AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವರ್ಷದೊಳಗೆ ಇನ್ಷೂರೆನ್ಸ್ ಪಾಲಿಸಿ ರದ್ದುಗೊಳಿಸಲು ಸಾಧ್ಯವಾ? ಫ್ರೀಲುಕ್ ಅವಧಿ ವಿಸ್ತರಿಸಲು ಸರ್ಕಾರದ ಯೋಜನೆ

Nirmala Sitharaman speaks at post-budget consultation: ಇನ್ಷೂರೆನ್ಸ್ ಪಾಲಿಸಿ ಖರೀದಿಸಿದ ಬಳಿಕ ಫ್ರೀ ಲುಕ್ ಅವಧಿಯ ಅವಕಾಶ ನೀಡಲಾಗಿರುತ್ತದೆ. ಪಾಲಿಸಿ ಬೇಡವೆನಿಸಿದಲ್ಲಿ ಈ ಅವಧಿಯೊಳಗೆ ನೀವು ರದ್ದು ಮಾಡಿದರೆ ದಂಡ ಇಲ್ಲದೆಯೇ ಪ್ರೀಮಿಯಮ್ ಹಣ ಪೂರ್ಣವಾಗಿ ರೀಫಂಡ್ ಆಗುತ್ತದೆ. ಸದ್ಯ ಒಂದು ತಿಂಗಳ ಫ್ರೀ ಲುಕ್ ಪೀರಿಯಡ್ ಇದೆ. ಇದನ್ನು ಒಂದು ವರ್ಷಕ್ಕೆ ಏರಿಸಬೇಕೆಂದು ವಿಮಾ ಸಂಸ್ಥೆಗಳಿಗೆ ಸರ್ಕಾರ ಸೂಚಿಸಿರುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಒಂದು ವರ್ಷದೊಳಗೆ ಇನ್ಷೂರೆನ್ಸ್ ಪಾಲಿಸಿ ರದ್ದುಗೊಳಿಸಲು ಸಾಧ್ಯವಾ? ಫ್ರೀಲುಕ್ ಅವಧಿ ವಿಸ್ತರಿಸಲು ಸರ್ಕಾರದ ಯೋಜನೆ
ಇನ್ಷೂರೆನ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 17, 2025 | 7:20 PM

Share

ಮುಂಬೈ, ಫೆಬ್ರುವರಿ 17: ಇನ್ಷೂರೆನ್ಸ್ ಪಾಲಿಸಿದಾರರಿಗೆ ಇರುವ ಫ್ರೀ ಲುಕ್ ಪೀರಿಯಡ್ ಅನ್ನು ಒಂದು ವರ್ಷದವರೆಗೆ ವಿಸ್ತರಿಸಲು ಸರ್ಕಾರ ಯೋಜಿಸುತ್ತಿದೆ. ಸದ್ಯಕ್ಕೆ ಹೆಚ್ಚಿನ ಇನ್ಷೂರೆನ್ಸ್ ಕಂಪನಿಗಳು ಒಂದು ತಿಂಗಳ ಫ್ರೀ ಲುಕ್ ಪೀರಿಯಡ್ ನೀತಿ ಹೊಂದಿವೆ. ಅಂದರೆ ಇನ್ಷೂರೆನ್ಸ್ ಪಾಲಿಸಿ ಮಾಡಿಸಿ, ಅದು ನಿಮಗೆ ತೃಪ್ತಿ ತಂದಿಲ್ಲ ಎಂದಲ್ಲಿ ಯಾವುದೇ ಪೆನಾಲ್ಟಿ ಇಲ್ಲದೇ ಪಾಲಿಸಿ ರದ್ದು ಮಾಡಲು ಇರುವ ಗಡುವು. ಈ ಒಂದು ತಿಂಗಳ ಗಡುವನ್ನು ಒಂದು ವರ್ಷಕ್ಕೆ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಸರ್ಕಾರವು ಇನ್ಷೂರೆನ್ಸ್ ಕಂಪನಿಗಳಿಗೆ ಕೇಳಿದೆ. ಹೀಗೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ಸೋಮವಾರ ಬಜೆಟ್​ನಂತರದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿರುವಾಗ ನಿರ್ಮಲಾ ಸೀತಾರಾಮನ್ ಈ ಇನ್ಷೂರೆನ್ಸ್ ಪಾಲಿಸಿಯ ಫ್ರೀ ಲುಕ್ ಅವಧಿಯ ಪರಾಮರ್ಶೆ ನಡೆಯಬೇಕೆನ್ನುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಫ್ರೀ ಲುಕ್ ಅವಧಿಯನ್ನು ವಿಸ್ತರಿಸುವುದರಿಂದ ಪಾಲಿಸಿದಾರರಿಗೆ ತಾವು ಪಡೆದ ಇನ್ಷೂರೆನ್ಸ್ ಉತ್ಪನ್ನವನ್ನು ಪರಾಮರ್ಶಿಸಲು ಹೆಚ್ಚಿನ ಸಮಯಾವಕಾಶ ಸಿಗುತ್ತದೆ. ತಮ್ಮ ಅಗತ್ಯಗಳಿಗೆ ಈ ಪಾಲಿಸಿ ಎಷ್ಟು ಅಗತ್ಯ ಎಂಬುದನ್ನು ಕಂಡುಕೊಳ್ಳಲು ಸಾಕಷ್ಟು ಸಮಯ ಸಿಕ್ಕಂತಾಗುತ್ತದೆ. ತಪ್ಪಾದ ಇನ್ಷೂರೆನ್ಸ್ ಪಾಲಿಸಿಗೆ ಹಣ ಹೂಡಿಕೆ ಮಾಡುವುದನ್ನು ತಪ್ಪಿಸಿಕೊಳ್ಳುವ ಅವಕಾಶ ಸಿಗುತ್ತದೆ.

ಇದನ್ನೂ ಓದಿ: ಎಸ್​ಐಬಿ ಕ್ವಿಕ್ ಎಫ್​ಡಿ; ಎಸ್​ಬಿ ಅಕೌಂಟ್ ಬೇಕಿಲ್ಲ, ನೇರವಾಗಿ ಠೇವಣಿ ಇಡಿ; ಬಹಳ ಸಿಂಪಲ್, ಎಲ್ಲಾ ಆನ್​ಲೈನ್

ಸಾಮಾನ್ಯವಾಗಿ ಇನ್ಷೂರೆನ್ಸ್ ಏಜೆಂಟ್​​ಗಳು ಪಾಲಿಸಿ ಮಾರುವಾಗ ಸರಿಯಾದ ವಿವರ ನೀಡದೇ ಹೋಗಬಹುದು. ಇಲ್ಲದ ಭರವಸೆಗಳನ್ನು ನೀಡಿ ಪಾಲಿಸಿ ಖರೀದಿಸುವಂತೆ ಮಾಡಬಹುದು. ಆದರೆ, ವಾಸ್ತವದಲ್ಲಿ ಪಾಲಿಸಿ ಖರೀದಿ ಮಾಡಿದ ಬಳಿಕ ಅದರ ಇತಿಮಿತಿಗಳು ಅರಿವಿಗೆ ಬರುತ್ತದೆ. ಹೀಗಾಗಿ, ಫ್ರೀ ಲುಕ್ ಪೀರಿಯಡ್ ವಿಸ್ತರಿಸುವ ಬಗ್ಗೆ ಸರ್ಕಾರ ಹಿಂದೆಯೇ ಆಲೋಚಿಸಿ, ಇನ್ಷೂರೆನ್ಸ್ ಕಂಪನಿಗಳಿಗೆ ತಿಳಿಸಿತ್ತೆನ್ನಲಾಗಿದೆ.

ಫ್ರೀ ಲುಕ್ ಅವಧಿಯಲ್ಲಿ ನಿಮಗೆ ಇನ್ಷೂರೆನ್ಸ್ ಪಾಲಿಸಿ ಹಿಡಿಸಲಿಲ್ಲವೆಂದರೆ ಪಾಲಿಸಿ ರದ್ದು ಮಾಡಬಹುದು. ಯಾವುದೇ ಹಣ ಮುರಿದುಕೊಳ್ಳದೆಯೇ ಪೂರ್ಣ ಪಾಲಿಸಿ ಹಣವನ್ನು ರೀಫಂಡ್ ಮಾಡಲಾಗುತ್ತದೆ. ಫ್ರೀ ಲುಕ್ ಪೀರಿಯಡ್ ಬಳಿಕವೂ ನೀವು ಪಾಲಿಸಿ ರದ್ದು ಮಾಡಬಹುದಾದರೂ ದಂಡ ಮತ್ತಿತರ ಶುಲ್ಕಗಳನ್ನು ಕಟ್ಟಬೇಕಾಗುತ್ತದೆ.

ಇನ್ಷೂರೆನ್ಸ್ ಸೆಕ್ಟರ್​ನಲ್ಲಿ ಮತ್ತಷ್ಟು ವಿದೇಶೀ ಹೂಡಿಕೆಗಳಿಗೆ ಉತ್ತೇಜಿಸಲಿದೆ ಸರ್ಕಾರ

ವಿಮಾ ವಲಯದಲ್ಲಿ ಮತ್ತಷ್ಟು ಎಫ್​ಡಿಐ ಬರಲು ಸರ್ಕಾರ ಅಪೇಕ್ಷಿಸುತ್ತಿದೆ. ಈ ಕ್ಷೇತ್ರದಲ್ಲಿ ಹೆಚ್ಚೆಚ್ಚು ಕಂಪನಿಗಳು ಬರಬೇಕು. ಮಾರುಕಟ್ಟೆಯ ಆಳ ಇನ್ನಷ್ಟು ಆಗಬೇಕು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ: ಠೇವಣಿಗೆ ಇನ್ಷೂರೆನ್ಸ್ ಗ್ಯಾರಂಟಿ; 5 ಲಕ್ಷ ರೂ ಮಿತಿ ಹೆಚ್ಚಿಸಲು ಕೇಂದ್ರ ಯೋಜನೆ

ಇದೇ ವೇಳೆ, ಇನ್ಷೂರೆನ್ಸ್ ತಿದ್ದುಪಡಿ ಮಸೂದೆ ಪ್ರಸ್ತಾಪಿಸಿದ ಸಚಿವೆ, ಈ ಮಸೂದೆ ಬಗ್ಗೆ ಅಂತರಿಕ ಸಮಾಲೋಚನೆಗಳು ನಡೆಯುತ್ತಿದೆ. ಇದನ್ನು ಮಂಡಿಸುವ ಮುನ್ನ ಕಾನೂನು ತಿದ್ದುಪಡಿ ಮಾಡುವ ಅವಶ್ಯಕತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು