AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ. 22ರಿಂದ ಇನ್ಷೂರೆನ್ಸ್​ಗೆ ಜಿಎಸ್​ಟಿಯೇ ಇಲ್ಲ; ಅಲ್ಲೀವರೆಗೂ ಪ್ರೀಮಿಯಮ್ ಕಟ್ಟೋದು ನಿಲ್ಲಿಸಬೇಕಾ?

Can an insurance policyholder wait till Sep 22nd to pay premium?: ಕೇಂದ್ರ ಸರ್ಕಾರವು ವೈಯಕ್ತಿಕ ಲೈಫ್ ಇನ್ಷೂರೆನ್ಸ್ ಮತ್ತು ಹೆಲ್ತ್ ಇನ್ಷೂರೆನ್ಸ್ ಪಾಲಿಸಿಗಳ ಪ್ರೀಮಿಯಮ್​ಗಳಿಗೆ ಜಿಎಸ್​ಟಿಯಿಂದ ವಿನಾಯಿತಿ ನೀಡಿದೆ. ಸೆಪ್ಟೆಂಬರ್ 22ರಿಂದ ಈ ಹೊಸ ಜಿಎಸ್​ಟಿ ದರ ಜಾರಿಗೆ ಬರುತ್ತದೆ. ನಿಮ್ಮ ಇನ್ಷೂರೆನ್ಸ್ ಪ್ರೀಮಿಯಮ್​ಗೆ ಡ್ಯೂ ಡೇಟ್ ಸೆಪ್ಟೆಂಬರ್ 22ಕ್ಕೆ ಮುಂಚೆ ಇದ್ದರೆ ಏನು ಮಾಡಬೇಕು?

ಸೆ. 22ರಿಂದ ಇನ್ಷೂರೆನ್ಸ್​ಗೆ ಜಿಎಸ್​ಟಿಯೇ ಇಲ್ಲ; ಅಲ್ಲೀವರೆಗೂ ಪ್ರೀಮಿಯಮ್ ಕಟ್ಟೋದು ನಿಲ್ಲಿಸಬೇಕಾ?
ಇನ್ಷೂರೆನ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 04, 2025 | 12:58 PM

Share

ನವದೆಹಲಿ, ಸೆಪ್ಟೆಂಬರ್ 4: ಸರ್ಕಾರ ಪ್ರಕಟಿಸಿದ ಜಿಎಸ್​ಟಿ ಸರಳೀಕರಣ ಕ್ರಮದಲ್ಲಿ ಬಹಳ ಗಮನ ಸೆಳೆದಿರುವ ನಿರ್ಧಾರಗಳಲ್ಲಿ ಇನ್ಷೂರೆನ್ಸ್ ಪ್ರೀಮಿಯಮ್ (Insurance) ಮೇಲಿನ ಜಿಎಸ್​ಟಿ ರದ್ದು ಮಾಡಿದ್ದು ಒಂದು. ವೈಯಕ್ತಿಕ ಹೆಲ್ತ್ ಮತ್ತು ಲೈಫ್ ಇನ್ಷೂರೆನ್ಸ್ ಪಾಲಿಸಿಗಳ ಪ್ರೀಮಿಯಮ್​ಗಳ ಮೇಲೆ ಶೇ. 18ರಷ್ಟಿದ್ದ ಜಿಎಸ್​ಟಿಯನ್ನು ಸೊನ್ನೆಗೆ ಇಳಿಸಲಾಗಿದೆ. ಇದು 2025ರ ಸೆಪ್ಟೆಂಬರ್ 22ರಿಂದ ಜಾರಿಗೆ ಬರುತ್ತದೆ. ಇದರೊಂದಿಗೆ ಇನ್ಷೂರೆನ್ಸ್ ಪ್ರೀಮಿಯಮ್​ಗಳ ಬೆಲೆಯಲ್ಲಿ ಶೇ. 15ರಷ್ಟು ಕಡಿಮೆ ಆಗುವ ನಿರೀಕ್ಷೆ ಇದೆ.

ಸೆ. 22ಕ್ಕೆ ಮುನ್ನ ಪ್ರೀಮಿಯಮ್ ಕಟ್ಟಿದರೆ ಶೇ. 18 ಜಿಎಸ್​ಟಿ; ಏನು ಮಾಡಬೇಕು?

ಸರ್ಕಾರದ ನೂತನ ಜಿಎಸ್​ಟಿ ದರಗಳು ಸೆಪ್ಟೆಂಬರ್ 22ರಿಂದ ಜಾರಿಗೆ ಬರುತ್ತವೆ. ಸೆಪ್ಟೆಂಬರ್ 21ರವರೆಗೂ ನೀವು ಪಾವತಿಸುವ ಇನ್ಷೂರೆನ್ಸ್ ಪ್ರೀಮಿಯಮ್ ಮೇಲೆ ಶೇ. 18 ಜಿಎಸ್​ಟಿ ಅನ್ವಯ ಆಗುತ್ತದೆ. ಹಾಗಾದರೆ, ಪ್ರೀಮಿಯಮ್​ಗೆ ಜಿಎಸ್​ಟಿ ತಪ್ಪಿಸಿಕೊಳ್ಳಲು ಸೆಪ್ಟೆಂಬರ್ 22ರವರೆಗೂ ಕಾಯಬೇಕಾ?

ಇನ್ಷೂರೆನ್ಸ್ ಪ್ರೀಮಿಯಮ್ ಕಟ್ಟಲು ಒಂದು ಗಡುವು ನಿಗದಿ ಮಾಡಲಾಗಿರುತ್ತದೆ. ಅದಾದ ಬಳಿಕ ಕೆಲ ದಿನಗಳಷ್ಟು ಗ್ರೇಸ್ ಪೀರಿಯಡ್ ಇರುತ್ತದೆ. ವಾಹನ ಇನ್ಷೂರೆನ್ಸ್ ಪಾಲಿಸಿಗಳಿಗೆ ಗ್ರೇಸ್ ಪೀರಿಯಡ್ ಇರೋದಿಲ್ಲ. ಅವು ತತ್​ಕ್ಷಣವೇ ಲ್ಯಾಪ್ಸ್ ಆಗುತ್ತದೆ ಎಂಬುದೂ ಗಮನದಲ್ಲಿರಲಿ.

ಇದನ್ನೂ ಓದಿ: Insurance Hack: ಈ ಟೆಕ್ನಿಕ್ ಉಪಯೋಗಿಸಿ, ಇನ್ಷೂರೆನ್ಸ್ ಪ್ರೀಮಿಯಮ್ ಉಚಿತಗೊಳಿಸಿ

ಹೆಲ್ತ್ ಇನ್ಷೂರೆನ್ಸ್ ಪಾಲಿಸಿಗಳಿಗೆ ಗ್ರೇಸ್ ಪೀರಿಯಡ್ ಸಾಮಾನ್ಯವಾಗಿ 15 ದಿನ ಮಾತ್ರವೇ ಇರುತ್ತದೆ. ಲೈಫ್ ಇನ್ಷೂರೆನ್ಸ್ ಆದರೆ 15ರಿಂದ 30 ದಿನಗಳವರೆಗೂ ಇರಬಹುದು. ನಿಮ್ಮ ಇನ್ಷೂರೆನ್ಸ್ ಪಾಲಿಸಿಯ ಡಾಕ್ಯುಮೆಂಟ್​ನಲ್ಲಿ ಗ್ರೇಸ್ ಪೀರಿಯಡ್ ಎಷ್ಟಿದೆ ಎಂಬುದನ್ನು ಗಮನಿಸಿ.

ಗ್ರೇಸ್ ಪೀರಿಯಡ್ ಮೀರಿದರೆ ಪಾಲಿಸಿ ಲ್ಯಾಪ್ಸ್ ಆಗುತ್ತೆ ಹುಷಾರ್

ನಿಮ್ಮ ಹೆಲ್ತ್ ಮತ್ತು ಲೈಫ್ ಇನ್ಷೂರೆನ್ಸ್ ಪ್ರೀಮಿಯಮ್​ಗೆ ಡ್ಯೂ ಡೇಟ್ ಮೀರಿ ಗ್ರೇಸ್ ಪೀರಿಯಡ್ ಕೂಡ ಗತಿಸಿ ಹೋದಾಗ, ಪಾಲಿಸಿ ನಿಷ್ಕ್ರಿಯಗೊಳ್ಳುತ್ತದೆ. ಲೈಫ್ ಇನ್ಷೂರೆನ್ಸ್ ಆದರೆ ರಿವೈವಲ್ ಫೀ, ಬಡ್ಡಿ ತೆರಬೇಕಾಗುತ್ತದೆ. ಹೊಸದಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಬೇಕಾಗಬಹುದು.

ಹೆಲ್ತ್ ಇನ್ಷೂರೆನ್ಸ್ ಪಾಲಿಸಿ ಲ್ಯಾಪ್ಸ್ ಆದಾಗ ಅದನ್ನು ಮತ್ತೆ ರಿವೈವಲ್ ಮಾಡಲು ಆಗುವುದಿಲ್ಲ. ಹೊಸ ಪಾಲಿಸಿಯನ್ನೇ ಪಡೆಯಬೇಕಾಗಬಹುದು. ಹಿಂದಿನ ಹೆಲ್ತ್ ಪಾಲಿಸಿಯಲ್ಲಿ ನೀವು ಉಳಿಸಿಟ್ಟಿರುವ ನೋ ಕ್ಲೇಮ್ ಬೋನಸ್, ವೇಟಿಂಗ್ ಪೀರಿಯಡ್ ಇತ್ಯಾದಿಗಳು ಹೊಸ ಪಾಲಿಸಿಗೆ ವರ್ಗವಾಗುವುದಿಲ್ಲ.

ಇದನ್ನೂ ಓದಿ: LIC campaign: ಎಲ್​ಐಸಿ ಪಾಲಿಸಿ ಲ್ಯಾಪ್ಸ್ ಆಗಿದೆಯಾ? ರಿವೈವಲ್​ಗೆ ಅ. 17ರವರೆಗೂ ಅವಕಾಶ

ಶೇ. 18 ಜಿಎಸ್​ಟಿ ಉಳಿಸಲು ಹೋದರೆ ಬೇರೆ ಕೆಲ ರಿಸ್ಕ್ ಅಂಶಗಳು ಇರುವುದು ನಿಮ್ಮ ಗಮನದಲ್ಲಿರಲಿ. ಸೆಪ್ಟೆಂಬರ್ 22ರವರೆಗೆ ನಿಮ್ಮ ಪಾಲಿಸಿಗೆ ಗ್ರೇಸ್ ಪೀರಿಯಡ್ ಇದ್ದರೆ ಪ್ರೀಮಿಯಮ್ ಕಟ್ಟುವುದನ್ನು ವಿಳಂಬ ಮಾಡಬಹುದು. ಇಲ್ಲದಿದ್ದರೆ ರಿವೈವಲ್ ಫೀ ಇತ್ಯಾದಿ ಕಟ್ಟುವ ತಲೆನೋವಿನ ಬದಲು ಶೇ. 18 ಜಿಎಸ್​ಟಿಯೊಂದಿಗೆ ಈಗಲೇ ಪ್ರೀಮಿಯಮ್ ಕಟ್ಟುವುದು ಸಂದರ್ಭೋಚಿತ ಎನಿಸಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ