AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಬಿಗ್ ಕ್ರ್ಯಾಷ್; ಕರೆನ್ಸಿಗೆ ಇರಲ್ಲ ಮೌಲ್ಯ; ಚಿನ್ನ, ಬೆಳ್ಳಿ, ಬಿಟ್​ಕಾಯಿನ್​ನಂತಹ ಆಸ್ತಿಗಳಿಗೆ ಉಳಿಗಾಲ: ಕಿಯೋಸಾಕಿ

Robert Kiyosaki predicts biggest crash in world history to happen this year: ಇತಿಹಾಸದಲ್ಲೇ ಅತಿದೊಡ್ಡ ಮಾರುಕಟ್ಟೆ ಕುಸಿತ ಈ ವರ್ಷ ಸಂಭವಿಸುತ್ತದೆ ಎಂದು ರಿಚ್ ಡ್ಯಾಡ್ ಪೂರ್ ಡ್ಯಾಡ್ ಲೇಖಕ ರಾಬರ್ಟ್ ಕಿಯೋಸಾಕಿ ಹೇಳಿದ್ದಾರೆ. ತಮ್ಮ ಪುಸ್ತಕದಲ್ಲಿ ಬರೆದಿರುವ ಅತಿದೊಡ್ಡ ಮಾರುಕಟ್ಟೆ ಕುಸಿತ ಸಂಭವಿಸುವ ಕಾಲ ಬಂತು ಎಂದಿದ್ದಾರೆ. ಕಾಗದದ ಹಣಕ್ಕೆ ಮೌಲ್ಯ ಇರೋದಿಲ್ಲ. ರಿಯಲ್ ಎಸ್ಟೇಟ್, ಚಿನ್ನ, ಬೆಳ್ಳಿಯಂತಹ ನೈಜ ಆಸ್ತಿಗಳು, ಬಿಟ್​ಕಾಯಿನ್​ನಂತಹ ವರ್ಚುವಲ್ ಅಸೆಟ್​ಗಳ ಮೇಲೆ ಹೂಡಿಕೆ ಮಾಡಿ ಎಂದಿದ್ದಾರೆ.

ಈ ವರ್ಷ ಬಿಗ್ ಕ್ರ್ಯಾಷ್; ಕರೆನ್ಸಿಗೆ ಇರಲ್ಲ ಮೌಲ್ಯ; ಚಿನ್ನ, ಬೆಳ್ಳಿ, ಬಿಟ್​ಕಾಯಿನ್​ನಂತಹ ಆಸ್ತಿಗಳಿಗೆ ಉಳಿಗಾಲ: ಕಿಯೋಸಾಕಿ
ಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 15, 2025 | 1:11 PM

Share

ನವದೆಹಲಿ, ಅಕ್ಟೋಬರ್ 15: ಜಾಗತಿಕ ಇತಿಹಾಸದಲ್ಲೇ ಈ ಮೊದಲು ಕಂಡು ಕೇಳರಿಯದಷ್ಟು ಅತಿದೊಡ್ಡ ಮಾರುಕಟ್ಟೆ ಕುಸಿತ ಸಂಭವಿಸುತ್ತದೆ ಎಂದು ಹಲವಾರು ವರ್ಷಗಳಿಂದ ರಾಬರ್ಟ್ ಕಿಯೋಸಾಕಿ ನುಡಿಯುತ್ತಾ ಬಂದಿರುವ ಭಯಾನಕ ಭವಿಷ್ಯ ಈ ವರ್ಷ ಸಂಭವಿಸುತ್ತದಾ? ‘ರಿಚ್ ಡ್ಯಾಡ್ ಪೂರ್ ಡ್ಯಾಡ್’ ಎನ್ನುವ ಜನಪ್ರಿಯ ಪುಸ್ತಕದ ಕರ್ತೃವಾದ ರಾಬರ್ಟ್ ಕಿಯೋಸಾಕಿ (Robert Kiyosaki) ಪದೇ ಪದೇ ತಮ್ಮ ಭವಿಷ್ಯವಾಣಿಯನ್ನು ಹೇಳುತ್ತಲೇ ಇದ್ದಾರೆ. ಇತ್ತೀಚೆಗೆ ಕೂಡ ಅದನ್ನೇ ಪುನರುಚ್ಚರಿಸಿದ್ದಾರೆ. ಅವರು ಭವಿಷ್ಯ ನುಡಿದಂತೆ ಭಾರೀ ಮಾರುಕಟ್ಟೆ ಕುಸಿತವು ಈ ವರ್ಷವೇ ಸಂಭವಿಸುತ್ತದಂತೆ.

78 ವರ್ಷದ ರಾಬರ್ಟ್ ಕಿಯೋಸಾಕಿ ತಮ್ಮ ಎಕ್ಸ್ ಅಕೌಂಟ್​ನಿಂದ ಇತ್ತೀಚೆಗೆ ಈ ಸಂಬಂಧ ಒಂದು ಪೋಸ್ಟ್ ಹಾಕಿದ್ದಾರೆ. ಬೇಬಿ ಬೂಮರ್​ಗಳ ರಿಟೈರ್ಮೆಂಟ್ ದುಡ್ಡೆಲ್ಲಾ ಖಾಲಿಯಾಗಲಿದೆ ಎಂದು ಎಚ್ಚರಿಸಿರುವ ಅವರು, ಚಿನ್ನ, ಬೆಳ್ಳಿ ಇತ್ಯಾದಿ ನೈಜ ಆಸ್ತಿಗಳ ಮೇಲೆ ಹೂಡಿಕೆ ಮಾಡುವಂತೆ ತಮ್ಮ ಸಲಹೆಯನ್ನು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: ನೂರು ಕೋಟಿ ಗಳಿಸುವ ಸಿಂಪಲ್ ಐಡಿಯಾ; 25 ವರ್ಷದ ಯುವಜನರಿಗೆ ಉದ್ಯಮಿ ಕಿವಿಮಾತು

ಇಲ್ಲಿ ಬೇಬಿ ಬೂಮರ್​ಗಳೆಂದರೆ 1946ರಿಂದ 1964ರ ಅವಧಿಯಲ್ಲಿ ಜನಿಸಿದವರು. ಈಗ ಇವರದ್ದು ನಿವೃತ್ತಿ ಜೀವನ. ಕರೆನ್ಸಿ ರೂಪದಲ್ಲಿ ಇವರು ಸೇವಿಂಗ್ಸ್ ಹಣ ಇಟ್ಟುಕೊಂಡಿರುವುದು, ಈ ಹಣದ ಮೌಲ್ಯ ಬಹಳ ಕಡಿಮೆ ಆಗಬಹುದು ಎಂಬುದು ಕಿಯೋಸಾಕಿ ಅವರ ಅನಿಸಿಕೆ. ಸೇವರ್ಸ್ ಆರ್ ಲೂಸರ್ಸ್ ಎಂದು ಅವರು ಬಹಳ ಕಾಲದಿಂದ ಹೇಳುತ್ತಲೇ ಬಂದಿದ್ದಾರೆ. ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಅದನ್ನು ಉಲ್ಲೇಖಿಸಿದ್ದಾರೆ.

ಚಿನ್ನ, ಬೆಳ್ಳಿ, ಬಿಟ್​ಕಾಯಿನ್​ಗಳಂತಹ ನೈಜ ಆಸ್ತಿಯಲ್ಲಿ ಹೂಡಿಕೆ

‘ಮುದ್ರಿತ ಆಸ್ತಿಗಳನ್ನು (ಕರೆನ್ಸಿ ನೋಟು) ಇಟ್ಟುಕೊಳ್ಳಬೇಡಿ ಎಂದು ಹೇಳುತ್ತಲೇ ಬಂದಿದ್ದೇನೆ. ರಿಯಲ್ ಎಸ್ಟೇಟ್​ಗಳಲ್ಲಿ ಹೂಡಿಕೆ ಮಾಡಿ… ಚಿನ್ನ, ಬೆಳ್ಳಿ, ಬಿಟ್​ಕಾಯಿನ್ ಮತ್ತು ಇತ್ತೀಚೆಗೆ ಎಥಿರಿಯಮ್ ಇವುಗಳ ಮೇಲೆ ಹೂಡಿಕೆ ಮಾಡಿ ಎಂದು ವರ್ಷಗಳಿಂದ ಹೇಳುತ್ತಲೇ ಇದ್ದೇನೆ’ ಎಂದು ರಿಚ್ ಡ್ಯಾಡ್ ಪೂರ್ ಡ್ಯಾಡ್ ಲೇಖಕರು ವಿವರಿಸಿದ್ದಾರೆ.

ರಾಬರ್ಟ್ ಕಿಯೋಸಾಕಿ ಅವರ ಎಕ್ಸ್ ಪೋಸ್ಟ್

ಇದನ್ನೂ ಓದಿ: ಮನೆಗೆಲಸದವಳ ಬಳಿ 60 ಲಕ್ಷ ರೂ ಫ್ಲಾಟ್, ಎರಡಂತಸ್ತಿನ ಮನೆ, ಅಂಗಡಿ; ಮಾಲೀಕರು ಶಾಕ್

ಬೆಳ್ಳಿ ಮತ್ತು ಎಥಿರಿಯಮ್ ಅತ್ಯುತ್ತಮ ಎಂಬುದು ನನ್ನ ಭಾವನೆ. ಇವುಗಳಿಗೆ ಸಂಗ್ರಹ ಮೌಲ್ಯ ಇದೆ. ಅದಕ್ಕಿಂತ ಹೆಚ್ಚಾಗಿ ಬೆಲೆಗಳು ಕಡಿಮೆ ಇವೆ, ಉದ್ಯಮಗಳಲ್ಲಿ ಬಳಕೆ ಆಗುತ್ತವೆ. ಇವುಗಳ ಬೆಂಬಲಿಗರು ಮತ್ತು ವಿರೋಧಿಗಳಿಂದ ಪರ ಮತ್ತು ವಿರೋಧ ಅಭಿಪ್ರಾಯಗಳನ್ನು ಕೇಳಿ ನಿಮ್ಮ ವಿವೇಚನೆ ಬಳಸಿ ಹೂಡಿಕೆ ಮಾಡಿರಿ. ಹೀಗೆ ಹಣಕಾಸು ಚಾಕಚಕ್ಯತೆಯಿಂದ ಮೌಲ್ಯಮಾಪನ ಮಾಡಿ ಶ್ರೀಮಂತರಾಗಲು ಸಾಧ್ಯ ಎಂದು ತಮ್ಮ ಎಕ್ಸ್ ಪೋಸ್ಟ್​ನಲ್ಲಿ ರಾಬರ್ಟ್ ಕಿಯೋಸಾಕಿ ಸಲಹೆ ನೀಡಿದ್ದಾರೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ