AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 30ರವರೆಗೂ ಡೆಡ್​ಲೈನ್ ಇರುವ ಹಣಕಾಸು ಕಾರ್ಯಗಳಿವು; ತಪ್ಪದೇ ಮಾಡಿ

September Deadline To Complete These Financial Tasks: ಎರಡು ಸಾವಿರ ರೂ ನೋಟುಗಳ ವಿನಿಮಯಕ್ಕೆ ಡೆಡ್​ಲೈನ್; ಸಣ್ಣ ಉಳಿತಾಯ ಯೋಜನೆಗಳನ್ನು ಹೊಂದಿದವರು ಆಧಾರ್ ಸಲ್ಲಿಕೆ ಕಡ್ಡಾಯ; ಡಿಮ್ಯಾಟ್ ಖಾತೆಗೆ ನಾಮಿನಿ ಸೇರಿಸುವುದು ಹೀಗೆ ವಿವಿಧ ಹಣಕಾಸು ಕಾರ್ಯಗಳಿಗೆ ಈ ತಿಂಗಳೇ ಡೆಡ್​ಲೈನ್ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ನಾಗರಿಕರಿಗೆ ಮಾಡಿರುವ ವೀಕೇರ್ ಸ್ಕೀಮ್ ಪಡೆಯಲೂ ಈ ತಿಂಗಳೇ ಕೊನೆ.

ಸೆಪ್ಟೆಂಬರ್ 30ರವರೆಗೂ ಡೆಡ್​ಲೈನ್ ಇರುವ ಹಣಕಾಸು ಕಾರ್ಯಗಳಿವು; ತಪ್ಪದೇ ಮಾಡಿ
ಎರಡು ಸಾವಿರ ರೂ ನೋಟು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 26, 2023 | 5:12 PM

Share

ಸೆಪ್ಟೆಂಬರ್ ತಿಂಗಳು ಮುಗಿಯುತ್ತಾ ಬಂದಿದೆ. ದಿನಗಳು ಹೋಗುವುದು ಗೊತ್ತೇ ಆಗುವುದಿಲ್ಲ. ಈ ವೇಳೆ ಕೆಲ ಮುಖ್ಯ ಡೆಡ್​ಲೈನ್​ಗಳು (Deadlines) ನೆನಪಿಗೆ ಬರುವುದೇ ಇಲ್ಲ. ಅವಧಿ ಮೀರಿದ ಬಳಿಕ ಚಿಂತಿಸಿ ಫಲ ಇರುವುದಿಲ್ಲ. ಈ ಸೆಪ್ಟಂಬರ್ 30ಕ್ಕೆ ಕೆಲವಾರು ಮುಖ್ಯ ಹಣಕಾಸು ಕಾರ್ಯಗಳಿಗೆ ಡೆಡ್​ಲೈನ್ ಇದೆ. ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ (small savings schemes) ಆಧಾರ್ ಲಿಂಕ್ ಮಾಡುವುದರಿಂದ ಹಿಡಿದು ಎರಡು ಸಾವಿರ ರೂ ಮುಖಬೆಲೆಯ ನೋಟುಗಳ ವಿನಿಯಮದವರೆಗೂ ವಿವಿಧ ಕಾರ್ಯಗಳನ್ನು ಈ ತಿಂಗಳೊಳಗೆ ಮಾಡಬೇಕಾಗಿದೆ. ಈ ಬಗ್ಗೆ ಒಂದು ವರದಿ.

ಎರಡು ಸಾವಿರ ರೂ ನೋಟುಗಳ ವಿನಿಮಯಕ್ಕೆ ಡೆಡ್​ಲೈನ್

ಮೇ ತಿಂಗಳಲ್ಲಿ ಆರ್​ಬಿಐ 2,000 ರೂ ಮುಖಬೆಲೆಯ ನೋಟನ್ನು ಚಲಾವಣೆಯಿಂದ ಹಿಂಪಡೆಯುತ್ತಿರುವುದಾಗಿ ಘೋಷಣೆ ಮಾಡಿತು. ಅದರಂತೆ ಆ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಿಗೆ ಮರಳಿಸಿ, ಸಮಾನ ಮೌಲ್ಯದ ಬೇರೆ ನೋಟುಗಳನ್ನು ಪಡೆಯಲು ಅವಕಾಶ ನೀಡಿದೆ. ತಮ್ಮ ಖಾತೆಗೆ ಡೆಪಾಸಿಟ್ ಮಾಡಲು ಮತ್ತು ನೋಟು ವಿನಿಮಯ ಮಾಡಲು ಸೆಪ್ಟೆಂಬರ್ 30ರವರೆಗೂ ಕಾಲಾವಕಾಶ ನೀಡಿದೆ. ಆ ಡೆಡ್​ಲೈನ್ ಬಳಿಕ 2,000 ರೂ ನೋಟು ಅಮಾನ್ಯವಾಗುತ್ತದಾ ಎಂಬುದು ಗೊತ್ತಾಗಿಲ್ಲ.

ಇದನ್ನೂ ಓದಿ: ವರ್ಕ್ ಫ್ರಂ ಹೋಮ್ ಕಡಿಮೆ ಆಗುತ್ತಿದ್ದಂತೆಯೇ ಭಾರತದಲ್ಲಿ ಸಿಗರೇಟ್ ಮಾರಾಟ ಹೆಚ್ಚಳ

ಸಣ್ಣ ಉಳಿತಾಯ ಯೋಜನೆಗಳನ್ನು ಹೊಂದಿದವರು ಆಧಾರ್ ಸಲ್ಲಿಕೆ ಕಡ್ಡಾಯ

ಸಣ್ಣ ಉಳಿತಾಯ ಯೋಜನೆಗಳನ್ನು ಪಡೆಯಬೇಕಾದರೆ ಈಗ ಆಧಾರ್ ಸಲ್ಲಿಕೆ ಕಡ್ಡಾಯ ಇದೆ. ಆದರೆ, ಈ ಹಿಂದೆ ಪಿಪಿಎಫ್, ಸುಕನ್ಯಾ ಸಮೃದ್ದಿ ಯೋಜನೆ, ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್, ಸೀನಿಯರ್ ಸಿಟಿಜನ್ ಸ್ಕೀಮ್ ಇತ್ಯಾದಿ ಸ್ಮಾಲ್ ಸೇವಿಂಗ್ಸ್ ಯೋಜನೆ ಮಾಡಿಸಿದವರಲ್ಲಿ ಹಲವರು ಆಧಾರ್ ದಾಖಲೆ ಸಲ್ಲಿಸಿರಲಿಲ್ಲ. ಆಧಾರ್ ಲಿಂಕ್ ಆಗಿಲ್ಲದ ಸೇವಿಂಗ್ಸ್ ಸ್ಕೀಮ್ ಮೆಚ್ಯೂರ್ ಆದಾಗ ಹಣ ಹಿಂಪಡೆಯಲು ಆಗುವುದಿಲ್ಲ. ಆಧಾರ್ ಲಿಂಕ್ ಮಾಡಲು ಸೆಪ್ಟೆಂಬರ್ 30ರವರೆಗೆ ಸರ್ಕಾರ ಕಾಲಾವಕಾಶ ಕೊಟ್ಟಿದೆ.

ಡಿಮ್ಯಾಟ್ ಖಾತೆಗೆ ನಾಮಿನಿ ಸೇರಿಸುವುದು

ಷೇರು ಮಾರುಕಟ್ಟೆ ಅಥವಾ ಮ್ಯುಚುವಲ್ ಫಂಡ್​ಗಳಲ್ಲಿ ಹಣ ಹೂಡಿಕೆ ಮಾಡಲು ಡಿಮ್ಯಾಟ್ ಅಕೌಂಟ್ ತೆರೆಯಬೇಕಾಗುತ್ತದೆ. ಇಂಥ ಡೀಮ್ಯಾಟ್ ಖಾತೆಗೆ ನಾಮಿನಿ ಸೇರಿಸುವುದನ್ನು ಸರ್ಕಾರ ಕಡ್ಡಾಯಪಡಿಸಿದೆ. ಸೆ. 30ಕ್ಕೆ ಡೆಡ್​ಲೈನ್ ಇದೆ. ಡಿಮಾಟ್ ಖಾತೆಗೆ ನಾಮಿನಿ ಹೆಸರಿಸಿದವರಲ್ಲಿ ಹೆಚ್ಚಿನವರು ಜಂಟಿ ಖಾತೆ ಹೊಂದಿದವರಾಗಿದ್ದಾರೆ.

ಇದನ್ನೂ ಓದಿ: ರೆಕರಿಂಗ್ ಡೆಪಾಸಿಟ್, ಬಹಳ ಸರಳ ಹಾಗೂ ಸುರಕ್ಷಿತ ಸ್ಕೀಮ್; ವರ್ಷಕ್ಕೆ ಶೇ. 8ಕ್ಕಿಂತಲೂ ಹೆಚ್ಚು ಬಡ್ಡಿ ಕೊಡಬಲ್ಲುದು ಆರ್​ಡಿ

ಎಸ್​ಬಿಐ ವೀಕೇರ್ ಸ್ಕೀಮ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವೀಕೇರ್ ಸ್ಕೀಮ್ ಅನ್ನು (SBI WeCare) ಹಿರಿಯ ನಾಗರಿಕರಿಗೆಂದು ರೂಪಿಸಲಾಗಿದೆ. ಐದು ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಅವಧಿಯ ನಿಶ್ಚಿತ ಠೇವಣಿ ಯೋಜನೆ ಇದು. ಮಾರ್ಚ್​ನಿಂದಲೂ ಇದರ ಅವಧಿ ವಿಸ್ತರಿಸುತ್ತಾ ಬರಲಾಗಿದೆ. ಇದೀಗ ಸೆಪ್ಟೆಂಬರ್ 30ಕ್ಕೆ ವೀಕೇರ್ ಸ್ಕೀಮ್ ಪಡೆಯಲು ಕೊನೆಯ ದಿನವಾಗಿದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್