AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!

ಸರಿಯಾಗಿ ಕೃಷಿ ಮಾಡಿದರೆ ಹೆಚ್ಚುವರಿ ಆದಾಯ ತಾನಾಗಿಯೇ ಬರಲಿದೆ. ನೀವು ಕೂಡ ಒಂದು ಎಕರೆ ಹೊಲವನ್ನು ಹೊಂದಿದ್ದರೆ, ಅದರಲ್ಲಿ ಮಾಡುವ ಹೂಡಿಕೆಯಿಂದ ಉತ್ತಮ ಲಾಭವನ್ನು ಪಡೆಯಬಹುದು. ಹಲವು ರೈತರಿಗೆ ಉತ್ತಮ ಲಾಭ ನೀಡುವ ಬೆಳೆ ಬಾಳೆ ಕೃಷಿಯಾಗಿದೆ.

Business Ideas: 70 ಸಾವಿರ ಖರ್ಚು ಮಾಡಿ 3-4 ಲಕ್ಷ ರೂ. ಆದಾಯ ಗಳಿಸಿ!
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 15, 2023 | 9:44 PM

ಸರಿಯಾಗಿ ಕೃಷಿ ಮಾಡಿದರೆ ಹೆಚ್ಚುವರಿ ಆದಾಯ ತಾನಾಗಿಯೇ ಬರಲಿದೆ. ನೀವು ಕೂಡ ಒಂದು ಎಕರೆ ಹೊಲವನ್ನು ಹೊಂದಿದ್ದರೆ, ಅದರಲ್ಲಿ ಮಾಡುವ ಹೂಡಿಕೆಯಿಂದ ಉತ್ತಮ ಲಾಭವನ್ನು ಪಡೆಯಬಹುದು. ಹಲವು ರೈತರಿಗೆ ಉತ್ತಮ ಲಾಭ ನೀಡುವ ಬೆಳೆ ಬಾಳೆ ಕೃಷಿಯಾಗಿದೆ.

ಕಡಿಮೆ ವೆಚ್ಚದಲ್ಲಿ ಬಾಳೆ ಕೃಷಿ ಮಾಡಿ ಹೆಚ್ಚಿನ ಲಾಭ ಪಡೆಯಬಹುದು. ಹೀಗಾಗಿ ಇತ್ತೀಚಿನ ದಿನಗಳಲ್ಲಿ ಅನೇಕ ರೈತರು ಬಾಳೆಯತ್ತ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅಲ್ಲದೆ ಬಾಳೆ ಬೆಳೆಯಲು ಬೆಚ್ಚನೆಯ ವಾತಾವರಣವನ್ನು ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ಬಾಳೆ ಕೃಷಿ ಕಷ್ಟ.

ಒಂದು ಎಕರೆ ಬಾಳೆ ಕೃಷಿಗೆ ಸುಮಾರು 70,000 ದಿಂದ 80,000 ರೂ. ವರೆಗೂ ವೆಚ್ಚವಾಗಬಹುದು. ಅದರೊಂದಿಗೆ ಈ ಬೆಳೆ ಮೂಲಕ ಒಂದು ಬಾರಿ ಹೂಡಿಕೆಗೆ ಸುಮಾರು 3.5 ಲಕ್ಷ ರೂ.ನಿಂದ 4 ಲಕ್ಷ ರೂ.ವರೆಗೆ ಗಳಿಸಬಹುದು. ಇತರ ಬೆಳೆಗಳಿಗೆ ಹೋಲಿಸಿದರೆ ಈ ಕೃಷಿ ಸುಲಭ. ಬಾಳೆ ಬೆಳೆಯಲು ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ವೆಚ್ಚವೂ ಕಡಿಮೆಯಾಗುತ್ತದೆ. ಸಾವಯವ ಗೊಬ್ಬರ ಬಳಸಿದರೆ ಉತ್ತಮ ಫಸಲು ದೊರೆಯುತ್ತದೆ. ಬಾಳೆ ಕಟಾವು ಮಾಡಿದ ನಂತರ ಉಳಿಯುವ ತ್ಯಾಜ್ಯವನ್ನು ಹೊಲದ ಹೊರಗೆ ಬಿಟ್ಟು ಬಿಟ್ಟರೆ ಅತ್ಯುತ್ತಮ ಗೊಬ್ಬರವಾಗುತ್ತದೆ.

ಇದನ್ನೂ ಓದಿ: Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಸಿಂಗಾಪುರದಲ್ಲಿ ಹೆಚ್ಚಾಗಿ ಬೆಳೆಯುವ ರೋಬಸ್ಟಾ ಬಾಳೆಯನ್ನು ನಮ್ಮ ದಕ್ಷಿಣದ ದೇಶಗಳಲ್ಲಿ ಚೆನ್ನಾಗಿ ಬೆಳೆಯಲಾಗುತ್ತದೆ. ಈ ರೀತಿಯ ಬಾಳೆ ಹೆಚ್ಚಿನ ಉತ್ಪಾದನೆಯನ್ನು ಹೊಂದಿದೆ. ವಾಮನ್, ಸಲ್ಭೋಗ್, ಅಲ್ಪಾನ್, ಪುವಾನ್ ತಳಿಗಳೂ ಉತ್ತಮ ಬಾಳೆ ತಳಿಗಳಾಗಿವೆ. ಬಾಳೆ ಕೃಷಿ ಕಡಿಮೆ ರಿಸ್ಕ್ ಹೊಂದಿದ್ದು, ಹೆಚ್ಚು ಲಾಭದಾಯಕವಾಗಿದೆ. ಬಾಳೆ ಎಲೆಗಳನ್ನು ಮಾರಾಟ ಮಾಡುವುದರಿಂದಲೂ ಬಾಳೆ ಕೃಷಿಯ ಲಾಭವನ್ನು ದ್ವಿಗುಣಗೊಳಿಸಬಹುದು. ಇದರ ಎಲೆಗಳನ್ನು ರೆಸ್ಟೋರೆಂಟ್‌ಗಳಲ್ಲಿ ಪ್ಲೇಟ್‌ಗಳಿಗಾಗಿ ಬಳಸಲಾಗುತ್ತದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ