AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EPFO: ಇಪಿಎಫ್​ ಖಾತೆಗೆ ಆನ್​ಲೈನ್ ಮೂಲಕ ಬ್ಯಾಂಕ್ ವಿವರಗಳನ್ನು ಅಪ್​ಡೇಟ್ ಮಾಡಲು ಈ ವಿಧಾನ ಅನುಸರಿಸಿ

ಇಪಿಎಫ್​ ಖಾತೆಗೆ ಬ್ಯಾಂಕ್ ವಿವರಗಳನ್ನು ಆನ್​​ಲೈನ್ ಮೂಲಕ ಅಪ್​ಡೇಟ್ ಮಾಡುವ ವಿಧಾನದ ವಿವರ ಇಲ್ಲಿದೆ.

EPFO: ಇಪಿಎಫ್​ ಖಾತೆಗೆ ಆನ್​ಲೈನ್ ಮೂಲಕ ಬ್ಯಾಂಕ್ ವಿವರಗಳನ್ನು ಅಪ್​ಡೇಟ್ ಮಾಡಲು ಈ ವಿಧಾನ ಅನುಸರಿಸಿ
ಸಾಂದರ್ಭಿಕ ಚಿತ್ರ Image Credit source: google image
ಗಣಪತಿ ಶರ್ಮಾ
|

Updated on: Feb 06, 2023 | 6:30 PM

Share

ಉದ್ಯೋಗಿಗಳ ಭವಿಷ್ಯ ನಿಧಿ (EPF) ಸದಸ್ಯರು ತಮ್ಮ ಬ್ಯಾಂಕ್​ ಖಾತೆ ವಿವರ ಸರಿಯಾಗಿ ಇರುವಂತೆ ಮತ್ತು ಇಪಿಎಫ್ ಖಾತೆ ಸಕ್ರಿಯವಾಗಿರುವಂತೆ ನೋಡಿಕೊಳ್ಳಬೇಕು. ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO) ಚಂದಾದಾರರು ಈಗ ಆನ್​ಲೈನ್​ ಮೂಲಕವೇ ಬ್ಯಾಂಕ್​ ವಿವರಗಳನ್ನು ಅಪ್​ಡೇಟ್ ಮಾಡಬಹುದಾಗಿದೆ. ಈ ಸೇವೆಯನ್ನು ಬಳಸಿಕೊಳ್ಳಬೇಕಿದ್ದರೆ ಯೂನಿವರ್ಸಲ್ ಅಕೌಂಟ್ ನಂಬರ್ ಅಥವಾ ಯುಎಎನ್ (UAN) ಹೊಂದಿರಬೇಕಾಗುತ್ತದೆ. ಇಪಿಎಫ್​ ಎಂಬುದು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಒದಗಿಸುವ ನಿವೃತ್ತಿ ಯೋಜನೆಯಾಗಿದೆ. ಉದ್ಯೋಗಿಗಳು ತಮ್ಮ ವೇತನದ ಶೇ 12ರಷ್ಟು ಮೊತ್ತವನ್ನು ಪ್ರತಿ ತಿಂಗಳು ಇಪಿಎಫ್​​ನಲ್ಲಿ ಹೂಡಿಕೆ ಮಾಡಬೇಕಿದೆ. ಇಷ್ಟೇ ಪ್ರಮಾಣದ ಮೊತ್ತವನ್ನು ಉದ್ಯೋಗದಾತರೂ ಇಪಿಎಫ್​ ಖಾತೆಗೆ ಜಮೆ ಮಾಡಬೇಕಾಗುತ್ತದೆ. ಯುಎಎನ್​ ಸಂಖ್ಯೆಯನ್ನು ಇಪಿಎಫ್​ಒ ಒದಗಿಸುತ್ತದೆ. ವ್ಯಕ್ತಿಯು ಉದ್ಯೋಗದ ಸಂಸ್ಥೆಯನ್ನು ಬದಲಿಸಿದಾಗ ಸಮಸ್ಯೆ ಆಗದಿರಲು ಯುಎಎನ್​ ಸಹಕಾರಿಯಾಗಿದೆ.

ಇಪಿಎಫ್​ ಖಾತೆಗೆ ಆನ್​ಲೈನ್ ಮೂಲಕ ಬ್ಯಾಂಕ್ ವಿವರ ಅಪ್​ಡೇಟ್ ಮಾಡುವುದು ಹೇಗೆ?

  • ನಿಮ್ಮ ಯೂಸರ್​ನೇಮ್ ಮತ್ತು ಪಾಸ್​​ವರ್ಡ್ ಬಳಸಿಕೊಂಡು ಇಪಿಎಫ್​ಒ ಮೆಂಬರ್ ಪೋರ್ಟಲ್​ಗೆ ಲಾಗಿನ್ ಆಗಿ.
  • ಟಾಪ್ ಮೆನುವಿನಲ್ಲಿರುವ ‘ಮ್ಯಾನೇಜ್’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ನಂತರ ಡ್ರಾಪ್​ಡೌನ್ ಮಾಡಿ ‘ಕೆವೈಸಿ’ ಆಯ್ಕೆಯನ್ನು ಆಯ್ದುಕೊಳ್ಳಿ.
  • ದಾಖಲೆ ಅಪ್​ಡೇಟ್ ಮಾಡಬೇಕಿರುವ ‘ಬ್ಯಾಂಕ್​’ ಆಯ್ಕೆ ಮಾಡಿ.
  • ಈಗ ನೀವು ಬ್ಯಾಂಕ್​ ಖಾತೆ ಸಂಖ್ಯೆ, ಐಎಫ್​ಎಸ್​ಸಿ ಕೋಡ್ ಇತ್ಯಾದಿ ವಿವರಗಳನ್ನು ಅಪ್​ಡೇಟ್ ಮಾಡಬಹುದು. ನಂತರ ‘ಸೇವ್’ ಅನ್ನು ಕ್ಲಿಕ್ ಮಾಡಿ.
  • ಒಮ್ಮೆ ನೀವು ಕೆವೈಸಿ ಅಪ್​ಡೇಟ್ ಮಾಡಿ ಸೇವ್ ಮಾಡಿದರೆ, ‘ಕೆವೈಸಿ ಪೆಂಡಿಂಗ್ ಫಾರ್ ಅಪ್ರೂವಲ್’ ಎಂದು ಕಾಣಿಸುತ್ತದೆ.
  • ನಂತರ ನಿಮ್ಮ ಉದ್ಯೋಗದಾತರಿಗೆ ದಾಖಲೆಗಳನ್ನು ಒದಗಿಸಿ.
  • ಉದ್ಯೋಗದಾತರು ದಾಖಲೆಗಳನ್ನು ದೃಢೀಕರಿಸಿದ ಬಳಿಕ ‘ಡಿಜಿಟಲ್ ಅಪ್ರೂವ್ಡ್ ಕೆವೈಸಿ’ ಎಂಬ ಸಂದೇಶ ಪೋರ್ಟಲ್​​ನಲ್ಲಿ ಕಾಣಿಸುತ್ತದೆ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್​ಎಂಎಸ್​ ಕೂಡ ಬರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ