AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ನಿಂದ ಡಿಸೆಂಬರ್​ವರೆಗೆ ಸುಕನ್ಯಾ ಸಮೃದ್ಧಿ ಅಕೌಂಟ್ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಪರಿಷ್ಕರಣೆ; ಇಲ್ಲಿದೆ ಪಟ್ಟಿ

Small Savings schemes interest rates revised: ಹಣಕಾಸು ಸಚಿವಾಲಯದಿಂದ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಪರಿಷ್ಕರಣೆ ನಡೆದಿದೆ. 2024ರ ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಕ್ವಾರ್ಟರ್​ಗೆ ದರ ಪರಿಷ್ಕರಣೆ ಆಗಿದ್ದು, ಹಿಂದಿನ ಬಡ್ಡಿದರಗಳನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆ, ಪಬ್ಲಿಕ್ ಪ್ರಾವಿಡೆಂಟ್ ಫಂಡ್, ನ್ಯಾಷನಲ್ ಸೇವಿಂಗ್ ಸರ್ಟಿಫಿಕೇಟ್ ಇತ್ಯಾವಿ ವಿವಿಧ ಸ್ಮಾಲ್ ಸೇವಿಂಗ್ ಸ್ಕೀಮ್​ಗಳನ್ನು ಸರ್ಕಾರದಿಂದ ನಡೆಸಲಾಗುತ್ತಿದೆ.

ಅಕ್ಟೋಬರ್​ನಿಂದ ಡಿಸೆಂಬರ್​ವರೆಗೆ ಸುಕನ್ಯಾ ಸಮೃದ್ಧಿ ಅಕೌಂಟ್ ಸೇರಿ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಪರಿಷ್ಕರಣೆ; ಇಲ್ಲಿದೆ ಪಟ್ಟಿ
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 01, 2024 | 10:54 AM

Share

ನವದೆಹಲಿ, ಅಕ್ಟೋಬರ್ 1: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ತ್ರೈಮಾಸಿಕ ಅವಧಿಗೆ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳ ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ. ಸುಕನ್ಯಾ ಸಮೃದ್ದಿ, ಪಿಪಿಎಫ್ ಇತ್ಯಾದಿ ವಿವಿಧ ಯೋಜನೆಗಳಿಗೆ ಬಡ್ಡಿದರದಲ್ಲಿ ಯಾವ ಬದಲಾವಣೆ ಆಗಿಲ್ಲ. ಹಿಂದಿನ ದರಗಳೇ ಮುಂದುವರಿಯಲಿವೆ. ‘2024-25ರ ಹಣಕಾಸು ವರ್ಷದ ಮೂರನೆ ಕ್ವಾರ್ಟರ್​ಗೆ ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಜುಲೈನಿಂದ ಸೆಪ್ಟೆಂಬರ್​ವರೆಗಿನ ಕ್ವಾರ್ಟರ್​ನಲ್ಲಿ ನಿಗದಿಯಾಗಿದ್ದ ದರಗಳೇ ಮುಂದುವರಿಯಲಿವೆ,’ ಎಂದು ಹಣಕಾಸು ಸಚಿವಾಲಯ ನಿನ್ನೆ ಸೋಮವಾರ (ಸೆ. 30) ಅಧಿಸೂಚನೆಯಲ್ಲಿ ತಿಳಿಸಿದೆ.

ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆಗಳಿಗೆ ವಾರ್ಷಿಕ ಶೇ. 8.2ರಷ್ಟು ಬಡ್ಡಿ ಸಿಗುತ್ತದೆ. ಸ್ಮಾಲ್ ಸೇವಿಂಗ್ ಸ್ಕೀಮ್​ಗಳ ಪೈಕಿ ಇವೆರಡು ಗರಿಷ್ಠ ಲಾಭ ನೀಡುತ್ತವೆ. ಕಿಸಾನ್ ವಿಕಾಸ್ ಪತ್ರ, ರಾಷ್ಟ್ರೀಯ ಉಳಿತಾಯ ಪತ್ರ ಯೋಜನೆಗಳಲ್ಲೂ ಉತ್ತಮ ಎನಿಸುವ ಬಡ್ಡಿದರ ಇದೆ. ಹಾಗೆಯೇ, ಪಿಪಿಎಫ್ ಇತ್ಯಾದಿ ಸ್ಕೀಮ್​ಗಳು ಟ್ಯಾಕ್ಸ್ ಡಿಡಕ್ಷನ್ ಅವಕಾಶ ನೀಡುತ್ತವೆ. ಜನವರಿಯಿಂದ ಮಾರ್ಚ್​ವರೆಗಿನ ಕ್ವಾರ್ಟರ್​ನಲ್ಲಿ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಬಡ್ಡಿದರವನ್ನು ಶೇ. 8ರಿಂದ ಶೇ. 8.2ಕ್ಕೆ ಹೆಚ್ಚಿಸಿತ್ತು. ಹಾಗೆಯೇ, 3 ವರ್ಷದ ಫಿಕ್ಸೆಡ್ ಡೆಪಾಸಿಟ್​ಗೂ 20 ಮೂಲಾಂಕಗಳಷ್ಟು ಬಡ್ಡಿ ಹೆಚ್ಚಿಸಲಾಗಿತ್ತು.

ಇದನ್ನೂ ಓದಿ: ಪಿಪಿಎಫ್, ಸುಕನ್ಯ ಸಮೃದ್ದಿ, ಎನ್​ಎಸ್​ಎಸ್ ಯೋಜನೆಗಳಲ್ಲಿ ಅ. 1ರಿಂದ ಹೊಸ ನಿಯಮಗಳು; ತಪ್ಪದೇ ತಿಳಿದಿರಿ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ (2024ರ ಅಕ್ಟೋಬರ್​ನಿಂದ ಡಿಸೆಂಬರ್):

  • ಸೇವಿಂಗ್ಸ್ ಡೆಪಾಸಿಟ್: ಶೇ. 4ರಷ್ಟು ವಾರ್ಷಿಕ ಬಡ್ಡಿದರ
  • ಅಂಚೆ ಕಚೇರಿ 1 ವರ್ಷದ ಟೈಮ್ ಡೆಪಾಸಿಟ್: ಶೇ. 6.9 ಬಡ್ಡಿ
  • ಅಂಚೆ ಕಚೇರಿ 2 ವರ್ಷದ ಟೈಮ್ ಡೆಪಾಸಿಟ್: ಶೇ. 7.0 ಬಡ್ಡಿ
  • ಅಂಚೆ ಕಚೇರಿ 3 ವರ್ಷದ ಟೈಮ್ ಡೆಪಾಸಿಟ್: ಶೇ. 7.1 ಬಡ್ಡಿ
  • ಅಂಚೆ ಕಚೇರಿ 5 ವರ್ಷದ ಟೈಮ್ ಡೆಪಾಸಿಟ್: ಶೇ. 7.5 ಬಡ್ಡಿ
  • ಅಂಚೆ ಕಚೇರಿ 5 ವರ್ಷದ ಆರ್​ಡಿ: ಶೇ. 6.7 ಬಡ್ಡಿ
  • ನ್ಯಾಷನ್ ಸೇವಿಂಗ್ ಸರ್ಟಿಫಿಕೇಟ್ (ಎನ್​ಎಸ್​ಸಿ): ಶೇ. 7.7 ಬಡ್ಡಿ
  • ಕಿಸಾನ್ ವಿಕಾಸ್ ಪತ್ರ: ಶೇ. 7.5 ಬಡ್ಡಿ
  • ಪಬ್ಲಿಕ್ ಪ್ರಾವಿಡೆಂಟ್ ಫಂಡ್: ಶೇ. 7.1 ಬಡ್ಡಿ
  • ಸುಕನ್ಯ ಸಮೃದ್ಧಿ ಯೋಜನೆ: ಶೇ. 8.2 ಬಡ್ಡಿ
  • ಸೀನಿಯರ್ ಸಿಟಿಜನ್ಸ್ ಸೇವಿಂಗ್ಸ್ ಸ್ಕೀಮ್: ಶೇ. 8.2 ಬಡ್ಡಿ
  • ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆ: ಶೇ. 7.4 ಬಡ್ಡಿ

ಹಣಕಾಸು ಸಚಿವಾಲಯ ಪ್ರತೀ ಕ್ವಾರ್ಟರ್​ಗೂ ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಪರಿಷ್ಕರಿಸುತ್ತಿರುತ್ತದೆ. ಮುಂದಿನ ಪರಿಷ್ಕರಣೆ ಡಿಸೆಂಬರ್ 31ರಂದು ನಡೆಯಲಿದೆ. ಸರ್ಕಾರದ ವತಿಯಿಂದ ನಡೆಯುತ್ತಿರುವುದರಿಂದ ಈ ಸೇವಿಂಗ್ ಸ್ಕೀಮ್​ಗಳು ಸಾಕಷ್ಟು ಜನಪ್ರಿಯತೆ ಪಡೆದಿವೆ. ಅಂಚೆ ಕಚೇರಿಯಲ್ಲಿ ಈ ಯೋಜನೆಗಳೆಲ್ಲವೂ ಲಭ್ಯ ಇವೆ. ಪಿಪಿಎಫ್, ಸುಕನ್ಯಾ ಸಮೃದ್ಧಿ ಇತ್ಯಾದಿ ಕೆಲ ಸ್ಕೀಮ್​ಗಳನ್ನು ಬ್ಯಾಂಕುಗಳಲ್ಲೂ ಆರಂಭಿಸಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು