AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR: ಈವರೆಗೂ ಐಟಿ ರಿಟರ್ನ್ ಸಲ್ಲಿಸಿದವರ ಸಂಖ್ಯೆ 5.83 ಕೋಟಿ; ಡೆಡ್​ಲೈನ್​ಗೆ ಇನ್ನೊಂದೇ ದಿನ ಬಾಕಿ

Income Tax Return: ಜುಲೈ 30, ಮಧ್ಯಾಹ್ನ 1 ಗಂಟೆಯವರೆಗೂ 5.83 ಕೋಟಿ ಐನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಾಗಿವೆ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ. ಜುಲೈ 31ಕ್ಕೆ ಐಟಿಆರ್ ಸಲ್ಲಿಸಲು ಕೊನೆಯ ದಿನವಾಗಿದೆ.

ITR: ಈವರೆಗೂ ಐಟಿ ರಿಟರ್ನ್ ಸಲ್ಲಿಸಿದವರ ಸಂಖ್ಯೆ 5.83 ಕೋಟಿ; ಡೆಡ್​ಲೈನ್​ಗೆ ಇನ್ನೊಂದೇ ದಿನ ಬಾಕಿ
ಆದಾಯ ತೆರಿಗೆ ಇಲಾಖೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 30, 2023 | 7:03 PM

Share

ನವದೆಹಲಿ, ಜುಲೈ 30: ಹಿಂದಿನ ಹಣಕಾಸು ವರ್ಷವಾದ 2022-23ರ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ (ITR Filing) ಜುಲೈ 31 ಕೊನೆಯ ದಿನವಾಗಿದೆ. ಇನ್ನೊಂದು ಬಾಕಿ ಇರುವಂತೆ ಒಟ್ಟು 5.83 ಕೋಟಿ ಐಟಿಆರ್​ಗಳು ಸಲ್ಲಿಕೆಯಾಗಿರುವ ಮಾಹಿತಿ ತಿಳಿದುಬಂದಿದೆ. ಐಟಿ ಇಲಾಖೆ ಈ ಸಂಬಂಧ ಇಂದು (ಜುಲೈ 30) ಟ್ವೀಟ್ ಮಾಡಿ ಮಾಹಿತಿ ತಿಳಿಸಿದೆ. ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿರುವ ಲೈವ್ ಮಾಹಿತಿ ಪ್ರಕಾರ ಈವರೆಗೂ 5.73 ಕೋಟಿ ಮಂದಿ ಐಟಿಆರ್ ಸಲ್ಲಿಸಿರುವುದು ತಿಳಿದುಬಂದಿದೆ.

‘ಇವತ್ತು (ಜುಲೈ 30) ಮಧ್ಯಾಹ್ನ 1 ಗಂಟೆಯವರೆಗೂ 5.83 ಕೋಟಿ ಐಟಿಆರ್​ಗಳು ಫೈಲ್ ಆಗಿವೆ. ಕಳೆದ ವರ್ಷ ಜುಲೈ 31ರವರೆಗೂ ಸಲ್ಲಿಕೆಯಾಗಿದ್ದ ಐಟಿಆರ್​ಗಳ ಪ್ರಮಾಣಕ್ಕಿಂತ ಇದು ಹೆಚ್ಚು’ ಎಂದು ಐಟಿ ಇಲಾಖೆ ತನ್ನ ಟ್ವೀಟ್​ನಲ್ಲಿ ತಿಳಿಸಿದೆ.

ಟ್ಯಾಕ್ಸ್ ರಿಟರ್ನ್ ಫೈಲಿಂಗ್ ಬಗ್ಗೆ ಅಂಕಿ ಅಂಶ ಬಹಿರಂಗಪಡಿಸಿದ ಐಟಿ ಇಲಾಖೆ, ನಿನ್ನೆ (ಜುಲೈ 29) 1.78 ಕೋಟಿ ಮಂದಿ ಇ-ಫೈಲಿಂಗ್ ಪೋರ್ಟಲ್​ಗೆ ಲಾಗಿನ್ ಆಗಿರುವುದನ್ನು ಬಹಿರಂಗಪಡಿಸಿದೆ. ಹಾಗೆಯೇ, ಇಂದು ಮಧ್ಯಾಹ್ನ 1 ಗಂಟೆಯವರೆಗೆ 46 ಲಕ್ಷ ಮಂದಿಯಿಂದ ಲಾಗಿನ್ ಆಗಿದೆ ಎಂದೂ ಅದು ಹೇಳಿದೆ.

ಇದನ್ನೂ ಓದಿ: ITR: ಹೊಸ ಪೋರ್ಟಲ್​ನಲ್ಲಿ ಐಟಿ ರಿಟರ್ನ್ ಫೈಲ್ ಮಾಡುವುದು ಬಹಳ ಸುಲಭ; ಯಾರೂ ಬೇಕಾದರೂ ಐಟಿಆರ್ ಸಲ್ಲಿಕೆ ಮಾಡುವಷ್ಟು ಸರಳ ಕ್ರಮಗಳು

‘ಇಂದು ಮಧ್ಯಾಹ್ನ 1 ಗಂಟೆವರೆಗೆ 10.39 ಲಕ್ಷ ಐಟಿಆರ್​ಗಳು ಸಲ್ಲಿಕೆಯಾಗಿವೆ. ಕಳೆದ 1 ಗಂಟೆಯಲ್ಲಿ 3.04 ಲಕ್ಷ ಐಟಿಆರ್​ಗಳು ಫೈಲಿಂಗ್ ಆಗಿವೆ’ ಎಂದು ಐಟಿ ಇಲಾಖೆ ಮಧ್ಯಾಹ್ನ 2 ಗಂಟೆಯ ಟ್ವೀಟ್​ನಲ್ಲಿ ತಿಳಿಸಿದೆ.

ಇನ್ನು ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿರುವ ಮಾಹಿತಿ ಪ್ರಕಾರ, ಇದೂವರೆಗೂ ನೊಂದಾಯಿಸಿಕೊಂಡಿರುವ ವೈಯಕ್ತಿಕ ತೆರಿಗೆಪಾವತಿದಾರರ ಸಂಖ್ಯೆ 11.51 ಕೋಟಿ ಎನ್ನಲಾಗಿದೆ. ಸಲ್ಲಿಕೆಯಾಗಿರುವ 5.73 ಕೋಟಿ ಐಟಿಆರ್​ಗಳ ಪೈಕಿ ಸುಮಾರು 5 ಕೋಟಿಯಷ್ಟು ಐಟಿಆರ್​ಗಳು ವೆರಿಫೈ ಆಗಿವೆ. ಇದರಲ್ಲಿ 3.18 ಕೋಟಿ ಐಟಿಆರ್​ಗಳನ್ನು ಪ್ರೋಸಸ್ ಮಾಡಲಾಗಿದೆ.

ಸಂಬಳದಾರರು ಹಾಗೂ ಅಕೌಂಟ್ ಆಡಿಟಿಂಗ್ ಅಗತ್ಯ ಇಲ್ಲದವರು ಐಟಿಆರ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಇನ್ಕಮ್ ಟ್ಯಾಕ್ಸ್ ಪಾವತಿಸುವ ಬಹುತೇಕ ಮಂದಿಗೆ ಇದೇ ಡೆಡ್​ಲೈನ್ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್