AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖುಷಿಯ ಸುದ್ದಿ…! ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಹೆಚ್ಚಳ ಸಾಧ್ಯತೆ; ಇಲ್ಲಿದೆ ಸೇವಿಂಗ್ಸ್ ಸ್ಕೀಮ್​ಗಳ ಹಾಲಿ ದರದ ಪಟ್ಟಿ

Small Savings Scheme Interest Rates: 2024ರ ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್ ಅವಧಿಗೆ ಸರ್ಕಾರದ ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಹೆಚ್ಚುವ ಸಾಧ್ಯತೆ ಇದೆ. ಪಿಪಿಎಫ್, ಸುಕನ್ಯಾ ಸಮೃದ್ದಿ ಯೋಜನೆ, ಕಿಸಾನ್ ವಿಕಾಸ್ ಪತ್ರ, ಅಂಚೆ ಕಚೇರಿಯ ಅವಧಿ ಠೇವಣಿಗಳು, ಆರ್​ಡಿ ಇತ್ಯಾದಿಗಳು ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಾಗಿವೆ. ಸರ್ಕಾರಿ ಸಾಲಪತ್ರಗಳ ಯೀಲ್ಡ್​ಗೆ ಅನುಗುಣವಾಗಿ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ದರ ಅನ್ವಯ ಮಾಡುವುದು ಇತ್ತೀಚೆಗೆ ಆರಂಭಿಸಲಾಗಿರುವ ಕ್ರಮ.

ಖುಷಿಯ ಸುದ್ದಿ...! ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಹೆಚ್ಚಳ ಸಾಧ್ಯತೆ; ಇಲ್ಲಿದೆ ಸೇವಿಂಗ್ಸ್ ಸ್ಕೀಮ್​ಗಳ ಹಾಲಿ ದರದ ಪಟ್ಟಿ
ಅವಧಿ ಠೇವಣಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 26, 2023 | 6:17 PM

Share

ಸರ್ಕಾರದಿಂದ ನಡೆಸಲಾಗುವ ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರಗಳನ್ನು ಪರಿಷ್ಕರಿಸುವ ಸಾಧ್ಯತೆ ಇದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ ಮತ್ತು 2024ರ ಕ್ಯಾಲಂಡರ್ ವರ್ಷದ ಮೊದಲ ಕ್ವಾರ್ಟರ್ ಆಗಿರುವ ಜನವರಿಯಿಂದ ಮಾರ್ಚ್​ವರೆಗಿನ ಅವಧಿಗೆ ಪಬ್ಲಿಕ್ ಪ್ರಾವಿಡೆಂಟ್ ಫಂಡ್, ನ್ಯಾಷನಲ್ ಸೇವಿಂಗ್ಸ್ ಸರ್ಟಿಫಿಕೇಟ್ ಇತ್ಯಾದಿ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ (Small Savings Scheme Interest Rates) ಸರ್ಕಾರ ಹೆಚ್ಚು ಬಡ್ಡಿ ದರ ನೀಡಲಿದೆ ಎಂದು ವರದಿಗಳು ಹೇಳುತ್ತಿವೆ. ಡಿಸೆಂಬರ್ 29ಕ್ಕೆ ಸರ್ಕಾರದಿಂದ ಪರಿಷ್ಕೃತ ದರಗಳು ಪ್ರಕಟವಾಗಬಹುದು ಎಂದು ಮೂಲಗಳು ಹೇಳುತ್ತಿವೆ.

ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಬಡ್ಡಿ ನಿಗದಿ ಮಾಡುವುದಕ್ಕೆ ಕ್ರಮಗಳಿವೆ…

ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಸರ್ಕಾರ ಪ್ರತೀ ಕ್ವಾರ್ಟರ್​ಗೆ ಬಡ್ಡಿ ದರ ಪರಿಷ್ಕರಿಸಬಹುದು. ಹಣದ ಹರಿವು, ಹಣದುಬ್ಬರ ಇತ್ಯಾದಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಬಡ್ಡಿದರ ಪರಿಷ್ಕರಣೆ ಆಗುತ್ತದೆ. ಅಲ್ಲದೇ, ಈ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು ಪೆಟ್ರೋಲ್, ಚಿನ್ನದಂತೆ ಮಾರುಕಟ್ಟೆ ಜೋಡಿತವಾಗಿದೆ. ಅಂದರೆ, 10 ವರ್ಷದ ಸರ್ಕಾರಿ ಬಾಂಡ್​ಗಳ ರಿಟರ್ನ್ಸ್​ಗೆ ಅನುಗುಣವಾಗಿ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗೆ ಬಡ್ಡಿದರ ಅನ್ವಯ ಮಾಡಲಾಗುತ್ತದೆ.

ಇದನ್ನೂ ಓದಿ: Tips: ನಿವೃತ್ತಿಗೆ ಹಣ ಹೊಂದಿಸಬೇಕೆ? ಎಲ್ಲೆಲ್ಲಿ ಹೂಡಿಕೆ ಮಾಡಬೇಕು, ಈ ಸಲಹೆ ನಿಮಗೆ ಉಪಯುಕ್ತ ಎನಿಸಬಹುದು

ಪ್ರಸಕ್ತ, ಗವರ್ನ್ಮೆಂಟ್ ಸೆಕ್ಯೂರಿಟಿಗಳ ಯೀಲ್ಡ್ ಅನ್ನು ಗಮನದಲ್ಲಿಟ್ಟುಕೊಂಡು ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ದರ ಹೆಚ್ಚಿಸಬಹುದು ಎನ್ನಲಾಗಿದೆ.

ಸದ್ಯಕ್ಕೆ ಇರುವ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳ ಬಡ್ಡಿದರ (2023ರ ಅಕ್ಟೋಬರ್​ನಿಂದ ಡಿಸೆಂಬರ್)

  • ಸೇವಿಂಗ್ಸ್ ಡೆಪಾಸಿಟ್: ಶೇ. 4ರಷ್ಟು ಬಡ್ಡಿ
  • ಅಂಚೆ ಕಚೇರಿ ಅವಧಿ ಠೇವಣಿ (1 ವರ್ಷ): ಶೇ. 6.9ರಷ್ಟು ಬಡ್ಡಿ
  • ಅಂಚೆ ಕಚೇರಿ ಅವಧಿ ಠೇವಣಿ (2 ವರ್ಷ): ಶೇ. 7ರಷ್ಟು ಬಡ್ಡಿ
  • ಅಂಚೆ ಕಚೇರಿ ಅವಧಿ ಠೇವಣಿ (3 ವರ್ಷ): ಶೇ. 7ರಷ್ಟು ಬಡ್ಡಿ
  • ಅಂಚೆ ಕಚೇರಿ ಅವಧಿ ಠೇವಣಿ (5 ವರ್ಷ): ಶೇ. 7.5ರಷ್ಟು ಬಡ್ಡಿ
  • ಅಂಚೆ ಕಚೇರಿ 5 ವರ್ಷದ ಆರ್​ಡಿ: ಶೇ. 6.7ರಷ್ಟು ಬಡ್ಡಿ
  • ನ್ಯಾಷನಲ್ ಸೇವಿಂಗ್ ಸರ್ಟಿಫಿಕೇಟ್ಸ್ (ಎನ್​ಎಸ್​ಸಿ): ಶೇ. 7.7ರಷ್ಟು ಬಡ್ಡಿ
  • ಕಿಸಾನ್ ವಿಕಾಸ್ ಪತ್ರ (115 ತಿಂಗಳದ್ದು): ಶೇ. 7.5ರಷ್ಟು ಬಡ್ಡಿ
  • ಪಿಪಿಎಫ್: ಶೇ. 7.1ರಷ್ಟು ಬಡ್ಡಿ
  • ಸುಕನ್ಯಾ ಸಮೃದ್ಧಿ ಯೋಜನೆ: ಶೇ. 8ರಷ್ಟು ಬಡ್ಡಿ
  • ಹಿರಿಯ ನಾಗರಿಕರ ಉಳಿತಾಯ ಯೋಜನೆ: ಶೇ. 8.2ರಷ್ಟು ಬಡ್ಡಿ
  • ಮಾಸಿಕ ಆದಾಯ ಖಾತೆ: ಶೇ. 7.4ರಷ್ಟು ಬಡ್ಡಿ

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು