AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಕ್ಯಾರಟ್ ಚಿನ್ನದ ಮೇಲೆ ಸಿಕ್ಕಾಪಟ್ಟೆ ಹರಿದುಬಂದ ಹೂಡಿಕೆ; ಚಿನ್ನದ ಬೆಲೆ ಇಷ್ಟೊಂದು ಏರಲು ಇದಪ್ಪಾ ಕಾರಣ..!

Gold investment in India hits 10 billion USD 2025: ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ಹೋಗಲು ಹೂಡಿಕೆಗಳೇ ಕಾರಣ ಎಂದು ಹೇಳಲಾಗುತ್ತಿತ್ತು. ವರ್ಲ್ಡ್ ಗೋಲ್ಡ್ ಕೌನ್ಸಿಲ್ ಬಿಡುಗಡೆ ಮಾಡಿದ ಮಾಹಿತಿಯು ಈ ಕಾರಣವನ್ನು ಖಚಿತಪಡಿಸಿವೆ. ಜುಲೈನಿಂದ ಸೆಪ್ಟೆಂಬರ್​ವರೆಗಿನ ಕ್ವಾರ್ಟರ್​ನಲ್ಲಿ ಭಾರತದಲ್ಲಿ 10 ಬಿಲಿಯನ್ ಡಾಲರ್ ಮೊತ್ತದಷ್ಟು ಹೂಡಿಕೆಯು ಚಿನ್ನದ ಮೇಲೆ ಹರಿದಿದೆ ಎನ್ನಲಾಗಿದೆ.

24 ಕ್ಯಾರಟ್ ಚಿನ್ನದ ಮೇಲೆ ಸಿಕ್ಕಾಪಟ್ಟೆ ಹರಿದುಬಂದ ಹೂಡಿಕೆ; ಚಿನ್ನದ ಬೆಲೆ ಇಷ್ಟೊಂದು ಏರಲು ಇದಪ್ಪಾ ಕಾರಣ..!
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 31, 2025 | 3:19 PM

Share

ನವದೆಹಲಿ, ಅಕ್ಟೋಬರ್ 31: ಚಿನ್ನದ ಬೆಲೆ (Gold) ಕಳೆದ ಎರಡು ವಾರದಿಂದ ಇಳಿಮುಖಗೊಳ್ಳುವ ಮುನ್ನ ಯಾರೂ ಊಹಿಸದ ರೇಂಜ್​ನಲ್ಲಿ ಏರಿ ಹೊಸ ದಾಖಲೆಯನ್ನೇ ಬರೆದಿತ್ತು. ಒಂದು ವರ್ಷದಲ್ಲಿ ಶೇ. 50ರಿಂದ 60ರ ಶ್ರೇಣಿಯಲ್ಲಿ ಚಿನ್ನದ ಬೆಲೆ ಏರಿದ್ದು ಹಿಂದೆಂದೂ ಕಂಡು ಕೇಳಿದ್ದಿರಲಿಲ್ಲ. ಚಿನ್ನದ ಮೇಲೆ ಹೂಡಿಕೆಗಳು ಹೆಚ್ಚುತ್ತಿರುವುದು ಬೆಲೆ ಏರಿಕೆಗೆ ಕಾರಣ ಎಂದು ಹೇಳಲಾಗುತ್ತಿದೆ. ಇದಕ್ಕೆ ಇಂಬು ಕೊಡುವಂತೆ ವರ್ಲ್ಡ್ ಗೋಲ್ಡ್ ಕೌನ್ಸಿಲ್​ನ ವರದಿಯಲ್ಲಿ ಈ ವಿಚಾರವನ್ನು ದೃಢಪಡಿಸಲಾಗಿದೆ.

ವರ್ಲ್ಡ್ ಗೋಲ್ಡ್ ಕೌನ್ಸಿಲ್ ಪ್ರಕಾರ ಸೆಪ್ಟೆಂಬರ್ ಕ್ವಾರ್ಟರ್​ನಲ್ಲಿ (ಜುಲೈನಿಂದ ಸೆಪ್ಟೆಂಬರ್) 10 ಬಿಲಿಯನ್ ಡಾಲರ್​ನಷ್ಟು ಹೂಡಿಕೆಗಳು ಶುದ್ಧ ಚಿನ್ನದ ಮೇಲೆ ಹರಿದುಬಂದಿವೆ. ಗೋಲ್ಡ್ ಬಾರ್​ಗಳು, ಗೋಲ್ಡ್ ಕಾಯಿನ್​ಗಳ ಮೇಲೆ ಹೂಡಿಕೆದಾರರು ಸುಮಾರು 88,700 ಕೋಟಿ ರೂ ಹೂಡಿಕೆ ಮಾಡಿದ್ದಾರೆ.

ಇದನ್ನೂ ಓದಿ: ಮೆಚ್ಯೂರಿಟಿಗೆ ಬಂದ 2017-18ರ ಸಾವರಿನ್ ಗೋಲ್ಡ್ ಬಾಂಡ್; 2,971 ರೂನಿಂದ 11,922 ರೂಗೆ ಏರಿಕೆ

ಕುತೂಹಲ ಎಂದರೆ, ಭಾರತದಲ್ಲಿ ಸಾಂಪ್ರದಾಯಿಕವಾಗಿ ಜನರು ಚಿನ್ನದ ಖರೀದಿ ಮಾಡುತ್ತಾರೆ ಎಂದರೆ ಅದು ಆಭರಣಗಳ ಖರೀದಿಯೇ ಹೆಚ್ಚು. ದೇಶದಲ್ಲಿ ಆಗುವ ಒಟ್ಟಾರೆ ಚಿನ್ನ ಖರೀದಿಯಲ್ಲಿ ಆಭರಣಗಳ ಪಾಲು ಅತಿಹೆಚ್ಚು ಇರುತ್ತದೆ. ಹೂಡಿಕೆಯಾಗಿ ಚಿನ್ನ ಖರೀದಿಸುವುದು ಕಡಿಮೆಯೇ. ಕಳೆದ ಕೆಲ ತಿಂಗಳಿಂದ ಹೂಡಿಕೆಗಾಗಿ ಚಿನ್ನದ ಖರೀದಿ ಹೆಚ್ಚುತ್ತಿದೆ. ಇದೇ ಕಾರಣಕ್ಕೆ ಜಾಗತಿಕ ಮಾರುಕಟ್ಟೆಗೆ ಹೋಲಿಸಿದರೆ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚು ವ್ಯತ್ಯಯಗಳಾಗುತ್ತಿರಬಹುದು.

‘ಚಿನ್ನವನ್ನು ಈಗ ಪ್ರಮುಖ ಆಸ್ತಿಯಾಗಿ ಪರಿಗಣಿಸಲಾಗುತ್ತಿರುವುದು ಹೆಚ್ಚುತ್ತಿದೆ. ಹೆಚ್ಚು ಹೂಡಿಕೆದಾರರು ಚಿನ್ನವನ್ನು ಸೇರಿಸಿ ತಮ್ಮ ಪೋರ್ಟ್​ಫೋಲಿಯೋಗಳನ್ನು ವಿಸ್ತರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲೂ ಹೂಡಿಕೆದಾರರಿಗೆ ಚಿನ್ನದ ಮೇಲಿನ ಆಸಕ್ತಿ ಮುಂದುವರಿಯಬಹುದು ಎಂದು ಭಾವಿಸಿದ್ದೇನೆ’ ಎಂದು ವರ್ಲ್ಡ್ ಗೋಲ್ಡ್ ಕೌನ್ಸಿಲ್ ಸಿಇಒ ಸಚಿನ್ ಜೈನ್ ಹೇಳುತ್ತಾರೆ.

ಇದನ್ನೂ ಓದಿ: ಚಿನ್ನ, ಬೆಳ್ಳಿಗೆ ಸಾಲ; ಎಲ್​ಟಿವಿ ಹೆಚ್ಚಳ ಇತ್ಯಾದಿ ಆರ್​ಬಿಐನ ಹೊಸ ಮಾರ್ಗಸೂಚಿ ಗಮನಿಸಿ…

ವಿಶ್ವಾದ್ಯಂತ ಸೆಪ್ಟೆಂಬರ್ ಕ್ವಾರ್ಟರ್​ನಲ್ಲಿ ಚಿನ್ನದ ಖರೀದಿ ಭರಾಟೆ

ಜಾಗತಿಕವಾಗಿಯೂ ಕೂಡ ಸೆಪ್ಟೆಂಬರ್ ಅಂತ್ಯದ ಕ್ವಾರ್ಟರ್​ನಲ್ಲಿ ಚಿನ್ನಕ್ಕೆ ಭರ್ಜರಿ ಬೇಡಿಕೆ ಇತ್ತು. ಬರೋಬ್ಬರಿ 1,313 ಟನ್ ಚಿನ್ನ ಬಿಕರಿಯಾಗಿದೆ. ಈ ಪೈಕಿ ಹೂಡಿಕೆಗೆಂದೇ 524 ಟನ್ ಚಿನ್ನ ಖರೀದಿಯಾಗಿದೆ. ಭಾರತದಲ್ಲೇ 91.6 ಟನ್ ಚಿನ್ನದ ಮೇಲೆ ಹೂಡಿಕೆಯಾಗಿದೆ. ಇದರಲ್ಲಿ ಗೋಲ್ಡ್ ಕಾಯಿನ್, ಗೋಲ್ಡ್ ಬಾರ್​ಗಳು ಮಾತ್ರವಲ್ಲ, ಗೋಲ್ಡ್ ಇಟಿಎಫ್​ಗಳಲ್ಲೂ ಹೂಡಿಕೆ ಹೆಚ್ಚಿರುವುದು ಹೌದು. ಆರ್ಥಿಕ ಅನಿಶ್ಚಿತ ಪರಿಸ್ಥಿತಿಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚುತ್ತದೆ ಎನ್ನುವ ಟ್ರೆಂಡ್ ನಿಜವೆಂಬುದು ಮತ್ತೆ ಖಚಿತಗೊಂಡಿದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು