AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

EPF: ಕೆಲಸ ಬಿಡೋವರೆಗೂ ಕಾಯಬೇಕಿಲ್ಲ… 10 ವರ್ಷಕ್ಕೊಮ್ಮೆ ಪೂರ್ಣ ಇಪಿಎಫ್ ಹಣ ಹಿಂಪಡೆಯಲು ಅವಕಾಶ

EPFO 10 year rule: ಇಪಿಎಫ್ ಅಕೌಂಟ್​ನಿಂದ ಪೂರ್ಣ ಹಣ ಹಿಂಪಡೆಯಲು ನಿವೃತ್ತರಾಗುವವರೆಗೂ ಕಾಯಬೇಕಾಗುವುದಿಲ್ಲ. ಸರ್ಕಾರವು 10 ವರ್ಷದ ನಿಯಮ ರೂಪಿಸಲು ಆಲೋಚಿಸಿದೆ. ಪ್ರತೀ 10 ವರ್ಷಕ್ಕೊಮ್ಮೆ ಪೂರ್ಣ ಪಿಎಫ್ ಹಣ ವಿತ್​ಡ್ರಾ ಮಾಡಿಕೊಳ್ಳಲು ಅವಕಾಶ ನೀಡಲಿದೆ. ನೂರಕ್ಕೆ ನೂರು ಹಣ ಅಲ್ಲದಿದ್ದರೂ 10 ವರ್ಷಕ್ಕೊಮ್ಮೆ ಶೇ. 60ರಷ್ಟಾದರೂ ಹಣ ಹಿಂಪಡೆಯಲಾಗುವಂತೆ ನಿಯಮ ರೂಪಿಸಬಹುದು ಎನ್ನಲಾಗಿದೆ.

EPF: ಕೆಲಸ ಬಿಡೋವರೆಗೂ ಕಾಯಬೇಕಿಲ್ಲ... 10 ವರ್ಷಕ್ಕೊಮ್ಮೆ ಪೂರ್ಣ ಇಪಿಎಫ್ ಹಣ ಹಿಂಪಡೆಯಲು ಅವಕಾಶ
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 17, 2025 | 3:01 PM

Share

ನವದೆಹಲಿ, ಜುಲೈ 17: ಇಪಿಎಫ್ ಅಕೌಂಟ್​​ನಿಂದ (EPF) ಪೂರ್ಣ ಹಣ ಹಿಂಪಡೆಯಬೇಕೆಂದರೆ ನಿವೃತ್ತರಾಗುವವರೆಗೂ ಕಾಯಬೇಕು. ಇಲ್ಲವೇ ಕೆಲಸ ಕಳೆದುಕೊಂಡು ಮೂರು ತಿಂಗಳು ನಿರುದ್ಯೋಗಿಯಾಗಿರಬೇಕು. ಸರ್ಕಾರ ಈ ಸಂಬಂಧ ಕೆಲ ನಿರ್ಬಂಧಗಳನ್ನು ಸಡಿಲಿಸಿ ನಿಯಮ ರೂಪಿಸಿದೆ. ಪ್ರತೀ 10 ವರ್ಷಕ್ಕೊಮ್ಮೆ ಇಪಿಎಫ್ ಹಣವನ್ನು ಪೂರ್ಣವಾಗಿ ಹಿಂಪಡೆಯುವ ಅವಕಾಶವನ್ನು ನೀಡಿದೆ ಎಂದು ಮನಿಕಂಟ್ರೋಲ್ ವೆಬ್​ಸೈಟ್ ತನ್ನ ಎಕ್ಸ್​ಕ್ಲೂಸಿವ್ ವರದಿಯಲ್ಲಿ ತಿಳಿಸಿದೆ.

‘ಸಬ್​ಸ್ಕ್ರೈಬರ್​ಗಳು ತಮ್ಮ ಹಣದ ನಿರ್ವಹಣೆ ಮತ್ತು ರಿಟೈರ್ಮೆಂಟ್ ಪ್ಲಾನಿಂಗ್ ಅನ್ನು ಹೇಗೆ ಬೇಕಾದರೂ ಮಾಡಲು ಅವಕಾಶ ಇರಬೇಕು. ಹತ್ತು ವರ್ಷಕ್ಕೊಮ್ಮೆ ಇಪಿಎಫ್ ಹಣ ವಿತ್​ಡ್ರಾ ಮಾಡಲಾದರೂ, ಮತ್ತೂ 10 ವರ್ಷದಲ್ಲಿ ಒಂದಷ್ಟು ಹಣ ಜಮೆ ಆಗಿರುತ್ತದೆ. ಈ ಹಣವನ್ನು ಏನು ಮಾಡಬೇಕು ಎಂಬುದನ್ನು ಅವರು ನಿರ್ಧರಿಸುವಂತಾಗಬೇಕು’ ಎಂದು ಇಪಿಎಫ್​ಒನ ಇಬ್ಬರು ಅಧಿಕಾರಿಗಳು ತಮಗೆ ತಿಳಿಸಿದ್ದಾಗಿ ಈ ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಇಪಿಎಫ್ ಅಕೌಂಟ್​​ಗಳಿಗೆ ವಾರ್ಷಿಕ ಬಡ್ಡಿ ಈ ವಾರವೇ ಜಮೆ? ಹಣ ಬಂದಿದೆಯಾ ಪರಿಶೀಲಿಸುವ ವಿಧಾನಗಳು

ಇದನ್ನೂ ಓದಿ
Image
ಇಪಿಎಫ್ ಬ್ಯಾಲನ್ಸ್ ಪರಿಶೀಲಿಸುವುದು ಹೇಗೆ?
Image
ಇಪಿಎಫ್ ಹಣಕ್ಕೆ ಟ್ಯಾಕ್ಸ್ ಕಟ್ಟಬೇಕಾ?
Image
ಇಪಿಎಫ್ ಅಡ್ವಾನ್ಸ್ ಹಣ: 5 ಲಕ್ಷ ರೂಗೆ ಮಿತಿ ಏರಿಕೆ
Image
ಇಎಲ್​​ಐ ಸ್ಕೀಮ್​ಗೆ ಯುಎಎನ್ ಆ್ಯಕ್ಟಿವೇಟ್ ಮಾಡುವ ಕ್ರಮ

ಒಂದೊಮ್ಮೆ 10 ವರ್ಷಕ್ಕೆ ಪೂರ್ಣ ಬ್ಯಾಲನ್ಸ್ ಮೊತ್ತ ಹಿಂಪಡೆಯಲು ಅನುಮತಿಸುವ ನಿರ್ಧಾರ ತೆಗೆದುಕೊಳ್ಳದೇ ಹೋದರೂ, ಶೇ. 60ರಷ್ಟನ್ನಾದರೂ ವಿತ್​ಡ್ರಾ ಮಾಡಲು ಅನುಮತಿಸಬಹುದು. ಈ ವಿಚಾರವನ್ನೂ ಸರಕಾರ ಅವಲೋಕಿಸುತ್ತಿದೆ ಎಂದು ಹೇಳಲಾಗಿದೆ.

ಸದ್ಯ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು 7.4 ಇಪಿಎಫ್ ಸದಸ್ಯರನ್ನು ಹೊಂದಿದ್ದು, ಅವರೆಲ್ಲರ ಇಪಿಎಫ್ ಅಕೌಂಟ್​​ಗಳಲ್ಲಿ ಇರುವ ಹಣ ಬರೋಬ್ಬರಿ 25 ಲಕ್ಷ ಕೋಟಿ ರೂ. ಇಪಿಎಫ್ ಹಣ ಹಿಂಪಡೆಯಲು ಈಗಲೂ ಕೂಡ 10 ವರ್ಷ ಕಾಯಬೇಕಿಲ್ಲ. ಮನೆ ನಿರ್ಮಾಣ, ವೈದ್ಯಕೀಯ ತುರ್ತು ಚಿಕಿತ್ಸೆ, ಶಿಕ್ಷಣ, ಮದುವೆ ಕಾರಣಗಳಿಗೆ ಇಪಿಎಫ್ ಅಕೌಂಟ್​ನಿಂದ ಅಡ್ವಾನ್ಸ್ ಹಣ ಹಿಂಪಡೆಯಲು ಅವಕಾಶ ಇದೆ.

ನಿವೇಶನ ಖರೀದಿಸಲು ಅಥವಾ ಮನೆ ನಿರ್ಮಾಣ ಮಾಡಲು ಶೇ. 90ರವರೆಗೆ ಇಪಿಎಫ್ ಹಣ ಹಿಂಪಡೆಯಬಹುದು. ಈ ಮೊದಲು ಐದು ವರ್ಷ ಪಿಎಫ್ ಅಕೌಂಟ್​ನಿಂದ ಯಾವುದೇ ಹಣ ಹಿಂಪಡೆಯದೇ ಇದ್ದಾಗ ಮನೆ ನಿರ್ಮಾಣಕ್ಕೆ ಹಣ ಹಿಂಪಡೆಯಬಹುದಿತ್ತು. ಅದನ್ನು ಈಗ ಮೂರು ವರ್ಷಕ್ಕೆ ಇಳಿಸಲಾಗಿದೆ. ತುರ್ತು ಸಂದರ್ಭಗಳಿಗೆ ಹಣದ ಅವಶ್ಯಕತೆ ಪೂರೈಸಲು ಈ ಅವಕಾಶ ಕೊಡಲಾಗುತ್ತಿದೆ.

ಇದನ್ನೂ ಓದಿ: ಇಪಿಎಫ್ ಠೇವಣಿ ಮತ್ತು ಬಡ್ಡಿಗೆ ಟ್ಯಾಕ್ಸ್ ಇರುತ್ತಾ? ಎಷ್ಟು ಟಿಡಿಎಸ್ ಕಡಿತವಾಗುತ್ತೆ? ಇಲ್ಲಿದೆ ಡೀಟೇಲ್ಸ್

ಈಗ 10 ವರ್ಷದ ವಿತ್​​ಡ್ರಾ ನಿಯಮದ ಪ್ರಕಾರ, ಹಣ ಹಿಂಪಡೆಯಲು ಯಾವುದೇ ಕಾರಣ ನೀಡುವ ಅಗತ್ಯ ಇರುವುದಿಲ್ಲ. ಇಪಿಎಫ್ ಸದಸ್ಯರು ತಮ್ಮ ಹಣವನ್ನು ಬೇರೆಲ್ಲಿಯಾದರೂ ಹೂಡಕೆ ಮಾಡಬಹುದು. ಸದ್ಯ ಇಪಿಎಫ್​​ನಲ್ಲಿ ಶೇ. 8.25ರಷ್ಟು ವಾರ್ಷಿಕ ಬಡ್ಡಿ ಸಿಗುತ್ತದೆ. ಅದರ ಬದಲು ಜನರು ಶೇ. 10-16 ವಾರ್ಷಿಕ ಲಾಭ ತರುವ ಮ್ಯುಚುವಲ್ ಫಂಡ್​ಗಳಲ್ಲಿಯೋ, ಷೇರುಗಳಲ್ಲಿಯೋ ಹೂಡಿಕೆ ಮಾಡಬಹುದು. ಈ ಕಾರಣಕ್ಕೆ ಸರ್ಕಾರವು 10 ವರ್ಷದ ನಿಯಮ ರೂಪಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್