AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಪಿಎಫ್​ಒ ಹೊಸ ಆದೇಶ: ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂವರೆಗೆ ಪಿಎಫ್ ಹಣ ಪಡೆಯುವ ಅವಕಾಶ

EPF fund withdrawal for medical treatment: ಇಪಿಎಫ್​ಒ ಏಪ್ರಿಲ್ 16ರಂದು ಹೊರಡಿಸಲಾಗಿರುವ ಸುತ್ತೋಲೆ ಪ್ರಕಾರ ಇಪಿಎಫ್ ಸದಸ್ಯರು ವೈದ್ಯಕೀಯ ಚಿಕಿತ್ಸೆಗೆಂದು ವಿತ್​ಡ್ರಾ ಮಾಡಿಕೊಳ್ಳಬಹುದಾದ ಹಣದ ಮಿತಿಯನ್ನು ಒಂದು ಲಕ್ಷ ರೂಗೆ ಹೆಚ್ಚಿಸಲಾಗಿದೆ. ಈ ಮುಂಚೆ ಇದರ ಮಿತಿ 50,000 ರೂ ಇತ್ತು. ಇಪಿಎಫ್ ಖಾತೆಯಲ್ಲಿರುವ ಹಣದಲ್ಲಿ ಅಡ್ವಾನ್ಸ್ ಪಡೆದುಕೊಳ್ಳಬಹುದು. ಮದುವೆ, ಶಿಕ್ಷಣ, ಮನೆ ಖರೀದಿ, ಮನೆ ನಿರ್ಮಾಣ ಹೀಗೆ ಬೇರೆ ಬೇರೆ ಕಾರಣಗಳನ್ನು ನೀಡಿ ಹಣ ವಿತ್​ಡ್ರಾ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆಗೆ ಫಾರ್ಮ್31ನಲ್ಲಿ ಅವಕಾಶ ಇದೆ.

ಇಪಿಎಫ್​ಒ ಹೊಸ ಆದೇಶ: ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂವರೆಗೆ ಪಿಎಫ್ ಹಣ ಪಡೆಯುವ ಅವಕಾಶ
ಇಪಿಎಫ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 17, 2024 | 5:16 PM

Share

ನವದೆಹಲಿ, ಏಪ್ರಿಲ್ 17: ವೈದ್ಯಕೀಯ ಚಿಕಿತ್ಸೆಗಾಗಿ ಇನ್ಮುಂದೆ ಇಪಿಎಫ್​ನಿಂದ (epf) ಹೆಚ್ಚು ಹಣ ಬಳಸಿಕೊಳ್ಳಬಹುದು. ಇಪಿಎಫ್ ಖಾತೆಯಿಂದ 68ಜೆ ಅಡಿಯಲ್ಲಿ ವಿತ್​ಡ್ರಾ ಮಾಡಿಕೊಳ್ಳಬಹುದಾದ ಹಣದ ಮಿತಿಯನ್ನು 50,000 ರೂನಿಂದ ಒಂದು ಲಕ್ಷ ರೂಗೆ ಹೆಚ್ಚಿಸಲಾಗಿದೆ. ಅಂದರೆ, ವೈದ್ಯಕೀಯ ಚಿಕಿತ್ಸೆಯ (medical treatment) ಸಂದರ್ಭದಲ್ಲಿ ಒಂದು ಲಕ್ಷ ರೂವರೆಗೆ ಇಪಿಎಫ್ ಹಣವನ್ನು ಕ್ಲೈಮ್ ಮಾಡಲು ಸಾಧ್ಯ. 68ಜೆ ಅಡಿಯಲ್ಲಿ ವಿತ್​ಡ್ರಾ ಮಿತಿ ಹೆಚ್ಚಿಸಿ ಇಪಿಎಫ್​​ಒ ಸಂಸ್ಥೆ ನಿನ್ನೆ ಏಪ್ರಿಲ್ 16ರಂದು ಸುತ್ತೋಲೆ ಹೊರಡಿಸಿದೆ. ಏಪ್ರಿಲ್ 10ರಂದೇ ಇಪಿಎಫ್​ನ ಆ್ಯಪ್ ಸಾಫ್ಟ್​ವೇರ್​ನಲ್ಲಿ ಸೂಕ್ತ ಬದಲಾವಣೆ ಮಾಡಲಾಗಿದೆ. ಸೆಂಟ್ರಲ್ ಪ್ರಾವಿಡೆಂಟ್ ಫಂಡ್ ಕಮಿಷನರ್ (ಸಿಪಿಎಫ್​ಸಿ) ಅವರಿಂದಲೂ ಈ ಬದಲಾವಣೆಗೆ ಸಮಮ್ಮತಿ ಸಿಕ್ಕಿದೆ.

ಅರ್ಜಿ ನಮೂನೆ 31ರ ಮೂಲಕ ವಿವಿಧ ಉದ್ದೇಶಗಳಿಗೆ ಇಪಿಎಫ್ ಖಾತೆಯಲ್ಲಿನ ಹಣವನ್ನು ಭಾಗಶಃ ಹಿಂಪಡೆಯಬಹುದು. ಮದುವೆ, ಸಾಲ, ಮನೆ ಖರೀದಿ, ಮನೆ ನಿರ್ಮಾಣ, ವೈದ್ಯಕೀಯ ಚಿಕಿತ್ಸೆ ಹೀಗೆ ವಿವಿಧ ಕಾರಣಗಳ ಪಟ್ಟಿ ಇರುತ್ತದೆ. ಈ ಫಾರ್ಮ್​ನ 68ಜೆ ಪ್ಯಾರಾ ಅಡಿಯಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಇಪಿಎಫ್ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು. ಇಪಿಎಫ್ ಸದಸ್ಯ ಮಾತ್ರವಲ್ಲ, ಅವರ ಕುಟುಂಬ ಸದಸ್ಯರಿಗೆ ಅನಾರೋಗ್ಯವಾಗಿ ವೈದ್ಯಕೀಯ ಚಿಕಿತ್ಸೆ ಮಾಡಿಸುವುದಿದ್ದಾಗಲೂ ಹಣ ಹಿಂಪಡೆಯುವ ಅವಕಾಶ ಇರುತ್ತದೆ.

ಇದನ್ನೂ ಓದಿ: ಕೆಲಸ ಬದಲಿಸಿದರೆ ಹಳೆಯ ಪಿಎಫ್ ಖಾತೆ ಬಗ್ಗೆ ಚಿಂತೆ ಬೇಡ; ತನ್ನಂತಾನೇ ಆಗುತ್ತೆ ಹಣ ವರ್ಗಾವಣೆ

ಇಲ್ಲಿ ಅರ್ಜಿ ನಮೂನೆ 31ರ ಜೊತೆಗೆ ಇಪಿಎಫ್ ಖಾತೆದಾರ ಕೆಲಸ ಮಾಡುವ ಸಂಸ್ಥೆ ಹಾಗೂ ವೈದ್ಯಕೀಯ ಚಿಕಿತ್ಸೆ ನೀಡುವ ವೈದ್ಯರಿಂದ ಸಹಿ ಮಾಡಿಸಲಾದ ಸಿ ಸರ್ಟಿಫಿಕೇಟ್ ಅನ್ನೂ ಸಲ್ಲಿಸಬೇಕು.

ಫಾರ್ಮ್ 31 ಅಲ್ಲಿ ಏನೇನಿದೆ?

ಇಪಿಎಫ್​ನ ಫಾರ್ಮ್ 31ನಲ್ಲಿ ವಿವಿಧ ಕಾರಣಗಳಿಗೆ ಹಣ ಹಿಂಪಡೆಯಲು ಅವಕಾಶ ಇದೆ. ಪ್ಯಾರಾ 68ಬಿ ಅಡಿಯಲ್ಲಿ ಮನೆ ಖರೀದಿ, ಮನೆ ನಿರ್ಮಾಣ, ನಿವೇಶನ ಖರೀದಿ ಕಾರಣ ನೀಡಬಹುದು.

ಇದನ್ನೂ ಓದಿ: ಇಪಿಎಫ್ ಖಾತೆ ವಿಲೀನಗೊಳಿಸಬಹುದು, ಆದರೆ ಎರಡು ಯುಎಎನ್ ಸಂಖ್ಯೆ ಸೇರಿಸಲು ಸಾಧ್ಯವಾ? ಇಲ್ಲಿದೆ ಕ್ರಮ

68ಬಿಬಿ ಪ್ಯಾರಾ ಅಡಿಯಲ್ಲಿ ಸಾಲ ಮರುಪಾವತಿ; 68ಎಚ್ ಅಡಿಯಲ್ಲಿ ವಿಶೇಷ ಸಂದರ್ಭಕ್ಕೆ ಅಡ್ವಾನ್ಸ್ ಅವಶ್ಯಕತೆ; 68ಜೆ ಅಡಿಯಲ್ಲಿ ವೈದ್ಯಕೀಯ ಚಿಕಿತ್ಸೆ; 68ಕೆ ಪ್ಯಾರಾ ಅಡಿಯಲ್ಲಿ ಮಕ್ಕಳ ಮದುವೆ ಮತ್ತು ಶಿಕ್ಷಣ ವೆಚ್ಚಕ್ಕೆ; 68ಎನ್ ಪ್ಯಾರಾ ಅಡಿಯಲ್ಲಿ ದೈಹಿಕ ವಿಶೇಷ ಚೇತನವಿರುವವರಿಗೆ; ಮತ್ತು 68ಎನ್ಎನ್ ಅಡಿಯಲ್ಲಿ ನಿವೃತ್ತಿಗೆ ಒಂದು ವರ್ಷ ಇರುವಂತೆ ಹಣ ವಿತ್​ಡ್ರಾ ಮಾಡಲು ಅವಕಾಶ ನೀಡಲಾಗಿರುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ