AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟಲ್ ಪೆನ್ಷನ್ ಯೋಜನೆ ಇನ್ನೂ 5 ವರ್ಷ ವಿಸ್ತರಣೆ; ಈ ಸ್ಕೀಮ್​ನಲ್ಲಿ ಪಿಂಚಣಿ ಪಡೆಯುವುದು ಹೇಗೆ?

Atal Pension Yojana: ಕಡಿಮೆ ಆದಾಯದ ಜನರಿಗೆಂದು ರೂಪಿಸಲಾಗಿರುವ ಅಟಲ್ ಪಿಂಚಣಿ ಯೋಜನೆಯನ್ನು 2030-31ರವರೆಗೂ ವಿಸ್ತರಿಸಲಾಗಿದೆ. ಐಟಿಆರ್ ಫೈಲ್ ಮಾಡದೇ ಇರುವ, ಮತ್ತು 18ರಿಂದ 40 ವರ್ಷದ ವ್ಯಕ್ತಿಗಳು ಈ ಸ್ಕೀಮ್​ನಲ್ಲಿ ಹೂಡಿಕೆ ಮಾಡಬಹುದು. ಕನಿಷ್ಠ ಹೂಡಿಕೆ 42 ರೂ ಮಾತ್ರವೇ. ಮಾಸಿಕ ಪಿಂಚಣಿ 1,000 ರೂನಿಂದ 5,000 ರೂವರೆಗೂ ಬರುತ್ತದೆ.

ಅಟಲ್ ಪೆನ್ಷನ್ ಯೋಜನೆ ಇನ್ನೂ 5 ವರ್ಷ ವಿಸ್ತರಣೆ; ಈ ಸ್ಕೀಮ್​ನಲ್ಲಿ ಪಿಂಚಣಿ ಪಡೆಯುವುದು ಹೇಗೆ?
ಅಟಲ್ ಪೆನ್ಷನ್ ಯೋಜನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 26, 2026 | 7:32 PM

Share

ನವದೆಹಲಿ, ಜನವರಿ 26: ಕೇಂದ್ರ ಸರ್ಕಾರದಿಂದ ನಡೆಸಲಾಗುವ ಅಟಲ್ ಪೆನ್ಷನ್ ಯೋಜನೆಯನ್ನು (APY- Atal Pension Yojana) ಇನ್ನೂ ಐದು ವರ್ಷ ವಿಸ್ತರಣೆ ಮಾಡಲಾಗಿದೆ. 2030-31ರವರೆಗೂ ಈ ರಿಟೈರ್ಮೆಂಟ್ ಸ್ಕೀಮ್ ಮುಂದುವರಿಸಲು ಕೇಂದ್ರ ಸಂಪುಟ ಸಮ್ಮತಿ ಕೊಟ್ಟಿರುವುದು ತಿಳಿದುಬಂದಿದೆ. ನ್ಯಾಷನಲ್ ಪೆನ್ಷನ್ ಸಿಸ್ಟಂಗಿಂತ ಎಪಿವೈ ಭಿನ್ನವಾದ ಪಿಂಚಣಿ ಯೋಜನೆ. ಎನ್​ಪಿಎಸ್​ನಲ್ಲಿ ಯಾರು ಬೇಕಾದರೂ ಹೂಡಿಕೆ ಮಾಡಬಹುದು. ಆದರೆ, ಅಟಲ್ ಪೆನ್ಷನ್ ಯೋಜನೆಯು ಬಡವರು ಹಾಗೂ ಕೆಳ ಮಧ್ಯಮ ವರ್ಗದವರಿಗೆ ಗುರಿಯಾಗಿಸಿದೆ.

ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಜನರಿಗೆ ಅಟಲ್ ಪೆನ್ಷನ್ ಯೋಜನೆ ಹೇಳಿ ಮಾಡಿಸಿದ್ದಾಗಿದೆ. ಆದಾಯ ತೆರಿಗೆ ಪಾವತಿ ಮಾಡದೇ ಇರುವಂತಹವರು ಇದರಲ್ಲಿ ಹೂಡಿಕೆ ಮಾಡಬಹುದು. ಈ ಎಪಿವೈ ಯೋಜನೆಯಡಿ 1,000 ರೂನಿಂದ 5,000 ರೂವರೆಗೆ ಮಾಸಿಕ ಪಿಂಚಣಿ ಪಡೆಯಲು ಅವಕಾಶ ಇರುತ್ತದೆ. ಇದಕ್ಕೆ ಪಾವತಿಸುವ ಪ್ರೀಮಿಯಮ್ ಬಹಳ ಕಡಿಮೆ ಮೊತ್ತದ್ದು.

ಇದನ್ನೂ ಓದಿ: ಸುಕನ್ಯಾ ಸಮೃದ್ಧಿ ಯೋಜನೆಗೆ 11 ವರ್ಷ; ಈವರೆಗೆ ಶುರುವಾಗಿದ್ದು ನಾಲ್ಕೂವರೆ ಕೋಟಿ ಅಕೌಂಟ್; ಸ್ಕೀಮ್ ಲಾಭಗಳೇನು?

ಏನಿದು ಅಟಲ್ ಪೆನ್ಷನ್ ಯೋಜನೆ?

18 ವರ್ಷದಿಂದ 40 ವರ್ಷದೊಳಗಿನ ಯಾವುದೇ ಭಾರತೀಯ ನಾಗರಿಕರು ಅಟಲ್ ಪೆನ್ಷನ್ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಆಧಾರ್​ಗೆ ಲಿಂಕ್ ಆದ ಬ್ಯಾಂಕ್ ಅಕೌಂಟ್ ಮತ್ತು ಮೊಬೈಲ್ ನಂಬರ್ ಇರಬೇಕು. ಕನಿಷ್ಠ ಪಾವತಿ ಅವಧಿ 20 ವರ್ಷ ಇರುತ್ತದೆ. 60 ವರ್ಷ ವಯಸ್ಸಾಗುವವರೆಗೂ ಪ್ರೀಮಿಯಮ್ ಕಟ್ಟಬೇಕು. 60ರ ವಯಸ್ಸು ರಿಟೈರ್ಮೆಂಟ್ ಏಜ್. ಅಲ್ಲಿಂದ ಪಿಂಚಣಿ ಪ್ರಾರಂಭವಾಗುತ್ತದೆ.

ಈ ಯೋಜನೆಯಲ್ಲಿ ನೀವು 18ರ ವಯಸ್ಸಿಗೆ ಹೂಡಿಕೆ ಆರಂಭಿಸಿದರೆ ಕನಿಷ್ಠ ಪ್ರೀಮಿಯಮ್ ಹಣ ಕೇವಲ 42 ರೂ. ಈ ಹಣಕ್ಕೆ ನಿಮಗೆ ಸಿಗುವ ಮಾಸಿಕ ಪಿಂಚಣಿ 1,000 ರೂ. ನಿಮಗೆ 5,000 ರೂ ಪಿಂಚಣಿ ಬೇಕೆಂದರೆ ಮಾಸಿಕವಾಗಿ 210 ರೂ ಪಾವತಿಸಬೇಕು.

ಹೆಚ್ಚು ವಯಸ್ಸಾದ ನಂತರ ಸ್ಕೀಮ್​ನಲ್ಲಿ ಹೂಡಿಕೆ ಆರಂಭಿಸಿದರೆ ಪ್ರೀಮಿಯಮ್ ಹಣ ಹೆಚ್ಚುತ್ತಾ ಹೋಗುತ್ತದೆ. ಈ ಸ್ಕೀಮ್​ನಲ್ಲಿ ಗರಿಷ್ಠ ಮಾಸಿಕ ಪಿಂಚಣಿ 5,000 ರೂ ಇರುತ್ತದೆ.

ಇದನ್ನೂ ಓದಿ: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ

ಪೆನ್ಷನ್ ಸದಸ್ಯರು ಸಾಯುವವರೆಗೂ ಪಿಂಚಣಿ ಸಿಗುತ್ತಾ ಹೋಗುತ್ತದೆ. ಅವರು ಸಾವನ್ನಪ್ಪಿದರೆ ಅವರ ಸಂಗಾತಿಗೆ ಪಿಂಚಣಿ ಮುಂದವರಿಯುತ್ತದೆ. ಅವರೂ ಸತ್ತರೆ ಆಗ ನಿಗದಿತ ನಾಮಿನಿಯ ವ್ಯಕ್ತಿಗೆ ಈ ಪಿಂಚಣಿ ವರ್ಗವಾಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!