AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FD Rates: ಈ ಬ್ಯಾಂಕ್​​ನಲ್ಲಿ ಎಫ್​ಡಿ ಇಟ್ಟರೆ ಹಿರಿಯ ನಾಗರಿಕರಿಗೆ ಸಿಗಲಿದೆ ಶೇ 9ರಷ್ಟು ಬಡ್ಡಿ

ಪರಿಷ್ಕೃತ ಬಡ್ಡಿ ದರ ಫೆಬ್ರವರಿ 13ರಿಂದಲೇ ಅನ್ವಯವಾಗಲಿದೆ. ಇದೀಗ ಸ್ಥಿರ ಠೇವಣಿ (FD) ಇಡುವ ಗ್ರಾಹಕರಿಗೆ ಶೇ 8.11ರ ವರೆಗೆ ಹಾಗೂ ಹಿರಿಯ ನಾಗರಿಕರಿಗೆ ಶೇ 8.71ರ ವರೆಗೆ ಬಡ್ಡಿ ದೊರೆಯಲಿದೆ.

FD Rates: ಈ ಬ್ಯಾಂಕ್​​ನಲ್ಲಿ ಎಫ್​ಡಿ ಇಟ್ಟರೆ ಹಿರಿಯ ನಾಗರಿಕರಿಗೆ ಸಿಗಲಿದೆ ಶೇ 9ರಷ್ಟು ಬಡ್ಡಿ
SBI vs ICICI vs HDFC vs PPF FD Rates 2023 Comparison of Latest Fixed Deposit Interest Rate
Follow us
Ganapathi Sharma
|

Updated on: Feb 14, 2023 | 11:10 AM

ಆರ್​ಬಿಐ ರೆಪೊ ದರ ಹೆಚ್ಚಿಸಿರುವ ಬೆನ್ನಲ್ಲೇ ಬ್ಯಾಂಕ್​ಗಳು ಮತ್ತು ಹಣಕಾಸು ಸಂಸ್ಥೆಗಳು ಸಾಲ ಹಾಗೂ ಠೇವಣಿಗಳ (Deposits) ಮೇಲಿನ ಬಡ್ಡಿ ದರ ಹೆಚ್ಚಿಸಲು ಆರಂಭಿಸಿವೆ. ಆ್ಯಕ್ಸಿಸ್ ಬ್ಯಾಂಕ್ ಹಾಗೂ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ಗಳು ಈಗಾಗಲೇ ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಳ ಮಾಡಿದ್ದು ಇದೀಗ ಫಿನ್​​ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (Fincare Small Finance Bank) ಸರದಿ. ಪರಿಷ್ಕೃತ ಬಡ್ಡಿ ದರ ಫೆಬ್ರವರಿ 13ರಿಂದಲೇ ಅನ್ವಯವಾಗಲಿದೆ. ಇದೀಗ ಸ್ಥಿರ ಠೇವಣಿ (FD) ಇಡುವ ಗ್ರಾಹಕರಿಗೆ ಶೇ 8.11ರ ವರೆಗೆ ಹಾಗೂ ಹಿರಿಯ ನಾಗರಿಕರಿಗೆ ಶೇ 8.71ರ ವರೆಗೆ ಬಡ್ಡಿ ದೊರೆಯಲಿದೆ. ಆದರೆ, ಕನಿಷ್ಠ 5,000 ರೂ. ಠೇವಣಿ ಇಡಬೇಕು.

ದೀರ್ಘಾವಧಿಯ ಗುರಿ ಸಾಧಿಸುವುದಕ್ಕಾಗಿ ಗ್ರಾಹಕರಿಗೆ ನಾವು ಉನ್ನತ ಹಣಕಾಸು ಸೇವೆ ನೀಡುತ್ತಿದ್ದೇವೆ. ಹೆಚ್ಚಿನ ಬಡ್ಡಿ ನೀಡುತ್ತಿದ್ದೇವೆ. ಎಫ್​​ಡಿ ದರ ಹೆಚ್ಚಳ ಮಾಡಿರುವುದೂ ಈ ನಿರ್ಧಾರಗಳಲ್ಲಿ ಒಂದಾಗಿದೆ ಎಂದು ಬ್ಯಾಂಕ್​​ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆಶಿಶ್ ಮಿಶ್ರಾ ತಿಳಿಸಿದ್ದಾರೆ.

ಎಫ್​ಡಿ ಖಾತೆ ತೆರೆಯುವುದು ಹೇಗೆ?

ಫಿನ್​​ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಶಾಖೆಗೆ ತೆರಳಿ ಅಥವಾ ಆನ್​ಲೈನ್ ಮೂಲಕ ಎಫ್​ಡಿ ಖಾತೆ ತೆರೆಯಬಹುದಾಗಿದೆ. ಮೊಬೈಲ್ ಬ್ಯಾಂಕಿಂಗ್ ಅಥವಾ ಇಂಟರ್​​ನೆಟ್ ಬ್ಯಾಂಕಿಂಗ್ ಮೂಲಕವೂ ಎಫ್​​​ಡಿ ಆರಂಭಿಸಬಹುದಾಗಿದೆ. ಬಡ್ಡಿ ದರ ಹೆಚ್ಚಳದ ಮೂಲಕ ನಾವು ಗ್ರಾಹಕ ಕೇಂದ್ರಿತ ಸೇವೆ ಮುಂದುವರಿಸುತ್ತಿದ್ದೇವೆ ಎಂದು ಆಶಿಶ್ ಮಿಶ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: Ujjivan Small Finance Bank: 560 ದಿನಗಳ ಠೇವಣಿಗೆ ಶೇ 8.20ರ ವರೆಗೆ ಬಡ್ಡಿ ನೀಡುತ್ತಿದೆ ಈ ಬ್ಯಾಂಕ್

ಫಿನ್​​ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಕರೆಂಟ್ & ಸೇವಿಂಗ್ಸ್ ಅಕೌಂಟ್, ಚಿನ್ನದ ಅಡಮಾನ ಸಾಲ, ಆಸ್ತಿ ಅಡಮಾನ ಸಾಲ, ಆರ್​ಡಿ, ಎಫ್​ಡಿ ಸೇರಿ ಅನೇಕ ಸೇವೆಗಳನ್ನು ಒದಗಿಸುತ್ತಿದೆ.

2022ರ ಮಾರ್ಚ್​ 31ರಂದು ಬ್ಯಾಂಕ್​ ನೀಡಿದ್ದ ದಾಖಲೆ ಪ್ರಕಾರ, ಬ್ಯಾಂಕ್​​ಗೆ 19 ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಲ್ಲಿ 32 ಲಕ್ಷಕ್ಕೂ ಹೆಚ್ಚು ಗ್ರಾಹಕರು ಇದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ