AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಟಿಆರ್ ಸಲ್ಲಿಸಲು ಇಂದೇ ಕೊನೆಯ ದಿನ; ತಪ್ಪಿಸಿದರೆ ಏನು ಕ್ರಮ?

Income Tax Return: ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಲು ಇಂದು ಜುಲೈ 31ಕ್ಕೆ ಕೊನೆಯ ದಿನವಾಗಿದೆ. ಇಂದು ನೀವು ರಿಟರ್ನ್ ಸಲ್ಲಿಸದಿದ್ದರೆ ಇಲಾಖೆಯಿಂದ ನೋಟೀಸ್ ಬರುತ್ತದೆ. ಇದರ ಜೊತೆಗೆ ಇನ್ನೂ ಕೆಲ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಐಟಿಆರ್ ಸಲ್ಲಿಸಲು ಇಂದೇ ಕೊನೆಯ ದಿನ; ತಪ್ಪಿಸಿದರೆ ಏನು ಕ್ರಮ?
ಐಟಿಆರ್
Follow us
ಸುಗ್ಗನಹಳ್ಳಿ ವಿಜಯಸಾರಥಿ
| Updated By: Digi Tech Desk

Updated on:Jul 31, 2023 | 10:44 AM

ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡಲು ಇಂದು (ಜುಲೈ 31) ಕೊನೆಯ ದಿನವಾಗಿದೆ. ಸಂಬಳದಾರರಾಗಿರುವ ಮತ್ತು ಆಡಿಟಿಂಗ್ (Non-auditing case) ನಡೆಸುವ ಅಗತ್ಯ ಇಲ್ಲದಿರುವ ತೆರಿಗೆ ಪಾವತಿದಾರರಿಗೆ ಇವತ್ತು ಡೆಡ್​ಲೈನ್ ಇರುವುದು. ಆದಾಯ ತೆರಿಗೆ ಇಲಾಖೆಯ ಇಫೈಲಿಂಗ್ ಪೋರ್ಟಲ್​ನಲ್ಲಿರುವ ಮಾಹಿತಿ ಪ್ರಕಾರ ಈವರೆಗೆ (ಜುಲೈ 31ರ ಬೆಳಗ್ಗೆ) 6.13 ಕೋಟಿ ಮಂದಿ ಐಟಿಆರ್ ಸಲ್ಲಿಕೆ (ITR Filing) ಮಾಡಿದ್ದಾರೆ. ಇಲಾಖೆ ನಿಮ್ಮ ಮಧ್ಯಾಹ್ನ ನೀಡಿದ ಮಾಹಿತಿ ಪ್ರಕಾರ ಐಟಿಆರ್​ಗಳು ಸಲ್ಲಿಯಾದ ಪ್ರಮಾಣ 5.83 ಕೋಟಿ ಇತ್ತು. ಮಧ್ಯಾಹ್ನ 1 ಗಂಟೆ ಬಳಿಕ 30 ಲಕ್ಷಕ್ಕೂ ಹೆಚ್ಚು ಮಂದಿ ರಿಟರ್ನ್ ಫೈಲ್ ಮಾಡಿದ್ದಾರೆ.

ಗಡುವಿನೊಳಗೆ ಐಟಿ ರಿಟರ್ನ್ ಫೈಲ್ ಮಾಡದಿದ್ದರೆ ಏನಾಗುತ್ತೆ?

ಒಂದು ವೇಳೆ ಇಲಾಖೆ ನಿಗದಿಪಡಿಸಿದ ಗಡುವಿನೊಳಗೆ ನೀವು ಐಟಿ ರಿಟರ್ನ್ ಸಲ್ಲಿಸದಿದ್ದರೆ ಕೆಲ ಪ್ರಮುಖ ನಷ್ಟಗಳು ತಲೆದೋರಬಹುದು. ಉದಾಹರಣೆಗೆ ನೀವು ತಡವಾಗಿ ರಿಟರ್ನ್ ಫೈಲ್ ಮಾಡಿದಾಗ, ತೆರಿಗೆ ಬಾಕಿ ಹಣಕ್ಕೆ ಶೇ. 50ರಿಂದ ಶೇ. 200ರಷ್ಟು ಮೊತ್ತವನ್ನು ಸೇರಿಸಿ ದಂಡವಾಗಿ ಕಟ್ಟಬೇಕಾಗುತ್ತದೆ. ನೀವು 2,000 ರೂ ತೆರಿಗೆ ಬಾಕಿ ಉಳಿಸಿಕೊಂಡಿದ್ದರೆ 1,000 ರೂನಿಂದ 4,000 ರೂವರೆಗೆ ದಂಡ ಸೇರಿಸಿ ಕಟ್ಟಬೇಕು. ಅಂದರೆ 3,000 ರೂನಿಂದ 6,000 ರೂವರೆಗೂ ನೀವು ಕಟ್ಟಬೇಕಾಗಬಹುದು.

ಹಾಗೆಯೇ, ನೀವು ಡೆಡ್​ಲೈನ್ ತಪ್ಪಿಸಿದಾಗ ಕಾನೂನು ಕ್ರಮ ಜರುಗಿಸಲು ನೋಟೀಸ್ ಕೊಡಲಾಗುತ್ತದೆ.

ಇದನ್ನೂ ಓದಿ: IT Notice: ಐಟಿ ನೋಟೀಸ್ ಬಂದಾಗ ಗಾಬರಿಯಾಗದಿರಿ; ಏನು ಮಾಡಬೇಕು, ಮಾಡಬಾರದು, ಇಲ್ಲಿದೆ ವಿವರ

ನೀವು ಐಟಿಆರ್ ಅನ್ನೇ ಸಲ್ಲಿಸದಿದ್ದರೆ ಏನಾಗುತ್ತದೆ?

2022-23 ರ ಹಣಕಾಸು ವರ್ಷದಲ್ಲಿ ನೀವು ಕಟ್ಟಬೇಕಿರುವ ತೆರಿಗೆ ಹಣಕ್ಕೆ ಶೇ. 200ರಷ್ಟು ದಂಡ ವಿಧಿಸಲಾಗುತ್ತದೆ.

ನಿಮಗೆ ಯಾವುದಾದರೂ ವ್ಯವಹಾರದಲ್ಲಿ ನಷ್ಟವಾಗಿದ್ದರೆ ಅದನ್ನು ಬಳಸಿ ತೆರಿಗೆ ರಿಯಾಯಿತಿ ಪಡೆಯಲು ಅವಕಾಶ ಇರುತ್ತದೆ. ಆದರೆ, ನೀವು ಐಟಿ ರಿಟರ್ನ್ ಫೈಲ್ ಮಾಡದೇ ಹೋದಾಗ ಈ ನಷ್ಟವನ್ನು ಮುಂದಕ್ಕೆ ತೆಗೆದುಕೊಂಡು ಹೋಗಲು ಆಗುವುದಿಲ್ಲ.

ಜೊತೆಗೆ, ಐಟಿ ಇಲಾಖೆಯಿಂದ ಕಾನೂನು ಕ್ರಮ ಜಾರಿಗೊಳಿಸಲು ನೋಟೀಸ್ ಸ್ವೀಕರಿಸಬೇಕಾಗುತ್ತದೆ.

ಇದನ್ನೂ ಓದಿ: ITR: ಹೊಸ ಪೋರ್ಟಲ್​ನಲ್ಲಿ ಐಟಿ ರಿಟರ್ನ್ ಫೈಲ್ ಮಾಡುವುದು ಬಹಳ ಸುಲಭ; ಯಾರೂ ಬೇಕಾದರೂ ಐಟಿಆರ್ ಸಲ್ಲಿಕೆ ಮಾಡುವಷ್ಟು ಸರಳ ಕ್ರಮಗಳು

ಐಟಿ ರಿಟರ್ನ್ ಯಾಕೆ ಸಲ್ಲಿಸಬೇಕು?

ಕಳೆದ ಹಣಕಾಸು ವರ್ಷದಂದು (2022-23) ನಿಮ್ಮ ಒಟ್ಟಾರೆ ಎಲ್ಲಾ ಆದಾಯಗಳು, ಹೂಡಿಕೆಗಳು, ಸಾಲಗಳು ಇತ್ಯಾದಿಯನ್ನು ನೀವು ಘೋಷಿಸಲು ಐಟಿಆರ್ ಸಲ್ಲಿಸಲಾಗುತ್ತದೆ. ನಿಮ್ಮ ಆದಾಯಕ್ಕೆ ತಕ್ಕಷ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಅಥವಾ ಹೆಚ್ಚಾಗಿ ತೆರಿಗೆ ಕಟ್ಟಿದ್ದರೆ ಅದನ್ನು ಕ್ಲೈಮ್ ಮಾಡಿಕೊಳ್ಳುವ ಅವಕಾಶವೂ ಇರುತ್ತದೆ.

ಐಟಿ ರಿಟರ್ನ್ ಸಲ್ಲಿಸುವುದು ಹಲವು ಕಾರಣಗಳಿಗೆ ಅಗತ್ಯ ಎನಿಸಿದೆ. ಬ್ಯಾಂಕ್ ಸಾಲದಿಂದ ಹಿಡಿದು ಹಲವು ಕಾರ್ಯಗಳಿಗೆ ಐಟಿಆರ್​ಗಳನ್ನು ಕೇಳಲಾಗುತ್ತದೆ. ನಿಮ್ಮ ಆದಾಯವು ತೆರಿಗೆ ವಿಂಗಡಣೆಯಿಂದ ಹೊರತಾಗಿದ್ದರೂ ಕೂಡ ಐಟಿಆರ್ ಸಲ್ಲಿಸಲು ಅಡ್ಡಿ ಇಲ್ಲ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:28 am, Mon, 31 July 23

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?