AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR: ಈವರೆಗೂ ಐಟಿ ರಿಟರ್ನ್ ಸಲ್ಲಿಸಿದವರ ಸಂಖ್ಯೆ 5.83 ಕೋಟಿ; ಡೆಡ್​ಲೈನ್​ಗೆ ಇನ್ನೊಂದೇ ದಿನ ಬಾಕಿ

Income Tax Return: ಜುಲೈ 30, ಮಧ್ಯಾಹ್ನ 1 ಗಂಟೆಯವರೆಗೂ 5.83 ಕೋಟಿ ಐನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಾಗಿವೆ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ. ಜುಲೈ 31ಕ್ಕೆ ಐಟಿಆರ್ ಸಲ್ಲಿಸಲು ಕೊನೆಯ ದಿನವಾಗಿದೆ.

ITR: ಈವರೆಗೂ ಐಟಿ ರಿಟರ್ನ್ ಸಲ್ಲಿಸಿದವರ ಸಂಖ್ಯೆ 5.83 ಕೋಟಿ; ಡೆಡ್​ಲೈನ್​ಗೆ ಇನ್ನೊಂದೇ ದಿನ ಬಾಕಿ
ಆದಾಯ ತೆರಿಗೆ ಇಲಾಖೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 30, 2023 | 7:03 PM

Share

ನವದೆಹಲಿ, ಜುಲೈ 30: ಹಿಂದಿನ ಹಣಕಾಸು ವರ್ಷವಾದ 2022-23ರ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ (ITR Filing) ಜುಲೈ 31 ಕೊನೆಯ ದಿನವಾಗಿದೆ. ಇನ್ನೊಂದು ಬಾಕಿ ಇರುವಂತೆ ಒಟ್ಟು 5.83 ಕೋಟಿ ಐಟಿಆರ್​ಗಳು ಸಲ್ಲಿಕೆಯಾಗಿರುವ ಮಾಹಿತಿ ತಿಳಿದುಬಂದಿದೆ. ಐಟಿ ಇಲಾಖೆ ಈ ಸಂಬಂಧ ಇಂದು (ಜುಲೈ 30) ಟ್ವೀಟ್ ಮಾಡಿ ಮಾಹಿತಿ ತಿಳಿಸಿದೆ. ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿರುವ ಲೈವ್ ಮಾಹಿತಿ ಪ್ರಕಾರ ಈವರೆಗೂ 5.73 ಕೋಟಿ ಮಂದಿ ಐಟಿಆರ್ ಸಲ್ಲಿಸಿರುವುದು ತಿಳಿದುಬಂದಿದೆ.

‘ಇವತ್ತು (ಜುಲೈ 30) ಮಧ್ಯಾಹ್ನ 1 ಗಂಟೆಯವರೆಗೂ 5.83 ಕೋಟಿ ಐಟಿಆರ್​ಗಳು ಫೈಲ್ ಆಗಿವೆ. ಕಳೆದ ವರ್ಷ ಜುಲೈ 31ರವರೆಗೂ ಸಲ್ಲಿಕೆಯಾಗಿದ್ದ ಐಟಿಆರ್​ಗಳ ಪ್ರಮಾಣಕ್ಕಿಂತ ಇದು ಹೆಚ್ಚು’ ಎಂದು ಐಟಿ ಇಲಾಖೆ ತನ್ನ ಟ್ವೀಟ್​ನಲ್ಲಿ ತಿಳಿಸಿದೆ.

ಟ್ಯಾಕ್ಸ್ ರಿಟರ್ನ್ ಫೈಲಿಂಗ್ ಬಗ್ಗೆ ಅಂಕಿ ಅಂಶ ಬಹಿರಂಗಪಡಿಸಿದ ಐಟಿ ಇಲಾಖೆ, ನಿನ್ನೆ (ಜುಲೈ 29) 1.78 ಕೋಟಿ ಮಂದಿ ಇ-ಫೈಲಿಂಗ್ ಪೋರ್ಟಲ್​ಗೆ ಲಾಗಿನ್ ಆಗಿರುವುದನ್ನು ಬಹಿರಂಗಪಡಿಸಿದೆ. ಹಾಗೆಯೇ, ಇಂದು ಮಧ್ಯಾಹ್ನ 1 ಗಂಟೆಯವರೆಗೆ 46 ಲಕ್ಷ ಮಂದಿಯಿಂದ ಲಾಗಿನ್ ಆಗಿದೆ ಎಂದೂ ಅದು ಹೇಳಿದೆ.

ಇದನ್ನೂ ಓದಿ: ITR: ಹೊಸ ಪೋರ್ಟಲ್​ನಲ್ಲಿ ಐಟಿ ರಿಟರ್ನ್ ಫೈಲ್ ಮಾಡುವುದು ಬಹಳ ಸುಲಭ; ಯಾರೂ ಬೇಕಾದರೂ ಐಟಿಆರ್ ಸಲ್ಲಿಕೆ ಮಾಡುವಷ್ಟು ಸರಳ ಕ್ರಮಗಳು

‘ಇಂದು ಮಧ್ಯಾಹ್ನ 1 ಗಂಟೆವರೆಗೆ 10.39 ಲಕ್ಷ ಐಟಿಆರ್​ಗಳು ಸಲ್ಲಿಕೆಯಾಗಿವೆ. ಕಳೆದ 1 ಗಂಟೆಯಲ್ಲಿ 3.04 ಲಕ್ಷ ಐಟಿಆರ್​ಗಳು ಫೈಲಿಂಗ್ ಆಗಿವೆ’ ಎಂದು ಐಟಿ ಇಲಾಖೆ ಮಧ್ಯಾಹ್ನ 2 ಗಂಟೆಯ ಟ್ವೀಟ್​ನಲ್ಲಿ ತಿಳಿಸಿದೆ.

ಇನ್ನು ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿರುವ ಮಾಹಿತಿ ಪ್ರಕಾರ, ಇದೂವರೆಗೂ ನೊಂದಾಯಿಸಿಕೊಂಡಿರುವ ವೈಯಕ್ತಿಕ ತೆರಿಗೆಪಾವತಿದಾರರ ಸಂಖ್ಯೆ 11.51 ಕೋಟಿ ಎನ್ನಲಾಗಿದೆ. ಸಲ್ಲಿಕೆಯಾಗಿರುವ 5.73 ಕೋಟಿ ಐಟಿಆರ್​ಗಳ ಪೈಕಿ ಸುಮಾರು 5 ಕೋಟಿಯಷ್ಟು ಐಟಿಆರ್​ಗಳು ವೆರಿಫೈ ಆಗಿವೆ. ಇದರಲ್ಲಿ 3.18 ಕೋಟಿ ಐಟಿಆರ್​ಗಳನ್ನು ಪ್ರೋಸಸ್ ಮಾಡಲಾಗಿದೆ.

ಸಂಬಳದಾರರು ಹಾಗೂ ಅಕೌಂಟ್ ಆಡಿಟಿಂಗ್ ಅಗತ್ಯ ಇಲ್ಲದವರು ಐಟಿಆರ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಇನ್ಕಮ್ ಟ್ಯಾಕ್ಸ್ ಪಾವತಿಸುವ ಬಹುತೇಕ ಮಂದಿಗೆ ಇದೇ ಡೆಡ್​ಲೈನ್ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’