AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಕಡೆಯ ತಾತನ ಆಸ್ತಿಗೆ ಮೊಮ್ಮಕ್ಕಳು ಆಸ್ತಿಯಲ್ಲಿ ಪಾಲು ಕೇಳಬಹುದಾ?

Bombay High Court ruling on property dispute: ತನ್ನ ತಾಯಿಯ ಅಪ್ಪನ ಆಸ್ತಿಯಲ್ಲಿ ಪಾಲು ಕೇಳಿದ ಮೊಮ್ಮಗಳ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿದೆ. ನಾಮದೇವ್ ಅವರ ಒಬ್ಬ ಪುತ್ರಿಯ ಮಗಳು ಅರ್ಜಿ ಸಲ್ಲಿಸಿದ್ದರು. ಇಲ್ಲಿ ತಾಯಿ ಬದುಕಿರುವಾಗ ಆಕೆಯ ತವರಿನ ಆಸ್ತಿಯಲ್ಲಿ ಮಕ್ಕಳು ಪಾಲು ಕೇಳುವ ಹಕ್ಕು ಹೊಂದಿರುವುದಿಲ್ಲ.

ಅಮ್ಮನ ಕಡೆಯ ತಾತನ ಆಸ್ತಿಗೆ ಮೊಮ್ಮಕ್ಕಳು ಆಸ್ತಿಯಲ್ಲಿ ಪಾಲು ಕೇಳಬಹುದಾ?
ಕೋರ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 16, 2025 | 5:28 PM

Share

ಮುಂಬೈ, ಸೆಪ್ಟೆಂಬರ್ 16: ತಾತನ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಕಾನೂನು ಪ್ರಕಾರ ಪಾಲು ಪಡೆಯುವ ಹಕ್ಕು ಇರುತ್ತದೆ. ಆದರೆ, ಅಮ್ಮನ ತವರಿನ ಮನೆಯಲ್ಲಿ ಆಕೆಯ ಮಕ್ಕಳು ಆಸ್ತಿಯಲ್ಲಿ ಪಾಲು ಕೇಳಬಹುದಾ? ಬಾಂಬೆ ಹೈಕೋರ್ಟ್ (Bombay High Court) ಇತ್ತೀಚೆಗೆ ಇಂಥ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು ನೀಡಿದೆ. ಅಮ್ಮನ ಕಡೆಯ ತಾತನ ಆಸ್ತಿಗೆ ಪಾಲು ಕೇಳಿ ಮೊಮ್ಮಗಳೊಬ್ಬಳು ಸಲ್ಲಿಸಿದ ಅರ್ಜಿಯನ್ನು ಬಾಂಬೆ ಉಚ್ಚ ನ್ಯಾಯಾಲಯ ತಿರಸ್ಕರಿಸಿದೆ.

ನಾಮದೇವ್ ಎಂಬ ವ್ಯಕ್ತಿಯ ಆಸ್ತಿಯಲ್ಲಿ ಪಾಲು ಕೇಳಿದ ಪ್ರಕರಣ ಇದು. ಈಗ ಮೃತರಾಗಿರುವ ನಾಮದೇವ್ ಅವರಿಗೆ ನಾಲ್ವರು ಹೆಣ್ಮಕ್ಕಳು ಹಾಗೂ ನಾಲ್ವರು ಗಂಡು ಮಕ್ಕಳು ಹೀಗೆ ಎಂಟು ಮಕ್ಕಳಿದ್ದಾರೆ. ಈ ನಾಲ್ವರು ಹೆಣ್ಮಕ್ಕಳ ಪೈಕಿ ಒಬ್ಬಾಕೆಯ ಮಗಳು ಕೋರ್ಟ್​ನಲ್ಲಿ ಕೇಸ್ ಹಾಕಿದ್ದಾಳೆ. ತನಗೆ ಆಸ್ತಿಯಲ್ಲಿ ಒಂದು ಪಾಲು ಬರಬೇಕು ಎಂಬುದು ಆಕೆಯ ಮನವಿ. ಕೋರ್ಟ್ ಈಕೆಯ ಮನವಿಯನ್ನು ತಿರಸ್ಕರಿಸಿದೆ.

ಇದನ್ನೂ ಓದಿ: ಕೇವಲ 30,000 ರೂ ಸಂಬಳವಾ? 2 ಕೋಟಿ ರೂ ಹಣ ಮಾಡಲು ಈ ಟ್ರಿಕ್ಸ್ ಬಳಸಿ

ಹೆಣ್ಮಕ್ಕಳಿಗೂ ಆಸ್ತಿಯಲ್ಲಿ ಪಾಲು ಸಿಗಬೇಕಲ್ಲವಾ?

ಆ ಹುಡುಗಿಯ ಆಸ್ತಿ ಪಾಲು ಮನವಿಯನ್ನು ಕೋರ್ಟ್ ತಿರಸ್ಕರಿಸಲು ಕಾರಣ ಇದೆ. ಈ ಪ್ರಕರಣದಲ್ಲಿ ಕೇಸ್ ಹಾಕಿದ ಹುಡುಗಿಯ ತಾಯಿಯು ಆಸ್ತಿಯಲ್ಲಿ ಪಾಲು ಕೇಳಿಲ್ಲ. ಕೋರ್ಟ್ ಪ್ರಕಾರ, ನಾಮದೇವ್ ಅವರ ಆಸ್ತಿಯಲ್ಲಿ ಪಾಲು ಕೇಳುವ ಹಕ್ಕು ಇರುವುದು ಅವರ ಎಂಟು ಮಕ್ಕಳಿಗೆ ಮಾತ್ರ.

ಕೇಸ್ ಹಾಕಿದ ಹುಡುಗಿಯ ತಾಯಿ ಇನ್ನೂ ಬದುಕಿದ್ದಾರೆ. ಅಂಥ ಸಂದರ್ಭದಲ್ಲಿ ಅವರನ್ನು ಬಿಟ್ಟು ಆಸ್ತಿ ಕೇಳುವ ಹಕ್ಕು ಹುಡುಗಿಗೆ ಇರುವುದಿಲ್ಲ.

ಈಕೆಯ ತಾಯಿ ನಿಧನ ಹೊಂದಿದ ಬಳಿಕ ಮಾತ್ರವೇ ಆಸ್ತಿಯಲ್ಲಿ ಪಾಲು ಕೇಳಲು ಮಕ್ಕಳಿಗೆ ಹಕ್ಕು ಸಿಗುತ್ತದೆ.

ಇದನ್ನೂ ಓದಿ: ಪೋಸ್ಟ್ ಆಫೀಸ್​ನ ಈ ಸ್ಕೀಮ್​ನಲ್ಲಿ 25 ವರ್ಷಕ್ಕೆ 1 ಕೋಟಿ ರೂ ಗಳಿಕೆಗೆ ಅವಕಾಶ

ಅಪ್ಪನ ಅಪ್ಪನ ಆಸ್ತಿಯಲ್ಲಿ ಪಾಲು ಕೇಳುವ ಹಕ್ಕು?

ಒಬ್ಬ ವ್ಯಕ್ತಿ ತನ್ನ ತಾತನ (ಅಪ್ಪನ ಅಪ್ಪ) ಆಸ್ತಿಯಲ್ಲಿ ಪಾಲು ಕೇಳುವ ಹಕ್ಕು ಹೊಂದಿರುತ್ತಾರೆ. ಅಪ್ಪ ಜೀವಂತ ಇದ್ದಾಗಲೂ ಈ ಹಕ್ಕು ಇರುತ್ತದೆ. ಆದರೆ ಈ ಹಕ್ಕು ಅಮ್ಮನ ಕಡೆಯ ತಾತನ ಆಸ್ತಿಯಲ್ಲಿ ಇರುವುದಿಲ್ಲ. ಇಲ್ಲಿ ತಿಳಿಸಿರುವುದು ಹಿಂದೂ ಕಾಯ್ದೆ ಪ್ರಕಾರ ಇರುವ ಕಾನೂನು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ