AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ಉಳಿಸುವ ನರೇಂದ್ರ ಮೋದಿ ಟ್ರಿಕ್ಸ್; ಇನ್ಫ್ರಾ ಬಾಂಡ್​ಗಳಲ್ಲಿ ಹೂಡಿಕೆ ಮಾಡಿದ್ದ ಪ್ರಧಾನಿ; ಏನಿದು ಈ ಇನ್ಫ್ರಾಸ್ಟ್ರಕ್ಚರ್ ಬಾಂಡ್ಸ್?

Know About Infra Bonds: ಪ್ರಧಾನಿ ನರೇಂದ್ರ ಮೋದಿ ಕೆಲ ವರ್ಷಗಳ ಹಿಂದೆ ತಮ್ಮ ಆಸ್ತಿ ವಿವರ ಘೋಷಣೆಯಲ್ಲಿ ಎಲ್ ಅಂಡ್ ಟಿ ಇನ್ಫ್ರಾಸ್ಟ್ರಕ್ಚರ್ ಬಾಂಡ್​ಗಳ ಮೇಲಿನ ಹೂಡಿಕೆಯನ್ನು ತೋರಿಸಿದ್ದರು. ಈ ಬಾಂಡ್​ಗಳು ಉತ್ತಮ ಬಡ್ಡಿ ಆದಾಯಕ್ಕೆ ಮತ್ತು ತೆರಿಗೆ ಉಳಿತಾಯಕ್ಕೆ ಹೆಸರಾಗಿವೆ. ಅಂತೆಯೇ ಜನಪ್ರಿಯವೂ ಆಗಿವೆ. ಈ ಇನ್​ಫ್ರಾಸ್ಟ್ರಕ್ಚರ್ ಬಾಂಡ್​ಗಳ ಬಗ್ಗೆ ಕೆಲವಿಷ್ಟು ಮಾಹಿತಿ ಇಲ್ಲಿದೆ...

ತೆರಿಗೆ ಉಳಿಸುವ ನರೇಂದ್ರ ಮೋದಿ ಟ್ರಿಕ್ಸ್; ಇನ್ಫ್ರಾ ಬಾಂಡ್​ಗಳಲ್ಲಿ ಹೂಡಿಕೆ ಮಾಡಿದ್ದ ಪ್ರಧಾನಿ; ಏನಿದು ಈ ಇನ್ಫ್ರಾಸ್ಟ್ರಕ್ಚರ್ ಬಾಂಡ್ಸ್?
ಸಾಂದರ್ಭಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 16, 2023 | 2:00 PM

Share

Narendra Modi Birthday Special (September 17th): ಪ್ರಧಾನಿ ನರೇಂದ್ರ ಮೋದಿ ಹಲವು ವರ್ಷಗಳಿಂದ ಸತತವಾಗಿ ಆಡಳಿತದಲ್ಲಿದ್ದರೂ ಅವರ ಆಸ್ತಿಪಾಸ್ತಿ ಯಾರ ಕಣ್ಣುಕುಕ್ಕುವಷ್ಟು ಇಲ್ಲ. ಅವರು ಘೋಷಣೆ ಮಾಡಿಕೊಂಡಿರುವ ಆಸ್ತಿ ವಿವರದ ಪ್ರಕಾರ ಎರಡು ಕೋಟಿ ರುಪಾಯಿಗೂ ತುಸು ಹೆಚ್ಚು. ಇದರಲ್ಲಿ ಚಿರಾಸ್ತಿ ಮೌಲ್ಯ ಹಾಗೂ ವಿವಿಧ ಹೂಡಿಕೆಗಳಿಂದ ಸೃಷ್ಟಿಯಾದ ಆದಾಯವೇ ಹೆಚ್ಚು. ಇದು 2022ರಲ್ಲಿ ಘೋಷಣೆ ಮಾಡಿಕೊಂಡ ಅಸ್ತಿ ವಿವರ. ಹಾಗೆಯೇ, 2016ರಲ್ಲಿ ಅವರು ಘೋಷಣೆ ಮಾಡಿಕೊಂಡ ಪ್ರಕಾರ ತೆರಿಗೆ ಉಳಿತಾಯದ ಇನ್ಫ್ರಾ ಬಾಂಡ್​ಗಳಲ್ಲಿ ಕೆಲ ಪ್ರಮಾಣದ ಹಣ ಹೂಡಿಕೆ ಮಾಡಿದ್ದರು. ಎಲ್ ಅಂಡ್ ಟಿ ಇನ್ಫ್ರಾ ಬಾಂಡ್​ಗಳನ್ನು (L&T Infrastructure bonds) ಅವರು ಹೊಂದಿದ್ದರು. 2022ರಷ್ಟರಲ್ಲಿ ಅವರು ಈ ಬಾಂಡ್​ಗಳನ್ನು ರಿಡೀಮ್ ಮಾಡಿಕೊಂಡಿದ್ದಿರಬಹುದು.

ಏನಿದು ಇನ್​ಫ್ರಾ ಬಾಂಡ್​ಗಳು?

ಇನ್ಫ್ರಾಸ್ಟ್ರಕ್ಚರ್ ಯೋಜನೆಗಳಲ್ಲಿ ತೊಡಗಿರುವ ಸಂಸ್ಥೆಗಳು ಬಂಡವಾಳ ಸಂಗ್ರಹಿಸಲು ಸರ್ಕಾರದ ಅನುಮೋದನೆ ಮೇರೆಗೆ ಬಾಂಡ್​ಗಳನ್ನು ಸಾರ್ವಜನಿಕರಿಗೆ ವಿತರಿಸುತ್ತವೆ. ಬ್ಯಾಂಕುಗಳ ಪ್ರಸಕ್ತ ಠೇವಣಿ ದರಗಳಿಗೆ ಬಹುತೇಕ ಸಮವಾಗಿ ಬಡ್ಡಿ ಆಫರ್ ಮಾಡಲಾಗುತ್ತದೆ. ಜೊತೆಗೆ ಇವು ಐಟಿ ಕಾಯ್ದೆ ಸೆಕ್ಷನ್ 80ಸಿ ಅಡಿಯಲ್ಲಿ ತೆರಿಗೆ ರಿಯಾಯಿತಿ ಅವಕಾಶವನ್ನೂ ನೀಡುತ್ತವೆ. ಈ ಬಾಂಡ್​ಗಳ ಮೇಲೆ ನೀವು ಮಾಡುವ 20,000 ರೂವರೆಗಿನ ಹೂಡಿಕೆ ಹಣಕ್ಕೆ ತೆರಿಗೆ ವಿನಾಯಿತಿ ಇರುತ್ತದೆ. ಈ ಕಾರಣಕ್ಕೆ ಇನ್​ಫ್ರಾ ಬಾಂಡ್​ಗಳು ಜನಪ್ರಿಯವಾಗಿವೆ.

ಇದನ್ನೂ ಓದಿ: ಸಂಬಳದಲ್ಲೇ 30 ವರ್ಷದಲ್ಲಿ 100 ಕೋಟಿ ರೂ ಕೂಡಿಡುವುದು ಹೇಗೆ? ತಿಂಗಳಿಗೆ ಎಷ್ಟು ಹೂಡಿಕೆ ಬೇಕು? ಇಲ್ಲಿದೆ ಡೀಟೇಲ್ಸ್

ಎಲ್ ಅಂಡ್ ಟಿ, ಐಡಿಎಫ್​ಸಿ, ಎಲ್​ಐಸಿ ಮೊದಲಾದ ಸಂಸ್ಥೆಗಳು ಇನ್ಫ್ರಾಸ್ಟ್ರಕ್ಚರ್ ಬಾಂಡ್​ಗಳನ್ನು ನೀಡುತ್ತವೆ. ಇಂಥ ಬಾಂಡ್​ಗಳನ್ನ ಪಡೆಯಬೇಕಾದರೆ ಕನಿಷ್ಠ ಹೂಡಿಕೆ 5,000 ರೂ ಇದೆ. ಅದಕ್ಕೂ ಮೇಲೆ ಎಷ್ಟು ಬೇಕಾದರೂ ಹೂಡಿಕೆ ಮಾಡಬಹುದು. ಈ ಬಾಂಡ್​ಗಳು 10ರಿಂದ 15ವರ್ಷದಲ್ಲಿ ಮೆಚ್ಯೂರ್ ಆಗುತ್ತವೆ. ಇದರ ಲಾಕ್ ಇನ್ ಪೀರಿಯಡ್ 5 ವರ್ಷ ಇರುತ್ತದೆ. ನೀವು ಹೂಡಿಕೆ ಮಾಡಿ 5 ವರ್ಷದವರೆಗೂ ಬಾಂಡ್ ಹಿಂಪಡೆಯಲು ಆಗುವುದಿಲ್ಲ.

ನಿಮಗೆ ಅಗತ್ಯಬಿದ್ದರೆ 5 ವರ್ಷದ ಬಳಿಕ ಬಾಂಡ್ ಅನ್ನು ಸರೆಂಡರ್ ಮಾಡಿ ನಿಮ್ಮ ಹೂಡಿಕೆಯನ್ನು ಹಿಂಪಡೆಯಬಹುದು. ಆ ಅವಧಿಯವರೆಗೆ ಸೇರುವ ಬಡ್ಡಿ ಸಮೇತ ನಿಮ್ಮ ಹೂಡಿಕೆ ವಾಪಸ್ ಸಿಗುತ್ತದೆ.

ಇದನ್ನೂ ಓದಿ: ಸೆ. 17, ವಿಶ್ವಕರ್ಮ ಜಯಂತಿಯಂದು ಪಿಎಂ ವಿಶ್ವಕರ್ಮ ಯೋಜನೆ ಲೋಕಾರ್ಪಣೆ; ಏನಿದು ಸ್ಕೀಮ್?

ತೆರಿಗೆ ವಿಚಾರದಲ್ಲಿ ಇನ್ನೊಂದು ಅಂಶ ಇಲ್ಲಿ ಪ್ರಸ್ತಾಪಿಸುವ ಅಗತ್ಯವಿದೆ. ಇನ್ಫ್ರಾ ಬಾಂಡ್​ಗಳ ಮೇಲಿನ ಹೂಡಿಕೆಗೆ 20,000 ರೂವರೆಗೂ ಟ್ಯಾಕ್ಸ್ ಡಿಡಕ್ಷನ್ ಅವಕಾಶ ಇದೆ ಎಂಬುದು ಹೌದು. ಆದರೆ, ಈ ಬಾಂಡ್​ಗಳಿಂದ ಸಿಗುವ ಬಡ್ಡಿ ಆದಾಯಕ್ಕೆ ತೆರಿಗೆ ಅನ್ವಯ ಆಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ