AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gpay Aadhaar: ಡೆಬಿಟ್ ಕಾರ್ಡ್ ಇಲ್ಲದೇ ಆಧಾರ್ ಮೂಲಕ ಯುಪಿಐ ಆ್ಯಕ್ಟಿವೇಟ್ ಮಾಡಲು ಗೂಗಲ್ ಪೇ ಅವಕಾಶ

Aadhaar For UPI Activation: ಗೂಗಲ್ ಪೇನಲ್ಲಿ ಈ ಹಿಂದೆ ಯುಪಿಐ ಆ್ಯಕ್ಟಿವೇಶನ್​ಗೆ ಡೆಬಿಟ್ ಕಾರ್ಡ್ ಮಾತ್ರ ಕೇಳಲಾಗುತ್ತಿತ್ತು. ಈಗ ಆಧಾರ್ ಆಪ್ಷನ್ ಕೂಡ ಸೇರಿಸಲಾಗಿದೆ. ಆಧಾರ್​ಗೆ ನೊಂದಾಯಿತವಾದ ಮೊಬೈಲ್ ನಂಬರ್, ಮತ್ತು ಬ್ಯಾಂಕ್​ಗೆ ಜೋಡಿತವಾದ ಮೊಬೈಲ್ ನಂಬರ್ ಸಹಾಯದಿಂದ ಯುಪಿಐ ಆ್ಯಕ್ಟಿವೇಟ್ ಮಾಡಬಹುದು.

Gpay Aadhaar: ಡೆಬಿಟ್ ಕಾರ್ಡ್ ಇಲ್ಲದೇ ಆಧಾರ್ ಮೂಲಕ ಯುಪಿಐ ಆ್ಯಕ್ಟಿವೇಟ್ ಮಾಡಲು ಗೂಗಲ್ ಪೇ ಅವಕಾಶ
ಯುಪಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 08, 2023 | 2:00 PM

Share

ನೀವು ಈಗ ಡೆಬಿಟ್ ಕಾರ್ಡ್ ಮೂಲಕ ಯುಪಿಐ ಆ್ಯಕ್ಟಿವೇಟ್ ಮಾಡುವ ಅಗತ್ಯ ಇರುವುದಿಲ್ಲ. ಆಧಾರ್ ಮೂಲಕವೂ ಯುಪಿಐ ವೆರಿಫಿಕೇಶನ್ ಮಾಡಬಹುದು. ಗೂಗಲ್ ಪೇ ಇಂಥದ್ದೊಂದು ಸೌಲಭ್ಯ ಕಲ್ಪಿಸಿದೆ. ಗೂಗಲ್ ಪೇನಲ್ಲಿ ಗ್ರಾಹಕರು ಆಧಾರ್ ಕಾರ್ಡ್ ಮೂಲಕ ಯುಪಿಐಗೆ ನೊಂದಣಿ ಮಾಡಿಸಬಹುದು. ಈ ಫೀಚರ್​ಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಬೆಂಬಲಿಸುತ್ತದೆ.

ನೊಂದಾಯಿತ ಮೊಬೈಲ್ ನಂಬರ್ ಇರಬೇಕು

ಗೂಗಲ್ ಪೇನಲ್ಲಿ ಈ ಹಿಂದೆ ಯುಪಿಐ ಆ್ಯಕ್ಟಿವೇಶನ್​ಗೆ ಡೆಬಿಟ್ ಕಾರ್ಡ್ ಮಾತ್ರ ಕೇಳಲಾಗುತ್ತಿತ್ತು. ಈಗ ಆಧಾರ್ ಆಪ್ಷನ್ ಕೂಡ ಸೇರಿಸಲಾಗಿದೆ. ಆಧಾರ್​ಗೆ ನೊಂದಾಯಿತವಾದ ಮೊಬೈಲ್ ನಂಬರ್, ಮತ್ತು ಬ್ಯಾಂಕ್​ಗೆ ಜೋಡಿತವಾದ ಮೊಬೈಲ್ ನಂಬರ್ ಸಹಾಯದಿಂದ ಗ್ರಾಹಕರು ಯುಪಿಐ ಆ್ಯಕ್ಟಿವೇಟ್ ಮಾಡಬಹುದು. ಇಲ್ಲಿ ಬ್ಯಾಂಕ್ ಖಾತೆ ಮತ್ತು ಆಧಾರ್​ಗೆ ಜೋಡಿತವಾದ ಮೊಬೈಲ್ ನಂಬರ್ ಒಂದೇ ಆಗಿರಬೇಕು.

ಗೂಗಲ್ ಪೇ ಗ್ರಾಹಕರು ತಮ್ಮ ಆಧಾರ್ ನಂಬರ್​ನ ಮೊದಲ 6 ಅಂಕಿಗಳನ್ನು ನಮೂದಿಸಿದಾಗ ಯುಐಡಿಎಐ ಡಾಟಾಬೇಸ್​ನಲ್ಲಿ ಆ ಮಾಹಿತಿ ಶೇಖರಣೆ ಆಗುತ್ತದೆ. ಈ ಆರು ನಂಬರ್ ನಮೂದಿಸಿದ ಬಳಿಕ ಯುಐಡಿಎಐ ಮತ್ತು ಬ್ಯಾಂಕ್​ನಿಂದ ಒಟಿಪಿ ಬರುತ್ತದೆ. ಇದನ್ನು ಹಾಕಿದ ಬಳಿಕ ಗ್ರಾಹಕರ ಬ್ಯಾಂಕ್​ನಿಂದ ಯುಪಿಐ ಸಕ್ರಿಯಗೊಳ್ಳುತ್ತದೆ. ಆ ಬಳಿಕ ಗ್ರಾಹಕರು ಯುಪಿಐ ಪಿನ್ ಸೆಟ್ ಮಾಡಬಹುದು.

ಇದನ್ನೂ ಓದಿNote Withdrawal: 2,000 ರೂ ನೋಟು ಹಿಂಪಡೆದ ಬಳಿಕ ಮರಳಿದೆ ಶೇ. 50ರಷ್ಟು ಹಣ; ಶೇ. 15ರಷ್ಟು ನೋಟು ಬದಲಾವಣೆ

ಗಮನಿಸಬೇಕಾದ ಸಂಗತಿ ಎಂದರೆ ಆಧಾರ್ ನಂಬರ್​ನ ಮೊದಲ ಆರು ಅಂಕಿಗಳನ್ನು ಗೂಗಲ್ ಪೇ ಸಂಗ್ರಹಿಸಿಟ್ಟುಕೊಳ್ಳುವುದಿಲ್ಲ. ಯುಐಡಿಎಐನಿಂದ ದೃಢೀಕರಣಕ್ಕಾಗಿ ಮಾತ್ರ ಅದರ ಬಳಕೆ ಆಗುತ್ತದೆ ಎಂದು ಗೂಗಲ್ ಸಂಸ್ಥೆ ಸ್ಪಷ್ಟಪಡಿಸಿದೆ. ಭಾರತದಲ್ಲಿ ಬಹುತೇಕ ಜನರು ಆಧಾರ್ ನಂಬರ್ ಬಳಸುತ್ತಿದ್ದಾರೆ. ಇವರಲ್ಲಿ ಹೆಚ್ಚಿನವರು ಆಧಾರ್​ಗೆ ಮೊಬೈಲ್ ಸಂಖ್ಯೆಯನ್ನೂ ಜೋಡಿಸಿದ್ದಾರೆ. ಹೀಗಾಗಿ, ಯುಪಿಐ ಆ್ಯಕ್ಟಿವೇಶನ್​ಗೆ ಆಧಾರ್ ಬಳಕೆ ಮಾಡುವುದರಿಂದ ಹೆಚ್ಚಿನ ಜನರಿಗೆ ಅನುಕೂಲವಾಗುತ್ತದೆ ಎನ್ನುವುದು ಗೂಗಲ್​ನ ಲೆಕ್ಕಾಚಾರ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್