AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EPF rate: ಆರ್​ಬಿಐ ದರ ಕಡಿಮೆಗೊಳಿಸಿದ್ದರಿಂದ ಇಪಿಎಫ್​ಒ ಬಡ್ಡಿಯೂ ಕಡಿಮೆ ಆಗುತ್ತಾ? ಈ ವರ್ಷಕ್ಕೆ ಎಷ್ಟಿರಬಹುದು ಬಡ್ಡಿದರ? ಇಲ್ಲಿದೆ ಡೀಟೇಲ್ಸ್

EPFO deposit rates for 2024-25: ಆರ್​ಬಿಐ ತನ್ನ ರಿಪೋ ದರವನ್ನು ಶೇ. 6.50ರಿಂದ ಶೇ. 6.25ಕ್ಕೆ ಇಳಿಸಿದ ಬಳಿಕ ಇಪಿಎಫ್​ಒ ಕೂಡ ಬಡ್ಡಿ ಕಡಿಮೆ ಮಾಡಬಹುದು ಎನ್ನುವ ಪ್ರಶ್ನೆ ಎದ್ದಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ ಈ ಹಣಕಾಸು ವರ್ಷಕ್ಕೆ ಇಪಿಎಫ್​ಒನ ಬಡ್ಡಿದರದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇಲ್ಲ. 2023-24ಕ್ಕೆ ಇಪಿಎಫ್ ಠೇವಣಿಗಳಿಗೆ ಶೇ. 8.25ರಷ್ಟು ಬಡ್ಡಿ ನೀಡಲಾಗಿತ್ತು. 2024-25ರ ವರ್ಷಕ್ಕೂ ಇದೇ ದರ ಮುಂದುವರಿಯಬಹುದು ಎನ್ನಲಾಗಿದೆ.

EPF rate: ಆರ್​ಬಿಐ ದರ ಕಡಿಮೆಗೊಳಿಸಿದ್ದರಿಂದ ಇಪಿಎಫ್​ಒ ಬಡ್ಡಿಯೂ ಕಡಿಮೆ ಆಗುತ್ತಾ? ಈ ವರ್ಷಕ್ಕೆ ಎಷ್ಟಿರಬಹುದು ಬಡ್ಡಿದರ? ಇಲ್ಲಿದೆ ಡೀಟೇಲ್ಸ್
ಇಪಿಎಫ್​ಒ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 13, 2025 | 5:29 PM

Share

ನವದೆಹಲಿ, ಫೆಬ್ರುವರಿ 13: ಆರ್​ಬಿಐ ಕಳೆದ ವಾರ ಬಡ್ಡಿದರವನ್ನು ಇಳಿಸಿದ ಬಳಿಕ ಬ್ಯಾಂಕಿಂಗ್ ಹಾಗೂ ಇತರ ಕ್ಷೇತ್ರಗಳಲ್ಲಿ ಠೇವಣಿ ದರಗಳು ಮತ್ತು ಸಾಲದ ದರಗಳು ತುಸು ತಗ್ಗುವ ನಿರೀಕ್ಷೆ ಇದೆ. ಹಾಗೆಯೇ, ಸ್ಮಾಲ್ ಫೈನಾನ್ಸ್ ಸ್ಕೀಮ್​ಗಳ ಮೇಲೂ ಇದರ ಪರಿಣಾಮವಾಗಬಹುದು. ಉದ್ಯೋಗಿಗಳ ಇಪಿಎಫ್ ಹಣಕ್ಕೆ ನೀಡಲಾಗುವ ಬಡ್ಡಿಯಲ್ಲಿ ವ್ಯತ್ಯಾಸವಾಗಬಹುದೆ ಎನ್ನುವ ಅನುಮಾನ ಹಲವರಲ್ಲಿ ಹುಟ್ಟಿರಬಹುದು. ಇಪಿಎಫ್​ಒ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಸದ್ಯ ಇಪಿಎಫ್​ಒ 2023-24ರ ವರ್ಷಕ್ಕೆ ಶೇ. 8.2ರಷ್ಟು ವಾರ್ಷಿಕ ಬಡ್ಡಿ ನೀಡಿದೆ. ಈ ವರ್ಷಕ್ಕೂ (2024-25) ಅಷ್ಟೇ ಬಡ್ಡಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ದೇಶಾದ್ಯಂತ ಆರೂವರೆ ಕೋಟಿ ಇಪಿಎಫ್ ಖಾತೆಗಳಿವೆ. ಹಿಂದಿನ ಹಣಕಾಸು ವರ್ಷದಲ್ಲಿ (2023-24) ಇಪಿಎಫ್​ಒ ಬಳಿ 13 ಲಕ್ಷ ಕೋಟಿ ರೂ ನಿಧಿ ಇತ್ತು. ಇದಕ್ಕೆ ಶೇ. 8.25ರಷ್ಟು ಬಡ್ಡಿ ಸೇರಿಸಿದೆ. 2024-25ರ ಹಣಕಾಸು ವರ್ಷದಲ್ಲಿ 5 ಕೋಟಿ ಸಂಖ್ಯೆಯಲ್ಲಿ ಕ್ಲೇಮ್​ಗಳನ್ನು ಮಾಡಲಾಗಿದೆ. ಒಟ್ಟು 2.05 ಲಕ್ಷ ಕೋಟಿ ರೂನಷ್ಟು ಹಣವನ್ನು ಸದಸ್ಯರು ಹಿಂಪಡೆದಿದ್ದಾರೆ. 2023-24ಕ್ಕೆ ಹೋಲಿಸಿದರೆ ಈ ಕ್ಲೇಮ್ ಸಂಖ್ಯೆ ತುಸು ಕಡಿಮೆ ಆದರೂ ಹಿಂಪಡೆಯಲಾದ ಹಣದ ಪ್ರಮಾಣ ಹೆಚ್ಚಿದೆ.

ಇದನ್ನೂ ಓದಿ: Income Tax: 75,000 ರೂಗೆ ಟ್ಯಾಕ್ಸ್ ಡಿಡಕ್ಷನ್; 13.70 ಲಕ್ಷ ರೂವರೆಗೂ ತೆರಿಗೆ ಇಲ್ಲ; ಯಾರಿಗಿದೆ ಈ ಅವಕಾಶ? ಇಲ್ಲಿದೆ ಡೀಟೇಲ್ಸ್

ಇಪಿಎಫ್​ಒ ಸಂಸ್ಥೆ ಉದ್ಯೋಗಿಗಳ ಇಪಿಎಫ್ ಖಾತೆಯಲ್ಲಿರುವ ಹಣವನ್ನು ವಿವಿಧ ಡೆಟ್ ಸೆಕ್ಯೂರಿಟಿಗಳು, ಇಟಿಎಫ್ ಇತ್ಯಾದಿ ಕಡೆ ಹೂಡಿಕೆ ಮಾಡುತ್ತವೆ. ಡೆಟ್ ಫಂಡ್​ಗಳಲ್ಲಿ ಅದರ ಹೂಡಿಕೆ ಹೆಚ್ಚಿರುತ್ತದೆ. ಅದರಲ್ಲಿ ಸಿಗುವ ರಿಟರ್ಸ್ ಆಧಾರಿತವಾಗಿ ಇಪಿಎಫ್ ಹಣಕ್ಕೆ ಬಡ್ಡಿಯನ್ನು ನಿಗದಿ ಮಾಡಲಾಗುತ್ತದೆ.

ಇಪಿಎಫ್​ಒ ಸಂಸ್ಥೆ ಸ್ವತಂತ್ರವಾಗಿ ಬಡ್ಡಿದರ ನಿಗದಿ ಮಾಡುವ ಹಾಗಿಲ್ಲ. ಇಪಿಎಫ್​ಒ, ಕೇಂದ್ರೀಯ ಟ್ರಸ್ಟಿ ಮಂಡಳಿ ಮತ್ತು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ಮತ್ತಿತರರು ಸೇರಿ ಸಮಾಲೋಚನೆ ನಡೆಸುವುದುಂಟು. ಹೀಗೆ ನಿರ್ಧರಿಸಲಾದ ಬಡ್ಡಿದರವನ್ನು ಸಿಬಿಟಿ ಗಮನಕ್ಕೆ ತರಲಾಗುತ್ತದೆ.

ಇದನ್ನೂ ಓದಿ: ಕೆಲಸ ಬದಲಿಸಿದಾಗ ಹಳೆಯ ಇಪಿಎಫ್ ಹಣ ಹೊಸ ಖಾತೆಗೆ ವರ್ಗಾಯಿಸುವ ಕ್ರಮ

ಸಿಬಿಟಿ ಅನುಮೋದನೆ ಬಳಿಕ ಹಣಕಾಸು ಸಚಿವಾಲಯದ ಒಪ್ಪಿಯೂ ಬೇಕಾಗುತ್ತದೆ. ಇದಾದ ಬಳಿಕ ವರ್ಷದ ದ್ವಿತೀಯಾರ್ಧದಲ್ಲಿ ಇಪಿಎಫ್ ಖಾತೆಗಳಿಗೆ ಬಡ್ಡಿ ಹಣ ಜಮೆ ಆಗುತ್ತದೆ. ಅಂದರೆ, 2024-25ರ ಹಣಕಾಸು ವರ್ಷಕ್ಕೆ ಇಪಿಎಫ್ ಖಾತೆಗಳಲ್ಲಿರುವ ಹಣಕ್ಕೆ 2025ರ ಸೆಪ್ಟೆಂಬರ್ ಬಳಿಕ ಬಡ್ಡಿ ಜಮೆ ಆಗಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?