವಾ? ಐಟಿ ಇಲಾಖೆ ಕೊಟ್ಟ ಸಲಹೆಗಳಿವು
ಆಧಾರ್ ಪ್ಯಾನ್ ನಂಬರ್ ಲಿಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 27, 2023 | 8:32 AM

Share

ಆಧಾರ್ ಮತ್ತು ಪ್ಯಾನ್ ನಂಬರ್ ಲಿಂಕ್ ಮಾಡಲು (Aadhaar and Pan Linking) ಜೂನ್ 30 ಕೊನೆಯ ದಿನ. ಆಧಾರ್ ಜೊತೆ ಲಿಂಕ್ ಆಗಿಲ್ಲದ ಪ್ಯಾನ್ ನಂಬರ್​ಗಳು ನಿಷ್ಕ್ರಿಯಗೊಳ್ಳುತ್ತವೆ. ನೀವು ಐಟಿ ರಿಟರ್ನ್ ಫೈಲ್ ಮಾಡಲು ಇತ್ಯಾದಿ ಕಾರ್ಯಗಳಿಗೆ ಈ ನಿಷ್ಕ್ರಿಯ ಪ್ಯಾನ್ ನಂಬರ್ ಬಳಸುತ್ತಿದ್ದರೆ ಆಗ ಸಮಸ್ಯೆ ತಲೆದೋರುತ್ತದೆ. ಡೆಡ್​ಲೈನ್ ಸನಿಹ ಬಂದಿದ್ದರೂ ಬಹಳ ಮಂದಿ ಪ್ಯಾನ್ ಕಾರ್ಡ್​ದಾರರು ಆಧಾರ್​ಗೆ ಲಿಂಕ್ ಮಾಡಿಸಿಲ್ಲ. ನಾನಾ ಕಾರಣಕ್ಕೆ ಆಧಾರ್ ಮತ್ತು ಪ್ಯಾನ್ ಲಿಂಕ್ ಆಗುತ್ತಿಲ್ಲ. ಇಲಾಖೆಯ ದೋಷದಿಂದಲೇ ಒಂದೇ ಪ್ಯಾನ್ ನಂಬರ್ ಒಬ್ಬರಿಗಿಂತ ಹೆಚ್ಚು ಮಂದಿಗೆ ಅಲಾಟ್ ಆಗಿಹೋಗಿರುವುದು, ಪ್ಯಾನ್ ಮತ್ತು ಆಧಾರ್ ದತ್ತಾಂಶದಲ್ಲಿ ಹೊಂದಾಣಿಕೆ ಇಲ್ಲದಿರುವುದು ಇತ್ಯಾದಿ ಕಾರಣಕ್ಕೆ ಲಿಂಕ್ ಆಗುತ್ತಿಲ್ಲ ಎಂಬ ದೂರುಗಳಿವೆ. ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್​ನಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಇತ್ಯಾದಿ ಡೆಮೋಗ್ರಾಫಿಕ್ ಮಾಹಿತಿಗಳು ಸರಿಹೊಂದೇ, ಅವೆರಡೂ ಲಿಂಕ್ ಆಗುತ್ತಿಲ್ಲ ಎನ್ನುವ ದೂರುಗಳೂ ಸಾಕಷ್ಟಿವೆ. ಇಂಥ ಒಂದು ಸಂದರ್ಭದಲ್ಲಿ ಏನು ಮಾಡಬೇಕು? ಆದಾಯ ತೆರಿಗೆ ಇಲಾಖೆ ಇದಕ್ಕೆ ಕೆಲ ಸಲಹೆ ನೀಡಿದೆ.

ಹೆಸರು ಇತ್ಯಾದಿ ವಿವರದಲ್ಲಿ ವ್ಯತ್ಯಾಸ ಇದ್ದರೆ ಏನು ಮಾಡಬೇಕು?

ಪ್ಯಾನ್ ಕಾರ್ಡ್​ನಲ್ಲಿರುವ ಮಾಹಿತಿ ಅಪ್​ಡೇಟ್ ಮಾಡುವುದು ಹೀಗೆ….

ಪ್ಯಾನ್ ಕಾರ್ಡ್​ನಲ್ಲಿರುವ ಮಾಹಿತಿಯನ್ನು ಆಧಾರ್​ಗೆ ಹೊಂದಿಕೆಯಾಗುವಂತೆ ಬದಲಾಯಿಸಬೇಕೆಂದಿದ್ದರೆ ಪ್ಯಾನ್​ನ ಪೋರ್ಟಲ್​ಗಳಲ್ಲಿ ಅವಕಾಶ ಇದೆ. ಎರಡು ಪೋರ್ಟಲ್​ಗಳ ಯುಆರ್​ಎಲ್ ಇಲ್ಲಿ ಕೆಳಕಾಣಿಸಿದಂತಿವೆ:

ಆಧಾರ್ ಕಾರ್ಡ್​ನಲ್ಲಿರುವ ಮಾಹಿತಿ ಅಪ್​ಡೇಟ್ ಮಾಡುವುದು ಹೀಗೆ….

ಪ್ಯಾನ್ ಕಾರ್ಡ್​ನಲ್ಲಿರುವ ನಿಮ್ಮ ವಿವರ ಸರಿಯಾಗಿದ್ದು ಆಧಾರ್ ಕಾರ್ಡ್​ನಲ್ಲಿ ಮಾಹಿತಿ ಬದಲಾಯಿಸಬೇಕೆಂದಿದ್ದರೆ ಯುಐಡಿಎಐ ವೆಬ್​ಸೈಟ್​ನಲ್ಲಿ ಅವಕಾಶ ಇದೆ. ಈ ವೆಬ್ ತಾಣಕ್ಕೆ ಲಾಗಿನ್ ಆಗಿ ನೀವು ಡೆಮೋಗ್ರಾಫಿಕ್ ಮಾಹಿತಿ ಪರಿಷ್ಕರಿಸಬಹುದು.

ಇದನ್ನೂ ಓದಿ: PM Kisan eKYC: ಪಿಎಂ ಕಿಸಾನ್ ಸ್ಕೀಮ್: ಇಕೆವೈಸಿ ಅಪ್​ಡೇಟ್ ಬಹಳ ಸುಲಭ; ಇಲ್ಲಿವೆ ವಿವಿಧ ವಿಧಾನಗಳು

ಪ್ಯಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್​ನಲ್ಲಿರುವ ಮಾಹಿತಿ ಪರಿಷ್ಕರಿಸಿದ ಬಳಿಕ ಆದಾಯ ತೆರಿಗೆ ಇಲಾಖೆಯ ಇಫೈಲಿಂಗ್ ಪೋರ್ಟಲ್​ಗೆ ಹೋಗಿ ಪ್ಯಾನ್ ಮತ್ತು ಆಧಾರ್ ನಂಬರ್ ಲಿಂಕ್ ಮಾಡಲು ಪ್ರಯತ್ನಿಸಬಹುದು. ಈ ಪೋರ್ಟಲ್​ನ ಲಿಂಕ್ ಇಲ್ಲಿದೆ:

eportal.incometax.gov.in/iec/foservices/#/pre-login/bl-link-aadhaar

ಐಟಿ ಪೋರ್ಟಲ್​ನಲ್ಲಿ ಆಧಾರ್ ಮತ್ತು ಪ್ಯಾನ್ ಲಿಂಕ್ ಮಾಡಲು ಇನ್ನೂ ಆಗುತ್ತಿಲ್ಲ ಎಂದರೆ….

ನೀವು ಪ್ಯಾನ್ ಮತ್ತು ಆಧಾರ್​ನಲ್ಲಿರುವ ಡೆಮಾಗ್ರಾಫಿಕ್ ಮಾಹಿತಿ ಸರಿಹೊಂದುವಂತೆ ಪರಿಷ್ಕರಿಸಿದ ಬಳಿಕವೂ ಆದಾಯ ತೆರಿಗೆ ಪೋರ್ಟಲ್​ನಲ್ಲಿ ಲಿಂಕ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದಲ್ಲಿ ನೇರವಾಗಿ ಪ್ಯಾನ್ ಸೆಂಟರ್​ಗೆ ಹೋಗಿ ಪ್ರಯತ್ನಿಸಬಹುದು.

ಪ್ಯಾನ್ ಸೇವಾ ನೀಡುಗರ ಯಾವುದಾದರೂ ಒಂದು ಕೇಂದ್ರಕ್ಕೆ ಹೋಗಿ ಅಲ್ಲಿ ಬಯೋಮೆಟ್ರಿಕ್ ಅಥೆಂಟಿಕೇಶನ್ ಮೂಲಕ ಆಧಾರ್ ಮತ್ತು ಪ್ಯಾನ್ ಲಿಂಕ್ ಮಾಡಬಹುದು. ಇದಕ್ಕೆ 50 ರೂ ಶುಲ್ಕ ಇರುತ್ತದೆ. ಇಲ್ಲಿ ಹೋಗುವಾಗ ನಿಮ್ಮ ಜೊತೆ ಪ್ಯಾನ್ ಮತ್ತು ಆಧಾರ್ ದಾಖಲೆಗಳು ಇರಲಿ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!