AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Credit Card Closure: ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುವುದು ಹೇಗೆ? ಇಲ್ಲಿದೆ ಪೂರ್ತಿ ವಿವರ

Credit Cards; ನೀವು ಅನೇಕ ಕ್ರೆಡಿಟ್ ಕಾರ್ಡ್​ಗಳನ್ನು ಹೊಂದಿದ್ದು, ಆ ಪೈಕಿ ಬೇಡದೇ ಇರುವುದನ್ನು ಕ್ಲೋಸ್ ಮಾಡಬೇಕೆಂದಿದ್ದರೆ ಹೇಗೆ ಮಾಡಬಹುದು ಎಂಬ ಪೂರ್ತಿ ವಿವರ ಇಲ್ಲಿದೆ.

Credit Card Closure: ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುವುದು ಹೇಗೆ? ಇಲ್ಲಿದೆ ಪೂರ್ತಿ ವಿವರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on:Nov 07, 2022 | 4:40 PM

ಕ್ರೆಡಿಟ್ ಕಾರ್ಡ್ (Credit Card) ಅನ್ನು ಕ್ಲೋಸ್ ಮಾಡಲು ಬಯಸಿದ್ದೀರಾ? ಈಗ ಹೊಸ ಕ್ರೆಡಿಟ್ ಕಾರ್ಡ್​ಗೆ ಅರ್ಜಿ ಸಲ್ಲಿಸಿದಷ್ಟೇ ಸುಲಭವಾಗಿ ಕಾರ್ಡ್ ಅನ್ನು ಕ್ಲೋಸ್ ಸಹ ಮಾಡಬಹುದು. ನೀವು ಅನೇಕ ಕ್ರೆಡಿಟ್ ಕಾರ್ಡ್​ಗಳನ್ನು ಹೊಂದಿದ್ದು, ಆ ಪೈಕಿ ಬೇಡದೇ ಇರುವುದನ್ನು ಕ್ಲೋಸ್ ಮಾಡಬೇಕೆಂದಿದ್ದರೆ ಹೇಗೆ ಮಾಡಬಹುದು ಎಂಬ ಪೂರ್ತಿ ವಿವರ ಇಲ್ಲಿದೆ.

ಗ್ರಾಹಕ ಸೇವಾ ಸಂಖ್ಯೆಗೆ ಕರೆ ಮಾಡುವ ಮೂಲಕ

ಯಾವ ಬ್ಯಾಂಕ್​ನ ಕ್ರೆಡಿಟ್​​ ಕಾರ್ಡ್ ಹೊಂದಿದ್ದೀರೋ ಅದರ ಗ್ರಾಹಕ ಸೇವಾ ವಿಭಾಗಕ್ಕೆ (ಕಸ್ಟಮರ್ ಸರ್ವೀಸ್ ಡಿಪಾರ್ಟ್​ಮೆಂಟ್) ಕರೆ ಮಾಡಿ ಕ್ರೆಡಿಟ್ ಕಾರ್ಡ್ ರದ್ದತಿ ಅಥವಾ ಕ್ಲೋಸ್​ ಮಾಡಲು ಮನವಿ ಮಾಡಬಹುದು.

ಇದನ್ನೂ ಓದಿ
Image
Petrol Price on November 7: ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ಕುಸಿತವಾಗಿಲ್ಲ ಪೆಟ್ರೋಲ್, ಡೀಸೆಲ್ ದರ
Image
ನೋಟು ಅಮಾನ್ಯೀಕರಣದ 6 ವರ್ಷಗಳ ನಂತರವೂ ಜನರಲ್ಲಿರುವ ನಗದು ₹ 30.88 ಲಕ್ಷ ಕೋಟಿ
Image
Personal Finance: ಮನಿ9 ಭಾರತದ ಮೊದಲ ಮತ್ತು ಅತಿದೊಡ್ಡ ಸ್ವತಂತ್ರ ಪರ್ಸನಲ್ ಫೈನಾನ್ಸ್​ ಸಮೀಕ್ಷೆಯ ಅವಲೋಕನ
Image
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ; ನ. 7ರಿಂದ 1 ವಾರದೊಳಗೆ 5 ದಿನ ಬ್ಯಾಂಕ್​ಗಳಿಗೆ ರಜೆ

ಲಿಖಿತ ಮನವಿ ಸಲ್ಲಿಸುವ ಮೂಲಕ

ಕ್ರೆಡಿಟ್ ಕಾರ್ಡ್ ರದ್ದು ಅಥವಾ ಕ್ಲೋಸ್ ಮಾಡುವಂತೆ ನಿಮಗೆ ಕಾರ್ಡ್ ಒದಗಿಸಿಕೊಟ್ಟ ಬ್ಯಾಂಕ್​ ಮ್ಯಾನೇಜರ್​ಗೆ ಲಿಖಿತ ಮನವಿ ಅಥವಾ ಅರ್ಜಿ ಸಲ್ಲಿಸಬಹುದು. ಅರ್ಜಿಯಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಸಂಖ್ಯೆ, ಹೆಸರು, ವಿಳಾದ ಹಾಗೂ ಸಂಪರ್ಕ ಸಂಖ್ಯೆ ನಮೂದಿಸಬೇಕು.

ಇ-ಮೇಲ್ ಮೂಲಕ ಕ್ರೆಡಿಟ್ ಕಾರ್ಡ್ ರದ್ದತಿ

ಕ್ರೆಡಿಟ್ ಕಾರ್ಡ್ ನೀಡಿದ ಸಂಸ್ಥೆಗೆ ಇ-ಮೇಲ್ ಸಂದೇಶ ಕಳುಹಿಸುವ ಮೂಲಕ ಕಾರ್ಡ್ ರದ್ದತಿಗೆ ಮನವಿ ಮಾಡಬಹುದು. ನಿಮ್ಮ ವೈಯಕ್ತಿಕ ವಿವರ, ಯಾವ ಕ್ರೆಡಿಟ್ ಕಾರ್ಡ್​ ರದ್ದು ಮಾಡಬೇಕು ಎಂಬುದನ್ನು ಮೇಲ್​​ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರಬೇಕು.

ಆನ್​ಲೈನ್ ಮನವಿ ಸಲ್ಲಿಕೆ

ಕೆಲವು ಬ್ಯಾಂಕ್​ಗಳು ಆನ್​ಲೈನ್ ಮೂಲಕ ಕ್ರೆಡಿಟ್ ಕಾರ್ಡ್ ರದ್ದತಿಗೆ ಮನವಿ ಸಲ್ಲಿಸುವ ಅವಕಾಶ ನೀಡಿವೆ. ಈ ರೀತಿ ಮನವಿ ಸಲ್ಲಿಸಲು ಮೊದಲು ಬ್ಯಾಂಕ್​ ವೆಬ್​ಸೈಟ್​ ಕ್ಲಿಕ್ ಮಾಡಿ. ಅರ್ಜಿ ನಮೂನೆಯನ್ನು ಓಪನ್ ಮಾಡಿ ಅದರಲ್ಲಿ ವಿವರಗಳನ್ನು ಭರ್ತಿ ಮಾಡಿ ಸಬ್​ಮಿಟ್ ಮಾಡಿ. ಆದರೆ, ಈ ರೀತಿಯ ಅರ್ಜಿ ಸಲ್ಲಿಸುವಾಗ ಬ್ಯಾಂಕ್​ನ ಅಧಿಕೃತ ವೆಬ್​ಸೈಟ್​​ನಲ್ಲೇ ಅರ್ಜಿ ಸಲ್ಲಿಸುತ್ತಿದ್ದೀರಿ ಎಂಬುದನ್ನು ಖಾತರಿಪಡಿಸಿಕೊಳ್ಳಿ. ಇಲ್ಲವಾದಲ್ಲಿ ವಿವರಗಳ ದುರ್ಬಳಕೆಯಾಘುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.

ಇದನ್ನೂ ಓದಿ: ಕಾರು ಖರೀದಿಗೆ ಸಾಲ ಪಡೆಯಲು ಯೋಚಿಸುತ್ತಿದ್ದೀರಾ? ಕಡಿಮೆ ಬಡ್ಡಿ, ಇಎಂಐ ಸೇರಿ ಈ ಅಂಶಗಳು ಗಮನದಲ್ಲಿರಲಿ

ಕಾರ್ಡ್ ರದ್ದತಿ ಮನವಿಗೂ ಮುನ್ನ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು

  • ಕಾರ್ಡ್ ಕ್ಲೋಸ್ ಮಾಡಲು ಅರ್ಜಿ ಸಲ್ಲಿಸುವ ಮುನ್ನ ಬಾಕಿ ಮೊತ್ತವನ್ನು ಸಂಪೂರ್ಣವಾಗಿ ಪಾವತಿ ಮಾಡಿರಬೇಕು.
  • ಕ್ರೆಡಿಟ್ ಕಾರ್ಡ್ ನೀಡಿದ ಸಂಸ್ಥೆಯು ನಿಗದಿಪಡಿಸಿರುವ ಕ್ಲೋಸ್ / ರದ್ದತಿ ಮಾನದಂಡಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ.
  • ಕಾರ್ಡ್ ರದ್ದತಿ ಮನವಿ ಸಲ್ಲಿಸುವ ಮುನ್ನ ರಿವಾರ್ಡ್ ಪಾಯಿಂಟ್​ಗಳ ಪ್ರಯೋಜನ ಪಡೆದುಕೊಳ್ಳಿ. ಒಮ್ಮೆ ಕಾರ್ಡ್ ರದ್ದಾದರೆ, ಆ ಬಳಿಕ ನಿಮಗೆ ಯಾವುದೇ ರಿವಾರ್ಡ್ ಪಾಯಿಂಟ್ ಆಗಲಿ, ಆಫರ್​ಗಳನ್ನಾಗಲಿ ಉಪಯೋಗಿಸಲು ಆಗುವುದಿಲ್ಲ.
  • ಸ್ವಯಂಚಾಲಿತ ಬಿಲ್ ಪಾವತಿ ಚಾಲೂ ಮಾಡಿದ್ದರೆ ಅವುಗಳನ್ನೆಲ್ಲ ಮೊದಲು ರದ್ದುಗೊಳಿಸಿ. ಇಲ್ಲದಿದ್ದರೆ ಬ್ಯಾಂಕ್​ ನಿಮ್ಮ ರದ್ದತಿ ಅರ್ಜಿಯನ್ನು ತಿರಸ್ಕರಿಸುವ ಸಾಧ್ಯತೆ ಇದೆ.
  • ಕ್ರೆಡಿಟ್ ಕಾರ್ಡ್ ರದ್ದತಿ ಅರ್ಜಿ ಸಲ್ಲಿಸಿದ ಬಳಿಕ, ಅದು ಯಾವಾಗ ರದ್ದಾಗುತ್ತದೆ ಎಂಬ ನಿರ್ದಿಷ್ಟ ದಿನಾಂಕವನ್ನು ತಿಳಿದುಕೊಳ್ಳಿ. ಇಲ್ಲವಾದಲ್ಲಿ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗಿ ಬರುವ ಸಾಧ್ಯತೆಯೂ ಇದೆ.

ವೈಯಕ್ತಿಕ ಹಣಕಾಸಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Mon, 7 November 22

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?