AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂಜೆಎವೈ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​​ನಲ್ಲಿ ಒಳಗೊಳ್ಳದ ಚಿಕಿತ್ಸೆಗಳ್ಯಾವುವು? ಇಲ್ಲಿದೆ ಕೆಲ ಮಾಹಿತಿ

Diseases and treatments not covered in AB-JAY health insurance scheme: ದುರ್ಬಲರು, ಹಿಂದುಳಿದವರು, ನಿರ್ಗತಿಕರು, ವೃದ್ಧರು ಮೊದಲಾದ ಅಶಕ್ತ ಜನರಿಗೆ ಸರ್ಕಾರ ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ ಜಾರಿಗೆ ತಂದಿದೆ. ಈ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​​ನಲ್ಲಿ ಒಂದು ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರುವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಈ ಯೋಜನೆಯಲ್ಲಿ ಕೆಲವಿಷ್ಟು ರೋಗ ಮತ್ತು ಚಿಕಿತ್ಸೆಗಳಿಗೆ ಕವರೇಜ್ ಇರುವುದಿಲ್ಲ.

ಪಿಎಂಜೆಎವೈ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​​ನಲ್ಲಿ ಒಳಗೊಳ್ಳದ ಚಿಕಿತ್ಸೆಗಳ್ಯಾವುವು? ಇಲ್ಲಿದೆ ಕೆಲ ಮಾಹಿತಿ
ಎಬಿ ಜೆಎವೈ ಇನ್ಷೂರೆನ್ಸ್ ಸ್ಕೀಮ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 14, 2025 | 6:40 PM

Share

ಕೇಂದ್ರ ಸರ್ಕಾರ ನಿರ್ವಹಿಸುವ ಆಯುಷ್ಮಾನ್ ಭಾರತ್ ಪಿಎಂ ಜನ್ ಆರೋಗ್ಯ ಯೋಜನೆ (AB- PMJAY) ದೇಶದ ಕೋಟ್ಯಂತರ ಜನರಿಗೆ ಆಪದ್ಬಾಂಧವ ಎನಿಸಿದೆ. ಬಡವರು, ದುರ್ಬಲರು, ನಿರ್ಗತಿಕರು, ಹಿಂದುಳಿದವರು, ಹಿರಿಯ ನಾಗರಿಕರಿಗೆ ಹೆಲ್ತ್ ಇನ್ಷೂರೆನ್ಸ್ ನೀಡಲಾಗುತ್ತದೆ. ಇತ್ತೀಚೆಗಷ್ಟೇ ಸರ್ಕಾರವು ಈ ಸ್ಕೀಮ್ ಅನ್ನು 70 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲರಿಗೂ ವಿಸ್ತರಿಸಿದೆ. ಈ ಯೋಜನೆಯಲ್ಲಿ ಪ್ರತೀ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂ ಹೆಲ್ತ್ ಕವರೇಜ್ ಇರುತ್ತದೆ.

ಜೀವಕ್ಕೆ ಆಪತ್ತು ತರುವ ಬಹುತೇಕ ಎಲ್ಲಾ ಆರೋಗ್ಯ ತೊಂದರೆಗಳಿಗೆ ನೀಡಲಾಗುವ ಚಿಕಿತ್ಸೆಯ ವೆಚ್ಚವನ್ನು ಈ ಇನ್ಷೂರೆನ್ಸ್​​ನಲ್ಲಿ ಕವರ್ ಮಾಡಲಾಗುತ್ತದೆ. ಆಸ್ಪತ್ರೆಗೆ ದಾಖಲಾಗಿ ಪಡೆಯಲಾಗುವ ಬಹುತೇಕ ಎಲ್ಲಾ ಚಿಕಿತ್ಸೆಗಳು ಈ ಇನ್ಷೂರೆನ್ಸ್ ವ್ಯಾಪ್ತಿಗೆ ಬರುತ್ತವೆ. ಕೆಲವಿಷ್ಟು ಚಿಕಿತ್ಸೆಗಳು ಈ ವ್ಯಾಪ್ತಿಯಿಂದ ಹೊರಗಿವೆ.

ಇದನ್ನೂ ಓದಿ: ಒಮ್ಮೆಯೂ ಸಾಲ ಮಾಡದವನಿಗೆ ಸಿಗಲ್ವಾ ಸಾಲ? ಇರಲ್ವಾ ಕ್ರೆಡಿಟ್ ಸ್ಕೋರ್? ಇಲ್ಲಿದೆ ಉತ್ತರ

ಇದನ್ನೂ ಓದಿ
Image
ಹಣಕಾಸು ಭದ್ರತೆಗೆ 1% ತಂತ್ರ: ನಿತಿನ್ ಕಾಮತ್
Image
ಯುಎಎನ್ ಆ್ಯಕ್ಟಿವೇಶನ್​​ಗೆ ಫೇಸ್ ಅಥೆಂಟಿಕೇಶನ್ ಫೀಚರ್
Image
ಒಂದಕ್ಕಿಂತ ಹೆಚ್ಚು ಇನ್ಷೂರೆನ್ಸ್ ಪಾಲಿಸಿ ಬಳಸುವುದು ಹೇಗೆ?
Image
ಇನ್ಷೂರೆನ್ಸ್ ಪಾಲಿಸಿಯ ಫ್ರೀ ಲುಕ್ ಅವಧಿ ಹೆಚ್ಚಳ ಸಾಧ್ಯತೆ

ಎಬಿ-ಪಿಎಂಜೆಎವೈ ಹೆಲ್ತ್ ಇನ್ಷೂರೆನ್ಸ್​ನಿಂದ ಹೊರಗಿರುವ ರೋಗಗಳು ಮತ್ತು ಚಿಕಿತ್ಸೆಗಳು

ನ್ಯಾಷನಲ್ ಹೆಲ್ತ್ ಬೆನಿಫಿಟ್ ಪ್ಯಾಕೇಜ್ ಗೈಡ್​​ಲೈನ್ಸ್ ಪ್ರಕಾರ ಯಾವ್ಯಾವ ರೋಗಗಳು ಹಾಗೂ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಇನ್ಷೂರೆನ್ಸ್ ವ್ಯಾಪ್ತಿಯಿಂದ ಹೊರಗಿರುತ್ತವೆ ಎಂಬುದನ್ನು ಪಟ್ಟಿ ಮಾಡಿದೆ. ಅದರ ವಿವರ ಕೆಳಕಂಡಂತಿದೆ:

ಒಪಿಡಿ ಚಿಕಿತ್ಸೆಗೆ ಇನ್ಷೂರೆನ್ಸ್ ಇಲ್ಲ

ಆಸ್ಪತ್ರೆಗೆ ದಾಖಲಾಗುವ ಅವಶ್ಯಕತೆ ಇಲ್ಲದ ಜ್ವರ, ನೆಗಡಿ ಇತ್ಯಾದಿ ಸಾಮಾನ್ಯ ಸಮಸ್ಯೆಗೆ ಒಪಿಡಿಯಲ್ಲಿ ಪಡೆಯಲಾಗುವ ರೆಗ್ಯುಲರ್ ಟ್ರೀಟ್ಮೆಂಟ್​​ಗೆ ಇನ್ಷೂರೆನ್ಸ್ ಕವರೇಜ್ ಇರುವುದಿಲ್ಲ.

ತಪಾಸಣೆಗೆ ಮಾತ್ರ ದಾಖಲಾದರೆ ಇನ್ಷೂರೆನ್ಸ್ ಇಲ್ಲ

ಕೆಲವೊಮ್ಮೆ ಆಸ್ಪತ್ರೆಯಲ್ಲಿ ರೋಗಿಯನ್ನು ದಾಖಲು ಮಾಡಿಕೊಂಡು ಸಂಪೂರ್ಣ ತಪಾಸಣೆ ಮಾಡಿ, ವಿಟಮಿನ್ ಇತ್ಯಾದಿ ಟಾನಿಕ್​​ಗಳನ್ನು ಕೊಟ್ಟು ಡಿಸ್​​ಚಾರ್ಜ್ ಮಾಡುವುದುಂಟು. ಇಂಥ ಟ್ರೀಟ್ಮೆಂಟ್ ಅಥವಾ ವೆಚ್ಚಕ್ಕೆ ಆಯುಷ್ಮಾನ್ ಭಾರತ್ ಇನ್ಷೂರೆನ್ಸ್ ಕವರೇಜ್ ಇರುವುದಿಲ್ಲ.

ಇದನ್ನೂ ಓದಿ: 1 ಪರ್ಸೆಂಟ್ ತಂತ್ರ: ಇದು ಹಣಕಾಸು ಭದ್ರತೆಗೆ ನಿತಿನ್ ಕಾಮತ್ ಸೂತ್ರ

ದಂತ ಚಿಕಿತ್ಸೆಗೆ ಇನ್ಷೂರೆನ್ಸ್ ಕವರೇಜ್ ಇಲ್ಲ

ಹೆಚ್ಚಿನ ದಂತ ಚಿಕಿತ್ಸೆಗಳು ಆಯುಷ್ಮಾನ್ ಭಾರತ್ ಜನ್ ಆರೋಗ್ಯ ಯೋಜನೆ ಅಡಿ ಇನ್ಷೂರೆನ್ಸ್ ವ್ಯಾಪ್ತಿಗೆ ಬರುವುದಿಲ್ಲ.

ಸಂತಾನಹೀನತೆಯ ಸಮಸ್ಯೆ, ಲಸಿಕೆ ಯೋಜನೆ, ಸೌಂದರ್ಯವರ್ದಕ ಕಾಸ್ಮೆಟಿಕ್ ಸರ್ಜರಿ, ಶಿಶುಗಳ ಶಿಶ್ನ ಚರ್ಮ ತೆಗೆಯುವಿಕೆ, ಕೃತಕ ಉಸಿರಾಟದಲ್ಲಿರುವವರಿಗೆ ಇನ್ಷೂರೆನ್ಸ್ ಕವರೇಜ್ ಸಿಗುವುದಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಎಬಿ ಜೆಎವೈ ಇನ್ಷೂರೆನ್ಸ್ ಸ್ಕೀಮ್​​ನ ಹೆಚ್ಚಿನ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ: pmjay.gov.in/

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್