AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂಜೆಎವೈ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​​ನಲ್ಲಿ ಒಳಗೊಳ್ಳದ ಚಿಕಿತ್ಸೆಗಳ್ಯಾವುವು? ಇಲ್ಲಿದೆ ಕೆಲ ಮಾಹಿತಿ

Diseases and treatments not covered in AB-JAY health insurance scheme: ದುರ್ಬಲರು, ಹಿಂದುಳಿದವರು, ನಿರ್ಗತಿಕರು, ವೃದ್ಧರು ಮೊದಲಾದ ಅಶಕ್ತ ಜನರಿಗೆ ಸರ್ಕಾರ ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ ಜಾರಿಗೆ ತಂದಿದೆ. ಈ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​​ನಲ್ಲಿ ಒಂದು ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರುವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಈ ಯೋಜನೆಯಲ್ಲಿ ಕೆಲವಿಷ್ಟು ರೋಗ ಮತ್ತು ಚಿಕಿತ್ಸೆಗಳಿಗೆ ಕವರೇಜ್ ಇರುವುದಿಲ್ಲ.

ಪಿಎಂಜೆಎವೈ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​​ನಲ್ಲಿ ಒಳಗೊಳ್ಳದ ಚಿಕಿತ್ಸೆಗಳ್ಯಾವುವು? ಇಲ್ಲಿದೆ ಕೆಲ ಮಾಹಿತಿ
ಎಬಿ ಜೆಎವೈ ಇನ್ಷೂರೆನ್ಸ್ ಸ್ಕೀಮ್​
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 14, 2025 | 6:40 PM

ಕೇಂದ್ರ ಸರ್ಕಾರ ನಿರ್ವಹಿಸುವ ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆ (AB- PMJAY) ದೇಶದ ಕೋಟ್ಯಂತರ ಜನರಿಗೆ ಆಪದ್ಬಾಂಧವ ಎನಿಸಿದೆ. ಬಡವರು, ದುರ್ಬಲರು, ನಿರ್ಗತಿಕರು, ಹಿಂದುಳಿದವರು, ಹಿರಿಯ ನಾಗರಿಕರಿಗೆ ಹೆಲ್ತ್ ಇನ್ಷೂರೆನ್ಸ್ ನೀಡಲಾಗುತ್ತದೆ. ಇತ್ತೀಚೆಗಷ್ಟೇ ಸರ್ಕಾರವು ಈ ಸ್ಕೀಮ್ ಅನ್ನು 70 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲರಿಗೂ ವಿಸ್ತರಿಸಿದೆ. ಈ ಯೋಜನೆಯಲ್ಲಿ ಪ್ರತೀ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂ ಹೆಲ್ತ್ ಕವರೇಜ್ ಇರುತ್ತದೆ.

ಜೀವಕ್ಕೆ ಆಪತ್ತು ತರುವ ಬಹುತೇಕ ಎಲ್ಲಾ ಆರೋಗ್ಯ ತೊಂದರೆಗಳಿಗೆ ನೀಡಲಾಗುವ ಚಿಕಿತ್ಸೆಯ ವೆಚ್ಚವನ್ನು ಈ ಇನ್ಷೂರೆನ್ಸ್​​ನಲ್ಲಿ ಕವರ್ ಮಾಡಲಾಗುತ್ತದೆ. ಆಸ್ಪತ್ರೆಗೆ ದಾಖಲಾಗಿ ಪಡೆಯಲಾಗುವ ಬಹುತೇಕ ಎಲ್ಲಾ ಚಿಕಿತ್ಸೆಗಳು ಈ ಇನ್ಷೂರೆನ್ಸ್ ವ್ಯಾಪ್ತಿಗೆ ಬರುತ್ತವೆ. ಕೆಲವಿಷ್ಟು ಚಿಕಿತ್ಸೆಗಳು ಈ ವ್ಯಾಪ್ತಿಯಿಂದ ಹೊರಗಿವೆ.

ಇದನ್ನೂ ಓದಿ: ಒಮ್ಮೆಯೂ ಸಾಲ ಮಾಡದವನಿಗೆ ಸಿಗಲ್ವಾ ಸಾಲ? ಇರಲ್ವಾ ಕ್ರೆಡಿಟ್ ಸ್ಕೋರ್? ಇಲ್ಲಿದೆ ಉತ್ತರ

ಇದನ್ನೂ ಓದಿ
Image
ಹಣಕಾಸು ಭದ್ರತೆಗೆ 1% ತಂತ್ರ: ನಿತಿನ್ ಕಾಮತ್
Image
ಯುಎಎನ್ ಆ್ಯಕ್ಟಿವೇಶನ್​​ಗೆ ಫೇಸ್ ಅಥೆಂಟಿಕೇಶನ್ ಫೀಚರ್
Image
ಒಂದಕ್ಕಿಂತ ಹೆಚ್ಚು ಇನ್ಷೂರೆನ್ಸ್ ಪಾಲಿಸಿ ಬಳಸುವುದು ಹೇಗೆ?
Image
ಇನ್ಷೂರೆನ್ಸ್ ಪಾಲಿಸಿಯ ಫ್ರೀ ಲುಕ್ ಅವಧಿ ಹೆಚ್ಚಳ ಸಾಧ್ಯತೆ

ಎಬಿ-ಪಿಎಂಜೆಎವೈ ಹೆಲ್ತ್ ಇನ್ಷೂರೆನ್ಸ್​ನಿಂದ ಹೊರಗಿರುವ ರೋಗಗಳು ಮತ್ತು ಚಿಕಿತ್ಸೆಗಳು

ನ್ಯಾಷನಲ್ ಹೆಲ್ತ್ ಬೆನಿಫಿಟ್ ಪ್ಯಾಕೇಜ್ ಗೈಡ್​​ಲೈನ್ಸ್ ಪ್ರಕಾರ ಯಾವ್ಯಾವ ರೋಗಗಳು ಹಾಗೂ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಇನ್ಷೂರೆನ್ಸ್ ವ್ಯಾಪ್ತಿಯಿಂದ ಹೊರಗಿರುತ್ತವೆ ಎಂಬುದನ್ನು ಪಟ್ಟಿ ಮಾಡಿದೆ. ಅದರ ವಿವರ ಕೆಳಕಂಡಂತಿದೆ:

ಒಪಿಡಿ ಚಿಕಿತ್ಸೆಗೆ ಇನ್ಷೂರೆನ್ಸ್ ಇಲ್ಲ

ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲದ ಜ್ವರ, ನೆಗಡಿ ಇತ್ಯಾದಿ ಸಾಮಾನ್ಯ ಸಮಸ್ಯೆಗೆ ಒಪಿಡಿಯಲ್ಲಿ ಪಡೆಯಲಾಗುವ ರೆಗ್ಯುಲರ್ ಟ್ರೀಟ್ಮೆಂಟ್​​ಗೆ ಇನ್ಷೂರೆನ್ಸ್ ಕವರೇಜ್ ಇರುವುದಿಲ್ಲ.

ತಪಾಸಣೆಗೆ ಮಾತ್ರ ದಾಖಲಾದರೆ ಇನ್ಷೂರೆನ್ಸ್ ಇಲ್ಲ

ಕೆಲವೊಮ್ಮೆ ಆಸ್ಪತ್ರೆಯಲ್ಲಿ ರೋಗಿಯನ್ನು ದಾಖಲು ಮಾಡಿಕೊಂಡು ಸಂಪೂರ್ಣ ತಪಾಸಣೆ ಮಾಡಿ, ವಿಟಮಿನ್ ಇತ್ಯಾದಿ ಟಾನಿಕ್​​ಗಳನ್ನು ಕೊಟ್ಟು ಡಿಸ್​​ಚಾರ್ಜ್ ಮಾಡುವುದುಂಟು. ಇಂಥ ಟ್ರೀಟ್ಮೆಂಟ್ ಅಥವಾ ವೆಚ್ಚಕ್ಕೆ ಆಯುಷ್ಮಾನ್ ಭಾರತ್ ಇನ್ಷೂರೆನ್ಸ್ ಕವರೇಜ್ ಇರುವುದಿಲ್ಲ.

ಇದನ್ನೂ ಓದಿ: 1 ಪರ್ಸೆಂಟ್ ತಂತ್ರ: ಇದು ಹಣಕಾಸು ಭದ್ರತೆಗೆ ನಿತಿನ್ ಕಾಮತ್ ಸೂತ್ರ

ದಂತ ಚಿಕಿತ್ಸೆಗೆ ಇನ್ಷೂರೆನ್ಸ್ ಕವರೇಜ್ ಇಲ್ಲ

ಹೆಚ್ಚಿನ ದಂತ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ ಅಡಿ ಇನ್ಷೂರೆನ್ಸ್ ವ್ಯಾಪ್ತಿಗೆ ಬರುವುದಿಲ್ಲ.

ಸಂತಾನಹೀನತೆಯ ಸಮಸ್ಯೆ, ಲಸಿಕೆ ಯೋಜನೆ, ಸೌಂದರ್ಯವರ್ದಕ ಕಾಸ್ಮೆಟಿಕ್ ಸರ್ಜರಿ, ಶಿಶುಗಳ ಶಿಶ್ನ ಚರ್ಮ ತೆಗೆಯುವಿಕೆ, ಕೃತಕ ಉಸಿರಾಟದಲ್ಲಿರುವವರಿಗೆ ಇನ್ಷೂರೆನ್ಸ್ ಕವರೇಜ್ ಸಿಗುವುದಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಎಬಿ ಜೆಎವೈ ಇನ್ಷೂರೆನ್ಸ್ ಸ್ಕೀಮ್​​ನ ಹೆಚ್ಚಿನ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ: pmjay.gov.in/

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ