AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ITR: ಈವರೆಗೂ ಐಟಿ ರಿಟರ್ನ್ ಸಲ್ಲಿಸಿದವರ ಸಂಖ್ಯೆ 5.83 ಕೋಟಿ; ಡೆಡ್​ಲೈನ್​ಗೆ ಇನ್ನೊಂದೇ ದಿನ ಬಾಕಿ

Income Tax Return: ಜುಲೈ 30, ಮಧ್ಯಾಹ್ನ 1 ಗಂಟೆಯವರೆಗೂ 5.83 ಕೋಟಿ ಐನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಾಗಿವೆ ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ. ಜುಲೈ 31ಕ್ಕೆ ಐಟಿಆರ್ ಸಲ್ಲಿಸಲು ಕೊನೆಯ ದಿನವಾಗಿದೆ.

ITR: ಈವರೆಗೂ ಐಟಿ ರಿಟರ್ನ್ ಸಲ್ಲಿಸಿದವರ ಸಂಖ್ಯೆ 5.83 ಕೋಟಿ; ಡೆಡ್​ಲೈನ್​ಗೆ ಇನ್ನೊಂದೇ ದಿನ ಬಾಕಿ
ಆದಾಯ ತೆರಿಗೆ ಇಲಾಖೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 30, 2023 | 7:03 PM

Share

ನವದೆಹಲಿ, ಜುಲೈ 30: ಹಿಂದಿನ ಹಣಕಾಸು ವರ್ಷವಾದ 2022-23ರ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ (ITR Filing) ಜುಲೈ 31 ಕೊನೆಯ ದಿನವಾಗಿದೆ. ಇನ್ನೊಂದು ಬಾಕಿ ಇರುವಂತೆ ಒಟ್ಟು 5.83 ಕೋಟಿ ಐಟಿಆರ್​ಗಳು ಸಲ್ಲಿಕೆಯಾಗಿರುವ ಮಾಹಿತಿ ತಿಳಿದುಬಂದಿದೆ. ಐಟಿ ಇಲಾಖೆ ಈ ಸಂಬಂಧ ಇಂದು (ಜುಲೈ 30) ಟ್ವೀಟ್ ಮಾಡಿ ಮಾಹಿತಿ ತಿಳಿಸಿದೆ. ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿರುವ ಲೈವ್ ಮಾಹಿತಿ ಪ್ರಕಾರ ಈವರೆಗೂ 5.73 ಕೋಟಿ ಮಂದಿ ಐಟಿಆರ್ ಸಲ್ಲಿಸಿರುವುದು ತಿಳಿದುಬಂದಿದೆ.

‘ಇವತ್ತು (ಜುಲೈ 30) ಮಧ್ಯಾಹ್ನ 1 ಗಂಟೆಯವರೆಗೂ 5.83 ಕೋಟಿ ಐಟಿಆರ್​ಗಳು ಫೈಲ್ ಆಗಿವೆ. ಕಳೆದ ವರ್ಷ ಜುಲೈ 31ರವರೆಗೂ ಸಲ್ಲಿಕೆಯಾಗಿದ್ದ ಐಟಿಆರ್​ಗಳ ಪ್ರಮಾಣಕ್ಕಿಂತ ಇದು ಹೆಚ್ಚು’ ಎಂದು ಐಟಿ ಇಲಾಖೆ ತನ್ನ ಟ್ವೀಟ್​ನಲ್ಲಿ ತಿಳಿಸಿದೆ.

ಟ್ಯಾಕ್ಸ್ ರಿಟರ್ನ್ ಫೈಲಿಂಗ್ ಬಗ್ಗೆ ಅಂಕಿ ಅಂಶ ಬಹಿರಂಗಪಡಿಸಿದ ಐಟಿ ಇಲಾಖೆ, ನಿನ್ನೆ (ಜುಲೈ 29) 1.78 ಕೋಟಿ ಮಂದಿ ಇ-ಫೈಲಿಂಗ್ ಪೋರ್ಟಲ್​ಗೆ ಲಾಗಿನ್ ಆಗಿರುವುದನ್ನು ಬಹಿರಂಗಪಡಿಸಿದೆ. ಹಾಗೆಯೇ, ಇಂದು ಮಧ್ಯಾಹ್ನ 1 ಗಂಟೆಯವರೆಗೆ 46 ಲಕ್ಷ ಮಂದಿಯಿಂದ ಲಾಗಿನ್ ಆಗಿದೆ ಎಂದೂ ಅದು ಹೇಳಿದೆ.

ಇದನ್ನೂ ಓದಿ: ITR: ಹೊಸ ಪೋರ್ಟಲ್​ನಲ್ಲಿ ಐಟಿ ರಿಟರ್ನ್ ಫೈಲ್ ಮಾಡುವುದು ಬಹಳ ಸುಲಭ; ಯಾರೂ ಬೇಕಾದರೂ ಐಟಿಆರ್ ಸಲ್ಲಿಕೆ ಮಾಡುವಷ್ಟು ಸರಳ ಕ್ರಮಗಳು

‘ಇಂದು ಮಧ್ಯಾಹ್ನ 1 ಗಂಟೆವರೆಗೆ 10.39 ಲಕ್ಷ ಐಟಿಆರ್​ಗಳು ಸಲ್ಲಿಕೆಯಾಗಿವೆ. ಕಳೆದ 1 ಗಂಟೆಯಲ್ಲಿ 3.04 ಲಕ್ಷ ಐಟಿಆರ್​ಗಳು ಫೈಲಿಂಗ್ ಆಗಿವೆ’ ಎಂದು ಐಟಿ ಇಲಾಖೆ ಮಧ್ಯಾಹ್ನ 2 ಗಂಟೆಯ ಟ್ವೀಟ್​ನಲ್ಲಿ ತಿಳಿಸಿದೆ.

ಇನ್ನು ಇನ್ಕಮ್ ಟ್ಯಾಕ್ಸ್ ಪೋರ್ಟಲ್​ನಲ್ಲಿರುವ ಮಾಹಿತಿ ಪ್ರಕಾರ, ಇದೂವರೆಗೂ ನೊಂದಾಯಿಸಿಕೊಂಡಿರುವ ವೈಯಕ್ತಿಕ ತೆರಿಗೆಪಾವತಿದಾರರ ಸಂಖ್ಯೆ 11.51 ಕೋಟಿ ಎನ್ನಲಾಗಿದೆ. ಸಲ್ಲಿಕೆಯಾಗಿರುವ 5.73 ಕೋಟಿ ಐಟಿಆರ್​ಗಳ ಪೈಕಿ ಸುಮಾರು 5 ಕೋಟಿಯಷ್ಟು ಐಟಿಆರ್​ಗಳು ವೆರಿಫೈ ಆಗಿವೆ. ಇದರಲ್ಲಿ 3.18 ಕೋಟಿ ಐಟಿಆರ್​ಗಳನ್ನು ಪ್ರೋಸಸ್ ಮಾಡಲಾಗಿದೆ.

ಸಂಬಳದಾರರು ಹಾಗೂ ಅಕೌಂಟ್ ಆಡಿಟಿಂಗ್ ಅಗತ್ಯ ಇಲ್ಲದವರು ಐಟಿಆರ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಇನ್ಕಮ್ ಟ್ಯಾಕ್ಸ್ ಪಾವತಿಸುವ ಬಹುತೇಕ ಮಂದಿಗೆ ಇದೇ ಡೆಡ್​ಲೈನ್ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್