AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gpay Aadhaar: ಡೆಬಿಟ್ ಕಾರ್ಡ್ ಇಲ್ಲದೇ ಆಧಾರ್ ಮೂಲಕ ಯುಪಿಐ ಆ್ಯಕ್ಟಿವೇಟ್ ಮಾಡಲು ಗೂಗಲ್ ಪೇ ಅವಕಾಶ

Aadhaar For UPI Activation: ಗೂಗಲ್ ಪೇನಲ್ಲಿ ಈ ಹಿಂದೆ ಯುಪಿಐ ಆ್ಯಕ್ಟಿವೇಶನ್​ಗೆ ಡೆಬಿಟ್ ಕಾರ್ಡ್ ಮಾತ್ರ ಕೇಳಲಾಗುತ್ತಿತ್ತು. ಈಗ ಆಧಾರ್ ಆಪ್ಷನ್ ಕೂಡ ಸೇರಿಸಲಾಗಿದೆ. ಆಧಾರ್​ಗೆ ನೊಂದಾಯಿತವಾದ ಮೊಬೈಲ್ ನಂಬರ್, ಮತ್ತು ಬ್ಯಾಂಕ್​ಗೆ ಜೋಡಿತವಾದ ಮೊಬೈಲ್ ನಂಬರ್ ಸಹಾಯದಿಂದ ಯುಪಿಐ ಆ್ಯಕ್ಟಿವೇಟ್ ಮಾಡಬಹುದು.

Gpay Aadhaar: ಡೆಬಿಟ್ ಕಾರ್ಡ್ ಇಲ್ಲದೇ ಆಧಾರ್ ಮೂಲಕ ಯುಪಿಐ ಆ್ಯಕ್ಟಿವೇಟ್ ಮಾಡಲು ಗೂಗಲ್ ಪೇ ಅವಕಾಶ
ಯುಪಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 08, 2023 | 2:00 PM

Share

ನೀವು ಈಗ ಡೆಬಿಟ್ ಕಾರ್ಡ್ ಮೂಲಕ ಯುಪಿಐ ಆ್ಯಕ್ಟಿವೇಟ್ ಮಾಡುವ ಅಗತ್ಯ ಇರುವುದಿಲ್ಲ. ಆಧಾರ್ ಮೂಲಕವೂ ಯುಪಿಐ ವೆರಿಫಿಕೇಶನ್ ಮಾಡಬಹುದು. ಗೂಗಲ್ ಪೇ ಇಂಥದ್ದೊಂದು ಸೌಲಭ್ಯ ಕಲ್ಪಿಸಿದೆ. ಗೂಗಲ್ ಪೇನಲ್ಲಿ ಗ್ರಾಹಕರು ಆಧಾರ್ ಕಾರ್ಡ್ ಮೂಲಕ ಯುಪಿಐಗೆ ನೊಂದಣಿ ಮಾಡಿಸಬಹುದು. ಈ ಫೀಚರ್​ಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಬೆಂಬಲಿಸುತ್ತದೆ.

ನೊಂದಾಯಿತ ಮೊಬೈಲ್ ನಂಬರ್ ಇರಬೇಕು

ಗೂಗಲ್ ಪೇನಲ್ಲಿ ಈ ಹಿಂದೆ ಯುಪಿಐ ಆ್ಯಕ್ಟಿವೇಶನ್​ಗೆ ಡೆಬಿಟ್ ಕಾರ್ಡ್ ಮಾತ್ರ ಕೇಳಲಾಗುತ್ತಿತ್ತು. ಈಗ ಆಧಾರ್ ಆಪ್ಷನ್ ಕೂಡ ಸೇರಿಸಲಾಗಿದೆ. ಆಧಾರ್​ಗೆ ನೊಂದಾಯಿತವಾದ ಮೊಬೈಲ್ ನಂಬರ್, ಮತ್ತು ಬ್ಯಾಂಕ್​ಗೆ ಜೋಡಿತವಾದ ಮೊಬೈಲ್ ನಂಬರ್ ಸಹಾಯದಿಂದ ಗ್ರಾಹಕರು ಯುಪಿಐ ಆ್ಯಕ್ಟಿವೇಟ್ ಮಾಡಬಹುದು. ಇಲ್ಲಿ ಬ್ಯಾಂಕ್ ಖಾತೆ ಮತ್ತು ಆಧಾರ್​ಗೆ ಜೋಡಿತವಾದ ಮೊಬೈಲ್ ನಂಬರ್ ಒಂದೇ ಆಗಿರಬೇಕು.

ಗೂಗಲ್ ಪೇ ಗ್ರಾಹಕರು ತಮ್ಮ ಆಧಾರ್ ನಂಬರ್​ನ ಮೊದಲ 6 ಅಂಕಿಗಳನ್ನು ನಮೂದಿಸಿದಾಗ ಯುಐಡಿಎಐ ಡಾಟಾಬೇಸ್​ನಲ್ಲಿ ಆ ಮಾಹಿತಿ ಶೇಖರಣೆ ಆಗುತ್ತದೆ. ಈ ಆರು ನಂಬರ್ ನಮೂದಿಸಿದ ಬಳಿಕ ಯುಐಡಿಎಐ ಮತ್ತು ಬ್ಯಾಂಕ್​ನಿಂದ ಒಟಿಪಿ ಬರುತ್ತದೆ. ಇದನ್ನು ಹಾಕಿದ ಬಳಿಕ ಗ್ರಾಹಕರ ಬ್ಯಾಂಕ್​ನಿಂದ ಯುಪಿಐ ಸಕ್ರಿಯಗೊಳ್ಳುತ್ತದೆ. ಆ ಬಳಿಕ ಗ್ರಾಹಕರು ಯುಪಿಐ ಪಿನ್ ಸೆಟ್ ಮಾಡಬಹುದು.

ಇದನ್ನೂ ಓದಿNote Withdrawal: 2,000 ರೂ ನೋಟು ಹಿಂಪಡೆದ ಬಳಿಕ ಮರಳಿದೆ ಶೇ. 50ರಷ್ಟು ಹಣ; ಶೇ. 15ರಷ್ಟು ನೋಟು ಬದಲಾವಣೆ

ಗಮನಿಸಬೇಕಾದ ಸಂಗತಿ ಎಂದರೆ ಆಧಾರ್ ನಂಬರ್​ನ ಮೊದಲ ಆರು ಅಂಕಿಗಳನ್ನು ಗೂಗಲ್ ಪೇ ಸಂಗ್ರಹಿಸಿಟ್ಟುಕೊಳ್ಳುವುದಿಲ್ಲ. ಯುಐಡಿಎಐನಿಂದ ದೃಢೀಕರಣಕ್ಕಾಗಿ ಮಾತ್ರ ಅದರ ಬಳಕೆ ಆಗುತ್ತದೆ ಎಂದು ಗೂಗಲ್ ಸಂಸ್ಥೆ ಸ್ಪಷ್ಟಪಡಿಸಿದೆ. ಭಾರತದಲ್ಲಿ ಬಹುತೇಕ ಜನರು ಆಧಾರ್ ನಂಬರ್ ಬಳಸುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಆಧಾರ್​ಗೆ ಮೊಬೈಲ್ ಸಂಖ್ಯೆಯನ್ನೂ ಜೋಡಿಸಿದ್ದಾರೆ. ಹೀಗಾಗಿ, ಯುಪಿಐ ಆ್ಯಕ್ಟಿವೇಶನ್​ಗೆ ಆಧಾರ್ ಬಳಕೆ ಮಾಡುವುದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗುತ್ತದೆ ಎನ್ನುವುದು ಗೂಗಲ್​ನ ಲೆಕ್ಕಾಚಾರ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?