ಇನ್ಷೂರೆನ್ಸ್ ಪಾಲಿಸಿ ಮೇಲೆ ಸಾಲ ಪಡೆಯುವುದು ಹೇಗೆ? ಅದರ ಪ್ರಯೋಜನಗಳೇನು ತಿಳಿದಿರಿ

Insurance policy loan: ಆಪತ್ಕಾಲಕ್ಕೆ ಹಣ ಬೇಕಾದಾಗ ಪರ್ಸನಲ್ ಲೋನ್ ಪಡೆಯುವುದಕ್ಕಿಂತ ಬೇರೆ ಸುರಕ್ಷಿತ ಸಾಲಗಳಿಗೆ ಮೊರೆ ಹೋಗಬಹುದು. ಈ ರೀತಿ ಸೆಕ್ಯೂರ್ಡ್ ಲೋನ್​​ಗಳಲ್ಲಿ ಒಂದು ಇನ್ಷೂರೆನ್ಸ್ ಪಾಲಿಸಿ ಆಧಾರಿತ ಸಾಲ. ನಿಮ್ಮ ಇನ್ಷೂರೆನ್ಸ್ ಪಾಲಿಸಿಯನ್ನು ಅಡವಾಗಿ ಇಟ್ಟು ಸೀಮಿತ ಪ್ರಮಾಣದಲ್ಲಿ ಸಾಲ ಪಡೆಯಬಹುದು. ಬಡ್ಡಿ ಕಡಿಮೆ ಇರುತ್ತದೆ. ಸಾಲ ನೀಡುವ ಪ್ರಕ್ರಿಯೆಯೂ ಸುಲಭ ಇರುತ್ತದೆ.

ಇನ್ಷೂರೆನ್ಸ್ ಪಾಲಿಸಿ ಮೇಲೆ ಸಾಲ ಪಡೆಯುವುದು ಹೇಗೆ? ಅದರ ಪ್ರಯೋಜನಗಳೇನು ತಿಳಿದಿರಿ
ಇನ್ಷೂರೆನ್ಸ್
Follow us
|

Updated on: Jul 04, 2024 | 12:46 PM

ಇವತ್ತು ನಿಮಗೆ ಹಣದ ಅಗತ್ಯ ಇದ್ದು ಅದಕ್ಕಾಗಿ ನಿಮ್ಮ ಹೂಡಿಕೆಯನ್ನು ಮರಳಿಸಬೇಕಾಗುವುದಿಲ್ಲ. ಆ ಹೂಡಿಕೆ ಮೇಲೆಯೇ ಸಾಲ ಪಡೆಯಬಹುದು. ಲೈಫ್ ಇನ್ಷೂರೆನ್ಸ್ ಪಾಲಿಸಿ ಮೇಲೂ ಸಾಲ ಪಡೆಯಬಹುದು. ಇನ್ಷೂರೆನ್ಸ್ ಪಾಲಿಸಿ ಮೇಲೆ ಸಾಲ ಪಡೆಯುವುದರಿಂದ ಹಲವು ಪ್ರಯೋಜನಗಳಿವೆ. ಪ್ರಮುಖ ಪ್ರಯೋಜನ ಎಂದರೆ ಬಡ್ಡಿದರ ಕಡಿಮೆ ಇರುತ್ತದೆ, ಮತ್ತು ಸುಲಭವಾಗಿ ಸಾಲ ಸಿಗುತ್ತದೆ. ಇನ್ಷೂರೆನ್ಸ್ ಸಂಸ್ಥೆಯೇ ಈ ಸಾಲವನ್ನು ಒದಗಿಸುತ್ತದೆ. ಗಮನಿಸಬೇಕಾದ ಸಂಗತಿ ಎಂದರೆ ಸಾಂಪ್ರದಾಯಿಕ ಜೀವ ವಿಮಾ ಪಾಲಿಸಿಗಳಾದ ಮನಿಬ್ಯಾಕ್ ಪಾಲಿಸಿ, ಎಂಡೋಮೆಂಟ್ ಪಾಲಿಸಿಗಳಿಗೆ ಲೋನ್ ಸಿಗುತ್ತದೆ. ಯುನಿಟ್ ಲಿಂಕ್ಡ್ ಇನ್ಷೂರೆನ್ಸ್ ಪ್ಲಾನ್, ಟರ್ಮ್ ಇನ್ಷೂರೆನ್ಸ್ ಪ್ಲಾನ್​ಗಳಿಗೆ ಸಾಲ ಸೌಲಭ್ಯ ಇರುವುದಿಲ್ಲ.

ಇನ್ಷೂರೆನ್ಸ್ ಮೇಲೆ ಎಷ್ಟು ಮೊತ್ತದ ಸಾಲ ಸಿಗುತ್ತದೆ?

ನೀವು ಸಾಲಕ್ಕೆ ಅರ್ಹತೆ ಪಡೆಯಬೇಕಾದರೆ ಪಾಲಿಸಿ ಕನಿಷ್ಠ ಒಂದು ವರ್ಷವಾದರೂ ಆಗಿರಬೇಕು. ನೀವು ಆವರೆಗೂ ಪಾವತಿಸಿರುವ ಪ್ರೀಮಿಯಮ್ ಹಣದ ಶೇ. 60ರಿಂದ 80ರಷ್ಟು ಮೊತ್ತವನ್ನು ಸಾಲವಾಗಿ ಪಡೆಯಬಹುದು. ಉದಾಹರಣೆಗೆ, ಇನ್ಷೂರೆನ್ಸ್ ಪಾಲಿಸಿಯಲ್ಲಿ ನೀವು ಈವರೆಗೂ ಕಟ್ಟಿರುವ ಪ್ರೀಮಿಯಮ್​ಗಳ ಒಟ್ಟೂ ಹಣ 4,00,000 ರೂ ಆಗಿದ್ದರೆ ನಿಮಗೆ 2,40,000 ರೂನಿಂದ 3,20,000 ರೂವರೆಗೂ ಸಾಲ ಸಿಗಬಹುದು.

ಸಾಲ ಹೇಗೆ ಪಡೆಯುವುದು?

ಇನ್ಷೂರೆನ್ಸ್ ಸಂಸ್ಥೆಯ ಕಚೇರಿಗೆ ಹೋಗಿ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ನಿಮ್ಮ ಇನ್ಷೂರೆನ್ಸ್ ಪಾಲಿಸಿಯ ಮೂಲದಾಖಲೆ ಹಾಗೂ ಇತರ ಕೆವೈಸಿ ದಾಖಲೆಗಳನ್ನು ಜೊತೆಗೆ ಸಲ್ಲಿಸಬೇಕಾಗುತ್ತದೆ.

ಇದನ್ನೂ ಓದಿ: ನಿಮ್ಮ ಆದಾಯದಲ್ಲಿ ಗರಿಷ್ಠ ಎಷ್ಟು ಮೊತ್ತದಷ್ಟು ಟ್ಯಾಕ್ಸ್ ಡಿಡಕ್ಷನ್ಸ್ ಪಡೆಯಬಹುದು? ಇಲ್ಲಿದೆ ಪಟ್ಟಿ

ನೀವು ಪಾಲಿಸಿಯ ಮೂಲದಾಖಲೆಯನ್ನೇ ಒತ್ತೆಗೆ ಇಡುವುದರಿಂದ ಸುರಕ್ಷಿತ ಸಾಲವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ, ಪರ್ಸನಲ್ ಲೋನ್​ಗೆ ಹೋಲಿಸಿದರೆ ಇದಕ್ಕೆ ಬಡ್ಡಿದರ ಕಡಿಮೆ ಇರುತ್ತದೆ. ಗೋಲ್ಡ್ ಲೋನ್ ರೀತಿ ಇದಕ್ಕೂ ಕೂಡ ಹೆಚ್ಚು ಸಮಯ ಹಿಡಿಯುವುದಿಲ್ಲ. ಬಹಳ ಕ್ಷಿಪ್ರವಾಗಿ ಸಾಲ ಸಿಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ