AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR: ಈವರೆಗೂ ಐಟಿ ರಿಟರ್ನ್ ಸಲ್ಲಿಸಿದವರ ಸಂಖ್ಯೆ 5.83 ಕೋಟಿ; ಡೆಡ್​ಲೈನ್​ಗೆ ಇನ್ನೊಂದೇ ದಿನ ಬಾಕಿ

Income Tax Return: ಜುಲೈ 30, ಮಧ್ಯಾಹ್ನ 1 ಗಂಟೆಯವರೆಗೂ 5.83 ಕೋಟಿ ಐನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಾಗಿವೆ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ. ಜುಲೈ 31ಕ್ಕೆ ಐಟಿಆರ್ ಸಲ್ಲಿಸಲು ಕೊನೆಯ ದಿನವಾಗಿದೆ.

ITR: ಈವರೆಗೂ ಐಟಿ ರಿಟರ್ನ್ ಸಲ್ಲಿಸಿದವರ ಸಂಖ್ಯೆ 5.83 ಕೋಟಿ; ಡೆಡ್​ಲೈನ್​ಗೆ ಇನ್ನೊಂದೇ ದಿನ ಬಾಕಿ
ಆದಾಯ ತೆರಿಗೆ ಇಲಾಖೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 30, 2023 | 7:03 PM

Share

ನವದೆಹಲಿ, ಜುಲೈ 30: ಹಿಂದಿನ ಹಣಕಾಸು ವರ್ಷವಾದ 2022-23ರ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ (ITR Filing) ಜುಲೈ 31 ಕೊನೆಯ ದಿನವಾಗಿದೆ. ಇನ್ನೊಂದು ಬಾಕಿ ಇರುವಂತೆ ಒಟ್ಟು 5.83 ಕೋಟಿ ಐಟಿಆರ್​ಗಳು ಸಲ್ಲಿಕೆಯಾಗಿರುವ ಮಾಹಿತಿ ತಿಳಿದುಬಂದಿದೆ. ಐಟಿ ಇಲಾಖೆ ಈ ಸಂಬಂಧ ಇಂದು (ಜುಲೈ 30) ಟ್ವೀಟ್ ಮಾಡಿ ಮಾಹಿತಿ ತಿಳಿಸಿದೆ. ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿರುವ ಲೈವ್ ಮಾಹಿತಿ ಪ್ರಕಾರ ಈವರೆಗೂ 5.73 ಕೋಟಿ ಮಂದಿ ಐಟಿಆರ್ ಸಲ್ಲಿಸಿರುವುದು ತಿಳಿದುಬಂದಿದೆ.

‘ಇವತ್ತು (ಜುಲೈ 30) ಮಧ್ಯಾಹ್ನ 1 ಗಂಟೆಯವರೆಗೂ 5.83 ಕೋಟಿ ಐಟಿಆರ್​ಗಳು ಫೈಲ್ ಆಗಿವೆ. ಕಳೆದ ವರ್ಷ ಜುಲೈ 31ರವರೆಗೂ ಸಲ್ಲಿಕೆಯಾಗಿದ್ದ ಐಟಿಆರ್​ಗಳ ಪ್ರಮಾಣಕ್ಕಿಂತ ಇದು ಹೆಚ್ಚು’ ಎಂದು ಐಟಿ ಇಲಾಖೆ ತನ್ನ ಟ್ವೀಟ್​ನಲ್ಲಿ ತಿಳಿಸಿದೆ.

ಟ್ಯಾಕ್ಸ್ ರಿಟರ್ನ್ ಫೈಲಿಂಗ್ ಬಗ್ಗೆ ಅಂಕಿ ಅಂಶ ಬಹಿರಂಗಪಡಿಸಿದ ಐಟಿ ಇಲಾಖೆ, ನಿನ್ನೆ (ಜುಲೈ 29) 1.78 ಕೋಟಿ ಮಂದಿ ಇ-ಫೈಲಿಂಗ್ ಪೋರ್ಟಲ್​ಗೆ ಲಾಗಿನ್ ಆಗಿರುವುದನ್ನು ಬಹಿರಂಗಪಡಿಸಿದೆ. ಹಾಗೆಯೇ, ಇಂದು ಮಧ್ಯಾಹ್ನ 1 ಗಂಟೆಯವರೆಗೆ 46 ಲಕ್ಷ ಮಂದಿಯಿಂದ ಲಾಗಿನ್ ಆಗಿದೆ ಎಂದೂ ಅದು ಹೇಳಿದೆ.

ಇದನ್ನೂ ಓದಿ: ITR: ಹೊಸ ಪೋರ್ಟಲ್​ನಲ್ಲಿ ಐಟಿ ರಿಟರ್ನ್ ಫೈಲ್ ಮಾಡುವುದು ಬಹಳ ಸುಲಭ; ಯಾರೂ ಬೇಕಾದರೂ ಐಟಿಆರ್ ಸಲ್ಲಿಕೆ ಮಾಡುವಷ್ಟು ಸರಳ ಕ್ರಮಗಳು

‘ಇಂದು ಮಧ್ಯಾಹ್ನ 1 ಗಂಟೆವರೆಗೆ 10.39 ಲಕ್ಷ ಐಟಿಆರ್​ಗಳು ಸಲ್ಲಿಕೆಯಾಗಿವೆ. ಕಳೆದ 1 ಗಂಟೆಯಲ್ಲಿ 3.04 ಲಕ್ಷ ಐಟಿಆರ್​ಗಳು ಫೈಲಿಂಗ್ ಆಗಿವೆ’ ಎಂದು ಐಟಿ ಇಲಾಖೆ ಮಧ್ಯಾಹ್ನ 2 ಗಂಟೆಯ ಟ್ವೀಟ್​ನಲ್ಲಿ ತಿಳಿಸಿದೆ.

ಇನ್ನು ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿರುವ ಮಾಹಿತಿ ಪ್ರಕಾರ, ಇದೂವರೆಗೂ ನೊಂದಾಯಿಸಿಕೊಂಡಿರುವ ವೈಯಕ್ತಿಕ ತೆರಿಗೆಪಾವತಿದಾರರ ಸಂಖ್ಯೆ 11.51 ಕೋಟಿ ಎನ್ನಲಾಗಿದೆ. ಸಲ್ಲಿಕೆಯಾಗಿರುವ 5.73 ಕೋಟಿ ಐಟಿಆರ್​ಗಳ ಪೈಕಿ ಸುಮಾರು 5 ಕೋಟಿಯಷ್ಟು ಐಟಿಆರ್​ಗಳು ವೆರಿಫೈ ಆಗಿವೆ. ಇದರಲ್ಲಿ 3.18 ಕೋಟಿ ಐಟಿಆರ್​ಗಳನ್ನು ಪ್ರೋಸಸ್ ಮಾಡಲಾಗಿದೆ.

ಸಂಬಳದಾರರು ಹಾಗೂ ಅಕೌಂಟ್ ಆಡಿಟಿಂಗ್ ಅಗತ್ಯ ಇಲ್ಲದವರು ಐಟಿಆರ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಇನ್ಕಮ್ ಟ್ಯಾಕ್ಸ್ ಪಾವತಿಸುವ ಬಹುತೇಕ ಮಂದಿಗೆ ಇದೇ ಡೆಡ್​ಲೈನ್ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ