AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

EPFO: ಇಪಿಎಫ್​ ಖಾತೆಗೆ ಆನ್​ಲೈನ್ ಮೂಲಕ ಬ್ಯಾಂಕ್ ವಿವರಗಳನ್ನು ಅಪ್​ಡೇಟ್ ಮಾಡಲು ಈ ವಿಧಾನ ಅನುಸರಿಸಿ

ಇಪಿಎಫ್​ ಖಾತೆಗೆ ಬ್ಯಾಂಕ್ ವಿವರಗಳನ್ನು ಆನ್​​ಲೈನ್ ಮೂಲಕ ಅಪ್​ಡೇಟ್ ಮಾಡುವ ವಿಧಾನದ ವಿವರ ಇಲ್ಲಿದೆ.

EPFO: ಇಪಿಎಫ್​ ಖಾತೆಗೆ ಆನ್​ಲೈನ್ ಮೂಲಕ ಬ್ಯಾಂಕ್ ವಿವರಗಳನ್ನು ಅಪ್​ಡೇಟ್ ಮಾಡಲು ಈ ವಿಧಾನ ಅನುಸರಿಸಿ
ಸಾಂದರ್ಭಿಕ ಚಿತ್ರ Image Credit source: google image
ಗಣಪತಿ ಶರ್ಮಾ
|

Updated on: Feb 06, 2023 | 6:30 PM

Share

ಉದ್ಯೋಗಿಗಳ ಭವಿಷ್ಯ ನಿಧಿ (EPF) ಸದಸ್ಯರು ತಮ್ಮ ಬ್ಯಾಂಕ್​ ಖಾತೆ ವಿವರ ಸರಿಯಾಗಿ ಇರುವಂತೆ ಮತ್ತು ಇಪಿಎಫ್ ಖಾತೆ ಸಕ್ರಿಯವಾಗಿರುವಂತೆ ನೋಡಿಕೊಳ್ಳಬೇಕು. ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO) ಚಂದಾದಾರರು ಈಗ ಆನ್​ಲೈನ್​ ಮೂಲಕವೇ ಬ್ಯಾಂಕ್​ ವಿವರಗಳನ್ನು ಅಪ್​ಡೇಟ್ ಮಾಡಬಹುದಾಗಿದೆ. ಈ ಸೇವೆಯನ್ನು ಬಳಸಿಕೊಳ್ಳಬೇಕಿದ್ದರೆ ಯೂನಿವರ್ಸಲ್ ಅಕೌಂಟ್ ನಂಬರ್ ಅಥವಾ ಯುಎಎನ್ (UAN) ಹೊಂದಿರಬೇಕಾಗುತ್ತದೆ. ಇಪಿಎಫ್​ ಎಂಬುದು ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ ಒದಗಿಸುವ ನಿವೃತ್ತಿ ಯೋಜನೆಯಾಗಿದೆ. ಉದ್ಯೋಗಿಗಳು ತಮ್ಮ ವೇತನದ ಶೇ 12ರಷ್ಟು ಮೊತ್ತವನ್ನು ಪ್ರತಿ ತಿಂಗಳು ಇಪಿಎಫ್​​ನಲ್ಲಿ ಹೂಡಿಕೆ ಮಾಡಬೇಕಿದೆ. ಇಷ್ಟೇ ಪ್ರಮಾಣದ ಮೊತ್ತವನ್ನು ಉದ್ಯೋಗದಾತರೂ ಇಪಿಎಫ್​ ಖಾತೆಗೆ ಜಮೆ ಮಾಡಬೇಕಾಗುತ್ತದೆ. ಯುಎಎನ್​ ಸಂಖ್ಯೆಯನ್ನು ಇಪಿಎಫ್​ಒ ಒದಗಿಸುತ್ತದೆ. ವ್ಯಕ್ತಿಯು ಉದ್ಯೋಗದ ಸಂಸ್ಥೆಯನ್ನು ಬದಲಿಸಿದಾಗ ಸಮಸ್ಯೆ ಆಗದಿರಲು ಯುಎಎನ್​ ಸಹಕಾರಿಯಾಗಿದೆ.

ಇಪಿಎಫ್​ ಖಾತೆಗೆ ಆನ್​ಲೈನ್ ಮೂಲಕ ಬ್ಯಾಂಕ್ ವಿವರ ಅಪ್​ಡೇಟ್ ಮಾಡುವುದು ಹೇಗೆ?

  • ನಿಮ್ಮ ಯೂಸರ್​ನೇಮ್ ಮತ್ತು ಪಾಸ್​​ವರ್ಡ್ ಬಳಸಿಕೊಂಡು ಇಪಿಎಫ್​ಒ ಮೆಂಬರ್ ಪೋರ್ಟಲ್​ಗೆ ಲಾಗಿನ್ ಆಗಿ.
  • ಟಾಪ್ ಮೆನುವಿನಲ್ಲಿರುವ ‘ಮ್ಯಾನೇಜ್’ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ನಂತರ ಡ್ರಾಪ್​ಡೌನ್ ಮಾಡಿ ‘ಕೆವೈಸಿ’ ಆಯ್ಕೆಯನ್ನು ಆಯ್ದುಕೊಳ್ಳಿ.
  • ದಾಖಲೆ ಅಪ್​ಡೇಟ್ ಮಾಡಬೇಕಿರುವ ‘ಬ್ಯಾಂಕ್​’ ಆಯ್ಕೆ ಮಾಡಿ.
  • ಈಗ ನೀವು ಬ್ಯಾಂಕ್​ ಖಾತೆ ಸಂಖ್ಯೆ, ಐಎಫ್​ಎಸ್​ಸಿ ಕೋಡ್ ಇತ್ಯಾದಿ ವಿವರಗಳನ್ನು ಅಪ್​ಡೇಟ್ ಮಾಡಬಹುದು. ನಂತರ ‘ಸೇವ್’ ಅನ್ನು ಕ್ಲಿಕ್ ಮಾಡಿ.
  • ಒಮ್ಮೆ ನೀವು ಕೆವೈಸಿ ಅಪ್​ಡೇಟ್ ಮಾಡಿ ಸೇವ್ ಮಾಡಿದರೆ, ‘ಕೆವೈಸಿ ಪೆಂಡಿಂಗ್ ಫಾರ್ ಅಪ್ರೂವಲ್’ ಎಂದು ಕಾಣಿಸುತ್ತದೆ.
  • ನಂತರ ನಿಮ್ಮ ಉದ್ಯೋಗದಾತರಿಗೆ ದಾಖಲೆಗಳನ್ನು ಒದಗಿಸಿ.
  • ಉದ್ಯೋಗದಾತರು ದಾಖಲೆಗಳನ್ನು ದೃಢೀಕರಿಸಿದ ಬಳಿಕ ‘ಡಿಜಿಟಲ್ ಅಪ್ರೂವ್ಡ್ ಕೆವೈಸಿ’ ಎಂಬ ಸಂದೇಶ ಪೋರ್ಟಲ್​​ನಲ್ಲಿ ಕಾಣಿಸುತ್ತದೆ. ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್​ಎಂಎಸ್​ ಕೂಡ ಬರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್