AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಅಕೌಂಟ್, ಫಿಕ್ಸೆಡ್ ಡೆಪಾಸಿಟ್ ನಾಮಿನಿ ನಿಯಮದಲ್ಲಿ ಬದಲಾವಣೆ; ಮಸೂದೆ ಮಂಡನೆಗೆ ಕೇಂದ್ರ ಸಜ್ಜು

Banking laws amendment bill 2024: ಬ್ಯಾಂಕ್ ಖಾತೆ ಮತ್ತು ಫಿಕ್ಸೆಡ್ ಡೆಪಾಸಿಟ್ ನಾಮಿನಿ ನಿಯಮಗಳಲ್ಲಿ ಸರ್ಕಾರ ಬದಲಾವಣೆ ಮಾಡುತ್ತಿದೆ. ಕ್ಲೈಮ್ ಆಗದೇ ಬ್ಯಾಂಕ್ ಅಕೌಂಟ್ ಮತ್ತು ಎಫ್​ಡಿಯಲ್ಲಿ ಹಣ ಉಳಿಯುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಬ್ಯಾಂಕಿಂಗ್ ಕಾನೂನು ತಿದ್ದುಪಡಿ ಮಸೂದೆ ರೂಪಿಸಲಾಗಿದ್ದು ಈ ಅಧಿವೇಶನದಲ್ಲಿ ಸಂಸತ್​ನಲ್ಲಿ ಅನುಮೋದನೆಗೆ ಬರಲಿದೆ.

ಬ್ಯಾಂಕ್ ಅಕೌಂಟ್, ಫಿಕ್ಸೆಡ್ ಡೆಪಾಸಿಟ್ ನಾಮಿನಿ ನಿಯಮದಲ್ಲಿ ಬದಲಾವಣೆ; ಮಸೂದೆ ಮಂಡನೆಗೆ ಕೇಂದ್ರ ಸಜ್ಜು
ಡೆಪಾಸಿಟ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 25, 2024 | 3:36 PM

Share

ನವದೆಹಲಿ, ನವೆಂಬರ್ 25: ಕೇಂದ್ರ ಸರ್ಕಾರ ಬ್ಯಾಂಕ್ ಖಾತೆ ಮತ್ತು ಫಿಕ್ಸೆಡ್ ಡೆಪಾಸಿಟ್ ಖಾತೆಗಳ ನಾಮಿನೇಶನ್ ನಿಯಮಗಳಲ್ಲಿ ಬದಲಾವಣೆ ತರಲು ಹೊರಟಿದೆ. ಬ್ಯಾಂಕಿಂಗ್ ಕಾನೂನು ತಿದ್ದುಪಡಿ ಮಸೂದೆಯನ್ನು ಸಂಸತ್​ನಲ್ಲಿ ಮಂಡಿಸಲಾಗುತ್ತಿದೆ. ಇವತ್ತು ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮಸೂದೆಯನ್ನು ಲೋಕಸಭೆಯಲ್ಲಿ ಪ್ರಸ್ತುತಪಡಿಸುವ ನಿರೀಕ್ಷೆ ಇದೆ. ಮುಂಗಾರು ಅಧಿವೇಶನದಲ್ಲೇ ಈ ಮಸೂದೆಯನ್ನು ಸಂಸತ್​ಗೆ ಪರಿಚಯಿಸಲಾಗಿತ್ತು. ಬ್ಯಾಂಕಿಂಗ್ ಸೇವೆಯನ್ನು ಉತ್ತಮ ಪಡಿಸಲು ಕೆಲ ನಿಯಮ ಬದಲಾವಣೆ ಮಾಡಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಈ ಸಮೂದೆಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ.

ಬ್ಯಾಂಕಿಂಗ್ ಕಾನೂನು ತಿದ್ದುಪಡಿ ಮಸೂದೆಯ ನಿಯಮಗಳೇನಿವೆ?

ಒಂದು ಬ್ಯಾಂಕ್ ಖಾತೆಯಲ್ಲಿ ಸದ್ಯ ಒಬ್ಬ ನಾಮಿನಿಯನ್ನು ಹೆಸರಿಸುವ ಅವಕಾಶ ಇದೆ. ಈಗ ಬದಲಾದ ನಿಯಮದಲ್ಲಿ ನಾಲ್ಕು ನಾಮಿನಿಗಳನ್ನು ಹೆಸರಿಸುವ ಅವಕಾಶ ಸಿಗುತ್ತದೆ.

ಇದನ್ನೂ ಓದಿ: ನವೆಂಬರ್​ನಲ್ಲಿ ಪಿಎಂಐ ಔಟ್​ಪುಟ್ ಇಂಡೆಕ್ಸ್ 59.5; ಭಾರತದಲ್ಲಿ ಬಿಸಿನೆಸ್ ಚಟುವಟಿಕೆ ತೀವ್ರ

ಬ್ಯಾಂಕ್ ಅಕೌಂಟ್ ಮಾತ್ರವಲ್ಲ, ಫಿಕ್ಸೆಡ್ ಡೆಪಾಸಿಟ್​ನಲ್ಲೂ ನಾಲ್ಕು ನಾಮಿನಿಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಇಲ್ಲಿ ಎರಡು ರೀತಿಯ ನಾಮಿನೇಶನ್​ಗಳ ಆಯ್ಕೆ ಇರುತ್ತದೆ. ಮೊದಲನೆಯದರಲ್ಲಿ ಯಾವ್ಯಾವ ನಾಮಿನಿಗೆ ಆಸ್ತಿಯಲ್ಲಿ ಎಷ್ಟು ಪಾಲು ಎಂದು ನಮೂದಿಸಬಹುದು.

ಎರಡನೆಯ ಆಯ್ಕೆಯಲ್ಲಿ, ಒಂದಕ್ಕಿಂತ ಹೆಚ್ಚು ಸಂಖ್ಯೆಯಯಲ್ಲಿ ನಾಮಿನಿಗಳಿದ್ದರೆ ಪ್ರೈಮರಿ ನಾಮಿನಿಯೊಬ್ಬರನ್ನು ಆರಿಸಬಹುದು. ಆ ಪ್ರಾಥಮಿಕ ನಾಮಿನಿ ನಿಧನರಾದರೆ ಆಗ ನಂತರದ ನಾಮಿನಿಗಳಿಗೆ ಹಕ್ಕು ವರ್ಗಾವಣೆ ಆಗುತ್ತದೆ.

ಆರ್​ಬಿಐ ನಿಯಮಗಳ ಪ್ರಕಾರ ಫಿಕ್ಸೆಡ್ ಡೆಪಾಸಿಟ್​ಗೆ ನಾಮಿನೇಶನ್ ಕಡ್ಡಾಯವಾಗಿದೆ. ಖಾತೆದಾರ ಮೃತಪಟ್ಟಾಗ ಹಣ ವರ್ಗಾವಣೆ ಸುಲಭವಾಗಿ ಆಗುತ್ತದೆ. ನಾಮಿನೇಶನ್ ಕಡ್ಡಾಯವಾದರೂ ನಾಮಿನಿ ಹೆಸರಿಸುವುದು ಕಡ್ಡಾಯವಲ್ಲ. ಯಾರೂ ನಾಮಿನಿ ಇಲ್ಲವಾದಲ್ಲಿ ಅದನ್ನು ಘೋಷಿಸಬಹುದು. ನಾಮಿನಿ ಇಲ್ಲದ ಠೇವಣಿಯ ಹೂಡಿಕೆದಾರರು ಮೃತಪಟ್ಟರೆ ಕಾನೂನು ಪ್ರಕಾರ ಅವರ ವಾರಸುದಾರರು ಸೂಕ್ತ ದಾಖಲೆ ನೀಡಿ ಹಣ ಪಡೆದುಕೊಳ್ಳಲು ಸಾಧ್ಯ.

ಇದನ್ನೂ ಓದಿ: ಬ್ಯಾಂಕ್​ನಿಂದ ಕ್ಯಾಷ್ ಪಡೆದರೆ ತೆರಿಗೆ ಕಡಿತ ಆಗುತ್ತೆ… ನೀವು ತಿಳಿದಿರಲೇಬೇಕಾದ ನಿಯಮಗಳಿವು…

ದೊಡ್ಡಮೊತ್ತದ ಬಡ್ಡಿ ಎನ್ನುವ ವ್ಯಾಖ್ಯಾನದಲ್ಲಿ ಬದಲಾವಣೆ

ಬ್ಯಾಂಕಿಂಗ್ ಕಾನೂನು ತಿದ್ದುಪಡಿ ಮಸೂದೆಯಲ್ಲಿ ಬದಲಾಗಿರುವ ನಿಯಮಗಳಲ್ಲಿ ಸಬ್​ಸ್ಟ್ಯಾನ್ಷಿಯಲ್ ಇಂಟರೆಸ್ಟ್ ಎನ್ನುವ ಪದದ ವ್ಯಾಖ್ಯಾನವೂ ಇದೆ. ಸಬ್​ಸ್ಟ್ಯಾನ್ಷಿಯಲ್ ಇಂಟರೆಸ್ಟ್ ಅಥವಾ ದೊಡ್ಡಮೊತ್ತದ ಬಡ್ಡಿ ಎಂದರೆ ಅದು 5 ಲಕ್ಷ ರೂಗಿಂತಲೂ ಹೆಚ್ಚು ಎಂದು ಪರಿಗಣಿಸಲಾಗುತ್ತದೆ. ಈಗ ಬದಲಾದ ನಿಯಮದ ಪ್ರಕಾರ, ಅದು 2 ಕೋಟಿ ರೂಗೆ ಏರಿಕೆ ಮಾಡಲಾಗಿದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!