AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂನ್ಯದಿಂದ ಆಸ್ತಿ ಸಂಪಾದನೆ ಮಾಡುವುದು ಹೇಗೆ? ಇಲ್ಲಿದೆ ತಿಳಿದಿರಬೇಕಾದ ಸಂಗತಿಗಳು

Strategies to build wealth when you start with nothing: ಶ್ರೀಮಂತರಾಗಲು ಸಾಕಷ್ಟು ಹಣ ಬೇಕು. ಅದಕ್ಕೆ ಹಣ ಸಂಪಾದನೆ ಮುಖ್ಯ. ಹಾಗೆಯೇ ಸಂಪಾದಿಸಿದ ಹಣವನ್ನು ಉಳಿಸಬೇಕು, ಅದನ್ನು ಹೂಡಿಕೆ ಮಾಡಬೇಕು. ಇವು ಬಹಳ ಮುಖ್ಯ. ದೀರ್ಘಾವಧಿ ಹೂಡಿಕೆ, ಆರ್ಥಿಕ ಶಿಸ್ತು ಇತ್ಯಾದಿಯನ್ನು ಹೊಂದುವುದು ಕೂಡ ಮುಖ್ಯ.

ಶೂನ್ಯದಿಂದ ಆಸ್ತಿ ಸಂಪಾದನೆ ಮಾಡುವುದು ಹೇಗೆ? ಇಲ್ಲಿದೆ ತಿಳಿದಿರಬೇಕಾದ ಸಂಗತಿಗಳು
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 18, 2026 | 10:02 PM

Share

ಏನೂ ಬಂಡವಾಳ ಇಲ್ಲದೇ ಜನರು ಉನ್ನತ ಹಂತಕ್ಕೆ ಹೋಗಿರುವ ಉದಾಹರಣೆಗಳು ಹಲವಿವೆ. ಪಿತ್ರಾರ್ಜಿತ ಆಸ್ತಿ ಅಥವಾ ತಂದೆ ತಾಯಿಯ ಹಣದ ನೆರವು, ಮನೆ ಇತ್ಯಾದಿ ಯಾವ ಸೌಲಭ್ಯವೂ ಸ್ವಂತವಾಗಿ ಹಣ, ಆಸ್ತಿ ಸಂಪಾದನೆ ಮಾಡುವುದು ನಿಜಕ್ಕೂ ಸಾಧನೆಯೇ. ಈ ನಿಟ್ಟಿನಲ್ಲಿ ಯಾವುದೇ ವ್ಯಕ್ತಿಯ ಮೊದಲ ಮುಖ್ಯ ಅಂಶ ಆತನ ಸಂಪಾದನೆಯ ಶಕ್ತಿ. ಹಣ ಸಂಪಾದನೆಗೆ ಬೇಕಾದ ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಬಹಳ ಮುಖ್ಯ.

ಹಣವಂತರಾಗಲು ಮೂರು ಅಂಶಗಳಿರಬೇಕು. ಹಣ ಗಳಿಕೆ, ಹಣ ಉಳಿಸುವಿಕೆ ಮತ್ತು ಹಣ ಹೂಡಿಕೆ. ಹಣ ಗಳಿಕೆಗೆ ಬೇಕಾಗಿರುವುದು ಕೌಶಲ್ಯ. ತಂತ್ರಜ್ಞಾನ, ಎಂಜಿನಿಯರಿಂಗ್, ಫೈನಾನ್ಸ್, ಬ್ಯುಸಿನೆಸ್ ಇತ್ಯಾದಿ ಕೌಶಲ್ಯಗಳನ್ನು ಕಲಿತಿರಬೇಕು.

ಇದನ್ನೂ ಓದಿ: ಹೂಡಿಕೆಗೆ ಯಾವ ರೀತಿಯ ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳಬೇಕು? ಗಮನಿಸಬೇಕಾದ ಅಂಶಗಳಿವು

ಹಣಕಾಸು ಶಿಸ್ತು

ಹೆಚ್ಚೆಚ್ಚು ಹಣ ಸಂಪಾದಿಸುವುದು ಎಷ್ಟು ಮುಖ್ಯವೋ, ಸಾಧ್ಯವಾದಷ್ಟೂ ಹಣವನ್ನು ಉಳಿಸುವುದೂ ಅಷ್ಟೇ ಮುಖ್ಯ. ಗಳಿಸಿದ ಹಣದಲ್ಲಿ ಅರ್ಧದಷ್ಟು ಹಣ ಉಳಿಸಲು ಸಾಧ್ಯವಾದರೆ ಬಹಳ ದೊಡ್ಡ ಸಂಗತಿ. ಎಮರ್ಜೆನ್ಸಿ ಫಂಡ್ ಇಟ್ಟಿರುವುದು, ಅಧಿಕ ಬಡ್ಡಿಯ ಸಾಲ ಪಡೆಯದಿರುವುದು ಇತ್ಯಾದಿ ಆರ್ಥಿಕ ಶಿಸ್ತನ್ನು ರೂಢಿಸಿಕೊಂಡವರು ಹಣವಂತರಾಗಲು ಸಾಧ್ಯ.

ಹೂಡಿಕೆ ರೂಢಿ

ಉಳಿಸಿದ ಹಣವನ್ನು ಹಾಗೇ ಇಟ್ಟುಕೊಂಡರೆ ಉಪಯೋಗವಿಲ್ಲ. ತಕ್ಕಮಟ್ಟಿಗೆ ಹಣ ಬೆಳೆಯುವ ಕಡೆ ಅದನ್ನು ಹೂಡಿಕೆ ಮಾಡಬೇಕು. ಫಿಕ್ಸೆಡ್ ಡೆಪಾಸಿಟ್, ಸ್ಮಾಲ್ ಸೇವಿಂಗ್ಸ್ ಸ್ಕೀಮ್, ಮ್ಯೂಚುವಲ್ ಫಂಡ್, ಇಟಿಎಫ್, ರಿಯಲ್ ಎಸ್ಟೇಟ್, ಷೇರುಗಳು ಇತ್ಯಾದಿ ಹಲವು ಹೂಡಿಕೆ ಮಾರ್ಗಗಳಿವೆ. ಇಟಿಎಫ್, ಇಂಡೆಕ್ಸ್ ಫಂಡ್​ಗಳಲ್ಲಿ ಹೂಡಿಕೆ ಮಾಡುವುದು ದೀರ್ಘಾವಧಿ ದೃಷ್ಟಿಯಲ್ಲಿ ಸುರಕ್ಷಿತ ಹಾಗೂ ಲಾಭದಾಯಕ ಎಂಬುದು ಈಗಾಗಲೇ ಸಾಬೀತಾಗಿರುವ ಸಂಗತಿ. ನೀವು ಸಂಪಾದನೆ ಶುರು ಮಾಡಿದಾಗಲೇ ಹೂಡಿಕೆ ಆರಂಭಿಸಿದರೆ ಬಹಳ ದೀರ್ಘಾವಧಿ ಹೂಡಿಕೆ ಸಾಧ್ಯವಾಗುತ್ತದೆ. ಹಣದ ಕಾಂಪೌಂಡಿಂಗ್ ಗುಣ ನಿಮಗೆ ವರದಾನವಾಗುತ್ತದೆ.

ಇದನ್ನೂ ಓದಿ: ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

ನೀವು ಒಮ್ಮೆ ಹಣ ಉಳಿಸಿ, ಅದರಿಂದ ಉತ್ತಮ ಆಸ್ತಿ ಸಂಪಾದನೆ ಮಾಡಲು ಆರಂಭಿಸಿದರೆ ಆ ಗುಣ ಶಾಶ್ವತವಾಗಿ ಉಳಿಯಬಲ್ಲುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?