AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Nominee: ನಾಮಿನಿ ಯಾಕೆ ಬೇಕು? ಹತ್ತು ನಿಮಿಷ ಕೆಲಸಕ್ಕೆ ಹತ್ತಾರು ದಿನ ಅಲೆದಾಡಬೇಕಾದೀತು ಹುಷಾರ್

Importance of Nomination: ಬ್ಯಾಂಕ್ ಖಾತೆಯಲ್ಲಿ ಹಣ ಎಷ್ಟೇ ಇರಲಿ, ಆದರೆ, ನಾಮಿನಿ ಹೆಸರಿಸುವುದನ್ನು ಖಂಡಿತ ಮರೆಯದಿರಿ. ನಿಮ್ಮ ಹಣ ಅರ್ಹ ವಾರಸುದಾರರಿಗೆ ತಲುಪಲು ನಾಮಿನಿ ಬೇಕು. ನಾಮಿನಿ ಎಂದಾಕ್ಷಣ ಹಣಕ್ಕೆ ವಾರಸುದಾರನೆಂದಲ್ಲ. ನೀವು ಸತ್ತ ಬಳಿಕ ನಿಮ್ಮ ಹಣ ಹಂಚಿಕೆ ನಿರ್ವಹಿಸುವ ನಂಬಿಕಸ್ಥರಾಗಿರಬೇಕು. ನಾಮಿನಿ ಇಲ್ಲದಿದ್ದರೆ ವಾರಸುದಾರರು ಹಣ ಪಡೆಯಲು ಸಾಕಷ್ಟು ಯಾತನಾತ್ಮಕ ಎನಿಸುವ ಕಾನೂನು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.

Bank Nominee: ನಾಮಿನಿ ಯಾಕೆ ಬೇಕು? ಹತ್ತು ನಿಮಿಷ ಕೆಲಸಕ್ಕೆ ಹತ್ತಾರು ದಿನ ಅಲೆದಾಡಬೇಕಾದೀತು ಹುಷಾರ್
ನಾಮಿನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 12, 2023 | 4:49 PM

Share

ಮುಖ್ಯಾಂಶಗಳು

  • ಬ್ಯಾಂಕ್ ಖಾತೆಯಲ್ಲಿ ಹಣ ಎಷ್ಟೇ ಇರಲಿ, ಆದರೆ, ನಾಮಿನಿ ಹೆಸರಿಸುವುದನ್ನು ಖಂಡಿತ ಮರೆಯದಿರಿ. ನಿಮ್ಮ ಹಣ ಅರ್ಹ ವಾರಸುದಾರರಿಗೆ ತಲುಪಲು ನಾಮಿನಿ ಬೇಕು.
  • ನಾಮಿನಿ ಎಂದಾಕ್ಷಣ ಹಣಕ್ಕೆ ವಾರಸುದಾರನೆಂದಲ್ಲ. ನೀವು ಸತ್ತ ಬಳಿಕ ನಿಮ್ಮ ಹಣ ಹಂಚಿಕೆ ನಿರ್ವಹಿಸುವ ನಂಬಿಕಸ್ಥರಾಗಿರಬೇಕು.
  • ನಾಮಿನಿ ಇಲ್ಲದಿದ್ದರೆ ವಾರಸುದಾರರು ಹಣ ಪಡೆಯಲು ಸಾಕಷ್ಟು ಯಾತನಾತ್ಮಕ ಎನಿಸುವ ಕಾನೂನು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.

ಬ್ಯಾಂಕ್ ಖಾತೆಯನ್ನೂ ಒಳಗೊಂಡಂತೆ ಯಾವುದೇ ಹಣಕಾಸು ಯೋಜನೆಯಲ್ಲೂ ನಾಮಿನಿ (bank nominee) ಹೆಸರಿಸುವ ಆಯ್ಕೆ ಇರುತ್ತದೆ. ಕೆಲ ಕಡೆ ನಾಮಿನಿ ಹೆಸರಿಸುವುದು ಕಡ್ಡಾಯ ಇರುತ್ತದೆ. ಮತ್ತೆ ಕೆಲ ಕಡೆ ಐಚ್ಛಿಕ. ಸಾಕಷ್ಟು ಸಂದರ್ಭದಲ್ಲಿ ಬ್ಯಾಂಕ್ ಖಾತೆದಾರರು ಬೇರೆ ಬೇರೆ ಕಾರಣಕ್ಕೆ ನಾಮಿನಿ ಹೆಸರಿಸಿರುವುದಿಲ್ಲ. ಅಥವಾ ನಾಮಿನಿ ಅಪ್​ಡೇಟ್ ಮಾಡಿರುವುದಿಲ್ಲ. ಇದರಿಂದ ಖಾತೆದಾರ ಮೃತಪಟ್ಟ ಬಳಿಕ ಅವರ ಹಣ ವರ್ಗಾವಣೆ ಕಾರ್ಯ ಕಷ್ಟವಾಗುತ್ತದೆ.

ನಾಮಿನಿ ಯಾಕೆ ಬೇಕು?

ಖಾತೆದಾರ ಮೃತಪಟ್ಟಾಗ ಅವರ ಹಣ ಯಾರಿಗೆ ಸೇರಬೇಕು ಎಂಬುದನ್ನು ನಿರ್ಧರಿಸುವ ಕಾರ್ಯಕ್ಕೆ ನಾಮಿನಿ ಬೇಕು. ನಾಮಿನಿ ಎಂದರೆ ವಾರಸುದಾರರೇ ಎಂದರ್ಥವಲ್ಲ. ತಮ್ಮ ಸಾವಿನ ಬಳಿಕ ಹಣವನ್ನು ಅರ್ಹ ವಾರಸುದಾರರಿಗೆ ಹಂಚಲು ತಾನು ನಂಬುವ ವ್ಯಕ್ತಿಯನ್ನು ನಾಮಿನಿಯಾಗಿ ಹೆಸರಿಸಬಹುದು. ಆ ನಾಮಿನಿಯೇ ವಾರಸುದಾರರಾಗಿರಲೂ ಬಹುದು.

ಇದನ್ನೂ ಓದಿ: ಪವರ್ ಆಫ್ ಕಾಂಪೌಂಡಿಂಗ್: ನಿಮ್ಮ ಸಂಪತ್ತು ವೃದ್ಧಿಸುವ ವಿಸ್ಮಯಕಾರಿ ಹೂಡಿಕೆ ಅಂಶ

ನಾಮಿನಿ ಹೆಸರಿಸದೇ ಇದ್ದರೆ ಏನಾಗುತ್ತದೆ?

ಒಂದು ಬ್ಯಾಂಕ್ ಖಾತೆಗೆ ನಾಮಿನಿಯೇ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆ ಖಾತೆಯಲ್ಲಿರುವ ಹಣ ಪಡೆಯಲು ವಾರಸುದಾರರು ಕಷ್ಟಪಡಬೇಕಾಗುತ್ತದೆ. ನಾಮಿನಿ ಇದ್ದಾಗ ಅವರು ಯಾರಿಗೆ ಹಣ ಹೋಗಬೇಕು ಎಂಬುದನ್ನು ಬ್ಯಾಂಕ್​ಗೆ ತಿಳಿಸಿ ಹಣ ವರ್ಗಾವಣೆ ಕಾರ್ಯವನ್ನು ಸುಲಭವಾಗಿಸುತ್ತಾರೆ.

ನಾಮಿನಿ ಇಲ್ಲದಿದ್ದರೆ ಮೃತ ಖಾತೆದಾರನ ಬ್ಯಾಂಕ್ ಹಣಕ್ಕಾಗಿ ವಾರಸುದಾರರು ಹರಸಾಹಸ ನಡೆಸಬೇಕಾಗುತ್ತದೆ. ವಾರಸುದಾರ ಪ್ರಮಾಣಪತ್ರ ಸೇರಿದಂತೆ ವಿವಿಧ ಸರ್ಟಿಫಿಕೇಟ್, ಅಫಿಡವಿಟ್ ಸಲ್ಲಿಸಬೇಕಾಗುತ್ತದೆ. ಪತ್ರಿಕೆಗಳಲ್ಲಿ ನೋಟೀಸ್ ಮುದ್ರಿಸಬೇಕಾಗುತ್ತದೆ. ವಿವಾದಾತ್ಮಕ ಪ್ರಕರಣಗಳಲ್ಲಿ ವಾರಸುದಾರರು ಪ್ರೊಬೇಟ್ ಪಡೆಯಬೇಕಾಗುತ್ತದೆ. ಕೆಲವೊಮ್ಮೆ ಇಂಥ ಪ್ರೊಬೇಟ್​ಗಳನ್ನು ಪಡೆಯಲು 50,000 ರೂವರೆಗೂ ವೆಚ್ಚ ಆಗಬಹುದು.

ಇದನ್ನೂ ಓದಿ: Money Matters: ಒಟ್ಟಿಗೆ ಹಣ ಬಂದರೆ ಸಾಲ ತೀರಿಸಬೇಕಾ? ಹೂಡಿಕೆ ಮಾಡಬೇಕಾ? ಯಾವ ನಿರ್ಧಾರ ಉತ್ತಮ?

ಅದೇ ನಾಮಿನಿಯನ್ನು ಹೆಸರಿಸಲಾಗಿದ್ದರೆ ಹಣ ವರ್ಗಾವಣೆ ಪ್ರಕ್ರಿಯೆ ಕೇವಲ 10 ನಿಮಿಷದಲ್ಲಿ ಸಮಾಪ್ತಿಗೊಳ್ಳುತ್ತದೆ. ಹೀಗಾಗಿ, ನೀವು ಬ್ಯಾಂಕ್ ಖಾತೆ ಹೊಂದಿದ್ದರೆ ನಾಮಿನಿ ಹೆಸರಿಸುವುದನ್ನು ಮರೆಯದಿರಿ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:33 pm, Tue, 12 December 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ