AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

50-30-20 Rule: ಅಗತ್ಯಗಳು, ಬಯಕೆಗಳಿಗೆ ಎಷ್ಟು ಹಣ ಬೇಕು? ಉಳಿತಾಯಕ್ಕೆ ಎಷ್ಟು ಬೇಕು? ನಿಮಗಿದೋ 50-30-20 ಸೂತ್ರ

Money Management: ಹಣ ಉಳಿಸುವುದು ಕಲೆ. ಜೊತೆಗೆ ಬದ್ಧತೆ, ಶಿಸ್ತೂ ಬೇಕು. ಬದ್ಧತೆ, ಶಿಸ್ತು ಇಟ್ಟುಕೊಂಡರೆ ಸಾಧ್ಯವಾದಷ್ಟು ಬೇಗ ಸಂಪತ್ತು ಹೆಚ್ಚಿಸಿಕೊಳ್ಳಬಹುದು. ನಿಮ್ಮ ಆದಾಯದಲ್ಲಿ ಯಾವ್ಯಾವ ಖರ್ಚಿಗೆ ಎಷ್ಟು ಹಣ ವ್ಯಯಿಸಬೇಕು ಎಂಬ ಗೊಂದಲ ಇದ್ದರೆ 50-30-20 ನಿಯಮ ಅಳವಡಿಸಿ. ನಿಮ್ಮ ಅಗತ್ಯಗಳಿಗೆ ವೆಚ್ಚ ಶೇ. 50 ಮೀರಬಾರದು. ಬಯಕೆಗಳಿಗೆ ಶೇ. 30ಕ್ಕಿಂತ ಹೆಚ್ಚು ವ್ಯಯಿಸದಿರಿ. ಉಳಿತಾಯ ಕನಿಷ್ಠ ಶೇ. 20ರಷ್ಟಿರಬೇಕು.

50-30-20 Rule: ಅಗತ್ಯಗಳು, ಬಯಕೆಗಳಿಗೆ ಎಷ್ಟು ಹಣ ಬೇಕು? ಉಳಿತಾಯಕ್ಕೆ ಎಷ್ಟು ಬೇಕು? ನಿಮಗಿದೋ 50-30-20 ಸೂತ್ರ
ಉಳಿತಾಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 10, 2024 | 7:30 AM

Share

ಹಣ ಹೂಡಿಕೆ ಮಾಡುವುದು ಒಂದು ಕಲೆಯಾದರೆ, ಹಣ ಉಳಿಸುವುದೂ (money savings) ಕೂಡ ಒಂದು ರೀತಿಯಲ್ಲಿ ಕಲೆಯೇ. ಜೊತೆಗೆ ಬದ್ಧತೆ, ಶಿಸ್ತೂ ಬೇಕು. ಬಹಳ ಬೇಗ ಶ್ರೀಮಂತರಾಗಲು ಯಾವುದೇ ಶಾರ್ಟ್​ಕಟ್ ಇಲ್ಲ. ಆದರೆ, ದುಡ್ಡಿನ ವಿಚಾರದಲ್ಲಿ ಬದ್ಧತೆ, ಶಿಸ್ತು ಇಟ್ಟುಕೊಂಡರೆ ಸಾಧ್ಯವಾದಷ್ಟು ಬೇಗ ಸಂಪತ್ತು ಹೆಚ್ಚಿಸಿಕೊಳ್ಳುತ್ತಾ ಹೋಗಬಹುದು. ಈ ನಿಟ್ಟಿನಲ್ಲಿ 50-30-20 ನಿಯಮ ನಿಮಗೆ ನೆರವಾಗಬಹುದು.

ಏನಿದು 50-30-20 ನಿಯಮ?

ಸಾಲ ಮಾಡುವ ವಿಚಾರಕ್ಕೆ ಬಂದರೆ ಎಷ್ಟು ಸಾಲ ಮಾಡಬೇಕು ಎನ್ನುವ ಗೊಂದಲ ಬಹಳ ಮಂದಿಗೆ ಇರುತ್ತದೆ. ನಿಮ್ಮ ಆದಾಯದ ಹಣವನ್ನು ಯಾವ್ಯಾವುದಕ್ಕೆ ಎಷ್ಟು ವೆಚ್ಚ ಮಾಡಬೇಕು ಎಂಬ ಗೊಂದಲವೂ ಇರುತ್ತದೆ. ಇಂಥ ಸ್ಥಿತಿಯಲ್ಲಿ ನೀವು ಇದ್ದರೆ ನಿಮಗಿದೋ ಇದೆ 50-30-20 ಸೂತ್ರ.

ಇಲ್ಲಿ 50 ಎಂದರೆ ನಿಮ್ಮ ಆದಾಯದ ಶೇ. 50ರಷ್ಟು ಹಣವನ್ನು ಅಗತ್ಯಗಳಿಗೆ ಖರ್ಚು ಮಾಡಬಹುದು. ಅದಕ್ಕಿಂತ ಹೆಚ್ಚು ಹಣ ವೆಚ್ಚವಾಗದಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ: 100-Age Rule: 40 ವರ್ಷ ಆದ ಬಳಿಕ ಎಲ್ಲಿ ಎಷ್ಟು ಹೂಡಿಕೆ ಮಾಡಬೇಕು? ಯಾವ್ಯಾವ ವಯಸ್ಸಿಗೆ ಹೂಡಿಕೆ ಹೇಗಿರಬೇಕು? ನಿಯಮ 100 ತಿಳಿಯಿರಿ

ಇಲ್ಲಿ ಅಗತ್ಯ ಖರ್ಚು ಎಂದರೆ ಮನೆ ಬಾಡಿಗೆ, ಬಿಲ್​ಗಳು, ಇಎಂಐ, ದಿನಸಿ ವಸ್ತು ಇತ್ಯಾದಿಯವುಗಳಿಗೆ ಮಾಡುವ ವೆಚ್ಚ.

ಇನ್ನು, ನಿಮ್ಮ ಬಯಕೆಗಳಿಗೆ ಮಾಡುವ ವೆಚ್ಚ ಶೇ. 30 ಮೀರದಂತೆ ಎಚ್ಚರಿ ವಹಿಸಿ. ಇಲ್ಲಿ ಬಯಕೆಗಳೆಂದರೆ ಆಗಾಗ್ಗೆ ಹೋಟೆಲ್​ಗೆ ಹೋಗಿ ಮಾಡುವ ಊಟ, ಪ್ರವಾಸ, ಸಿನಿಮಾ, ವಾಹನ ಖರೀದಿ ಇತ್ಯಾದಿ ಸೇರುತ್ತವೆ.

ಕೊನೆಯಲ್ಲಿ, ನಿಮ್ಮ ಉಳಿತಾಯವು ಕನಿಷ್ಠ ಶೇ. 20ರಷ್ಟಾದರೂ ಇರಬೇಕು. ಹೀಗಾಗಿ, ಮೊದಲಿಗೆ ಉಳಿತಾಯಕ್ಕೆ ಶೇ. 20ರಷ್ಟು ಆದಾಯವನ್ನು ಎತ್ತಿ ಇಟ್ಟುಕೊಂಡು ಉಳಿದ ಹಣವನ್ನು ನಿಮ್ಮ ಅಗತ್ಯಗಳಿಗೆ ಮತ್ತು ಬಯಕೆಗಳಿಗೆ ಬಳಸುವ ಅಭ್ಯಾಸ ಮಾಡಿಕೊಳ್ಳಿ.

ಇದನ್ನೂ ಓದಿ: ಸೂತ್ರ 72; ನಿಮ್ಮ ಹಣ ಡಬಲ್ ಅಗುವುದು ಯಾವಾಗ? ಎಷ್ಟು ಬಡ್ಡಿದರ ಅಗತ್ಯ? ಎಲ್ಲಕ್ಕೂ ಕೆಲಸ ಮಾಡುತ್ತೆ ಈ ಫಾರ್ಮುಲಾ

ನಿಮ್ಮ ಬಯಕೆಗಳಿಗೆ ಮಾಡುವ ಖರ್ಚನ್ನು ಸಾಧ್ಯವಾದಷ್ಟೂ ಮೊಟಕುಗೊಳಿಸಲು ಯತ್ನಿಸಿ. ಅಗತ್ಯಬಿದ್ದರೆ ಅಗತ್ಯಗಳಿಗೆ ಮಾಡುವ ವೆಚ್ಚವನ್ನೂ ಕಡಿಮೆ ಮಾಡಬಹುದು. ಇವುಗಳಿಂದ ಉಳಿಸಿದ ಹಣವನ್ನು ಉಳಿತಾಯಕ್ಕೆ ಸೇರಿಸುತ್ತಾ ಹೋಗಿ. ಹೀಗೆ ಮಾಡಿದರೆ ನಿಮ್ಮ ಸಂಪತ್ತು ಬೇಗ ಬೇಗ ಬೆಳೆಯುತ್ತಾ ಹೋಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​