AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೂವರೆ ಲಕ್ಷ ರೂನಲ್ಲಿ ಸ್ವಲ್ಪವೂ ಉಳಿಸಲು ಆಗಲ್ವ? ಮೂರು ಜನರ ಕುಟುಂಬಕ್ಕೆ ಎಲ್ಲಿ ಸಾಲುತ್ತೆ ಈ ಸಂಬಳ? ಸೋಷಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆ

Investor Saurav Dutta X post: ಮೂರು ಜನರ ಕುಟುಂಬಕ್ಕೆ ವರ್ಷಕ್ಕೆ 25 ಲಕ್ಷ ರೂ ಆದಾಯ ಸಾಕಾಗುವುದಿಲ್ಲ. ಹೂಡಿಕೆ ಮಾಡಲು ಹಣ ಉಳಿಸಲು ಆಗುವುದಿಲ್ಲ ಎಂದು ಹಣಕಾಸು ಸಲಹೆಗಾರರೊಬ್ಬರು ಎಕ್ಸ್​ನಲ್ಲಿ ಪೋಸ್ಟ್ ಹಾಕಿದ್ದಾರೆ. ಮನೆ ಬಾಡಿಗೆ, ಇಎಂಐ, ಒಟಿಟಿ, ಆಸ್ಪತ್ರೆ, ಎಮರ್ಜೆನ್ಸಿ, ಹೋಟೆಲ್ ಊಟ ಇತ್ಯಾದಿಗಳಿಗೆ ಎಲ್ಲವೂ ಖರ್ಚಾಗಿ ಹೋಗುತ್ತೆ ಎನ್ನುವುದು ಸೌರವ್ ದತ್ತ ವಾದ. ಅವರ ಈ ಪೋಸ್ಟ್​ಗೆ ನಾನಾ ಪ್ರತಿಕ್ರಿಯೆಗಳು ಬಂದಿದ್ದು, ಹೆಚ್ಚಿನವರು ಟ್ರೋಲ್ ಮಾಡಿದ್ದಾರೆ.

ಒಂದೂವರೆ ಲಕ್ಷ ರೂನಲ್ಲಿ ಸ್ವಲ್ಪವೂ ಉಳಿಸಲು ಆಗಲ್ವ? ಮೂರು ಜನರ ಕುಟುಂಬಕ್ಕೆ ಎಲ್ಲಿ ಸಾಲುತ್ತೆ ಈ ಸಂಬಳ? ಸೋಷಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆ
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 13, 2024 | 7:09 PM

Share

ಬೆಂಗಳೂರಿನಂಥ ನಗರದಲ್ಲಿ ಬದುಕಬೇಕಾದರೆ ಎಷ್ಟು ಆದಾಯ ಬರಬೇಕು? ಅವರವರ ಆದ್ಯತೆ, ಅಭಿರುಚಿ, ಜೀವನಶೈಲಿಗೆ ಅನುಗುಣವಾಗಿ ಖರ್ಚುವೆಚ್ಚಗಳು ಇರುತ್ತವೆ. ಒಂದು ಸಾಮಾನ್ಯ ಕುಟುಂಬದ ನಿರ್ವಹಣೆಗೆ ವರ್ಷಕ್ಕೆ 25 ಲಕ್ಷ ರೂ ಸಾಕಾಗಲ್ಲ ಎಂದು ಹೂಡಿಕೆದಾರರೊಬ್ಬರು ಎಕ್ಸ್ ಪ್ಲಾಟ್​ಫಾರ್ಮ್​ನಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ. ಇದು ಬಹಳಷ್ಟು ಚರ್ಚೆಗೆ ಕಾರಣವಾಗಿದೆ. ಮೂರು ಜನರ ಕುಟುಂಬಕ್ಕೆ ಅದ್ಯಾವ್ಯಾವ ಖರ್ಚುಗಳು ಬರಬಹುದು, ಅದಕ್ಕೆ ಈ ಹಣ ಯಾತಕ್ಕೆ ಸಾಲುತ್ತೆ, ಹೂಡಿಕೆ ಮಾಡಲು ಇನ್ನೆಲ್ಲಿ ಉಳೀಯುತ್ತೆ ಹಣ ಎಂದು ಸೌರವ್ ದತ್ತ ಎಂಬುವವರು ತಮ್ಮ ಪೋಸ್ಟ್​ನಲ್ಲಿ ಬಿಡಿಬಿಡಿಯಾಗಿ ವಿವರಿಸಿದ್ದಾರೆ.

‘ಒಂದು ಕುಟುಂಬ ನಿರ್ವಹಿಸಲು ವರ್ಷಕ್ಕೆ 25 ಲಕ್ಷ ರೂ ಸಂಬಳ ಬಹಳ ಕಡಿಮೆ ಆಯಿತು. 25 ಲಕ್ಷ ಎಂದರೆ ತಿಂಗಳಿಗೆ ಕೈಗೆ ಸಿಗುವುದು ಒಂದೂವರೆ ಲಕ್ಷ ರೂ. ಮೂರು ಜನರ ಕುಟುಂಬಕ್ಕೆ ಮನೆ ಬಾಡಿಗೆ, ಇಎಂಐ ಹಾಗೂ ಇತರ ಅಗತ್ಯ ಖರ್ಚುಗಳಿಗೆ 1 ಲಕ್ಷ ರೂ ಆಗುತ್ತದೆ. ಹೊರಗೆ ತಿನ್ನಲು, ಒಟಿಟಿ ಸಬ್​ಸ್ಕ್ರಿಪ್ಷನ್, ಪ್ರವಾಸಗಳಿಗೆ 25,000 ರೂ ಆಗುತ್ತದೆ. ವೈದ್ಯಕೀಯ ಹಾಗೂ ಇತರ ತುರ್ತು ವೆಚ್ಚಗಳಿಗೆ 25,000 ರೂ ಆಗುತ್ತದೆ. ಹೂಡಿಕೆ ಮಾಡಲು ಏನೂ ಉಳಿಯುವುದಿಲ್ಲ,’ ಎಂದು ಸೌರವ್ ದತ್ತ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಹುಟ್ಟಿಸಿದವರ ಅಹಂ..! ಪೇಟಿಎಂ, ಬೈಜುಸ್ ವೈಫಲ್ಯಕ್ಕೆ ಕಾರಣ ಹುಡುಕಿದ ಸಂಜಯ್ ನಾಯರ್

ಸೌರವ್ ದತ್ತ ಅವರ ಈ ಪೋಸ್ಟ್​ಗೆ ಬಹಳಷ್ಟು ಜನರು ರಿಯಾಕ್ಟ್ ಮಾಡಿದ್ದು, ಹೆಚ್ಚಿನವರು ಟೀಕಾ ಪ್ರಹಾರವನ್ನೇ ನಡೆಸಿ ಟ್ರೋಲ್ ಮಾಡಿದ್ದಾರೆ. ಸುಮ್ಮನೆ ಪ್ರಚಾರಕ್ಕೆ ಈ ಪೋಸ್ಟ್ ಹಾಕಿದ್ದೀರಿ ಎಂದು ಹಲವು ಟೀಕಿಸಿದ್ದಾರೆ. ವೆಚ್ಚದ ಮೇಲೆ ಹಿಡಿತ ಸಾಧಿಸುವುದು ಬಹಳ ಮುಖ್ಯ ಎಂದು ಸೌರವ್ ದತ್ತ ತಮ್ಮ ಪ್ರತಿಕ್ರಿಯೆಯೊಂದರಲ್ಲಿ ಸಲಹೆ ನೀಡಿದ್ದಾರೆ.

ಕೂತು ತಿನ್ನೋರಿಗೆ ಕುಡಿಕೆ ಹೊನ್ನೂ ಸಾಲದು…

ಈ ಮೇಲಿನದು ಗಾದೆ ಮಾತು. ಅಪ್ಪಟ ಹಣಕಾಸು ಸಲಹೆ ಅದು. ಲಕ್ಷ್ಮೀ ಒಲಿಯಬೇಕೆಂದರೆ ದುಡಿಯುತ್ತಿರಬೇಕು, ಆದಾಯ ಹರಿದುಬರುತ್ತಿರಬೇಕು. ಸಂಪಾದನೆ ಎಷ್ಟು ಮುಖ್ಯವೋ ಆ ಸಂಪಾದನೆಯಲ್ಲಿ ಎಷ್ಟು ಹಣ ಉಳಿಸುತ್ತೇವೆ ಎಂಬುದು ಅಷ್ಟೇ ಮುಖ್ಯ. ಅಂತೆಯೇ, ಪ್ರತಿಯೊಂದು ಉಳಿತಾಯ ಹಣವೂ ಗಳಿಕೆಗೆ ಸಮ ಎನ್ನುವುದು.

ಇದನ್ನೂ ಓದಿ: ನಿಮ್ಮ 10 ಲಕ್ಷ ರೂ ಸಂಬಳಕ್ಕೆ ಪೂರ್ಣ ಟ್ಯಾಕ್ಸ್ ಉಳಿಸುವುದು ಹೇಗೆ? ಇಲ್ಲಿದೆ ಐಡಿಯಾ

ಆದಾಯ ಮತ್ತು ಉಳಿತಾಯದಷ್ಟೇ ಮುಖ್ಯವಾದ ಮೂರನೇ ಸಂಗತಿ ಎಂದರೆ ಅದು ಹೂಡಿಕೆ. ಹಣದುಬ್ಬರ ಹೆಚ್ಚಿರುವ ಈ ದಿನಗಳಲ್ಲಿ ವರ್ಷಕ್ಕೆ ಶೇ. 7ಕ್ಕಿಂತಲೂ ಹೆಚ್ಚು ದರದಲ್ಲಿ ಹಣ ಬೆಳೆಸಬಲ್ಲಂತಹ ಸಾಧನಗಳಲ್ಲಿ ಹೂಡಿಕೆ ಆಗಬೇಕು.

ಒಟ್ಟಾರೆ, ಆದಾಯ ಹೆಚ್ಚಾಗಬೇಕು, ಉಳಿತಾಯ ಹೆಚ್ಚಾಗಬೇಕು, ಹೂಡಿಕೆ ಹೆಚ್ಚಾಗಬೇಕು. ಈ ತ್ರಿ ಸೂತ್ರಗಳನ್ನು ಪಾಲಿಸಿದರೆ ಹಣಕಾಸು ಪರಿಸ್ಥಿತಿ ಉತ್ತಮವಾಗಿರುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್