AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fixed Deposit: ಎಫ್​ಡಿ ಖಾತೆ ತೆರೆಯಲು ಉದ್ದೇಶಿಸಿದ್ದೀರಾ? ಇಲ್ಲಿದೆ ಎಸ್​ಬಿಐ, ಐಸಿಐಸಿಐ, ಎಚ್​ಡಿಎಫ್​ಸಿ ಬ್ಯಾಂಕ್ ಬಡ್ಡಿ ವಿವರ

ಒಂದು, ಎರಡು, ಮೂರು, ಐದು ಹಾಗೂ 10 ವರ್ಷಗಳ ಅವಧಿಗೆ ಎಫ್​ಡಿಗೆ ಎಸ್​ಬಿಐ, ಐಸಿಐಸಿಐ, ಎಚ್​ಡಿಎಫ್​ಸಿ ಬ್ಯಾಂಕ್​ಗಳು ಎಷ್ಟು ಬಡ್ಡಿ ನೀಡುತ್ತವೆ ಎಂಬ ವಿವರ ಇಲ್ಲಿ ನೀಡಲಾಗಿದೆ.

Fixed Deposit: ಎಫ್​ಡಿ ಖಾತೆ ತೆರೆಯಲು ಉದ್ದೇಶಿಸಿದ್ದೀರಾ? ಇಲ್ಲಿದೆ ಎಸ್​ಬಿಐ, ಐಸಿಐಸಿಐ, ಎಚ್​ಡಿಎಫ್​ಸಿ ಬ್ಯಾಂಕ್ ಬಡ್ಡಿ ವಿವರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 22, 2022 | 1:35 PM

Share

ಧನ್​ತೇರಸ್ ಅಥವಾ ದೀಪಾವಳಿ (Dhanteras and Diwali) ಹಬ್ಬವು ಚಿನ್ನ, ಆಸ್ತಿಯಂಥ ಮೌಲ್ಯಯುತ ಸ್ವತ್ತುಗಳ ಹೂಡಿಕೆಗೆ ಶುಭ ಸಮಯವೆಂದು ಜನ ಭಾವಿಸಿದ್ದಾರೆ. ಇತ್ತೀಚೆಗೆ ವಿವಿಧ ಬ್ಯಾಂಕ್​ಗಳು ಸ್ಥಿರ ಠೇವಣಿಯ ಬಡ್ಡಿ ದರ (Fixed Deposit) ಹೆಚ್ಚಿಸಿವೆ. ಹೀಗಾಗಿ ಎಫ್​ಡಿ ಮೂಲಕ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದಾಗಿದೆ. ಆರ್​ಬಿಐ ಮಾರ್ಗಸೂಚಿ ಪ್ರಕಾರ, 5 ಲಕ್ಷ ರೂಪಾಯಿ ವರೆಗಿನ ಸ್ಥಿರ ಠೇವಣಿ ಅಥವಾ ಎಫ್​ಡಿಗೆ ಠೇವಣಿ ವಿಮೆ ಖಾತರಿ ಸೌಲಭ್ಯವೂ ದೊರೆಯಲಿದೆ.

ಒಂದು, ಎರಡು, ಮೂರು, ಐದು ಹಾಗೂ 10 ವರ್ಷಗಳ ಅವಧಿಗೆ ಎಫ್​ಡಿಗೆ ಎಸ್​ಬಿಐ, ಐಸಿಐಸಿಐ, ಎಚ್​ಡಿಎಫ್​ಸಿ ಬ್ಯಾಂಕ್​ಗಳು ಎಷ್ಟು ಬಡ್ಡಿ ನೀಡುತ್ತವೆ ಎಂಬ ವಿವರ ಇಲ್ಲಿ ನೀಡಲಾಗಿದೆ.

ಎಸ್​ಬಿಐ ಎಫ್​ಡಿ ಬಡ್ಡಿ ದರ

ಇದನ್ನೂ ಓದಿ
Image
SBI FD Rates: ಎಸ್​ಬಿಐಯಿಂದ ದೀಪಾವಳಿ ಕೊಡುಗೆ, ಎಫ್​ಡಿ ಬಡ್ಡಿ ದರ ಹೆಚ್ಚಳ
Image
Petrol Price on October 22: ದೀಪಾವಳಿ ಹಬ್ಬದ ವೇಳೆ ಏರಿಕೆಯಾಗುತ್ತಾ ಪೆಟ್ರೋಲ್ ಬೆಲೆ?; ಇಂದಿನ ಡೀಸೆಲ್ ದರ ಹೀಗಿದೆ
Image
Gold Price Today: ಬೆಳ್ಳಿ ದರ ಸ್ಥಿರ, ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ನೋಡಿ
Image
EPFO Clarification: ವೇತನ ರಹಿತ ರಜೆಯಲ್ಲಿದ್ದಾಗ ಮೃತಪಟ್ಟರೂ ಡೆತ್ ಬೆನಿಫಿಟ್​ ಪಡೆಯಬಹುದು; ಇಪಿಎಫ್​ಒ

ಅಕ್ಟೋಬರ್ 22ರಿಂದ ಜಾರಿಗೆ ಬರುವಂತೆ ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾ 2 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಸ್ಥಿರ ಠೇವಣಿ ಬಡ್ಡಿ ದರವನ್ನು ಗರಿಷ್ಠ 80 ಮೂಲಾಂಶಗಳ ವರೆಗೆ ಹೆಚ್ಚಿಸಿದೆ. ಪ್ರಸ್ತುತ ಎಸ್​ಬಿಐ 1 ವರ್ಷದ ಅವಧಿಯ ಎಫ್​ಡಿಗೆ ಶೇಕಡಾ 5.5ರ ಬಡ್ಡಿ ದರ ನಿಗದಿಪಡಿಸಿದೆ. 2 ಮತ್ತು 3 ವರ್ಷ ಅವಧಿಯ ಎಫ್​ಡಿಗೆ ಶೇಕಡಾ 6.1 ಹಾಗೂ ಶೇಕಡಾ 6.25ರ ಬಡ್ಡಿ ದರ ನಿಗದಿಪಡಿಸಿದೆ. 5 ಹಾಗೂ 10 ವರ್ಷಗಳ ಅವಧಿಯ ಎಫ್​ಡಿಗೆ ಶೇಕಡಾ 6.1ರ ಬಡ್ಡಿ ದರ ನಿಗದಿಪಡಿಸಿದೆ. ಹಿರಿಯ ನಾಗರಿಕರ ಎಫ್​ಡಿಗಳಿಗೆ ಹೆಚ್ಚುವರಿಯಾಗಿ ಶೇಕಡಾ 0.5ರ ಬಡ್ಡಿಯನ್ನು ಬ್ಯಾಂಕ್ ನೀಡುತ್ತಿದೆ.

ಎಚ್​ಡಿಎಫ್​ಸಿ ಬ್ಯಾಂಕ್​ ಎಫ್​ಡಿ ಬಡ್ಡಿ ದರ

ಎಚ್​ಡಿಎಫ್​ಸಿ ಬ್ಯಾಂಕ್​ ಎಫ್​ಡಿ ಬಡ್ಡಿ ದರವನ್ನು ಅಕ್ಟೋಬರ್ 11ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದೆ. 1 ಮತ್ತು 2 ವರ್ಷ ಅವಧಿಯ 2 ಕೋಟಿ ರೂ.ಗಿಂತ ಕಡಿಮೆ ಮೊತ್ತದ ಎಫ್​ಡಿಗೆ ಶೇಕಡಾ 5.7ರ ಬಡ್ಡಿ ದರ ನಿಗದಿಯಾಗಿದೆ. 3 ವರ್ಷಗಳ ಎಫ್​ಡಿಗೆ ಶೇಕಡಾ 5.8 ಮತ್ತು ಐದು ವರ್ಷಗಳ ಅವಧಿಯ ಎಫ್​ಡಿಗೆ ಶೇಕಡಾ 6.1ರ ಬಡ್ಡಿಯನ್ನು ಬ್ಯಾಂಕ್ ನೀಡುತ್ತಿದೆ. 10 ವರ್ಷಗಳ ಅವಧಿಯ ಎಫ್​ಡಿಗೆ ಶೇಕಡಾ 6ರ ಬಡ್ಡಿ ನೀಡುತ್ತಿದೆ. ಎಚ್​ಡಿಎಫ್​ಸಿ ಬ್ಯಾಂಕ್ ಸಹ ಹಿರಿಯ ನಾಗರಿಕರ ಎಫ್​ಡಿಗಳಿಗೆ ಹೆಚ್ಚುವರಿಯಾಗಿ ಶೇಕಡಾ 0.5ರ ಬಡ್ಡಿಯನ್ನು ನೀಡುತ್ತಿದೆ.

ಐಸಿಐಸಿಐ ಎಫ್​ಡಿ ಬಡ್ಡಿ ದರ

ಐಸಿಐಸಿಐ ಬ್ಯಾಂಕ್​ ಎಫ್​ಡಿ ಬಡ್ಡಿ ದರವನ್ನು ಅಕ್ಟೋಬರ್ 18ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದೆ. 2 ಕೋಟಿ ರೂ.ಗಿಂತ ಕಡಿಮೆ ಮೊತ್ತದ ಠೇವಣಿಗಳಿಗೆ 1 ವರ್ಷದ ಅವಧಿಗೆ ಶೇಕಡಾ 5ರ ಬಡ್ಡಿ ನೀಡಲಾಗುತ್ತಿದೆ. 2 ವರ್ಷ ಅವಧಿಯ ಸ್ಥಿರ ಠೇವಣಿಗಳಿಗೆ ಶೇಕಡಾ 5.8ರ ಬಡ್ಡಿ ನೀಡಲಾಗುತ್ತಿದೆ. ಮೂರು ವರ್ಷದ ಎಫ್​ಡಿಗೆ ಶೇಕಡಾ 6 ಹಾಗೂ 5 ವರ್ಷಗಳ ಎಫ್​ಡಿಗೆ ಶೇಕಡಾ 6.2ರ ಬಡ್ಡಿ ದರವನ್ನು ಬ್ಯಾಂಕ್ ನಿಗದಿಪಡಿಸಿದೆ.

10 ವರ್ಷಗಳ ಎಫ್​ಡಿಗೆ ಐಸಿಐಸಿಐ ಬ್ಯಾಂಕ್ ಶೇಕಡಾ 6.1ರ ಬಡ್ಡಿ ನಿಗದಿಪಡಿಸಿದೆ. ಹಿರಿಯ ನಾಗರಿಕರಿಗೆ ಹೆಚ್ಚುವರಿಯಾಗಿ ಶೇಕಡಾ 0.5ರ ಬಡ್ಡಿ ಸಿಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sat, 22 October 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು